Homeಅಂತರಾಷ್ಟ್ರೀಯಕಡಿಮೆ ಬುದ್ದಿಯುಳ್ಳವರು ಬಲಪಂಥೀಯ ಬೆಂಬಲಿಗರಾಗುತ್ತಾರೆ ಎನ್ನುತ್ತಿವೆ ಅಮೆರಿಕದ ಸಂಶೋಧನೆಗಳು..!

ಕಡಿಮೆ ಬುದ್ದಿಯುಳ್ಳವರು ಬಲಪಂಥೀಯ ಬೆಂಬಲಿಗರಾಗುತ್ತಾರೆ ಎನ್ನುತ್ತಿವೆ ಅಮೆರಿಕದ ಸಂಶೋಧನೆಗಳು..!

- Advertisement -
- Advertisement -

ಕೆಲವು ಜನರು ಏಕೆ ಪೂರ್ವಾಗ್ರಹ ಪೀಡಿತರಾಗಿದ್ದಾರೆ ಎಂಬುದಕ್ಕೆ ಸಂಶೋಧಕರು ಸಂಭಾವ್ಯ ವಿವರಣೆಯನ್ನು ಕಂಡುಕೊಂಡಿದ್ದಾರೆ. ಅದೆಂದರೆ ಅವರು ಕಡಿಮೆ ಬುದ್ಧಿವಂತರಾಗಿರುತ್ತಾರೆ.

ಕಡಿಮೆ ಸಾಮಾನ್ಯ ಬುದ್ಧಿವಂತಿಕೆ ಹೊಂದಿರುವ ಮಕ್ಕಳು ವಯಸ್ಕರಾದಂತೆ ಪೂರ್ವಾಗ್ರಹ ಪೀಡಿತರಾಗುತ್ತಾರೆ ಎಂದು ಬ್ರಾಕ್ ವಿಶ್ವವಿದ್ಯಾಲಯದ ಅಧ್ಯಯನ ವರದಿ ಹೇಳಿದೆ.

ಸೈಕಲಾಜಿಕಲ್ ಸೈನ್ಸ್ ಜರ್ನಲ್‌ನಲ್ಲಿ ಪ್ರಕಟವಾದ ಈ ಅಧ್ಯಯನವು ಎರಡು ದೊಡ್ಡ-ಪ್ರಮಾಣದ ಬ್ರಿಟಿಷ್ ಅಧ್ಯಯನಗಳ ದತ್ತಾಂಶವನ್ನು ಪರಿಶೀಲಿಸಿದೆ. ಬಾಲ್ಯದಲ್ಲಿ ಕಡಿಮೆ ಬುದ್ದಿಮತೆ ಅಂಕಗಳನ್ನು ಹೊಂದಿದ ಮಕ್ಕಳು ಪ್ರೌಢಾವಸ್ಥೆಯಲ್ಲಿ ಹೆಚ್ಚಿನ ವರ್ಣಭೇದ ನೀತಿಯ ಪ್ರತಿಪಾದಕರಾಗುತ್ತಾರೆ ಎಂದು ಸಂಶೋಧಕರು ವಿವರಿಸಿದ್ದಾರೆ. ಮುಂದೆ ಅವರು ಬಲಪಂಥೀಯ ಸಿದ್ಧಾಂತದತ್ತ ಆಕರ್ಷಿತಗೊಳ್ಳುತ್ತಾರೆ ಎಂಬ ವಿವಾದಾತ್ಮಕ ಅಂಶವನ್ನು ಸಂಶೋಧಕರು  ವಿವರಿಸುತ್ತಾರೆ.

ಯು.ಎಸ್. ಅಧ್ಯಯನದ ದತ್ತಾಂಶದ ದ್ವಿತೀಯ ವಿಶ್ಲೇಷಣೆಯು ಕಳಪೆ ಅಮೂರ್ತ-ತಾರ್ಕಿಕ ಕೌಶಲ್ಯ ಹೊಂದಿರುವವರು ಸಲಿಂಗಕಾಮ ವಿರೋಧಿ ಪೂರ್ವಾಗ್ರಹವನ್ನು ಹೊಂದುವ ಸಾಧ್ಯತೆಯಿದೆ ಎಂದು ತೋರಿಸಿದೆ. ಅವರು ಭಾಗಶಃ ಸರ್ವಾಧಿಕಾರಿ ವರ್ತನೆಗಳೊಂದಿಗೆ ಸಂಬಂಧ ಹೊಂದಿರುತ್ತಾರೆ ಎಂದಿದೆ.

ಅಧ್ಯಯನದ ಫಲಿತಾಂಶಗಳು ಒಂದು ಕೆಟ್ಟ ಚಕ್ರವನ್ನು ಸೂಚಿಸುತ್ತವೆ ಎಂದು ಮುಖ್ಯ ಸಂಶೋಧಕ ಗಾರ್ಡನ್ ಹಾಡ್ಸನ್ ಲೈವ್ ಸೈನ್ಸ್‌ ಪತ್ರಿಕೆಗೆ ತಿಳಿಸಿದ್ದಾರೆ. ಕಡಿಮೆ ಬುದ್ಧಿವಂತಿಕೆಯಿರುವ ಜನರು ಸಾಮಾಜಿಕವಾಗಿ ಸಂಪ್ರದಾಯವಾದಿ ಸಿದ್ಧಾಂತಗಳಿಗೆ ಆಕರ್ಷಿತರಾಗುತ್ತಾರೆ. ಪ್ರತಿಯಾಗಿ, ಆ ಸಿದ್ಧಾಂತಗಳು ಪೂರ್ವಾಗ್ರಹಗಳಿಗೆ ಕಾರಣವಾಗಬಹುದು ಎಂದಿದ್ದಾರೆ.

“ಸಾಮಾಜಿಕವಾಗಿ ಸಂಪ್ರದಾಯವಾದಿ ಸಿದ್ಧಾಂತಗಳು ರಚನೆಯಲ್ಲಿ ಶ್ರೇಣೀಕರಣವನ್ನು ನೀಡಲು ಒಲವು ತೋರುತ್ತವೆ” ಎಂದು ಅವರು ಹೇಳಿದ್ದಾರೆ. “ದುರದೃಷ್ಟವಶಾತ್, ಈ ಹಲವು ಸಂಪ್ರದಾಯವಾದಿ ಅಂಶಗಳು ಪೂರ್ವಾಗ್ರಹಕ್ಕೆ ಕಾರಣವಾಗಬಹುದು.” ಇದು ಕಡಿಮೆ ಬುದ್ಧಿವಂತಿಕೆ ಇರುವವರು ಬಲ ಸಿದ್ದಾಂತದ ಕಡೆಗೆ ಆಕರ್ಷಿತರಾಗಬಹುದು ಎಂದು ವಿವರಿಸಿದ್ದಾರೆ.

ಕಡಿಮೆ ಬುದ್ಧಿವಂತಿಕೆಯಿರುವ ಜನರು ಇತರ ಜನಾಂಗಗಳು ಮತ್ತು ಗುಂಪುಗಳೊಂದಿಗೆ ಕಡಿಮೆ ಸಂಪರ್ಕವನ್ನು ಹೊಂದಿರುತ್ತಾರೆ ಎಂದು ಸಂಶೋಧಕರು ಕಂಡುಕೊಂಡಿದ್ದಾರೆ. ಇತರ ಗುಂಪುಗಳೊಂದಿಗೆ ಅವರಿಗೆ ಸಂವಹನ ನಡೆಸುವುದು ಅರಿವಿನ ಕೊರತೆಯಿಂದಾಗಿ ಮಾನಸಿಕವಾಗಿ ಸವಾಲಿನ ಕೆಲಸವಾಗಿರುತ್ತದೆ.

ಸಂಶೋಧನೆಗಳ ಪ್ರಕಾರ ಎಲ್ಲಾ ಉದಾರವಾದಿಗಳು ಬುದ್ದಿವಂತರು ಮತ್ತು ಎಲ್ಲಾ ಸಂಪ್ರದಾಯವಾದಿಗಳು ಮೂರ್ಖರು ಎಂದು ಅರ್ಥವಲ್ಲ ಎಂದು ಡಾ. ಹಾಡ್ಸನ್ ವಿವರಿಸಿದ್ದಾರೆ. “ಅತ್ಯಂತ ಬುದ್ದಿವಂತರಾದ ಸಂಪ್ರದಾಯವಾದಿಗಳು ಮತ್ತು ಅಷ್ಟು ಬುದ್ದಿವಂತರಲ್ಲದ ಉದಾರವಾದಿಗಳ ಅನೇಕ ಉದಾಹರಣೆಗಳಿವೆ. ಮತ್ತು ಬಹಳ ತತ್ವಬದ್ಧ ಸಂಪ್ರದಾಯವಾದಿಗಳು ಮತ್ತು ಅಸಹಿಷ್ಣು ಉದಾರವಾದಿಗಳ ಅನೇಕ ಉದಾಹರಣೆಗಳು ಸಹ ಅಲ್ಲಲ್ಲಿ ಕಂಡುಬರುತ್ತವೆ ಎಂದು ಹೇಳಿದ್ದಾರೆ. ಆದರೆ ಪೂರ್ಣಜನರನ್ನು ಗಮನದಲ್ಲಿಟ್ಟುಕೊಂಡು ಈ ಸಂಶೋಧನೆ ನಡೆದಿದೆ ಎಂದಿದಾರೆ.

ಈಗ ನಿಮ್ಮ ನಿಮ್ಮ ಬುದ್ದಿಮತ್ತೆ ಮತ್ತು ನೀವು ಪ್ರತಿನಿಧಿಸುವ ರಾಜಕೀಯವನ್ನು ತಾಳೆ ನೋಡಿಕೊಳ್ಳಿ.

ಮೂಲ: ದಿ ಗ್ಲೋಬ್‌ ಅಂಡ್‌ ಮೈಲ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...