Homeಅಂತರಾಷ್ಟ್ರೀಯಕಡಿಮೆ ಬುದ್ದಿಯುಳ್ಳವರು ಬಲಪಂಥೀಯ ಬೆಂಬಲಿಗರಾಗುತ್ತಾರೆ ಎನ್ನುತ್ತಿವೆ ಅಮೆರಿಕದ ಸಂಶೋಧನೆಗಳು..!

ಕಡಿಮೆ ಬುದ್ದಿಯುಳ್ಳವರು ಬಲಪಂಥೀಯ ಬೆಂಬಲಿಗರಾಗುತ್ತಾರೆ ಎನ್ನುತ್ತಿವೆ ಅಮೆರಿಕದ ಸಂಶೋಧನೆಗಳು..!

- Advertisement -
- Advertisement -

ಕೆಲವು ಜನರು ಏಕೆ ಪೂರ್ವಾಗ್ರಹ ಪೀಡಿತರಾಗಿದ್ದಾರೆ ಎಂಬುದಕ್ಕೆ ಸಂಶೋಧಕರು ಸಂಭಾವ್ಯ ವಿವರಣೆಯನ್ನು ಕಂಡುಕೊಂಡಿದ್ದಾರೆ. ಅದೆಂದರೆ ಅವರು ಕಡಿಮೆ ಬುದ್ಧಿವಂತರಾಗಿರುತ್ತಾರೆ.

ಕಡಿಮೆ ಸಾಮಾನ್ಯ ಬುದ್ಧಿವಂತಿಕೆ ಹೊಂದಿರುವ ಮಕ್ಕಳು ವಯಸ್ಕರಾದಂತೆ ಪೂರ್ವಾಗ್ರಹ ಪೀಡಿತರಾಗುತ್ತಾರೆ ಎಂದು ಬ್ರಾಕ್ ವಿಶ್ವವಿದ್ಯಾಲಯದ ಅಧ್ಯಯನ ವರದಿ ಹೇಳಿದೆ.

ಸೈಕಲಾಜಿಕಲ್ ಸೈನ್ಸ್ ಜರ್ನಲ್‌ನಲ್ಲಿ ಪ್ರಕಟವಾದ ಈ ಅಧ್ಯಯನವು ಎರಡು ದೊಡ್ಡ-ಪ್ರಮಾಣದ ಬ್ರಿಟಿಷ್ ಅಧ್ಯಯನಗಳ ದತ್ತಾಂಶವನ್ನು ಪರಿಶೀಲಿಸಿದೆ. ಬಾಲ್ಯದಲ್ಲಿ ಕಡಿಮೆ ಬುದ್ದಿಮತೆ ಅಂಕಗಳನ್ನು ಹೊಂದಿದ ಮಕ್ಕಳು ಪ್ರೌಢಾವಸ್ಥೆಯಲ್ಲಿ ಹೆಚ್ಚಿನ ವರ್ಣಭೇದ ನೀತಿಯ ಪ್ರತಿಪಾದಕರಾಗುತ್ತಾರೆ ಎಂದು ಸಂಶೋಧಕರು ವಿವರಿಸಿದ್ದಾರೆ. ಮುಂದೆ ಅವರು ಬಲಪಂಥೀಯ ಸಿದ್ಧಾಂತದತ್ತ ಆಕರ್ಷಿತಗೊಳ್ಳುತ್ತಾರೆ ಎಂಬ ವಿವಾದಾತ್ಮಕ ಅಂಶವನ್ನು ಸಂಶೋಧಕರು  ವಿವರಿಸುತ್ತಾರೆ.

ಯು.ಎಸ್. ಅಧ್ಯಯನದ ದತ್ತಾಂಶದ ದ್ವಿತೀಯ ವಿಶ್ಲೇಷಣೆಯು ಕಳಪೆ ಅಮೂರ್ತ-ತಾರ್ಕಿಕ ಕೌಶಲ್ಯ ಹೊಂದಿರುವವರು ಸಲಿಂಗಕಾಮ ವಿರೋಧಿ ಪೂರ್ವಾಗ್ರಹವನ್ನು ಹೊಂದುವ ಸಾಧ್ಯತೆಯಿದೆ ಎಂದು ತೋರಿಸಿದೆ. ಅವರು ಭಾಗಶಃ ಸರ್ವಾಧಿಕಾರಿ ವರ್ತನೆಗಳೊಂದಿಗೆ ಸಂಬಂಧ ಹೊಂದಿರುತ್ತಾರೆ ಎಂದಿದೆ.

ಅಧ್ಯಯನದ ಫಲಿತಾಂಶಗಳು ಒಂದು ಕೆಟ್ಟ ಚಕ್ರವನ್ನು ಸೂಚಿಸುತ್ತವೆ ಎಂದು ಮುಖ್ಯ ಸಂಶೋಧಕ ಗಾರ್ಡನ್ ಹಾಡ್ಸನ್ ಲೈವ್ ಸೈನ್ಸ್‌ ಪತ್ರಿಕೆಗೆ ತಿಳಿಸಿದ್ದಾರೆ. ಕಡಿಮೆ ಬುದ್ಧಿವಂತಿಕೆಯಿರುವ ಜನರು ಸಾಮಾಜಿಕವಾಗಿ ಸಂಪ್ರದಾಯವಾದಿ ಸಿದ್ಧಾಂತಗಳಿಗೆ ಆಕರ್ಷಿತರಾಗುತ್ತಾರೆ. ಪ್ರತಿಯಾಗಿ, ಆ ಸಿದ್ಧಾಂತಗಳು ಪೂರ್ವಾಗ್ರಹಗಳಿಗೆ ಕಾರಣವಾಗಬಹುದು ಎಂದಿದ್ದಾರೆ.

“ಸಾಮಾಜಿಕವಾಗಿ ಸಂಪ್ರದಾಯವಾದಿ ಸಿದ್ಧಾಂತಗಳು ರಚನೆಯಲ್ಲಿ ಶ್ರೇಣೀಕರಣವನ್ನು ನೀಡಲು ಒಲವು ತೋರುತ್ತವೆ” ಎಂದು ಅವರು ಹೇಳಿದ್ದಾರೆ. “ದುರದೃಷ್ಟವಶಾತ್, ಈ ಹಲವು ಸಂಪ್ರದಾಯವಾದಿ ಅಂಶಗಳು ಪೂರ್ವಾಗ್ರಹಕ್ಕೆ ಕಾರಣವಾಗಬಹುದು.” ಇದು ಕಡಿಮೆ ಬುದ್ಧಿವಂತಿಕೆ ಇರುವವರು ಬಲ ಸಿದ್ದಾಂತದ ಕಡೆಗೆ ಆಕರ್ಷಿತರಾಗಬಹುದು ಎಂದು ವಿವರಿಸಿದ್ದಾರೆ.

ಕಡಿಮೆ ಬುದ್ಧಿವಂತಿಕೆಯಿರುವ ಜನರು ಇತರ ಜನಾಂಗಗಳು ಮತ್ತು ಗುಂಪುಗಳೊಂದಿಗೆ ಕಡಿಮೆ ಸಂಪರ್ಕವನ್ನು ಹೊಂದಿರುತ್ತಾರೆ ಎಂದು ಸಂಶೋಧಕರು ಕಂಡುಕೊಂಡಿದ್ದಾರೆ. ಇತರ ಗುಂಪುಗಳೊಂದಿಗೆ ಅವರಿಗೆ ಸಂವಹನ ನಡೆಸುವುದು ಅರಿವಿನ ಕೊರತೆಯಿಂದಾಗಿ ಮಾನಸಿಕವಾಗಿ ಸವಾಲಿನ ಕೆಲಸವಾಗಿರುತ್ತದೆ.

ಸಂಶೋಧನೆಗಳ ಪ್ರಕಾರ ಎಲ್ಲಾ ಉದಾರವಾದಿಗಳು ಬುದ್ದಿವಂತರು ಮತ್ತು ಎಲ್ಲಾ ಸಂಪ್ರದಾಯವಾದಿಗಳು ಮೂರ್ಖರು ಎಂದು ಅರ್ಥವಲ್ಲ ಎಂದು ಡಾ. ಹಾಡ್ಸನ್ ವಿವರಿಸಿದ್ದಾರೆ. “ಅತ್ಯಂತ ಬುದ್ದಿವಂತರಾದ ಸಂಪ್ರದಾಯವಾದಿಗಳು ಮತ್ತು ಅಷ್ಟು ಬುದ್ದಿವಂತರಲ್ಲದ ಉದಾರವಾದಿಗಳ ಅನೇಕ ಉದಾಹರಣೆಗಳಿವೆ. ಮತ್ತು ಬಹಳ ತತ್ವಬದ್ಧ ಸಂಪ್ರದಾಯವಾದಿಗಳು ಮತ್ತು ಅಸಹಿಷ್ಣು ಉದಾರವಾದಿಗಳ ಅನೇಕ ಉದಾಹರಣೆಗಳು ಸಹ ಅಲ್ಲಲ್ಲಿ ಕಂಡುಬರುತ್ತವೆ ಎಂದು ಹೇಳಿದ್ದಾರೆ. ಆದರೆ ಪೂರ್ಣಜನರನ್ನು ಗಮನದಲ್ಲಿಟ್ಟುಕೊಂಡು ಈ ಸಂಶೋಧನೆ ನಡೆದಿದೆ ಎಂದಿದಾರೆ.

ಈಗ ನಿಮ್ಮ ನಿಮ್ಮ ಬುದ್ದಿಮತ್ತೆ ಮತ್ತು ನೀವು ಪ್ರತಿನಿಧಿಸುವ ರಾಜಕೀಯವನ್ನು ತಾಳೆ ನೋಡಿಕೊಳ್ಳಿ.

ಮೂಲ: ದಿ ಗ್ಲೋಬ್‌ ಅಂಡ್‌ ಮೈಲ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...