Homeಕರೋನಾ ತಲ್ಲಣಲಸಿಕೆಯ ಲಗುಬಗೆಯ ಲೋ ಪಾಲಿಟಿಕ್ಸ್? - ಏಕೈಕ ’ದೇಸಿ’ ಲಸಿಕೆ ಕೊವಾಕ್ಸಿನ್ ಎಷ್ಟು ಸುರಕ್ಷಿತ?

ಲಸಿಕೆಯ ಲಗುಬಗೆಯ ಲೋ ಪಾಲಿಟಿಕ್ಸ್? – ಏಕೈಕ ’ದೇಸಿ’ ಲಸಿಕೆ ಕೊವಾಕ್ಸಿನ್ ಎಷ್ಟು ಸುರಕ್ಷಿತ?

ಮೂರನೇ ಹಂತದ ಟ್ರಯಲ್ ಅಪೂರ್ಣವಾಗಿದ್ದರೂ, ವಿಷಯವಾರು ತಜ್ಞ ಸಮಿತಿಯು ಕೊವಾಕ್ಸಿನ್ ತುರ್ತು ಬಳಕೆಗೆ ಅನುಮತಿ ನೀಡಿದ್ದನ್ನು ಐಸಿಎಂಆರ್ ಮುಖ್ಯಸ್ಥ ಡಾ.ಬಲರಾಮ್ ಸಮರ್ಥಿಸಿಕೊಳ್ಳುತ್ತಿದ್ದಾರೆ

- Advertisement -
- Advertisement -

ಎಲ್ಲ ಸಂದರ್ಭಗಳನ್ನೂ ತನ್ನ ಹಿತಾಸಕ್ತಿಗೆ ಬಳಸಿಕೊಳ್ಳುವ ಅರೆ-ಸರ್ವಾಧಿಕಾರಿ ’ಡೆಮಾಕ್ರಸಿ’ಯನ್ನು ಕೊರೊನಾ ವೈರಸ್ ಬಯಲು ಮಾಡಿತ್ತು. ಈಗ ಸಾಂಕ್ರಾಮಿಕವನ್ನು ನಿವಾರಿಸುವ ಲಸಿಕೆಯನ್ನೂ ರಾಜಕೀಯ ಲಾಭಕ್ಕೆ ಬಳಸಿಕೊಳ್ಳಲಾಗುತ್ತಿದೆಯೇ?

ಭಾರತದಲ್ಲಿ ಕೊರೊನಾ ಶಮನಕ್ಕೆ ನಾಲ್ಕು ಲಸಿಕೆ ಸಿದ್ಧವಾಗಿವೆ ಎಂದು ಕೇಂದ್ರ ಸಚಿವ ಪ್ರಕಾಶ್ ಜಾವ್ಡೇಕರ್ ಹೇಳಿದ್ದಾರೆ. ಕಳೆದ ಐದಾರು ದಿನದಿಂದ ಪ್ರಧಾನ ಮಂತ್ರಿ ನರೇಂದ್ರ ಮೋದಿ, ಆಗಾಗ ಲಸಿಕೆಯ ಪ್ರಸ್ತಾಪ ಮಾಡುವುದು, ಟಿವಿ ಮಾಧ್ಯಮಗಳು ಮೋದಿನೇ ಲಸಿಕೆ ಕಂಡು ಹಿಡಿದರು ಎಂಬಂತೆ ಸ್ಟೋರಿ ಮಾಡುವುದು ನಡೆದೇ ಇದೆ.

ಆಕ್ಸ್‌ಫರ್ಡ್-ಅಸ್ಟ್ರಾಜೆನಿಕಾ ಲಸಿಕೆ, ಫಿಜರ್ ಲಸಿಕೆ-ಯಾವುದೇ ಇರಲಿ, ಅದು ಪಾಕಿಸ್ತಾನ, ನೈಜಿರಿಯಾ ಸೇರಿದಂತೆ ಎಲ್ಲ ದೇಶಗಳಿಗೂ ಲಭ್ಯವಾಗಲಿದೆ. ಭಾರತವೂ ಸೇರಿ ಕಡಿಮೆ ಆದಾಯದ ದೇಶಗಳ ಜನರಿಗೆ ಸುಲಭವಾಗಿ ಲಸಿಕೆ ಸಿಗುವಂತೆ ಮಾಡಲು ಬಿಲ್ ಗೇಟ್ಸ್ ಫೌಂಡೇಶನ್‌ನಂತಹ ಹಲವಾರು ಎನ್‌ಜಿಒಗಳು ಈಗಾಗಲೇ ಸಕಲ ವ್ಯವಸ್ಥೆ ಮಾಡಿವೆ.

ಆದರೆ, ಭಾರತದಲ್ಲಿ ಮಾತ್ರ, ಒಂದು ಗುಂಪು ಲಸಿಕೆಯ ವಿಷಯದಲ್ಲೂ ರಾಜಕೀಯ ಲಾಭ ಮಾಡಿಕೊಳ್ಳಲು ಹವಣಿಸುತ್ತಿದೆ ಎಂಬ ಅನುಮಾನ ಮೂಡತೊಡಗಿದೆ.

ಇದನ್ನೂ ಓದಿ: ಸಾವಿತ್ರಿ ಬಾಯಿ ಫುಲೆ ಸ್ಥಾಪಿಸಿದ ಮೊಟ್ಟಮೊದಲ ಹೆಣ್ಣು ಮಕ್ಕಳ ಶಾಲೆಯ ಸ್ಥಿತಿ ಹೇಗಿದೆ ಗೊತ್ತಾ?

ಲಭ್ಯವಾಗಲಿರುವ (ಲಭ್ಯ ಆಗಬಹುದಾದ!) ನಾಲ್ಕು ಲಸಿಕೆಗಳ ಪೈಕಿ ಒಂದು ’ದೇಸಿ’ ಲಸಿಕೆಯಿದೆ. ಅದು ’ಭಾರತೀಯ ವೈದ್ಯಕೀಯ ಸಂಶೋಧನಾ ಪರಿಷತ್’ (ಐಸಿಎಂಆರ್) ಸಹಯೋಗದಲ್ಲಿ ಹೈದರಾಬಾದಿನ ಭಾರತ್ ಬಯೋಟೆಕ್ ಅಭಿವೃದ್ಧಿಪಡಿಸಿರುವ ಕೊವಾಕ್ಸಿನ್ ಎಂಬ ಲಸಿಕೆ.

ಶನಿವಾರ ಈ ಲಸಿಕೆಯ ತುರ್ತು ಬಳಕೆಗೆ ಅನುಮತಿ ನೀಡಲಾಗಿದೆ. ಮೂರನೇ ಹಂತದ ಟ್ರಯಲ್‌ಗಳನ್ನು ಪೂರ್ಣಗೊಳಿಸದೇ ಇದ್ದರೂ, ಕೆಲವು ಕಂಡಿಷನ್‌ಗಳ ಮೇಲೆ ಈ ಲಸಿಕೆಯ ಬಳಕೆಗೆ ಅನುಮತಿ ನೀಡಲಾಗಿದೆ. ಸಂಪೂರ್ಣ ಸಿದ್ಧವಾದ ಮೂರು ಲಸಿಕೆ ಇರುವಾಗ, ಸದಾ ವಿವಾದಾತ್ಮಕವಾಗಿಯೇ ತನ್ನ ಪ್ರಕ್ರಿಯೆ ನಡೆಸಿರುವ ಈ ಕೊವಾಕ್ಸಿನ್ ಎಂಬ ದೇಸಿ ತಳಿಯ ಅಗತ್ಯವಾದರೂ ಏನಿತ್ತು ಎಂಬ ಸಂಶಯ ಕಾಡುತ್ತದೆ.

ಇದನ್ನೂ ಓದಿ: ಗೋಹತ್ಯೆ ನಿಷೇಧ ಮಸೂದೆ: ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸಿದ ರಾಜ್ಯ ಸರ್ಕಾರ

2020 ರ ನವಂಬರ್ 9 ರಂದು ಕೊವಾಕ್ಸಿನ್ ಮೂರನೇ ಹಂತವು, ’ಕ್ಲಿನಿಕಲ್ ಟ್ರಯಲ್ ರಿಜಿಸ್ಟ್ರಿ ಆಫ್ ಇಂಡಿಯಾ’ದಲ್ಲಿ ನೋಂದಣಿಯಾಗಿತ್ತು. 25,800 ಸ್ವಯಂಸೇವಕರ ಮೇಲೆ ಪ್ಲಾಸೆಬೊ ಆಧರಿತ ವಿವಿಧ ಪ್ರಯೋಗ ನಡೆಸಬೇಕಿತ್ತು. ಈ ಪ್ರಕ್ರಿಯೆಗೆ ಸ್ವಯಂಸೇವಕರ ಸೇರ್ಪಡೆ (ರಿಕ್ರೂಟ್‌ಮೆಂಟ್) ಶುರುವಾಗಿದ್ದೇ 2020ರ ನವಂಬರ್ 16 ರಂದು. ತನಗೆ ಸ್ವಯಂಸೇವಕರ ಕೊರತೆಯಿದೆ ಎಂದು ಭಾರತ್ ಬಯೋಟೆಕ್ ಒಪ್ಪಿಕೊಂಡ ಕೆಲವೇ ವಾರಗಳಲ್ಲಿ ಇದೀಗ ದೇಶದ ಔಷಧ ನಿಯಂತ್ರಣ ಮಂಡಳಿ ರಚಿಸಿದ ವಿಷಯವಾರು ತಜ್ಞ ಸಮಿತಿ ಕೊವಾಕ್ಷಿನ್ ತುರ್ತು ಬಳಕೆಗೆ ಅವಕಾಶ ನೀಡಿಬಿಟ್ಟಿದೆ!

ಬಾಕ್ಸ್ ಲಸಿಕೆಯನ್ನು ಎಲ್ಲರಿಗೂ ಉಚಿತವಾಗಿ ನೀಡಬೇಕಾದ್ದು ಸರ್ಕಾರದ ಕರ್ತವ್ಯ. ಇದಕ್ಕೇನೂ ಪಿಎಂ-ಕೇರ್ಸ್ ಹೆಸರಲ್ಲಿ ಗುಡ್ಡೆ ಹಾಕಿದ ಹಣ ನೀಡುವುದೂ ಬೇಡ. ಆರೋಗ್ಯ ಇಲಾಖೆಯ ಬಜೆಟ್, ವಿಪತ್ತು ನಿರ್ವಹಣಾ ನಿಧಿ ಬಳಸಿಕೊಂಡರೆ ಸಾಕು. ಆದರೆ, 3 ಕೋಟಿ ಆರೋಗ್ಯ ಕಾರ್ಯಕರ್ತರಿಗೆ ಉಚಿತ ಲಸಿಕೆ ಎಂದು ಸರ್ಕಾರ ಹೇಳಿದೊಡನೆ, ಉಳಿದವರು ರೊಕ್ಕ ಕೊಡಬೇಕು ಎಂದಾಗುತ್ತದೆ. ನಂತರದಲ್ಲಿ ಎಲ್ಲರಿಗೂ ಉಚಿತ ಎಂದು ಹೇಳುವ ಮೂಲಕ ತಾವೇನೋ ಮಹಾನ್ ಸಾಧನೆ ಮಾಡುತ್ತಿದ್ದೇವೆ ಎಂಬಂತೆ ಪೋಸ್ ಕೊಡಲಾಗುತ್ತಿದೆ.
ಏನೇ ಇರಲಿ, ಪ್ರಧಾನಮಂತ್ರಿ, ಗೃಹ ಮಂತ್ರಿ, ಆರೋಗ್ಯ ಮಂತ್ರಿ ಮತ್ತು ಇತರೆಲ್ಲ ಕೇಂದ್ರ ಸಚಿವರು ಕೊವಾಕ್ಸಿನ್ ಲಸಿಕೆ ಹಾಕಿಸಿಕೊಳ್ಳಲೇಬೇಕು. ಆ ಮೂಲಕ ದೇಸಿ ಲಸಿಕೆಗೆ ಗೌರವ ತೋರಬೇಕು ಅಲ್ಲವಾ?

ಇದನ್ನೂ ಓದಿ: ರೈತರ ಪ್ರತಿಭಟನೆ ಕುರಿತು ಅವಹೇಳನ: ಮೂವರು ಬಿಜೆಪಿ ನಾಯಕರಿಗೆ ಲೀಗಲ್ ನೋಟಿಸ್

ಐಸಿಎಂಆರ್ ಭಾರತ್ ಬಯೋಟೆಕ್‌ಗೆ ಸಹಯೋಗ ನೀಡಿದೆ. ಹೀಗಾಗಿ ಕೊವಾಕ್ಸಿನ್ ವಿವಾದ ಶುರುವಾಗುವುದೇ ಐಸಿಎಂಆರ್‌ನಿಂದ. ಐಸಿಎಂಆರ್ ಮುಖ್ಯಸ್ಥ ಡಾ.ಬಲರಾಮ್ ಭಾರ್ಗವ್ ಜುಲೈ 2 ರಂದು ಕೊವಾಕ್ಸಿನ್ ಉಸ್ತುವಾರಿ ನೋಡಿಕೊಳ್ಳುವ ಅಧಿಕಾರಿಗಳಿಗೆ ಒಂದು ಪತ್ರ ಬರೆದಿದ್ದರು. ಅಗಸ್ಟ್ 15 ರೊಳಗೆ ಲಸಿಕೆ ಸಿದ್ಧವಾಗಬೇಕು ಎಂದು ಆದೇಶಿಸಿದ್ದರು. ಆಗಿನ್ನೂ ಕೊವಾಕ್ಸಿನ್ ಮೊದಲ ಹಂತದ ಟ್ರಯಲ್ ಕೂಡ ಆರಂಭಿಸಿರಲಿಲ್ಲ. ಇದು ಟೀಕೆಗೆ ಒಳಗಾದ ನಂತರ ಡಾ. ಬಲರಾಮ್, ’ಹಾಗಲ್ಲ, ಕೆಲಸ ಬೇಗ ಬೇಗ ನಡೆಯಲಿ ಎಂಬ ಕಾರಣಕ್ಕೆ ಆ ಪತ್ರ ಬರೆದಿದ್ದು’ ಎಂದು ಲೋಕಲ್ ಪುಢಾರಿಯ ಧಾಟಿಯಲ್ಲಿ ಸಮಜಾಯಿಷಿ ನೀಡಿದ್ದರು! ಹೇಗಾದರೂ ಮಾಡಿ ಅಗಸ್ಟ್ 15 ರಂದು ಕೆಂಪುಕೋಟೆಯ ಮೇಲೆಯೇ ಲಸಿಕೆ ಬಿಡುಗಡೆ ಮಾಡಬೇಕು ಎಂದು ಅಂದುಕೊಂಡಿದ್ದರೇನೋ?

ಕೊವಾಕ್ಸಿನ್ 3 ನೆ ಮತ್ತು ಕೊನೆ ಹಂತದ ಟ್ರಯಲ್‌ನಲ್ಲಿ ಡಿಸೆಂಬರ್ 28 ರೊಳಗೆ ದೇಶದ ವಿವಿಧ ಭಾಗಗಳಲ್ಲಿ 26,000 ಸ್ವಯಂಸೇವಕರ ಮೇಲೆ ಪ್ರಯೋಗ ನಡೆಯಬೇಕಿತ್ತು. ಆದರೆ ದಾಖಲೆಗಳ ಪ್ರಕಾರ, ಭಾರತ್ ಬಯೋಟೆಕ್ ಕಂಪನಿಯು ಡಿಸೆಂಬರ್ 22 ರವರೆಗೆ ಕೇವಲ 13,000 ಸ್ವಯಂಸೇವಕರನ್ನು ನೋಂದಣಿ ಮಾಡಿಕೊಳ್ಳಲು ಶಕ್ತವಾಗಿತ್ತಷ್ಟೇ!

ಇದನ್ನೂ ಓದಿ: ರಾಜ್ಯ ಬಿಜೆಪಿಯಲ್ಲಿ ಬಿರುಕು: ಯತ್ನಾಳ್ ವಿರುದ್ಧ ರಾಷ್ಟ್ರ ನಾಯಕರಿಗೆ ದೂರು ನೀಡಿದ ಸಿಎಂ ಬೆಂಬಲಿಗರು!

ಮೂರನೇ ಹಂತದ ಟ್ರಯಲ್ ಅಪೂರ್ಣವಾಗಿದ್ದರೂ, ವಿಷಯವಾರು ತಜ್ಞ ಸಮಿತಿಯು ಕೊವಾಕ್ಸಿನ್ ತುರ್ತು ಬಳಕೆಗೆ ಅನುಮತಿ ನೀಡಿದ್ದನ್ನು ಐಸಿಎಂಆರ್ ಮುಖ್ಯಸ್ಥ ಡಾ.ಬಲರಾಮ್ ಸಮರ್ಥಿಸಿಕೊಳ್ಳುತ್ತಿದ್ದಾರೆ. ’ಲಸಿಕೆಯ ವಿಷಯದಲ್ಲಿ ಉಪಯೋಗ ಮತ್ತು ರಿಸ್ಕ್ ಎರಡೂ ಇರುತ್ತವೆ. ರಿಸ್ಕ್‌ಗಿಂತ ಉಪಯೋಗವೇ ಹೆಚ್ಚಿದೆ ಎಂದು ಅನಿಸಿದ ಕಾರಣಕ್ಕೆ ಔಷಧ ನಿಯಂತ್ರಕ ಮಂಡಳಿ ನೇಮಿಸಿದ ತಜ್ಞರ ಸಮಿತಿಯು ತುರ್ತು ಬಳಕೆಗೆ ಅವಕಾಶ ನೀಡಿದೆ. ಈ ತುರ್ತು ಕಾಲದಲ್ಲಿ ಇದು ಸರಿಯಾದ ತೀರ್ಮಾನವೇ ಆಗಿದೆ’ ಎಂದು ಕೊವಾಕ್ಸಿನ್ ಅನ್ನು ಬೆಂಬಲಿಸಿದ್ದಾರೆ.

ನೆನಪಿರಲಿ, ಭಾರತ್ ಬಯೋಟೆಕ್ ಮತ್ತು ಐಸಿಎಂಆರ್ ಸಹಯೋಗದಲ್ಲಿ ಈ ಕೊವಾಕ್ಸಿನ್ ಲಸಿಕೆ ತಯಾರಾಗಿದೆ. ಇದು ಈಗ ಏಕೈಕ ಸಂಪೂರ್ಣ ’ದೇಸಿ’ ಲಸಿಕೆ! ಆತ್ಮನಿರ್ಭರ ಅಂತಾ ಅದೇನೋ ಹೇಳ್ತಾರಲ್ಲ, ಅಂತಹದ್ದು ಇದು!


ಇದನ್ನೂ ಓದಿ: ಬಿಜೆಪಿ ಮೇಲೆ ನಂಬಿಕೆಯಿಲ್ಲ, ಕೊರೊನಾ ಲಸಿಕೆ ತೆಗೆದುಕೊಳ್ಳುವುದಿಲ್ಲ: ಅಖಿಲೇಶ್ ಯಾದವ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...