Homeಅಂತರಾಷ್ಟ್ರೀಯಕಡಿಮೆ ಬುದ್ದಿಯುಳ್ಳವರು ಬಲಪಂಥೀಯ ಬೆಂಬಲಿಗರಾಗುತ್ತಾರೆ ಎನ್ನುತ್ತಿವೆ ಅಮೆರಿಕದ ಸಂಶೋಧನೆಗಳು..!

ಕಡಿಮೆ ಬುದ್ದಿಯುಳ್ಳವರು ಬಲಪಂಥೀಯ ಬೆಂಬಲಿಗರಾಗುತ್ತಾರೆ ಎನ್ನುತ್ತಿವೆ ಅಮೆರಿಕದ ಸಂಶೋಧನೆಗಳು..!

- Advertisement -
- Advertisement -

ಕೆಲವು ಜನರು ಏಕೆ ಪೂರ್ವಾಗ್ರಹ ಪೀಡಿತರಾಗಿದ್ದಾರೆ ಎಂಬುದಕ್ಕೆ ಸಂಶೋಧಕರು ಸಂಭಾವ್ಯ ವಿವರಣೆಯನ್ನು ಕಂಡುಕೊಂಡಿದ್ದಾರೆ. ಅದೆಂದರೆ ಅವರು ಕಡಿಮೆ ಬುದ್ಧಿವಂತರಾಗಿರುತ್ತಾರೆ.

ಕಡಿಮೆ ಸಾಮಾನ್ಯ ಬುದ್ಧಿವಂತಿಕೆ ಹೊಂದಿರುವ ಮಕ್ಕಳು ವಯಸ್ಕರಾದಂತೆ ಪೂರ್ವಾಗ್ರಹ ಪೀಡಿತರಾಗುತ್ತಾರೆ ಎಂದು ಬ್ರಾಕ್ ವಿಶ್ವವಿದ್ಯಾಲಯದ ಅಧ್ಯಯನ ವರದಿ ಹೇಳಿದೆ.

ಸೈಕಲಾಜಿಕಲ್ ಸೈನ್ಸ್ ಜರ್ನಲ್‌ನಲ್ಲಿ ಪ್ರಕಟವಾದ ಈ ಅಧ್ಯಯನವು ಎರಡು ದೊಡ್ಡ-ಪ್ರಮಾಣದ ಬ್ರಿಟಿಷ್ ಅಧ್ಯಯನಗಳ ದತ್ತಾಂಶವನ್ನು ಪರಿಶೀಲಿಸಿದೆ. ಬಾಲ್ಯದಲ್ಲಿ ಕಡಿಮೆ ಬುದ್ದಿಮತೆ ಅಂಕಗಳನ್ನು ಹೊಂದಿದ ಮಕ್ಕಳು ಪ್ರೌಢಾವಸ್ಥೆಯಲ್ಲಿ ಹೆಚ್ಚಿನ ವರ್ಣಭೇದ ನೀತಿಯ ಪ್ರತಿಪಾದಕರಾಗುತ್ತಾರೆ ಎಂದು ಸಂಶೋಧಕರು ವಿವರಿಸಿದ್ದಾರೆ. ಮುಂದೆ ಅವರು ಬಲಪಂಥೀಯ ಸಿದ್ಧಾಂತದತ್ತ ಆಕರ್ಷಿತಗೊಳ್ಳುತ್ತಾರೆ ಎಂಬ ವಿವಾದಾತ್ಮಕ ಅಂಶವನ್ನು ಸಂಶೋಧಕರು  ವಿವರಿಸುತ್ತಾರೆ.

ಯು.ಎಸ್. ಅಧ್ಯಯನದ ದತ್ತಾಂಶದ ದ್ವಿತೀಯ ವಿಶ್ಲೇಷಣೆಯು ಕಳಪೆ ಅಮೂರ್ತ-ತಾರ್ಕಿಕ ಕೌಶಲ್ಯ ಹೊಂದಿರುವವರು ಸಲಿಂಗಕಾಮ ವಿರೋಧಿ ಪೂರ್ವಾಗ್ರಹವನ್ನು ಹೊಂದುವ ಸಾಧ್ಯತೆಯಿದೆ ಎಂದು ತೋರಿಸಿದೆ. ಅವರು ಭಾಗಶಃ ಸರ್ವಾಧಿಕಾರಿ ವರ್ತನೆಗಳೊಂದಿಗೆ ಸಂಬಂಧ ಹೊಂದಿರುತ್ತಾರೆ ಎಂದಿದೆ.

ಅಧ್ಯಯನದ ಫಲಿತಾಂಶಗಳು ಒಂದು ಕೆಟ್ಟ ಚಕ್ರವನ್ನು ಸೂಚಿಸುತ್ತವೆ ಎಂದು ಮುಖ್ಯ ಸಂಶೋಧಕ ಗಾರ್ಡನ್ ಹಾಡ್ಸನ್ ಲೈವ್ ಸೈನ್ಸ್‌ ಪತ್ರಿಕೆಗೆ ತಿಳಿಸಿದ್ದಾರೆ. ಕಡಿಮೆ ಬುದ್ಧಿವಂತಿಕೆಯಿರುವ ಜನರು ಸಾಮಾಜಿಕವಾಗಿ ಸಂಪ್ರದಾಯವಾದಿ ಸಿದ್ಧಾಂತಗಳಿಗೆ ಆಕರ್ಷಿತರಾಗುತ್ತಾರೆ. ಪ್ರತಿಯಾಗಿ, ಆ ಸಿದ್ಧಾಂತಗಳು ಪೂರ್ವಾಗ್ರಹಗಳಿಗೆ ಕಾರಣವಾಗಬಹುದು ಎಂದಿದ್ದಾರೆ.

“ಸಾಮಾಜಿಕವಾಗಿ ಸಂಪ್ರದಾಯವಾದಿ ಸಿದ್ಧಾಂತಗಳು ರಚನೆಯಲ್ಲಿ ಶ್ರೇಣೀಕರಣವನ್ನು ನೀಡಲು ಒಲವು ತೋರುತ್ತವೆ” ಎಂದು ಅವರು ಹೇಳಿದ್ದಾರೆ. “ದುರದೃಷ್ಟವಶಾತ್, ಈ ಹಲವು ಸಂಪ್ರದಾಯವಾದಿ ಅಂಶಗಳು ಪೂರ್ವಾಗ್ರಹಕ್ಕೆ ಕಾರಣವಾಗಬಹುದು.” ಇದು ಕಡಿಮೆ ಬುದ್ಧಿವಂತಿಕೆ ಇರುವವರು ಬಲ ಸಿದ್ದಾಂತದ ಕಡೆಗೆ ಆಕರ್ಷಿತರಾಗಬಹುದು ಎಂದು ವಿವರಿಸಿದ್ದಾರೆ.

ಕಡಿಮೆ ಬುದ್ಧಿವಂತಿಕೆಯಿರುವ ಜನರು ಇತರ ಜನಾಂಗಗಳು ಮತ್ತು ಗುಂಪುಗಳೊಂದಿಗೆ ಕಡಿಮೆ ಸಂಪರ್ಕವನ್ನು ಹೊಂದಿರುತ್ತಾರೆ ಎಂದು ಸಂಶೋಧಕರು ಕಂಡುಕೊಂಡಿದ್ದಾರೆ. ಇತರ ಗುಂಪುಗಳೊಂದಿಗೆ ಅವರಿಗೆ ಸಂವಹನ ನಡೆಸುವುದು ಅರಿವಿನ ಕೊರತೆಯಿಂದಾಗಿ ಮಾನಸಿಕವಾಗಿ ಸವಾಲಿನ ಕೆಲಸವಾಗಿರುತ್ತದೆ.

ಸಂಶೋಧನೆಗಳ ಪ್ರಕಾರ ಎಲ್ಲಾ ಉದಾರವಾದಿಗಳು ಬುದ್ದಿವಂತರು ಮತ್ತು ಎಲ್ಲಾ ಸಂಪ್ರದಾಯವಾದಿಗಳು ಮೂರ್ಖರು ಎಂದು ಅರ್ಥವಲ್ಲ ಎಂದು ಡಾ. ಹಾಡ್ಸನ್ ವಿವರಿಸಿದ್ದಾರೆ. “ಅತ್ಯಂತ ಬುದ್ದಿವಂತರಾದ ಸಂಪ್ರದಾಯವಾದಿಗಳು ಮತ್ತು ಅಷ್ಟು ಬುದ್ದಿವಂತರಲ್ಲದ ಉದಾರವಾದಿಗಳ ಅನೇಕ ಉದಾಹರಣೆಗಳಿವೆ. ಮತ್ತು ಬಹಳ ತತ್ವಬದ್ಧ ಸಂಪ್ರದಾಯವಾದಿಗಳು ಮತ್ತು ಅಸಹಿಷ್ಣು ಉದಾರವಾದಿಗಳ ಅನೇಕ ಉದಾಹರಣೆಗಳು ಸಹ ಅಲ್ಲಲ್ಲಿ ಕಂಡುಬರುತ್ತವೆ ಎಂದು ಹೇಳಿದ್ದಾರೆ. ಆದರೆ ಪೂರ್ಣಜನರನ್ನು ಗಮನದಲ್ಲಿಟ್ಟುಕೊಂಡು ಈ ಸಂಶೋಧನೆ ನಡೆದಿದೆ ಎಂದಿದಾರೆ.

ಈಗ ನಿಮ್ಮ ನಿಮ್ಮ ಬುದ್ದಿಮತ್ತೆ ಮತ್ತು ನೀವು ಪ್ರತಿನಿಧಿಸುವ ರಾಜಕೀಯವನ್ನು ತಾಳೆ ನೋಡಿಕೊಳ್ಳಿ.

ಮೂಲ: ದಿ ಗ್ಲೋಬ್‌ ಅಂಡ್‌ ಮೈಲ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಶ್ವದ ಅತಿದೊಡ್ಡ ಎಲ್‌ಎನ್‌ಜಿ ಹಬ್ ಖತಾರ್‌ನ ರಾಸ್ ಲಫನ್ ಇಂಡಸ್ಟ್ರಿಯಲ್ ಸಿಟಿ ಮೇಲೆ ಇರಾನ್ ಕ್ಷಿಪಣಿ ದಾಳಿ

ವಿಶ್ವದ ಅತಿದೊಡ್ಡ ಲಿಕ್ವಿಫೈಡ್ ನ್ಯಾಚುರಲ್ ಗ್ಯಾಸ್ (ಎಲ್‌ಎನ್‌ಜಿ) ರಫ್ತು ಕೇಂದ್ರಗಳಲ್ಲಿ ಒಂದಾದ ಖತಾರ್‌ನ ರಾಸ್ ಲಫನ್ ಇಂಡಸ್ಟ್ರಿಯಲ್ ಸಿಟಿ ಮೇಲೆ ಇರಾನ್ ಕ್ಷಿಪಣಿ ದಾಳಿ ನಡೆಸಿದೆ. ಈ ದಾಳಿಯಿಂದಾಗಿ ಅಲ್ಲಿನ ಅನಿಲ ಸೌಲಭ್ಯಗಳಲ್ಲಿ...

ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ : ತನಿಖಾ ವರದಿ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನಿರ್ದೇಶನ

ಧರ್ಮಸ್ಥಳ ಗ್ರಾಮದಲ್ಲಿ 1990ರಿಂದ 2021ರ ನಡುವೆ ಸಂಭವಿಸಿದೆ ಎನ್ನಲಾದ 74 ಅಸಹಜ ಸಾವಿನ ಪ್ರಕರಣಗಳಿಗೆ ಸಂಬಂಧಿಸಿದಂತೆ ವರದಿ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಬುಧವಾರ (ಮಾ.18) ನಿರ್ದೇಶಿಸಿದೆ ಎಂದು barandbench.com ವರದಿ ಮಾಡಿದೆ....

ಛತ್ತೀಸ್‌ಗಢ| ಕ್ರಿಶ್ಚಿಯನ್ ಯುವಕನ ಮೇಲೆ ಹಿಂದುತ್ವವಾದಿ ಗುಂಪಿನಿಂದ ಹಲ್ಲೆ; ‘ಜೈ ಶ್ರೀ ರಾಮ್’ ಕೂಗುವಂತೆ ಒತ್ತಾಯ

ಛತ್ತೀಸ್‌ಗಢದ ಜಂಜ್‌ಗೀರ್-ಚಂಪಾ ಜಿಲ್ಲೆಯಲ್ಲಿ ಕ್ರಿಶ್ಚಿಯನ್ ಯುವಕನ ಮೇಲೆ ಹಿಂದುತ್ವವಾದಿಗಳ ಗುಂಪೊಂದು ಹಲ್ಲೆ ನಡೆಸಿ, ಜೈಶ್ರೀರಾಮ್ ಎಂದು ಘೋಷಣೆಗಳನ್ನು ಕೂಗುವಂತೆ ಒತ್ತಾಯಿಸಿದೆ ಎಂಬ ಆರೋಪ ಕೇಳಿಬಂದಿದೆ. ಇಂದು (ಮಾ.18) ನಡೆದಿದೆ ಎನ್ನಲಾದ ಈ ಘಟನೆಯ...

ಯುಪಿಎಸ್‌ಸಿ 440 ನೇ ರ‍್ಯಾಂಕ್ ಎಂದು ಸುಳ್ಳು ಹೇಳಿ ಸಂಭ್ರಮಾಚರಣೆ ಮಾಡಿದ್ದ ಬಿಹಾರದ ಯುವಕನ ಬಂಧನ

ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ) ನಾಗರಿಕ ಸೇವಾ ಪರೀಕ್ಷೆ (ಸಿಎಸ್‌ಇ) 2025 ರಲ್ಲಿ ಅಖಿಲ ಭಾರತ ರ‍್ಯಾಂಕ್ (ಎಐಆರ್) 440 ಗಳಿಸಿದ್ದೇನೆ ಎಂದು ಸುಳ್ಳು ಹೇಳಿಕೊಂಡ ಕೆಲವು ದಿನಗಳ ನಂತರ, ಬಿಹಾರದ ಶೇಖ್‌ಪುರ...

‘ಜೈ ಬಾಂಗ್ಲಾ’ ಘೋಷಣೆ ಕೂಗಿದ ಆರೋಪ: ಮಹಿಳೆಗೆ ಜಾಮೀನು ನೀಡಿದ ಹೈಕೋರ್ಟ್

ಬೆಂಗಳೂರಿನ ಹೆಬ್ಬಗೂಡಿಯಲ್ಲಿ ಅಕ್ರಮ ಎನ್ನಲಾದ ಶೆಡ್‌ಗಳ ತೆರವು ಕಾರ್ಯಾಚರಣೆ ವೇಳೆ 'ಜೈ ಬಾಂಗ್ಲಾ' ಘೋಷಣೆ ಕೂಗಿದ ಆರೋಪದ ಮೇಲೆ ಬಂಧಿತರಾದ ಪಶ್ಚಿಮ ಬಂಗಾಳದ ಮಹಿಳೆಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ನ್ಯಾಯಮೂರ್ತಿ ಎಸ್.ರಾಚಯ್ಯ...

ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಡಿಜೆ, ಐಟಂ ಹಾಡು ನಿಷೇಧಿಸಲು ಕರ್ನಾಟಕ ಯೋಜನೆ; ವಿಧಾನಸಭೆಯಲ್ಲಿ ಸಂತೋಷ್ ಲಾಡ್ ಪ್ರಸ್ತಾಪ

ಬೆಂಗಳೂರು: ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ಧಾರ್ಮಿಕ ಮೆರವಣಿಗೆಗಳಲ್ಲಿ ಅಬ್ಬರದ ಸಂಗೀತ ಮತ್ತು "ಐಟಂ ಹಾಡುಗಳನ್ನು" ನುಡಿಸುವ ಡಿಸ್ಕ್ ಜಾಕಿಗಳನ್ನು (ಡಿಜೆ) ನಿಷೇಧಿಸುವ ಪರವಾಗಿ ಕರ್ನಾಟಕ ಸರ್ಕಾರವಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ...

ದೆಹಲಿಯ ಪಾಲಂನಲ್ಲಿರುವ ಬಹುಮಹಡಿ ಕಟ್ಟಡದಲ್ಲಿ ಬೆಂಕಿ ಅವಘಡ: ಮೂವರು ಮಕ್ಕಳು ಸೇರಿ ಏಳು ಮಂದಿ ಸಾವು

ರಾಷ್ಟ್ರ ರಾಜಧಾನಿಯ ಪಾಲಂ ಪ್ರದೇಶದ ವಸತಿ ಕಟ್ಟಡದಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡು ಮೂವರು ಮಕ್ಕಳು ಸೇರಿದಂತೆ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದಾರೆ ಎಂದು ದೆಹಲಿ ಪೊಲೀಸರು ಬುಧವಾರ ತಿಳಿಸಿದ್ದಾರೆ. ಘಟನೆಯ ಮಾಹಿತಿ ತಿಳಿದ ತಕ್ಷಣ...

ವಾರಣಾಸಿ: ಗಂಗಾ ನದಿಯ ದೋಣಿಯಲ್ಲಿ ‘ಇಫ್ತಾರ್’ ಕೂಟ ಆಯೋಜಿಸಿದ್ದಕ್ಕಾಗಿ 14 ಜನರ ಬಂಧನ 

ವಾರಣಾಸಿಯಲ್ಲಿ ಗಂಗಾ ನದಿಯ ಮಧ್ಯದಲ್ಲಿ ದೋಣಿಯಲ್ಲಿ 'ಇಫ್ತಾರ್' (ರಂಜಾನ್ ಸಮಯದಲ್ಲಿ ಸೂರ್ಯಾಸ್ತದ ನಂತರ ತಿನ್ನುವ ಊಟ) ಕೂಟವನ್ನು ಆಯೋಜಿಸಿದ್ದಕ್ಕಾಗಿ ಹದಿನಾಲ್ಕು ಮುಸ್ಲಿಂ ಯುವಕರನ್ನು ಬಂಧಿಸಲಾಗಿದೆ.  ದೈನಂದಿನ ಮುಸ್ಲಿಂ ಜೀವನವನ್ನು ಅಪರಾಧೀಕರಿಸುವ ಮತ್ತೊಂದು ಪ್ರಕರಣ ಇದಾಗಿದ್ದು,...

ಚುನಾವಣೆ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಇಬ್ಬರು ಪ್ರಮುಖ ನಾಯಕರು ರಾಜೀನಾಮೆ

ಚುನಾವಣೆ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಇಬ್ಬರು ಪ್ರಮುಖ ನಾಯಕರು ತಮ್ಮ ಸ್ಥಾನಗಳಿಗೆ ಮಂಗಳವಾರ (ಮಾ.17) ರಾಜೀನಾಮೆ ಸಲ್ಲಿಸಿದ್ದಾರೆ. ಪಕ್ಷದ ಹಿರಿಯ ನಾಯಕ ಹಾಗೂ ನೌಗಾಂಗ್ ಲೋಕಸಭಾ ಕ್ಷೇತ್ರದ ಹಾಲಿ ಸಂಸದ ಪ್ರದ್ಯುತ್ ಬೋರ್ಡೊಲೊಯ್...

ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ : ಮೂವರು ಶಾಸಕರನ್ನು ಅಮಾನತುಗೊಳಿಸಿದ ಒಡಿಶಾ ಕಾಂಗ್ರೆಸ್

ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ್ದಕ್ಕಾಗಿ ಒಡಿಶಾ ಕಾಂಗ್ರೆಸ್ ಮೂವರು ಶಾಸಕರಾದ ಸೋಫಿಯಾ ಫಿರ್ದೌಸ್, ರಮೇಶ್ ಜೆನಾ ಮತ್ತು ದಾಸರಥಿ ಗೊಮಾಂಗೊ ಅವರನ್ನು ಅಮಾನತುಗೊಳಿಸಿದೆ. ಒಡಿಶಾ ವಿಧಾನಸಭೆಯಲ್ಲಿ ಕಾಂಗ್ರೆಸ್ 14 ಶಾಸಕರನ್ನು ಹೊಂದಿದ್ದು, ನಾಲ್ಕನೇ...