Homeಕರೋನಾ ತಲ್ಲಣಲಸಿಕೆಯ ಲಗುಬಗೆಯ ಲೋ ಪಾಲಿಟಿಕ್ಸ್? - ಏಕೈಕ ’ದೇಸಿ’ ಲಸಿಕೆ ಕೊವಾಕ್ಸಿನ್ ಎಷ್ಟು ಸುರಕ್ಷಿತ?

ಲಸಿಕೆಯ ಲಗುಬಗೆಯ ಲೋ ಪಾಲಿಟಿಕ್ಸ್? – ಏಕೈಕ ’ದೇಸಿ’ ಲಸಿಕೆ ಕೊವಾಕ್ಸಿನ್ ಎಷ್ಟು ಸುರಕ್ಷಿತ?

ಮೂರನೇ ಹಂತದ ಟ್ರಯಲ್ ಅಪೂರ್ಣವಾಗಿದ್ದರೂ, ವಿಷಯವಾರು ತಜ್ಞ ಸಮಿತಿಯು ಕೊವಾಕ್ಸಿನ್ ತುರ್ತು ಬಳಕೆಗೆ ಅನುಮತಿ ನೀಡಿದ್ದನ್ನು ಐಸಿಎಂಆರ್ ಮುಖ್ಯಸ್ಥ ಡಾ.ಬಲರಾಮ್ ಸಮರ್ಥಿಸಿಕೊಳ್ಳುತ್ತಿದ್ದಾರೆ

- Advertisement -
- Advertisement -

ಎಲ್ಲ ಸಂದರ್ಭಗಳನ್ನೂ ತನ್ನ ಹಿತಾಸಕ್ತಿಗೆ ಬಳಸಿಕೊಳ್ಳುವ ಅರೆ-ಸರ್ವಾಧಿಕಾರಿ ’ಡೆಮಾಕ್ರಸಿ’ಯನ್ನು ಕೊರೊನಾ ವೈರಸ್ ಬಯಲು ಮಾಡಿತ್ತು. ಈಗ ಸಾಂಕ್ರಾಮಿಕವನ್ನು ನಿವಾರಿಸುವ ಲಸಿಕೆಯನ್ನೂ ರಾಜಕೀಯ ಲಾಭಕ್ಕೆ ಬಳಸಿಕೊಳ್ಳಲಾಗುತ್ತಿದೆಯೇ?

ಭಾರತದಲ್ಲಿ ಕೊರೊನಾ ಶಮನಕ್ಕೆ ನಾಲ್ಕು ಲಸಿಕೆ ಸಿದ್ಧವಾಗಿವೆ ಎಂದು ಕೇಂದ್ರ ಸಚಿವ ಪ್ರಕಾಶ್ ಜಾವ್ಡೇಕರ್ ಹೇಳಿದ್ದಾರೆ. ಕಳೆದ ಐದಾರು ದಿನದಿಂದ ಪ್ರಧಾನ ಮಂತ್ರಿ ನರೇಂದ್ರ ಮೋದಿ, ಆಗಾಗ ಲಸಿಕೆಯ ಪ್ರಸ್ತಾಪ ಮಾಡುವುದು, ಟಿವಿ ಮಾಧ್ಯಮಗಳು ಮೋದಿನೇ ಲಸಿಕೆ ಕಂಡು ಹಿಡಿದರು ಎಂಬಂತೆ ಸ್ಟೋರಿ ಮಾಡುವುದು ನಡೆದೇ ಇದೆ.

ಆಕ್ಸ್‌ಫರ್ಡ್-ಅಸ್ಟ್ರಾಜೆನಿಕಾ ಲಸಿಕೆ, ಫಿಜರ್ ಲಸಿಕೆ-ಯಾವುದೇ ಇರಲಿ, ಅದು ಪಾಕಿಸ್ತಾನ, ನೈಜಿರಿಯಾ ಸೇರಿದಂತೆ ಎಲ್ಲ ದೇಶಗಳಿಗೂ ಲಭ್ಯವಾಗಲಿದೆ. ಭಾರತವೂ ಸೇರಿ ಕಡಿಮೆ ಆದಾಯದ ದೇಶಗಳ ಜನರಿಗೆ ಸುಲಭವಾಗಿ ಲಸಿಕೆ ಸಿಗುವಂತೆ ಮಾಡಲು ಬಿಲ್ ಗೇಟ್ಸ್ ಫೌಂಡೇಶನ್‌ನಂತಹ ಹಲವಾರು ಎನ್‌ಜಿಒಗಳು ಈಗಾಗಲೇ ಸಕಲ ವ್ಯವಸ್ಥೆ ಮಾಡಿವೆ.

ಆದರೆ, ಭಾರತದಲ್ಲಿ ಮಾತ್ರ, ಒಂದು ಗುಂಪು ಲಸಿಕೆಯ ವಿಷಯದಲ್ಲೂ ರಾಜಕೀಯ ಲಾಭ ಮಾಡಿಕೊಳ್ಳಲು ಹವಣಿಸುತ್ತಿದೆ ಎಂಬ ಅನುಮಾನ ಮೂಡತೊಡಗಿದೆ.

ಇದನ್ನೂ ಓದಿ: ಸಾವಿತ್ರಿ ಬಾಯಿ ಫುಲೆ ಸ್ಥಾಪಿಸಿದ ಮೊಟ್ಟಮೊದಲ ಹೆಣ್ಣು ಮಕ್ಕಳ ಶಾಲೆಯ ಸ್ಥಿತಿ ಹೇಗಿದೆ ಗೊತ್ತಾ?

ಲಭ್ಯವಾಗಲಿರುವ (ಲಭ್ಯ ಆಗಬಹುದಾದ!) ನಾಲ್ಕು ಲಸಿಕೆಗಳ ಪೈಕಿ ಒಂದು ’ದೇಸಿ’ ಲಸಿಕೆಯಿದೆ. ಅದು ’ಭಾರತೀಯ ವೈದ್ಯಕೀಯ ಸಂಶೋಧನಾ ಪರಿಷತ್’ (ಐಸಿಎಂಆರ್) ಸಹಯೋಗದಲ್ಲಿ ಹೈದರಾಬಾದಿನ ಭಾರತ್ ಬಯೋಟೆಕ್ ಅಭಿವೃದ್ಧಿಪಡಿಸಿರುವ ಕೊವಾಕ್ಸಿನ್ ಎಂಬ ಲಸಿಕೆ.

ಶನಿವಾರ ಈ ಲಸಿಕೆಯ ತುರ್ತು ಬಳಕೆಗೆ ಅನುಮತಿ ನೀಡಲಾಗಿದೆ. ಮೂರನೇ ಹಂತದ ಟ್ರಯಲ್‌ಗಳನ್ನು ಪೂರ್ಣಗೊಳಿಸದೇ ಇದ್ದರೂ, ಕೆಲವು ಕಂಡಿಷನ್‌ಗಳ ಮೇಲೆ ಈ ಲಸಿಕೆಯ ಬಳಕೆಗೆ ಅನುಮತಿ ನೀಡಲಾಗಿದೆ. ಸಂಪೂರ್ಣ ಸಿದ್ಧವಾದ ಮೂರು ಲಸಿಕೆ ಇರುವಾಗ, ಸದಾ ವಿವಾದಾತ್ಮಕವಾಗಿಯೇ ತನ್ನ ಪ್ರಕ್ರಿಯೆ ನಡೆಸಿರುವ ಈ ಕೊವಾಕ್ಸಿನ್ ಎಂಬ ದೇಸಿ ತಳಿಯ ಅಗತ್ಯವಾದರೂ ಏನಿತ್ತು ಎಂಬ ಸಂಶಯ ಕಾಡುತ್ತದೆ.

ಇದನ್ನೂ ಓದಿ: ಗೋಹತ್ಯೆ ನಿಷೇಧ ಮಸೂದೆ: ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸಿದ ರಾಜ್ಯ ಸರ್ಕಾರ

2020 ರ ನವಂಬರ್ 9 ರಂದು ಕೊವಾಕ್ಸಿನ್ ಮೂರನೇ ಹಂತವು, ’ಕ್ಲಿನಿಕಲ್ ಟ್ರಯಲ್ ರಿಜಿಸ್ಟ್ರಿ ಆಫ್ ಇಂಡಿಯಾ’ದಲ್ಲಿ ನೋಂದಣಿಯಾಗಿತ್ತು. 25,800 ಸ್ವಯಂಸೇವಕರ ಮೇಲೆ ಪ್ಲಾಸೆಬೊ ಆಧರಿತ ವಿವಿಧ ಪ್ರಯೋಗ ನಡೆಸಬೇಕಿತ್ತು. ಈ ಪ್ರಕ್ರಿಯೆಗೆ ಸ್ವಯಂಸೇವಕರ ಸೇರ್ಪಡೆ (ರಿಕ್ರೂಟ್‌ಮೆಂಟ್) ಶುರುವಾಗಿದ್ದೇ 2020ರ ನವಂಬರ್ 16 ರಂದು. ತನಗೆ ಸ್ವಯಂಸೇವಕರ ಕೊರತೆಯಿದೆ ಎಂದು ಭಾರತ್ ಬಯೋಟೆಕ್ ಒಪ್ಪಿಕೊಂಡ ಕೆಲವೇ ವಾರಗಳಲ್ಲಿ ಇದೀಗ ದೇಶದ ಔಷಧ ನಿಯಂತ್ರಣ ಮಂಡಳಿ ರಚಿಸಿದ ವಿಷಯವಾರು ತಜ್ಞ ಸಮಿತಿ ಕೊವಾಕ್ಷಿನ್ ತುರ್ತು ಬಳಕೆಗೆ ಅವಕಾಶ ನೀಡಿಬಿಟ್ಟಿದೆ!

ಬಾಕ್ಸ್ ಲಸಿಕೆಯನ್ನು ಎಲ್ಲರಿಗೂ ಉಚಿತವಾಗಿ ನೀಡಬೇಕಾದ್ದು ಸರ್ಕಾರದ ಕರ್ತವ್ಯ. ಇದಕ್ಕೇನೂ ಪಿಎಂ-ಕೇರ್ಸ್ ಹೆಸರಲ್ಲಿ ಗುಡ್ಡೆ ಹಾಕಿದ ಹಣ ನೀಡುವುದೂ ಬೇಡ. ಆರೋಗ್ಯ ಇಲಾಖೆಯ ಬಜೆಟ್, ವಿಪತ್ತು ನಿರ್ವಹಣಾ ನಿಧಿ ಬಳಸಿಕೊಂಡರೆ ಸಾಕು. ಆದರೆ, 3 ಕೋಟಿ ಆರೋಗ್ಯ ಕಾರ್ಯಕರ್ತರಿಗೆ ಉಚಿತ ಲಸಿಕೆ ಎಂದು ಸರ್ಕಾರ ಹೇಳಿದೊಡನೆ, ಉಳಿದವರು ರೊಕ್ಕ ಕೊಡಬೇಕು ಎಂದಾಗುತ್ತದೆ. ನಂತರದಲ್ಲಿ ಎಲ್ಲರಿಗೂ ಉಚಿತ ಎಂದು ಹೇಳುವ ಮೂಲಕ ತಾವೇನೋ ಮಹಾನ್ ಸಾಧನೆ ಮಾಡುತ್ತಿದ್ದೇವೆ ಎಂಬಂತೆ ಪೋಸ್ ಕೊಡಲಾಗುತ್ತಿದೆ.
ಏನೇ ಇರಲಿ, ಪ್ರಧಾನಮಂತ್ರಿ, ಗೃಹ ಮಂತ್ರಿ, ಆರೋಗ್ಯ ಮಂತ್ರಿ ಮತ್ತು ಇತರೆಲ್ಲ ಕೇಂದ್ರ ಸಚಿವರು ಕೊವಾಕ್ಸಿನ್ ಲಸಿಕೆ ಹಾಕಿಸಿಕೊಳ್ಳಲೇಬೇಕು. ಆ ಮೂಲಕ ದೇಸಿ ಲಸಿಕೆಗೆ ಗೌರವ ತೋರಬೇಕು ಅಲ್ಲವಾ?

ಇದನ್ನೂ ಓದಿ: ರೈತರ ಪ್ರತಿಭಟನೆ ಕುರಿತು ಅವಹೇಳನ: ಮೂವರು ಬಿಜೆಪಿ ನಾಯಕರಿಗೆ ಲೀಗಲ್ ನೋಟಿಸ್

ಐಸಿಎಂಆರ್ ಭಾರತ್ ಬಯೋಟೆಕ್‌ಗೆ ಸಹಯೋಗ ನೀಡಿದೆ. ಹೀಗಾಗಿ ಕೊವಾಕ್ಸಿನ್ ವಿವಾದ ಶುರುವಾಗುವುದೇ ಐಸಿಎಂಆರ್‌ನಿಂದ. ಐಸಿಎಂಆರ್ ಮುಖ್ಯಸ್ಥ ಡಾ.ಬಲರಾಮ್ ಭಾರ್ಗವ್ ಜುಲೈ 2 ರಂದು ಕೊವಾಕ್ಸಿನ್ ಉಸ್ತುವಾರಿ ನೋಡಿಕೊಳ್ಳುವ ಅಧಿಕಾರಿಗಳಿಗೆ ಒಂದು ಪತ್ರ ಬರೆದಿದ್ದರು. ಅಗಸ್ಟ್ 15 ರೊಳಗೆ ಲಸಿಕೆ ಸಿದ್ಧವಾಗಬೇಕು ಎಂದು ಆದೇಶಿಸಿದ್ದರು. ಆಗಿನ್ನೂ ಕೊವಾಕ್ಸಿನ್ ಮೊದಲ ಹಂತದ ಟ್ರಯಲ್ ಕೂಡ ಆರಂಭಿಸಿರಲಿಲ್ಲ. ಇದು ಟೀಕೆಗೆ ಒಳಗಾದ ನಂತರ ಡಾ. ಬಲರಾಮ್, ’ಹಾಗಲ್ಲ, ಕೆಲಸ ಬೇಗ ಬೇಗ ನಡೆಯಲಿ ಎಂಬ ಕಾರಣಕ್ಕೆ ಆ ಪತ್ರ ಬರೆದಿದ್ದು’ ಎಂದು ಲೋಕಲ್ ಪುಢಾರಿಯ ಧಾಟಿಯಲ್ಲಿ ಸಮಜಾಯಿಷಿ ನೀಡಿದ್ದರು! ಹೇಗಾದರೂ ಮಾಡಿ ಅಗಸ್ಟ್ 15 ರಂದು ಕೆಂಪುಕೋಟೆಯ ಮೇಲೆಯೇ ಲಸಿಕೆ ಬಿಡುಗಡೆ ಮಾಡಬೇಕು ಎಂದು ಅಂದುಕೊಂಡಿದ್ದರೇನೋ?

ಕೊವಾಕ್ಸಿನ್ 3 ನೆ ಮತ್ತು ಕೊನೆ ಹಂತದ ಟ್ರಯಲ್‌ನಲ್ಲಿ ಡಿಸೆಂಬರ್ 28 ರೊಳಗೆ ದೇಶದ ವಿವಿಧ ಭಾಗಗಳಲ್ಲಿ 26,000 ಸ್ವಯಂಸೇವಕರ ಮೇಲೆ ಪ್ರಯೋಗ ನಡೆಯಬೇಕಿತ್ತು. ಆದರೆ ದಾಖಲೆಗಳ ಪ್ರಕಾರ, ಭಾರತ್ ಬಯೋಟೆಕ್ ಕಂಪನಿಯು ಡಿಸೆಂಬರ್ 22 ರವರೆಗೆ ಕೇವಲ 13,000 ಸ್ವಯಂಸೇವಕರನ್ನು ನೋಂದಣಿ ಮಾಡಿಕೊಳ್ಳಲು ಶಕ್ತವಾಗಿತ್ತಷ್ಟೇ!

ಇದನ್ನೂ ಓದಿ: ರಾಜ್ಯ ಬಿಜೆಪಿಯಲ್ಲಿ ಬಿರುಕು: ಯತ್ನಾಳ್ ವಿರುದ್ಧ ರಾಷ್ಟ್ರ ನಾಯಕರಿಗೆ ದೂರು ನೀಡಿದ ಸಿಎಂ ಬೆಂಬಲಿಗರು!

ಮೂರನೇ ಹಂತದ ಟ್ರಯಲ್ ಅಪೂರ್ಣವಾಗಿದ್ದರೂ, ವಿಷಯವಾರು ತಜ್ಞ ಸಮಿತಿಯು ಕೊವಾಕ್ಸಿನ್ ತುರ್ತು ಬಳಕೆಗೆ ಅನುಮತಿ ನೀಡಿದ್ದನ್ನು ಐಸಿಎಂಆರ್ ಮುಖ್ಯಸ್ಥ ಡಾ.ಬಲರಾಮ್ ಸಮರ್ಥಿಸಿಕೊಳ್ಳುತ್ತಿದ್ದಾರೆ. ’ಲಸಿಕೆಯ ವಿಷಯದಲ್ಲಿ ಉಪಯೋಗ ಮತ್ತು ರಿಸ್ಕ್ ಎರಡೂ ಇರುತ್ತವೆ. ರಿಸ್ಕ್‌ಗಿಂತ ಉಪಯೋಗವೇ ಹೆಚ್ಚಿದೆ ಎಂದು ಅನಿಸಿದ ಕಾರಣಕ್ಕೆ ಔಷಧ ನಿಯಂತ್ರಕ ಮಂಡಳಿ ನೇಮಿಸಿದ ತಜ್ಞರ ಸಮಿತಿಯು ತುರ್ತು ಬಳಕೆಗೆ ಅವಕಾಶ ನೀಡಿದೆ. ಈ ತುರ್ತು ಕಾಲದಲ್ಲಿ ಇದು ಸರಿಯಾದ ತೀರ್ಮಾನವೇ ಆಗಿದೆ’ ಎಂದು ಕೊವಾಕ್ಸಿನ್ ಅನ್ನು ಬೆಂಬಲಿಸಿದ್ದಾರೆ.

ನೆನಪಿರಲಿ, ಭಾರತ್ ಬಯೋಟೆಕ್ ಮತ್ತು ಐಸಿಎಂಆರ್ ಸಹಯೋಗದಲ್ಲಿ ಈ ಕೊವಾಕ್ಸಿನ್ ಲಸಿಕೆ ತಯಾರಾಗಿದೆ. ಇದು ಈಗ ಏಕೈಕ ಸಂಪೂರ್ಣ ’ದೇಸಿ’ ಲಸಿಕೆ! ಆತ್ಮನಿರ್ಭರ ಅಂತಾ ಅದೇನೋ ಹೇಳ್ತಾರಲ್ಲ, ಅಂತಹದ್ದು ಇದು!


ಇದನ್ನೂ ಓದಿ: ಬಿಜೆಪಿ ಮೇಲೆ ನಂಬಿಕೆಯಿಲ್ಲ, ಕೊರೊನಾ ಲಸಿಕೆ ತೆಗೆದುಕೊಳ್ಳುವುದಿಲ್ಲ: ಅಖಿಲೇಶ್ ಯಾದವ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...