Homeಕರೋನಾ ತಲ್ಲಣಲಸಿಕೆಯ ಲಗುಬಗೆಯ ಲೋ ಪಾಲಿಟಿಕ್ಸ್? - ಏಕೈಕ ’ದೇಸಿ’ ಲಸಿಕೆ ಕೊವಾಕ್ಸಿನ್ ಎಷ್ಟು ಸುರಕ್ಷಿತ?

ಲಸಿಕೆಯ ಲಗುಬಗೆಯ ಲೋ ಪಾಲಿಟಿಕ್ಸ್? – ಏಕೈಕ ’ದೇಸಿ’ ಲಸಿಕೆ ಕೊವಾಕ್ಸಿನ್ ಎಷ್ಟು ಸುರಕ್ಷಿತ?

ಮೂರನೇ ಹಂತದ ಟ್ರಯಲ್ ಅಪೂರ್ಣವಾಗಿದ್ದರೂ, ವಿಷಯವಾರು ತಜ್ಞ ಸಮಿತಿಯು ಕೊವಾಕ್ಸಿನ್ ತುರ್ತು ಬಳಕೆಗೆ ಅನುಮತಿ ನೀಡಿದ್ದನ್ನು ಐಸಿಎಂಆರ್ ಮುಖ್ಯಸ್ಥ ಡಾ.ಬಲರಾಮ್ ಸಮರ್ಥಿಸಿಕೊಳ್ಳುತ್ತಿದ್ದಾರೆ

- Advertisement -
- Advertisement -

ಎಲ್ಲ ಸಂದರ್ಭಗಳನ್ನೂ ತನ್ನ ಹಿತಾಸಕ್ತಿಗೆ ಬಳಸಿಕೊಳ್ಳುವ ಅರೆ-ಸರ್ವಾಧಿಕಾರಿ ’ಡೆಮಾಕ್ರಸಿ’ಯನ್ನು ಕೊರೊನಾ ವೈರಸ್ ಬಯಲು ಮಾಡಿತ್ತು. ಈಗ ಸಾಂಕ್ರಾಮಿಕವನ್ನು ನಿವಾರಿಸುವ ಲಸಿಕೆಯನ್ನೂ ರಾಜಕೀಯ ಲಾಭಕ್ಕೆ ಬಳಸಿಕೊಳ್ಳಲಾಗುತ್ತಿದೆಯೇ?

ಭಾರತದಲ್ಲಿ ಕೊರೊನಾ ಶಮನಕ್ಕೆ ನಾಲ್ಕು ಲಸಿಕೆ ಸಿದ್ಧವಾಗಿವೆ ಎಂದು ಕೇಂದ್ರ ಸಚಿವ ಪ್ರಕಾಶ್ ಜಾವ್ಡೇಕರ್ ಹೇಳಿದ್ದಾರೆ. ಕಳೆದ ಐದಾರು ದಿನದಿಂದ ಪ್ರಧಾನ ಮಂತ್ರಿ ನರೇಂದ್ರ ಮೋದಿ, ಆಗಾಗ ಲಸಿಕೆಯ ಪ್ರಸ್ತಾಪ ಮಾಡುವುದು, ಟಿವಿ ಮಾಧ್ಯಮಗಳು ಮೋದಿನೇ ಲಸಿಕೆ ಕಂಡು ಹಿಡಿದರು ಎಂಬಂತೆ ಸ್ಟೋರಿ ಮಾಡುವುದು ನಡೆದೇ ಇದೆ.

ಆಕ್ಸ್‌ಫರ್ಡ್-ಅಸ್ಟ್ರಾಜೆನಿಕಾ ಲಸಿಕೆ, ಫಿಜರ್ ಲಸಿಕೆ-ಯಾವುದೇ ಇರಲಿ, ಅದು ಪಾಕಿಸ್ತಾನ, ನೈಜಿರಿಯಾ ಸೇರಿದಂತೆ ಎಲ್ಲ ದೇಶಗಳಿಗೂ ಲಭ್ಯವಾಗಲಿದೆ. ಭಾರತವೂ ಸೇರಿ ಕಡಿಮೆ ಆದಾಯದ ದೇಶಗಳ ಜನರಿಗೆ ಸುಲಭವಾಗಿ ಲಸಿಕೆ ಸಿಗುವಂತೆ ಮಾಡಲು ಬಿಲ್ ಗೇಟ್ಸ್ ಫೌಂಡೇಶನ್‌ನಂತಹ ಹಲವಾರು ಎನ್‌ಜಿಒಗಳು ಈಗಾಗಲೇ ಸಕಲ ವ್ಯವಸ್ಥೆ ಮಾಡಿವೆ.

ಆದರೆ, ಭಾರತದಲ್ಲಿ ಮಾತ್ರ, ಒಂದು ಗುಂಪು ಲಸಿಕೆಯ ವಿಷಯದಲ್ಲೂ ರಾಜಕೀಯ ಲಾಭ ಮಾಡಿಕೊಳ್ಳಲು ಹವಣಿಸುತ್ತಿದೆ ಎಂಬ ಅನುಮಾನ ಮೂಡತೊಡಗಿದೆ.

ಇದನ್ನೂ ಓದಿ: ಸಾವಿತ್ರಿ ಬಾಯಿ ಫುಲೆ ಸ್ಥಾಪಿಸಿದ ಮೊಟ್ಟಮೊದಲ ಹೆಣ್ಣು ಮಕ್ಕಳ ಶಾಲೆಯ ಸ್ಥಿತಿ ಹೇಗಿದೆ ಗೊತ್ತಾ?

ಲಭ್ಯವಾಗಲಿರುವ (ಲಭ್ಯ ಆಗಬಹುದಾದ!) ನಾಲ್ಕು ಲಸಿಕೆಗಳ ಪೈಕಿ ಒಂದು ’ದೇಸಿ’ ಲಸಿಕೆಯಿದೆ. ಅದು ’ಭಾರತೀಯ ವೈದ್ಯಕೀಯ ಸಂಶೋಧನಾ ಪರಿಷತ್’ (ಐಸಿಎಂಆರ್) ಸಹಯೋಗದಲ್ಲಿ ಹೈದರಾಬಾದಿನ ಭಾರತ್ ಬಯೋಟೆಕ್ ಅಭಿವೃದ್ಧಿಪಡಿಸಿರುವ ಕೊವಾಕ್ಸಿನ್ ಎಂಬ ಲಸಿಕೆ.

ಶನಿವಾರ ಈ ಲಸಿಕೆಯ ತುರ್ತು ಬಳಕೆಗೆ ಅನುಮತಿ ನೀಡಲಾಗಿದೆ. ಮೂರನೇ ಹಂತದ ಟ್ರಯಲ್‌ಗಳನ್ನು ಪೂರ್ಣಗೊಳಿಸದೇ ಇದ್ದರೂ, ಕೆಲವು ಕಂಡಿಷನ್‌ಗಳ ಮೇಲೆ ಈ ಲಸಿಕೆಯ ಬಳಕೆಗೆ ಅನುಮತಿ ನೀಡಲಾಗಿದೆ. ಸಂಪೂರ್ಣ ಸಿದ್ಧವಾದ ಮೂರು ಲಸಿಕೆ ಇರುವಾಗ, ಸದಾ ವಿವಾದಾತ್ಮಕವಾಗಿಯೇ ತನ್ನ ಪ್ರಕ್ರಿಯೆ ನಡೆಸಿರುವ ಈ ಕೊವಾಕ್ಸಿನ್ ಎಂಬ ದೇಸಿ ತಳಿಯ ಅಗತ್ಯವಾದರೂ ಏನಿತ್ತು ಎಂಬ ಸಂಶಯ ಕಾಡುತ್ತದೆ.

ಇದನ್ನೂ ಓದಿ: ಗೋಹತ್ಯೆ ನಿಷೇಧ ಮಸೂದೆ: ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸಿದ ರಾಜ್ಯ ಸರ್ಕಾರ

2020 ರ ನವಂಬರ್ 9 ರಂದು ಕೊವಾಕ್ಸಿನ್ ಮೂರನೇ ಹಂತವು, ’ಕ್ಲಿನಿಕಲ್ ಟ್ರಯಲ್ ರಿಜಿಸ್ಟ್ರಿ ಆಫ್ ಇಂಡಿಯಾ’ದಲ್ಲಿ ನೋಂದಣಿಯಾಗಿತ್ತು. 25,800 ಸ್ವಯಂಸೇವಕರ ಮೇಲೆ ಪ್ಲಾಸೆಬೊ ಆಧರಿತ ವಿವಿಧ ಪ್ರಯೋಗ ನಡೆಸಬೇಕಿತ್ತು. ಈ ಪ್ರಕ್ರಿಯೆಗೆ ಸ್ವಯಂಸೇವಕರ ಸೇರ್ಪಡೆ (ರಿಕ್ರೂಟ್‌ಮೆಂಟ್) ಶುರುವಾಗಿದ್ದೇ 2020ರ ನವಂಬರ್ 16 ರಂದು. ತನಗೆ ಸ್ವಯಂಸೇವಕರ ಕೊರತೆಯಿದೆ ಎಂದು ಭಾರತ್ ಬಯೋಟೆಕ್ ಒಪ್ಪಿಕೊಂಡ ಕೆಲವೇ ವಾರಗಳಲ್ಲಿ ಇದೀಗ ದೇಶದ ಔಷಧ ನಿಯಂತ್ರಣ ಮಂಡಳಿ ರಚಿಸಿದ ವಿಷಯವಾರು ತಜ್ಞ ಸಮಿತಿ ಕೊವಾಕ್ಷಿನ್ ತುರ್ತು ಬಳಕೆಗೆ ಅವಕಾಶ ನೀಡಿಬಿಟ್ಟಿದೆ!

ಬಾಕ್ಸ್ ಲಸಿಕೆಯನ್ನು ಎಲ್ಲರಿಗೂ ಉಚಿತವಾಗಿ ನೀಡಬೇಕಾದ್ದು ಸರ್ಕಾರದ ಕರ್ತವ್ಯ. ಇದಕ್ಕೇನೂ ಪಿಎಂ-ಕೇರ್ಸ್ ಹೆಸರಲ್ಲಿ ಗುಡ್ಡೆ ಹಾಕಿದ ಹಣ ನೀಡುವುದೂ ಬೇಡ. ಆರೋಗ್ಯ ಇಲಾಖೆಯ ಬಜೆಟ್, ವಿಪತ್ತು ನಿರ್ವಹಣಾ ನಿಧಿ ಬಳಸಿಕೊಂಡರೆ ಸಾಕು. ಆದರೆ, 3 ಕೋಟಿ ಆರೋಗ್ಯ ಕಾರ್ಯಕರ್ತರಿಗೆ ಉಚಿತ ಲಸಿಕೆ ಎಂದು ಸರ್ಕಾರ ಹೇಳಿದೊಡನೆ, ಉಳಿದವರು ರೊಕ್ಕ ಕೊಡಬೇಕು ಎಂದಾಗುತ್ತದೆ. ನಂತರದಲ್ಲಿ ಎಲ್ಲರಿಗೂ ಉಚಿತ ಎಂದು ಹೇಳುವ ಮೂಲಕ ತಾವೇನೋ ಮಹಾನ್ ಸಾಧನೆ ಮಾಡುತ್ತಿದ್ದೇವೆ ಎಂಬಂತೆ ಪೋಸ್ ಕೊಡಲಾಗುತ್ತಿದೆ.
ಏನೇ ಇರಲಿ, ಪ್ರಧಾನಮಂತ್ರಿ, ಗೃಹ ಮಂತ್ರಿ, ಆರೋಗ್ಯ ಮಂತ್ರಿ ಮತ್ತು ಇತರೆಲ್ಲ ಕೇಂದ್ರ ಸಚಿವರು ಕೊವಾಕ್ಸಿನ್ ಲಸಿಕೆ ಹಾಕಿಸಿಕೊಳ್ಳಲೇಬೇಕು. ಆ ಮೂಲಕ ದೇಸಿ ಲಸಿಕೆಗೆ ಗೌರವ ತೋರಬೇಕು ಅಲ್ಲವಾ?

ಇದನ್ನೂ ಓದಿ: ರೈತರ ಪ್ರತಿಭಟನೆ ಕುರಿತು ಅವಹೇಳನ: ಮೂವರು ಬಿಜೆಪಿ ನಾಯಕರಿಗೆ ಲೀಗಲ್ ನೋಟಿಸ್

ಐಸಿಎಂಆರ್ ಭಾರತ್ ಬಯೋಟೆಕ್‌ಗೆ ಸಹಯೋಗ ನೀಡಿದೆ. ಹೀಗಾಗಿ ಕೊವಾಕ್ಸಿನ್ ವಿವಾದ ಶುರುವಾಗುವುದೇ ಐಸಿಎಂಆರ್‌ನಿಂದ. ಐಸಿಎಂಆರ್ ಮುಖ್ಯಸ್ಥ ಡಾ.ಬಲರಾಮ್ ಭಾರ್ಗವ್ ಜುಲೈ 2 ರಂದು ಕೊವಾಕ್ಸಿನ್ ಉಸ್ತುವಾರಿ ನೋಡಿಕೊಳ್ಳುವ ಅಧಿಕಾರಿಗಳಿಗೆ ಒಂದು ಪತ್ರ ಬರೆದಿದ್ದರು. ಅಗಸ್ಟ್ 15 ರೊಳಗೆ ಲಸಿಕೆ ಸಿದ್ಧವಾಗಬೇಕು ಎಂದು ಆದೇಶಿಸಿದ್ದರು. ಆಗಿನ್ನೂ ಕೊವಾಕ್ಸಿನ್ ಮೊದಲ ಹಂತದ ಟ್ರಯಲ್ ಕೂಡ ಆರಂಭಿಸಿರಲಿಲ್ಲ. ಇದು ಟೀಕೆಗೆ ಒಳಗಾದ ನಂತರ ಡಾ. ಬಲರಾಮ್, ’ಹಾಗಲ್ಲ, ಕೆಲಸ ಬೇಗ ಬೇಗ ನಡೆಯಲಿ ಎಂಬ ಕಾರಣಕ್ಕೆ ಆ ಪತ್ರ ಬರೆದಿದ್ದು’ ಎಂದು ಲೋಕಲ್ ಪುಢಾರಿಯ ಧಾಟಿಯಲ್ಲಿ ಸಮಜಾಯಿಷಿ ನೀಡಿದ್ದರು! ಹೇಗಾದರೂ ಮಾಡಿ ಅಗಸ್ಟ್ 15 ರಂದು ಕೆಂಪುಕೋಟೆಯ ಮೇಲೆಯೇ ಲಸಿಕೆ ಬಿಡುಗಡೆ ಮಾಡಬೇಕು ಎಂದು ಅಂದುಕೊಂಡಿದ್ದರೇನೋ?

ಕೊವಾಕ್ಸಿನ್ 3 ನೆ ಮತ್ತು ಕೊನೆ ಹಂತದ ಟ್ರಯಲ್‌ನಲ್ಲಿ ಡಿಸೆಂಬರ್ 28 ರೊಳಗೆ ದೇಶದ ವಿವಿಧ ಭಾಗಗಳಲ್ಲಿ 26,000 ಸ್ವಯಂಸೇವಕರ ಮೇಲೆ ಪ್ರಯೋಗ ನಡೆಯಬೇಕಿತ್ತು. ಆದರೆ ದಾಖಲೆಗಳ ಪ್ರಕಾರ, ಭಾರತ್ ಬಯೋಟೆಕ್ ಕಂಪನಿಯು ಡಿಸೆಂಬರ್ 22 ರವರೆಗೆ ಕೇವಲ 13,000 ಸ್ವಯಂಸೇವಕರನ್ನು ನೋಂದಣಿ ಮಾಡಿಕೊಳ್ಳಲು ಶಕ್ತವಾಗಿತ್ತಷ್ಟೇ!

ಇದನ್ನೂ ಓದಿ: ರಾಜ್ಯ ಬಿಜೆಪಿಯಲ್ಲಿ ಬಿರುಕು: ಯತ್ನಾಳ್ ವಿರುದ್ಧ ರಾಷ್ಟ್ರ ನಾಯಕರಿಗೆ ದೂರು ನೀಡಿದ ಸಿಎಂ ಬೆಂಬಲಿಗರು!

ಮೂರನೇ ಹಂತದ ಟ್ರಯಲ್ ಅಪೂರ್ಣವಾಗಿದ್ದರೂ, ವಿಷಯವಾರು ತಜ್ಞ ಸಮಿತಿಯು ಕೊವಾಕ್ಸಿನ್ ತುರ್ತು ಬಳಕೆಗೆ ಅನುಮತಿ ನೀಡಿದ್ದನ್ನು ಐಸಿಎಂಆರ್ ಮುಖ್ಯಸ್ಥ ಡಾ.ಬಲರಾಮ್ ಸಮರ್ಥಿಸಿಕೊಳ್ಳುತ್ತಿದ್ದಾರೆ. ’ಲಸಿಕೆಯ ವಿಷಯದಲ್ಲಿ ಉಪಯೋಗ ಮತ್ತು ರಿಸ್ಕ್ ಎರಡೂ ಇರುತ್ತವೆ. ರಿಸ್ಕ್‌ಗಿಂತ ಉಪಯೋಗವೇ ಹೆಚ್ಚಿದೆ ಎಂದು ಅನಿಸಿದ ಕಾರಣಕ್ಕೆ ಔಷಧ ನಿಯಂತ್ರಕ ಮಂಡಳಿ ನೇಮಿಸಿದ ತಜ್ಞರ ಸಮಿತಿಯು ತುರ್ತು ಬಳಕೆಗೆ ಅವಕಾಶ ನೀಡಿದೆ. ಈ ತುರ್ತು ಕಾಲದಲ್ಲಿ ಇದು ಸರಿಯಾದ ತೀರ್ಮಾನವೇ ಆಗಿದೆ’ ಎಂದು ಕೊವಾಕ್ಸಿನ್ ಅನ್ನು ಬೆಂಬಲಿಸಿದ್ದಾರೆ.

ನೆನಪಿರಲಿ, ಭಾರತ್ ಬಯೋಟೆಕ್ ಮತ್ತು ಐಸಿಎಂಆರ್ ಸಹಯೋಗದಲ್ಲಿ ಈ ಕೊವಾಕ್ಸಿನ್ ಲಸಿಕೆ ತಯಾರಾಗಿದೆ. ಇದು ಈಗ ಏಕೈಕ ಸಂಪೂರ್ಣ ’ದೇಸಿ’ ಲಸಿಕೆ! ಆತ್ಮನಿರ್ಭರ ಅಂತಾ ಅದೇನೋ ಹೇಳ್ತಾರಲ್ಲ, ಅಂತಹದ್ದು ಇದು!


ಇದನ್ನೂ ಓದಿ: ಬಿಜೆಪಿ ಮೇಲೆ ನಂಬಿಕೆಯಿಲ್ಲ, ಕೊರೊನಾ ಲಸಿಕೆ ತೆಗೆದುಕೊಳ್ಳುವುದಿಲ್ಲ: ಅಖಿಲೇಶ್ ಯಾದವ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...