Homeಮುಖಪುಟನದಿ ನೀರಿನಲ್ಲಿ ಮಲ ಬ್ಯಾಕ್ಟೀರಿಯ ಇತ್ತು, ಆದರೆ ಕಡಿಮೆ ಪ್ರಮಾಣದಲ್ಲಿತ್ತು: ಸಿಎಂ ಆದಿತ್ಯನಾಥ್

ನದಿ ನೀರಿನಲ್ಲಿ ಮಲ ಬ್ಯಾಕ್ಟೀರಿಯ ಇತ್ತು, ಆದರೆ ಕಡಿಮೆ ಪ್ರಮಾಣದಲ್ಲಿತ್ತು: ಸಿಎಂ ಆದಿತ್ಯನಾಥ್

- Advertisement -
- Advertisement -

ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ಮಹಾ ಕುಂಭ ಮೇಳದಲ್ಲಿ ಪವಿತ್ರ ಸ್ನಾನ ನಡೆದ ನದಿಯ ನೀರಿನಲ್ಲಿ ಮಲದಲ್ಲಿ ಕಂಡು ಬರುವ ಬ್ಯಾಕ್ಟೀರಿಯ ಕಡಿಮೆ ಪ್ರಮಾಣದಲ್ಲಿ ಇತ್ತು ಎಂದು ರಾಜ್ಯದ ಮುಖ್ಯಮಂತ್ರಿ ಆದಿತ್ಯನಾಥ್ ಸೋಮವಾರ ಹೇಳಿದ್ದಾರೆ. ಜೊತೆಗೆ ಅಲ್ಲಿ ಜನವರಿ 29 ರಂದು ಸಂಭವಿಸಿದ ಕಾಲ್ತುಳಿತವು “ಆ ದಿನ ಹಾಜರಿದ್ದ ಕೋಟ್ಯಂತರ ಯಾತ್ರಿಕರಲ್ಲಿ ಭೀತಿ ಉಂಟುಮಾಡಬಹುದಾಗಿರುವುದರಿಂದ” ಅದನ್ನು ಎತ್ತಿ ತೋರಿಸಲು ತಮ್ಮ ಸರ್ಕಾರ ಅವಕಾಶ ನೀಡಲಿಲ್ಲ ಎಂದು ಅವರು ಹೇಳಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. ನದಿ ನೀರಿನಲ್ಲಿ ಮಲ ಬ್ಯಾಕ್ಟೀರಿಯ

ಮಾಲಿನ್ಯದ ಬಗ್ಗೆ ಮಾಧ್ಯಮಗಳಲ್ಲಿನ ಹೇಳಿಕೆಗಳು ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯ ವರದಿಗಳನ್ನು ಆಧರಿಸಿವೆ ಎಂದು ಅವರು ಹೇಳಿದ್ದಾಗಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. “ಪ್ರಾಣಿಗಳ ಮಲವು ನೀರನ್ನು ಕಲುಷಿತಗೊಳಿಸಿದ ಸ್ಥಳಗಳಿಂದ ಅಥವಾ ನದಿ ನೀರು ಈಗಾಗಲೇ ಕಲುಷಿತಗೊಂಡ ಸ್ಥಳದಿಂದ ಅವರ ಮಾದರಿಗಳನ್ನು ತೆಗೆದುಕೊಳ್ಳಲಾಗಿದೆ” ಎಂದು ಅವರು ಪ್ರತಿಪಾದಿಸಿದ್ದಾರೆ. ನದಿ ನೀರಿನಲ್ಲಿ ಮಲ ಬ್ಯಾಕ್ಟೀರಿಯ

“ಜನವರಿ 11 ಮತ್ತು ಫೆಬ್ರವರಿ 13 ರ ನಡುವೆ ನಾವು ಸಂಗಮದಿಂದ ಮಾದರಿಗಳನ್ನು ತೆಗೆದುಕೊಂಡಾಗಲೆಲ್ಲಾ, ಮಲ ಬ್ಯಾಕ್ಟೀರಿಯಾದ ಅಳತೆ 100 ರವರೆಗೆ ಇತ್ತು. ಆದರೆ ಇದರ ಅನುಮತಿಸುವ ಮಿತಿ 25,000 ಆಗಿದೆ. ಸಂಗಮದಿಂದ ದೂರದಲ್ಲಿರುವ ಕೆಲವು ಇತರ ಸ್ಥಳಗಳಿಂದ ತೆಗೆದುಕೊಂಡ ಮಾದರಿಗಳಲ್ಲಿ ಮಲ ಬ್ಯಾಕ್ಟೀರಿಯಾದ ಅಳತೆ ಸುಮಾರು 1,200-1,300 ಆಗಿರಬಹುದು. ಏಕೆಂದರೆ ಅಲ್ಲಿ ಬಹುಶಃ ಎಮ್ಮೆಗಳನ್ನು ಆ ಸ್ಥಳಗಳಿಗೆ ಕರೆದೊಯ್ಯಲಾಗುತ್ತದೆ ಮತ್ತು ಅವುಗಳ ಮಲವು ಈ ಬ್ಯಾಕ್ಟೀರಿಯಾಗಳ ಪ್ರಮಾಣವನ್ನು ಹೆಚ್ಚಿಸುತ್ತದೆ.” ಎಂದು ಅವರು ಹೇಳಿದ್ದಾರೆ.

“ಮಹಾಕುಂಭದ ಯಶಸ್ವಿ ಸಂಘಟನೆಯ ಮೂಲಕ ರಾಷ್ಟ್ರ ನಿರ್ಮಾಣ” ಎಂಬ ಕಾರ್ಯಕ್ರಮದಲ್ಲಿ ಭಾರತೀಯ ನಿರ್ವಹಣಾ ಸಂಸ್ಥೆ ಮತ್ತು ಭಾರತೀಯ ಅಂಚೆ ಸೇವೆಯ ಅಧಿಕಾರಿಗಳನ್ನು ಉದ್ದೇಶಿಸಿ ಮಾತನಾಡುತ್ತಾ ಅವರು ಈ ಹೇಳಿಕೆ ನೀಡಿದ್ದಾರೆ.

ಹಿಂದೂ ಕ್ಯಾಲೆಂಡರ್‌ನಲ್ಲಿ ಆಧ್ಯಾತ್ಮಿಕವಾಗಿ ಮಹತ್ವದ ದಿನವಾದ ಮೌನಿ ಅಮವಾಸ್ಯೆಯ ಸಂದರ್ಭದಲ್ಲಿ ಪವಿತ್ರ ಸ್ನಾನ ಮಾಡಲು ಹೆಚ್ಚಿನ ಸಂಖ್ಯೆಯ ಯಾತ್ರಿಕರು ಆಗಮಿಸಿದ್ದಾಗ ಮಹಾ ಕುಂಭದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಕನಿಷ್ಠ 30 ಜನರು ಸಾವನ್ನಪ್ಪಿದರು ಮತ್ತು 60 ಜನರು ಗಾಯಗೊಂಡರು ಎಂದು ವರದಿಯಾಗಿದೆ.

“ಜನಸಂದಣಿ ನದಿಯಲ್ಲಿನ ನೀರಿನ ಪ್ರವಾಹದಂತೆ ಹರಿಯುತ್ತಿತ್ತು. ಈ ಪ್ರವಾಹವನ್ನು ನಿಲ್ಲಿಸಲು ಪ್ರಯತ್ನಿಸಿದಾಗಲೆಲ್ಲಾ, ಅದು ಬಲವಂತವಾಗಿ ಹೊರಬರುತ್ತದೆ ಅಥವಾ ತೀವ್ರ ಹರಡಿ ಹಾನಿಯನ್ನುಂಟುಮಾಡುತ್ತದೆ. ಅಂದಿನ ರಾತ್ರಿ ಸ್ಥಳದಲ್ಲಿ ಭಾರಿ ಜನಸಂದಣಿ ಇತ್ತು ಮತ್ತು ಎಲ್ಲರೂ ಬೆಳಿಗ್ಗೆ 4 ಗಂಟೆಗೆ ಪವಿತ್ರ ಸ್ನಾನ ಮಾಡಲು ಹೊರಟಾಗ ಈ ಕಾಲ್ತುಳಿತ ಸಂಭವಿಸಿದೆ.” ಎಂದು ಮುಖ್ಯಮಂತ್ರಿ ಸೋಮವಾರ ಹೇಳಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ಉಲ್ಲೇಖಿಸಿದೆ.

ಜನವರಿ 28 ರಂದು ಸಂಜೆ 7.30 ಕ್ಕೆ ಮೌನಿ ಅಮಾವಾಸ್ಯೆ ಪ್ರಾರಂಭವಾದ ಕಾರಣ ಜನಸಂದಣಿ ಹೆಚ್ಚಾಯಿತು ಮತ್ತು ಘಟನೆ ಬೆಳಗಿನ ಜಾವ 1 ರಿಂದ 1.30 ರ ನಡುವೆ ಸಂಭವಿಸಿದೆ ಎಂದು ಅವರು ಹೇಳಿದ್ದಾರೆ.

“ಆ ಸಮಯದಲ್ಲಿ ಪ್ರಯಾಗ್‌ರಾಜ್‌ ಮತ್ತು ಕುಂಭಮೇಳ ಪ್ರದೇಶದಲ್ಲಿ ಎಂಟು ಕೋಟಿ ಭಕ್ತರು ಮತ್ತು ಸಾಧುಗಳು ಹಾಜರಿದ್ದರು. ಅವರು ಭಯಭೀತರಾಗಿದ್ದರಿಂದ ಈ ಘಟನೆಯನ್ನು ನಾವು ಅತಿಯಾಗಿ ಹೈಲೈಟ್ ಮಾಡಲು ನಾವು ಅವಕಾಶ ನೀಡಲಿಲ್ಲ. ಒಂದು ವೇಳೆ ಹಾಗೆ ಆಗಿದ್ದರೆ ಪರಿಸ್ಥಿತಿ ಇನ್ನಷ್ಟು ಹದಗೆಡಬಹುದಿತ್ತು” ಎಂದು ಅವರು ಪಿಟಿಐಗೆ ತಿಳಿಸಿದ್ದಾರೆ.

ಆ ದಿನ ಬೆಳಿಗ್ಗೆ 13 ಅಖಾಡಗಳ ಮಠಾಧೀಶರು ಸಹ ಪವಿತ್ರ ಸ್ನಾನ ಮಾಡುವ ಬಗ್ಗೆ ನಿರ್ಧರಿಸಲಾಗಿತ್ತು ಎಂದು ಆದಿತ್ಯನಾಥ್ ಹೇಳಿದ್ದಾರೆ. ಅಖಾಡಗಳು ಎಂದರೆ, ನಿರ್ದಿಷ್ಟ ಆಧ್ಯಾತ್ಮಿಕ ಸಂಪ್ರದಾಯಗಳನ್ನು ಅನುಸರಿಸುವ ಮಠಾಧೀಶರ ಸಂಸ್ಥೆಗಳಾಗಿವೆ.

“ಅಖಾಡಗಳ ಸ್ನಾನ ಯಾವಾಗಲೂ ಒಂದು ಸವಾಲಾಗಿರುತ್ತದೆ. ಏಕೆಂದರೆ ಯಾರು ಮೊದಲು ಸ್ನಾನ ಮಾಡುತ್ತಾರೆ ಎಂಬುದರ ಕುರಿತು ಹಿಂಸಾಚಾರ ನಡೆಯುತ್ತಿತ್ತು. ಸ್ನಾನ ಬೆಳಿಗ್ಗೆ 4 ಗಂಟೆಗೆ ಪ್ರಾರಂಭವಾಗಬೇಕಿತ್ತು, ಮತ್ತು ಕಾಲ್ತುಳಿತದ ಹೊರತಾಗಿಯೂ ಎಲ್ಲಾ ಅಖಾಡಗಳು ಸಿದ್ಧವಾಗಿದ್ದವು. ಆದರೆ ಬೆಳಿಗ್ಗೆ 3 ಗಂಟೆಗೆ, ಒಂದು ಘಟನೆ ನಡೆದ ಕಾರಣ ಅವರ ಸ್ನಾನವನ್ನು ಮುಂದೂಡಲು ನಾನು ವಿನಂತಿಸಿದೆ.” ಎಂದು ಅವರು ಹೇಳಿದ್ದಾರೆ.

ಮಹಾ ಕುಂಭದ ಸಮಯದಲ್ಲಿ ಯಾತ್ರಿಕರು ಪವಿತ್ರ ಸ್ನಾನ ಮಾಡುತ್ತಿದ್ದ ನದಿ ನೀರಿನಲ್ಲಿ ಮಲದಲ್ಲಿ ಸಾಮಾನ್ಯವಾಗಿ ಕಂಡುಬರುವ ಬ್ಯಾಕ್ಟೀರಿಯಾಗಳು ಹೆಚ್ಚಿನ ಮಟ್ಟದ ಕಂಡುಬಂದಿವೆ ಎಂಬ ವರದಿಗಳನ್ನು ಮುಖ್ಯಮಂತ್ರಿ ತಿರಸ್ಕರಿಸಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಫೆಬ್ರವರಿ 3 ರಂದು, ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಗೆ ಮಹಾ ಕುಂಭ ಯಾತ್ರಾ ಸ್ಥಳದ ನದಿ ನೀರಿನ ಗುಣಮಟ್ಟವು ಮಲದಲ್ಲಿ ಕಂಡುಬರುವ ಬ್ಯಾಕ್ಟೀರಿಯಾ ಹೆಚ್ಚಿನ ಮಟ್ಟದಲ್ಲಿ ಇರುವುದರಿಂದ ಅದು ಸ್ನಾನಕ್ಕೆ ಸೂಕ್ತವಲ್ಲ ಎಂದು ತಿಳಿಸಿತ್ತು.

“2013 ರ ಕುಂಭದಲ್ಲಿ ಗಂಗಾ ನದಿಯಲ್ಲಿ ಸ್ನಾನ ಮಾಡಲು ಅಂದಿನ ಮಾರಿಷಸ್ ಪ್ರಧಾನಿ ನಿರಾಕರಿಸಿದ್ದರು. ನಾವು ಮೊದಲ ದಿನದಿಂದಲೂ ಅದನ್ನು ಮನಸ್ಸಿನಲ್ಲಿಟ್ಟುಕೊಂಡಿದ್ದೆವು ಮತ್ತು ಗಂಗಾ ಅಥವಾ ಯಮುನಾಗೆ ಯಾವುದೇ ಒಳಚರಂಡಿ ಅಥವಾ ನಲ್ಲಾ ಸೋರಿಕೆಯಾಗಬಾರದು ಎಂದು ನಿರ್ಧರಿಸಿದ್ದೇವೆ.” ಎಂದು ಆದಿತ್ಯನಾಥ್ ಅವರು ಹೇಳಿದ್ದಾಗಿ ದಿ ಇಂಡಿಯನ್ ಎಕ್ಸ್‌ಪ್ರೆಸ್ ಸೋಮವಾರ ವರದಿ ಮಾಡಿದೆ.

“ಉತ್ತರ ಪ್ರದೇಶದ ಗಂಗಾ ನದಿಯ ಅತ್ಯಂತ ನಿರ್ಣಾಯಕ ಕೇಂದ್ರ ಕಾನ್ಪುರದಲ್ಲಿದೆ. 125 ವರ್ಷಗಳಿಂದ ಸಿಸಾಮೌ ಕೇಂದ್ರದಲ್ಲಿ ಪ್ರತಿದಿನ 4 ಕೋಟಿ ಲೀಟರ್‌ಗಿಂತಲೂ ಹೆಚ್ಚು ಒಳಚರಂಡಿ ನೀರು ಗಂಗಾಕ್ಕೆ ಹರಿಯುತ್ತಿತ್ತು. “ಮೂರು ವರ್ಷಗಳ ಹಿಂದೆ ನಾವು ಇದನ್ನು ಪರಿಹರಿಸಿದ್ದೇವೆ” ಎಂದು ಅವರು ಹೇಳಿದ್ದಾರೆ.

ನೀರಿನ ಮಾಲಿನ್ಯದ ವರದಿಗಳನ್ನು “ನಕಲಿ” ಎಂದು ಕರೆದ ಮುಖ್ಯಮಂತ್ರಿ, ಈ ಬಗ್ಗೆ ಸರ್ಕಾರಿ ಮತ್ತು ಖಾಸಗಿ ಪ್ರಯೋಗಾಲಯಗಳು ತನಿಖೆ ನಡೆಸಿವೆ ಎಂದು ಹೇಳಿದ್ದಾರೆ. “ಜನವರಿ 11 ಮತ್ತು ಫೆಬ್ರವರಿ 26 ರ ನಡುವೆ ನಾವು ನಿಯಮಿತವಾಗಿ ನೀರಿನ ಮಾದರಿಗಳನ್ನು ತೆಗೆದುಕೊಂಡಿದ್ದೇವೆ. ಅದನ್ನು ತೆಗೆದುಕೊಂಡಾಗಲೆಲ್ಲಾ, ಸಂಗಮ್ನಲ್ಲಿ BOD ಅಳತೆ 3 ಕ್ಕಿಂತ ಕಡಿಮೆ ಕಂಡುಬಂದಿದೆ. ಸಂಗಮ್‌ನಲ್ಲಿ ಕರಗಿದ ಆಮ್ಲಜನಕವು ಯಾವಾಗಲೂ 10 ಕ್ಕಿಂತ ಹೆಚ್ಚಿತ್ತು.” ಎಂದು ಅವರು ಹೇಳಿಕೊಂಡಿದ್ದಾರೆ. ಸಂಗಮ ಎಂದರೆ, ಗಂಗಾ, ಯಮುನಾ ಮತ್ತು ಪೌರಾಣಿಕ ಸರಸ್ವತಿ ನದಿಗಳ ಸಂಗಮ ಸ್ಥಳವಾಗಿದೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ‘ತಕ್ಷಣ ಮಕ್ಕಳನ್ನು ಹೊಂದಿ’ | ಕ್ಷೇತ್ರ ವಿಂಗಡನೆ ಬಗ್ಗೆ ತಮಿಳುನಾಡು ನಿವಾಸಿಗಳಿಗೆ ಸಿಎಂ ಸ್ಟಾಲಿನ್ ಸಲಹೆ

‘ತಕ್ಷಣ ಮಕ್ಕಳನ್ನು ಹೊಂದಿ’ | ಕ್ಷೇತ್ರ ವಿಂಗಡನೆ ಬಗ್ಗೆ ತಮಿಳುನಾಡು ನಿವಾಸಿಗಳಿಗೆ ಸಿಎಂ ಸ್ಟಾಲಿನ್ ಸಲಹೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...