Homeಅಂತರಾಷ್ಟ್ರೀಯಕಡಿಮೆ ಬುದ್ದಿಯುಳ್ಳವರು ಬಲಪಂಥೀಯ ಬೆಂಬಲಿಗರಾಗುತ್ತಾರೆ ಎನ್ನುತ್ತಿವೆ ಅಮೆರಿಕದ ಸಂಶೋಧನೆಗಳು..!

ಕಡಿಮೆ ಬುದ್ದಿಯುಳ್ಳವರು ಬಲಪಂಥೀಯ ಬೆಂಬಲಿಗರಾಗುತ್ತಾರೆ ಎನ್ನುತ್ತಿವೆ ಅಮೆರಿಕದ ಸಂಶೋಧನೆಗಳು..!

- Advertisement -
- Advertisement -

ಕೆಲವು ಜನರು ಏಕೆ ಪೂರ್ವಾಗ್ರಹ ಪೀಡಿತರಾಗಿದ್ದಾರೆ ಎಂಬುದಕ್ಕೆ ಸಂಶೋಧಕರು ಸಂಭಾವ್ಯ ವಿವರಣೆಯನ್ನು ಕಂಡುಕೊಂಡಿದ್ದಾರೆ. ಅದೆಂದರೆ ಅವರು ಕಡಿಮೆ ಬುದ್ಧಿವಂತರಾಗಿರುತ್ತಾರೆ.

ಕಡಿಮೆ ಸಾಮಾನ್ಯ ಬುದ್ಧಿವಂತಿಕೆ ಹೊಂದಿರುವ ಮಕ್ಕಳು ವಯಸ್ಕರಾದಂತೆ ಪೂರ್ವಾಗ್ರಹ ಪೀಡಿತರಾಗುತ್ತಾರೆ ಎಂದು ಬ್ರಾಕ್ ವಿಶ್ವವಿದ್ಯಾಲಯದ ಅಧ್ಯಯನ ವರದಿ ಹೇಳಿದೆ.

ಸೈಕಲಾಜಿಕಲ್ ಸೈನ್ಸ್ ಜರ್ನಲ್‌ನಲ್ಲಿ ಪ್ರಕಟವಾದ ಈ ಅಧ್ಯಯನವು ಎರಡು ದೊಡ್ಡ-ಪ್ರಮಾಣದ ಬ್ರಿಟಿಷ್ ಅಧ್ಯಯನಗಳ ದತ್ತಾಂಶವನ್ನು ಪರಿಶೀಲಿಸಿದೆ. ಬಾಲ್ಯದಲ್ಲಿ ಕಡಿಮೆ ಬುದ್ದಿಮತೆ ಅಂಕಗಳನ್ನು ಹೊಂದಿದ ಮಕ್ಕಳು ಪ್ರೌಢಾವಸ್ಥೆಯಲ್ಲಿ ಹೆಚ್ಚಿನ ವರ್ಣಭೇದ ನೀತಿಯ ಪ್ರತಿಪಾದಕರಾಗುತ್ತಾರೆ ಎಂದು ಸಂಶೋಧಕರು ವಿವರಿಸಿದ್ದಾರೆ. ಮುಂದೆ ಅವರು ಬಲಪಂಥೀಯ ಸಿದ್ಧಾಂತದತ್ತ ಆಕರ್ಷಿತಗೊಳ್ಳುತ್ತಾರೆ ಎಂಬ ವಿವಾದಾತ್ಮಕ ಅಂಶವನ್ನು ಸಂಶೋಧಕರು  ವಿವರಿಸುತ್ತಾರೆ.

ಯು.ಎಸ್. ಅಧ್ಯಯನದ ದತ್ತಾಂಶದ ದ್ವಿತೀಯ ವಿಶ್ಲೇಷಣೆಯು ಕಳಪೆ ಅಮೂರ್ತ-ತಾರ್ಕಿಕ ಕೌಶಲ್ಯ ಹೊಂದಿರುವವರು ಸಲಿಂಗಕಾಮ ವಿರೋಧಿ ಪೂರ್ವಾಗ್ರಹವನ್ನು ಹೊಂದುವ ಸಾಧ್ಯತೆಯಿದೆ ಎಂದು ತೋರಿಸಿದೆ. ಅವರು ಭಾಗಶಃ ಸರ್ವಾಧಿಕಾರಿ ವರ್ತನೆಗಳೊಂದಿಗೆ ಸಂಬಂಧ ಹೊಂದಿರುತ್ತಾರೆ ಎಂದಿದೆ.

ಅಧ್ಯಯನದ ಫಲಿತಾಂಶಗಳು ಒಂದು ಕೆಟ್ಟ ಚಕ್ರವನ್ನು ಸೂಚಿಸುತ್ತವೆ ಎಂದು ಮುಖ್ಯ ಸಂಶೋಧಕ ಗಾರ್ಡನ್ ಹಾಡ್ಸನ್ ಲೈವ್ ಸೈನ್ಸ್‌ ಪತ್ರಿಕೆಗೆ ತಿಳಿಸಿದ್ದಾರೆ. ಕಡಿಮೆ ಬುದ್ಧಿವಂತಿಕೆಯಿರುವ ಜನರು ಸಾಮಾಜಿಕವಾಗಿ ಸಂಪ್ರದಾಯವಾದಿ ಸಿದ್ಧಾಂತಗಳಿಗೆ ಆಕರ್ಷಿತರಾಗುತ್ತಾರೆ. ಪ್ರತಿಯಾಗಿ, ಆ ಸಿದ್ಧಾಂತಗಳು ಪೂರ್ವಾಗ್ರಹಗಳಿಗೆ ಕಾರಣವಾಗಬಹುದು ಎಂದಿದ್ದಾರೆ.

“ಸಾಮಾಜಿಕವಾಗಿ ಸಂಪ್ರದಾಯವಾದಿ ಸಿದ್ಧಾಂತಗಳು ರಚನೆಯಲ್ಲಿ ಶ್ರೇಣೀಕರಣವನ್ನು ನೀಡಲು ಒಲವು ತೋರುತ್ತವೆ” ಎಂದು ಅವರು ಹೇಳಿದ್ದಾರೆ. “ದುರದೃಷ್ಟವಶಾತ್, ಈ ಹಲವು ಸಂಪ್ರದಾಯವಾದಿ ಅಂಶಗಳು ಪೂರ್ವಾಗ್ರಹಕ್ಕೆ ಕಾರಣವಾಗಬಹುದು.” ಇದು ಕಡಿಮೆ ಬುದ್ಧಿವಂತಿಕೆ ಇರುವವರು ಬಲ ಸಿದ್ದಾಂತದ ಕಡೆಗೆ ಆಕರ್ಷಿತರಾಗಬಹುದು ಎಂದು ವಿವರಿಸಿದ್ದಾರೆ.

ಕಡಿಮೆ ಬುದ್ಧಿವಂತಿಕೆಯಿರುವ ಜನರು ಇತರ ಜನಾಂಗಗಳು ಮತ್ತು ಗುಂಪುಗಳೊಂದಿಗೆ ಕಡಿಮೆ ಸಂಪರ್ಕವನ್ನು ಹೊಂದಿರುತ್ತಾರೆ ಎಂದು ಸಂಶೋಧಕರು ಕಂಡುಕೊಂಡಿದ್ದಾರೆ. ಇತರ ಗುಂಪುಗಳೊಂದಿಗೆ ಅವರಿಗೆ ಸಂವಹನ ನಡೆಸುವುದು ಅರಿವಿನ ಕೊರತೆಯಿಂದಾಗಿ ಮಾನಸಿಕವಾಗಿ ಸವಾಲಿನ ಕೆಲಸವಾಗಿರುತ್ತದೆ.

ಸಂಶೋಧನೆಗಳ ಪ್ರಕಾರ ಎಲ್ಲಾ ಉದಾರವಾದಿಗಳು ಬುದ್ದಿವಂತರು ಮತ್ತು ಎಲ್ಲಾ ಸಂಪ್ರದಾಯವಾದಿಗಳು ಮೂರ್ಖರು ಎಂದು ಅರ್ಥವಲ್ಲ ಎಂದು ಡಾ. ಹಾಡ್ಸನ್ ವಿವರಿಸಿದ್ದಾರೆ. “ಅತ್ಯಂತ ಬುದ್ದಿವಂತರಾದ ಸಂಪ್ರದಾಯವಾದಿಗಳು ಮತ್ತು ಅಷ್ಟು ಬುದ್ದಿವಂತರಲ್ಲದ ಉದಾರವಾದಿಗಳ ಅನೇಕ ಉದಾಹರಣೆಗಳಿವೆ. ಮತ್ತು ಬಹಳ ತತ್ವಬದ್ಧ ಸಂಪ್ರದಾಯವಾದಿಗಳು ಮತ್ತು ಅಸಹಿಷ್ಣು ಉದಾರವಾದಿಗಳ ಅನೇಕ ಉದಾಹರಣೆಗಳು ಸಹ ಅಲ್ಲಲ್ಲಿ ಕಂಡುಬರುತ್ತವೆ ಎಂದು ಹೇಳಿದ್ದಾರೆ. ಆದರೆ ಪೂರ್ಣಜನರನ್ನು ಗಮನದಲ್ಲಿಟ್ಟುಕೊಂಡು ಈ ಸಂಶೋಧನೆ ನಡೆದಿದೆ ಎಂದಿದಾರೆ.

ಈಗ ನಿಮ್ಮ ನಿಮ್ಮ ಬುದ್ದಿಮತ್ತೆ ಮತ್ತು ನೀವು ಪ್ರತಿನಿಧಿಸುವ ರಾಜಕೀಯವನ್ನು ತಾಳೆ ನೋಡಿಕೊಳ್ಳಿ.

ಮೂಲ: ದಿ ಗ್ಲೋಬ್‌ ಅಂಡ್‌ ಮೈಲ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...