Homeಮುಖಪುಟನದಿ ನೀರಿನಲ್ಲಿ ಮಲ ಬ್ಯಾಕ್ಟೀರಿಯ ಇತ್ತು, ಆದರೆ ಕಡಿಮೆ ಪ್ರಮಾಣದಲ್ಲಿತ್ತು: ಸಿಎಂ ಆದಿತ್ಯನಾಥ್

ನದಿ ನೀರಿನಲ್ಲಿ ಮಲ ಬ್ಯಾಕ್ಟೀರಿಯ ಇತ್ತು, ಆದರೆ ಕಡಿಮೆ ಪ್ರಮಾಣದಲ್ಲಿತ್ತು: ಸಿಎಂ ಆದಿತ್ಯನಾಥ್

- Advertisement -
- Advertisement -

ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ಮಹಾ ಕುಂಭ ಮೇಳದಲ್ಲಿ ಪವಿತ್ರ ಸ್ನಾನ ನಡೆದ ನದಿಯ ನೀರಿನಲ್ಲಿ ಮಲದಲ್ಲಿ ಕಂಡು ಬರುವ ಬ್ಯಾಕ್ಟೀರಿಯ ಕಡಿಮೆ ಪ್ರಮಾಣದಲ್ಲಿ ಇತ್ತು ಎಂದು ರಾಜ್ಯದ ಮುಖ್ಯಮಂತ್ರಿ ಆದಿತ್ಯನಾಥ್ ಸೋಮವಾರ ಹೇಳಿದ್ದಾರೆ. ಜೊತೆಗೆ ಅಲ್ಲಿ ಜನವರಿ 29 ರಂದು ಸಂಭವಿಸಿದ ಕಾಲ್ತುಳಿತವು “ಆ ದಿನ ಹಾಜರಿದ್ದ ಕೋಟ್ಯಂತರ ಯಾತ್ರಿಕರಲ್ಲಿ ಭೀತಿ ಉಂಟುಮಾಡಬಹುದಾಗಿರುವುದರಿಂದ” ಅದನ್ನು ಎತ್ತಿ ತೋರಿಸಲು ತಮ್ಮ ಸರ್ಕಾರ ಅವಕಾಶ ನೀಡಲಿಲ್ಲ ಎಂದು ಅವರು ಹೇಳಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. ನದಿ ನೀರಿನಲ್ಲಿ ಮಲ ಬ್ಯಾಕ್ಟೀರಿಯ

ಮಾಲಿನ್ಯದ ಬಗ್ಗೆ ಮಾಧ್ಯಮಗಳಲ್ಲಿನ ಹೇಳಿಕೆಗಳು ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯ ವರದಿಗಳನ್ನು ಆಧರಿಸಿವೆ ಎಂದು ಅವರು ಹೇಳಿದ್ದಾಗಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. “ಪ್ರಾಣಿಗಳ ಮಲವು ನೀರನ್ನು ಕಲುಷಿತಗೊಳಿಸಿದ ಸ್ಥಳಗಳಿಂದ ಅಥವಾ ನದಿ ನೀರು ಈಗಾಗಲೇ ಕಲುಷಿತಗೊಂಡ ಸ್ಥಳದಿಂದ ಅವರ ಮಾದರಿಗಳನ್ನು ತೆಗೆದುಕೊಳ್ಳಲಾಗಿದೆ” ಎಂದು ಅವರು ಪ್ರತಿಪಾದಿಸಿದ್ದಾರೆ. ನದಿ ನೀರಿನಲ್ಲಿ ಮಲ ಬ್ಯಾಕ್ಟೀರಿಯ

“ಜನವರಿ 11 ಮತ್ತು ಫೆಬ್ರವರಿ 13 ರ ನಡುವೆ ನಾವು ಸಂಗಮದಿಂದ ಮಾದರಿಗಳನ್ನು ತೆಗೆದುಕೊಂಡಾಗಲೆಲ್ಲಾ, ಮಲ ಬ್ಯಾಕ್ಟೀರಿಯಾದ ಅಳತೆ 100 ರವರೆಗೆ ಇತ್ತು. ಆದರೆ ಇದರ ಅನುಮತಿಸುವ ಮಿತಿ 25,000 ಆಗಿದೆ. ಸಂಗಮದಿಂದ ದೂರದಲ್ಲಿರುವ ಕೆಲವು ಇತರ ಸ್ಥಳಗಳಿಂದ ತೆಗೆದುಕೊಂಡ ಮಾದರಿಗಳಲ್ಲಿ ಮಲ ಬ್ಯಾಕ್ಟೀರಿಯಾದ ಅಳತೆ ಸುಮಾರು 1,200-1,300 ಆಗಿರಬಹುದು. ಏಕೆಂದರೆ ಅಲ್ಲಿ ಬಹುಶಃ ಎಮ್ಮೆಗಳನ್ನು ಆ ಸ್ಥಳಗಳಿಗೆ ಕರೆದೊಯ್ಯಲಾಗುತ್ತದೆ ಮತ್ತು ಅವುಗಳ ಮಲವು ಈ ಬ್ಯಾಕ್ಟೀರಿಯಾಗಳ ಪ್ರಮಾಣವನ್ನು ಹೆಚ್ಚಿಸುತ್ತದೆ.” ಎಂದು ಅವರು ಹೇಳಿದ್ದಾರೆ.

“ಮಹಾಕುಂಭದ ಯಶಸ್ವಿ ಸಂಘಟನೆಯ ಮೂಲಕ ರಾಷ್ಟ್ರ ನಿರ್ಮಾಣ” ಎಂಬ ಕಾರ್ಯಕ್ರಮದಲ್ಲಿ ಭಾರತೀಯ ನಿರ್ವಹಣಾ ಸಂಸ್ಥೆ ಮತ್ತು ಭಾರತೀಯ ಅಂಚೆ ಸೇವೆಯ ಅಧಿಕಾರಿಗಳನ್ನು ಉದ್ದೇಶಿಸಿ ಮಾತನಾಡುತ್ತಾ ಅವರು ಈ ಹೇಳಿಕೆ ನೀಡಿದ್ದಾರೆ.

ಹಿಂದೂ ಕ್ಯಾಲೆಂಡರ್‌ನಲ್ಲಿ ಆಧ್ಯಾತ್ಮಿಕವಾಗಿ ಮಹತ್ವದ ದಿನವಾದ ಮೌನಿ ಅಮವಾಸ್ಯೆಯ ಸಂದರ್ಭದಲ್ಲಿ ಪವಿತ್ರ ಸ್ನಾನ ಮಾಡಲು ಹೆಚ್ಚಿನ ಸಂಖ್ಯೆಯ ಯಾತ್ರಿಕರು ಆಗಮಿಸಿದ್ದಾಗ ಮಹಾ ಕುಂಭದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಕನಿಷ್ಠ 30 ಜನರು ಸಾವನ್ನಪ್ಪಿದರು ಮತ್ತು 60 ಜನರು ಗಾಯಗೊಂಡರು ಎಂದು ವರದಿಯಾಗಿದೆ.

“ಜನಸಂದಣಿ ನದಿಯಲ್ಲಿನ ನೀರಿನ ಪ್ರವಾಹದಂತೆ ಹರಿಯುತ್ತಿತ್ತು. ಈ ಪ್ರವಾಹವನ್ನು ನಿಲ್ಲಿಸಲು ಪ್ರಯತ್ನಿಸಿದಾಗಲೆಲ್ಲಾ, ಅದು ಬಲವಂತವಾಗಿ ಹೊರಬರುತ್ತದೆ ಅಥವಾ ತೀವ್ರ ಹರಡಿ ಹಾನಿಯನ್ನುಂಟುಮಾಡುತ್ತದೆ. ಅಂದಿನ ರಾತ್ರಿ ಸ್ಥಳದಲ್ಲಿ ಭಾರಿ ಜನಸಂದಣಿ ಇತ್ತು ಮತ್ತು ಎಲ್ಲರೂ ಬೆಳಿಗ್ಗೆ 4 ಗಂಟೆಗೆ ಪವಿತ್ರ ಸ್ನಾನ ಮಾಡಲು ಹೊರಟಾಗ ಈ ಕಾಲ್ತುಳಿತ ಸಂಭವಿಸಿದೆ.” ಎಂದು ಮುಖ್ಯಮಂತ್ರಿ ಸೋಮವಾರ ಹೇಳಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ಉಲ್ಲೇಖಿಸಿದೆ.

ಜನವರಿ 28 ರಂದು ಸಂಜೆ 7.30 ಕ್ಕೆ ಮೌನಿ ಅಮಾವಾಸ್ಯೆ ಪ್ರಾರಂಭವಾದ ಕಾರಣ ಜನಸಂದಣಿ ಹೆಚ್ಚಾಯಿತು ಮತ್ತು ಘಟನೆ ಬೆಳಗಿನ ಜಾವ 1 ರಿಂದ 1.30 ರ ನಡುವೆ ಸಂಭವಿಸಿದೆ ಎಂದು ಅವರು ಹೇಳಿದ್ದಾರೆ.

“ಆ ಸಮಯದಲ್ಲಿ ಪ್ರಯಾಗ್‌ರಾಜ್‌ ಮತ್ತು ಕುಂಭಮೇಳ ಪ್ರದೇಶದಲ್ಲಿ ಎಂಟು ಕೋಟಿ ಭಕ್ತರು ಮತ್ತು ಸಾಧುಗಳು ಹಾಜರಿದ್ದರು. ಅವರು ಭಯಭೀತರಾಗಿದ್ದರಿಂದ ಈ ಘಟನೆಯನ್ನು ನಾವು ಅತಿಯಾಗಿ ಹೈಲೈಟ್ ಮಾಡಲು ನಾವು ಅವಕಾಶ ನೀಡಲಿಲ್ಲ. ಒಂದು ವೇಳೆ ಹಾಗೆ ಆಗಿದ್ದರೆ ಪರಿಸ್ಥಿತಿ ಇನ್ನಷ್ಟು ಹದಗೆಡಬಹುದಿತ್ತು” ಎಂದು ಅವರು ಪಿಟಿಐಗೆ ತಿಳಿಸಿದ್ದಾರೆ.

ಆ ದಿನ ಬೆಳಿಗ್ಗೆ 13 ಅಖಾಡಗಳ ಮಠಾಧೀಶರು ಸಹ ಪವಿತ್ರ ಸ್ನಾನ ಮಾಡುವ ಬಗ್ಗೆ ನಿರ್ಧರಿಸಲಾಗಿತ್ತು ಎಂದು ಆದಿತ್ಯನಾಥ್ ಹೇಳಿದ್ದಾರೆ. ಅಖಾಡಗಳು ಎಂದರೆ, ನಿರ್ದಿಷ್ಟ ಆಧ್ಯಾತ್ಮಿಕ ಸಂಪ್ರದಾಯಗಳನ್ನು ಅನುಸರಿಸುವ ಮಠಾಧೀಶರ ಸಂಸ್ಥೆಗಳಾಗಿವೆ.

“ಅಖಾಡಗಳ ಸ್ನಾನ ಯಾವಾಗಲೂ ಒಂದು ಸವಾಲಾಗಿರುತ್ತದೆ. ಏಕೆಂದರೆ ಯಾರು ಮೊದಲು ಸ್ನಾನ ಮಾಡುತ್ತಾರೆ ಎಂಬುದರ ಕುರಿತು ಹಿಂಸಾಚಾರ ನಡೆಯುತ್ತಿತ್ತು. ಸ್ನಾನ ಬೆಳಿಗ್ಗೆ 4 ಗಂಟೆಗೆ ಪ್ರಾರಂಭವಾಗಬೇಕಿತ್ತು, ಮತ್ತು ಕಾಲ್ತುಳಿತದ ಹೊರತಾಗಿಯೂ ಎಲ್ಲಾ ಅಖಾಡಗಳು ಸಿದ್ಧವಾಗಿದ್ದವು. ಆದರೆ ಬೆಳಿಗ್ಗೆ 3 ಗಂಟೆಗೆ, ಒಂದು ಘಟನೆ ನಡೆದ ಕಾರಣ ಅವರ ಸ್ನಾನವನ್ನು ಮುಂದೂಡಲು ನಾನು ವಿನಂತಿಸಿದೆ.” ಎಂದು ಅವರು ಹೇಳಿದ್ದಾರೆ.

ಮಹಾ ಕುಂಭದ ಸಮಯದಲ್ಲಿ ಯಾತ್ರಿಕರು ಪವಿತ್ರ ಸ್ನಾನ ಮಾಡುತ್ತಿದ್ದ ನದಿ ನೀರಿನಲ್ಲಿ ಮಲದಲ್ಲಿ ಸಾಮಾನ್ಯವಾಗಿ ಕಂಡುಬರುವ ಬ್ಯಾಕ್ಟೀರಿಯಾಗಳು ಹೆಚ್ಚಿನ ಮಟ್ಟದ ಕಂಡುಬಂದಿವೆ ಎಂಬ ವರದಿಗಳನ್ನು ಮುಖ್ಯಮಂತ್ರಿ ತಿರಸ್ಕರಿಸಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಫೆಬ್ರವರಿ 3 ರಂದು, ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಗೆ ಮಹಾ ಕುಂಭ ಯಾತ್ರಾ ಸ್ಥಳದ ನದಿ ನೀರಿನ ಗುಣಮಟ್ಟವು ಮಲದಲ್ಲಿ ಕಂಡುಬರುವ ಬ್ಯಾಕ್ಟೀರಿಯಾ ಹೆಚ್ಚಿನ ಮಟ್ಟದಲ್ಲಿ ಇರುವುದರಿಂದ ಅದು ಸ್ನಾನಕ್ಕೆ ಸೂಕ್ತವಲ್ಲ ಎಂದು ತಿಳಿಸಿತ್ತು.

“2013 ರ ಕುಂಭದಲ್ಲಿ ಗಂಗಾ ನದಿಯಲ್ಲಿ ಸ್ನಾನ ಮಾಡಲು ಅಂದಿನ ಮಾರಿಷಸ್ ಪ್ರಧಾನಿ ನಿರಾಕರಿಸಿದ್ದರು. ನಾವು ಮೊದಲ ದಿನದಿಂದಲೂ ಅದನ್ನು ಮನಸ್ಸಿನಲ್ಲಿಟ್ಟುಕೊಂಡಿದ್ದೆವು ಮತ್ತು ಗಂಗಾ ಅಥವಾ ಯಮುನಾಗೆ ಯಾವುದೇ ಒಳಚರಂಡಿ ಅಥವಾ ನಲ್ಲಾ ಸೋರಿಕೆಯಾಗಬಾರದು ಎಂದು ನಿರ್ಧರಿಸಿದ್ದೇವೆ.” ಎಂದು ಆದಿತ್ಯನಾಥ್ ಅವರು ಹೇಳಿದ್ದಾಗಿ ದಿ ಇಂಡಿಯನ್ ಎಕ್ಸ್‌ಪ್ರೆಸ್ ಸೋಮವಾರ ವರದಿ ಮಾಡಿದೆ.

“ಉತ್ತರ ಪ್ರದೇಶದ ಗಂಗಾ ನದಿಯ ಅತ್ಯಂತ ನಿರ್ಣಾಯಕ ಕೇಂದ್ರ ಕಾನ್ಪುರದಲ್ಲಿದೆ. 125 ವರ್ಷಗಳಿಂದ ಸಿಸಾಮೌ ಕೇಂದ್ರದಲ್ಲಿ ಪ್ರತಿದಿನ 4 ಕೋಟಿ ಲೀಟರ್‌ಗಿಂತಲೂ ಹೆಚ್ಚು ಒಳಚರಂಡಿ ನೀರು ಗಂಗಾಕ್ಕೆ ಹರಿಯುತ್ತಿತ್ತು. “ಮೂರು ವರ್ಷಗಳ ಹಿಂದೆ ನಾವು ಇದನ್ನು ಪರಿಹರಿಸಿದ್ದೇವೆ” ಎಂದು ಅವರು ಹೇಳಿದ್ದಾರೆ.

ನೀರಿನ ಮಾಲಿನ್ಯದ ವರದಿಗಳನ್ನು “ನಕಲಿ” ಎಂದು ಕರೆದ ಮುಖ್ಯಮಂತ್ರಿ, ಈ ಬಗ್ಗೆ ಸರ್ಕಾರಿ ಮತ್ತು ಖಾಸಗಿ ಪ್ರಯೋಗಾಲಯಗಳು ತನಿಖೆ ನಡೆಸಿವೆ ಎಂದು ಹೇಳಿದ್ದಾರೆ. “ಜನವರಿ 11 ಮತ್ತು ಫೆಬ್ರವರಿ 26 ರ ನಡುವೆ ನಾವು ನಿಯಮಿತವಾಗಿ ನೀರಿನ ಮಾದರಿಗಳನ್ನು ತೆಗೆದುಕೊಂಡಿದ್ದೇವೆ. ಅದನ್ನು ತೆಗೆದುಕೊಂಡಾಗಲೆಲ್ಲಾ, ಸಂಗಮ್ನಲ್ಲಿ BOD ಅಳತೆ 3 ಕ್ಕಿಂತ ಕಡಿಮೆ ಕಂಡುಬಂದಿದೆ. ಸಂಗಮ್‌ನಲ್ಲಿ ಕರಗಿದ ಆಮ್ಲಜನಕವು ಯಾವಾಗಲೂ 10 ಕ್ಕಿಂತ ಹೆಚ್ಚಿತ್ತು.” ಎಂದು ಅವರು ಹೇಳಿಕೊಂಡಿದ್ದಾರೆ. ಸಂಗಮ ಎಂದರೆ, ಗಂಗಾ, ಯಮುನಾ ಮತ್ತು ಪೌರಾಣಿಕ ಸರಸ್ವತಿ ನದಿಗಳ ಸಂಗಮ ಸ್ಥಳವಾಗಿದೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ‘ತಕ್ಷಣ ಮಕ್ಕಳನ್ನು ಹೊಂದಿ’ | ಕ್ಷೇತ್ರ ವಿಂಗಡನೆ ಬಗ್ಗೆ ತಮಿಳುನಾಡು ನಿವಾಸಿಗಳಿಗೆ ಸಿಎಂ ಸ್ಟಾಲಿನ್ ಸಲಹೆ

‘ತಕ್ಷಣ ಮಕ್ಕಳನ್ನು ಹೊಂದಿ’ | ಕ್ಷೇತ್ರ ವಿಂಗಡನೆ ಬಗ್ಗೆ ತಮಿಳುನಾಡು ನಿವಾಸಿಗಳಿಗೆ ಸಿಎಂ ಸ್ಟಾಲಿನ್ ಸಲಹೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...

ಒಳಮೀಸಲಾತಿ ನಾಡು ಕಂಡ ಸುದೀರ್ಘ ಹೋರಾಟದ ಕಥೆ

ಇದು ಬೆವರು ನಿಟ್ಟುಸಿರುಗಳ ಚಳವಳಿ. ತಮ್ಮ ಅನ್ನದ ಬಟ್ಟಲಿಗಾಗಿ ದಶಕಗಳ ಕಾಲ ಹಸಿವು, ಬಾಯಾರಿಕೆ, ನಿದ್ರೆ ಎಲ್ಲವನ್ನೂ ಬಿಟ್ಟು ನಡೆಸಿದ ಅಭೂತಪೂರ್ವ ಚಳವಳಿ. ರಾಜಕೀಯ ಚಕ್ರವ್ಯೂಹಗಳನ್ನು ಬೇಧಿಸಿ, ಸಾಂವಿಧಾನಿಕ ಹಕ್ಕನ್ನು ತಮ್ಮದಾಗಿಸಿಕೊಂಡ ಚಳವಳಿ....