Homeಕರೋನಾ ತಲ್ಲಣಲಸಿಕೆಯ ಲಗುಬಗೆಯ ಲೋ ಪಾಲಿಟಿಕ್ಸ್? - ಏಕೈಕ ’ದೇಸಿ’ ಲಸಿಕೆ ಕೊವಾಕ್ಸಿನ್ ಎಷ್ಟು ಸುರಕ್ಷಿತ?

ಲಸಿಕೆಯ ಲಗುಬಗೆಯ ಲೋ ಪಾಲಿಟಿಕ್ಸ್? – ಏಕೈಕ ’ದೇಸಿ’ ಲಸಿಕೆ ಕೊವಾಕ್ಸಿನ್ ಎಷ್ಟು ಸುರಕ್ಷಿತ?

ಮೂರನೇ ಹಂತದ ಟ್ರಯಲ್ ಅಪೂರ್ಣವಾಗಿದ್ದರೂ, ವಿಷಯವಾರು ತಜ್ಞ ಸಮಿತಿಯು ಕೊವಾಕ್ಸಿನ್ ತುರ್ತು ಬಳಕೆಗೆ ಅನುಮತಿ ನೀಡಿದ್ದನ್ನು ಐಸಿಎಂಆರ್ ಮುಖ್ಯಸ್ಥ ಡಾ.ಬಲರಾಮ್ ಸಮರ್ಥಿಸಿಕೊಳ್ಳುತ್ತಿದ್ದಾರೆ

- Advertisement -
- Advertisement -

ಎಲ್ಲ ಸಂದರ್ಭಗಳನ್ನೂ ತನ್ನ ಹಿತಾಸಕ್ತಿಗೆ ಬಳಸಿಕೊಳ್ಳುವ ಅರೆ-ಸರ್ವಾಧಿಕಾರಿ ’ಡೆಮಾಕ್ರಸಿ’ಯನ್ನು ಕೊರೊನಾ ವೈರಸ್ ಬಯಲು ಮಾಡಿತ್ತು. ಈಗ ಸಾಂಕ್ರಾಮಿಕವನ್ನು ನಿವಾರಿಸುವ ಲಸಿಕೆಯನ್ನೂ ರಾಜಕೀಯ ಲಾಭಕ್ಕೆ ಬಳಸಿಕೊಳ್ಳಲಾಗುತ್ತಿದೆಯೇ?

ಭಾರತದಲ್ಲಿ ಕೊರೊನಾ ಶಮನಕ್ಕೆ ನಾಲ್ಕು ಲಸಿಕೆ ಸಿದ್ಧವಾಗಿವೆ ಎಂದು ಕೇಂದ್ರ ಸಚಿವ ಪ್ರಕಾಶ್ ಜಾವ್ಡೇಕರ್ ಹೇಳಿದ್ದಾರೆ. ಕಳೆದ ಐದಾರು ದಿನದಿಂದ ಪ್ರಧಾನ ಮಂತ್ರಿ ನರೇಂದ್ರ ಮೋದಿ, ಆಗಾಗ ಲಸಿಕೆಯ ಪ್ರಸ್ತಾಪ ಮಾಡುವುದು, ಟಿವಿ ಮಾಧ್ಯಮಗಳು ಮೋದಿನೇ ಲಸಿಕೆ ಕಂಡು ಹಿಡಿದರು ಎಂಬಂತೆ ಸ್ಟೋರಿ ಮಾಡುವುದು ನಡೆದೇ ಇದೆ.

ಆಕ್ಸ್‌ಫರ್ಡ್-ಅಸ್ಟ್ರಾಜೆನಿಕಾ ಲಸಿಕೆ, ಫಿಜರ್ ಲಸಿಕೆ-ಯಾವುದೇ ಇರಲಿ, ಅದು ಪಾಕಿಸ್ತಾನ, ನೈಜಿರಿಯಾ ಸೇರಿದಂತೆ ಎಲ್ಲ ದೇಶಗಳಿಗೂ ಲಭ್ಯವಾಗಲಿದೆ. ಭಾರತವೂ ಸೇರಿ ಕಡಿಮೆ ಆದಾಯದ ದೇಶಗಳ ಜನರಿಗೆ ಸುಲಭವಾಗಿ ಲಸಿಕೆ ಸಿಗುವಂತೆ ಮಾಡಲು ಬಿಲ್ ಗೇಟ್ಸ್ ಫೌಂಡೇಶನ್‌ನಂತಹ ಹಲವಾರು ಎನ್‌ಜಿಒಗಳು ಈಗಾಗಲೇ ಸಕಲ ವ್ಯವಸ್ಥೆ ಮಾಡಿವೆ.

ಆದರೆ, ಭಾರತದಲ್ಲಿ ಮಾತ್ರ, ಒಂದು ಗುಂಪು ಲಸಿಕೆಯ ವಿಷಯದಲ್ಲೂ ರಾಜಕೀಯ ಲಾಭ ಮಾಡಿಕೊಳ್ಳಲು ಹವಣಿಸುತ್ತಿದೆ ಎಂಬ ಅನುಮಾನ ಮೂಡತೊಡಗಿದೆ.

ಇದನ್ನೂ ಓದಿ: ಸಾವಿತ್ರಿ ಬಾಯಿ ಫುಲೆ ಸ್ಥಾಪಿಸಿದ ಮೊಟ್ಟಮೊದಲ ಹೆಣ್ಣು ಮಕ್ಕಳ ಶಾಲೆಯ ಸ್ಥಿತಿ ಹೇಗಿದೆ ಗೊತ್ತಾ?

ಲಭ್ಯವಾಗಲಿರುವ (ಲಭ್ಯ ಆಗಬಹುದಾದ!) ನಾಲ್ಕು ಲಸಿಕೆಗಳ ಪೈಕಿ ಒಂದು ’ದೇಸಿ’ ಲಸಿಕೆಯಿದೆ. ಅದು ’ಭಾರತೀಯ ವೈದ್ಯಕೀಯ ಸಂಶೋಧನಾ ಪರಿಷತ್’ (ಐಸಿಎಂಆರ್) ಸಹಯೋಗದಲ್ಲಿ ಹೈದರಾಬಾದಿನ ಭಾರತ್ ಬಯೋಟೆಕ್ ಅಭಿವೃದ್ಧಿಪಡಿಸಿರುವ ಕೊವಾಕ್ಸಿನ್ ಎಂಬ ಲಸಿಕೆ.

ಶನಿವಾರ ಈ ಲಸಿಕೆಯ ತುರ್ತು ಬಳಕೆಗೆ ಅನುಮತಿ ನೀಡಲಾಗಿದೆ. ಮೂರನೇ ಹಂತದ ಟ್ರಯಲ್‌ಗಳನ್ನು ಪೂರ್ಣಗೊಳಿಸದೇ ಇದ್ದರೂ, ಕೆಲವು ಕಂಡಿಷನ್‌ಗಳ ಮೇಲೆ ಈ ಲಸಿಕೆಯ ಬಳಕೆಗೆ ಅನುಮತಿ ನೀಡಲಾಗಿದೆ. ಸಂಪೂರ್ಣ ಸಿದ್ಧವಾದ ಮೂರು ಲಸಿಕೆ ಇರುವಾಗ, ಸದಾ ವಿವಾದಾತ್ಮಕವಾಗಿಯೇ ತನ್ನ ಪ್ರಕ್ರಿಯೆ ನಡೆಸಿರುವ ಈ ಕೊವಾಕ್ಸಿನ್ ಎಂಬ ದೇಸಿ ತಳಿಯ ಅಗತ್ಯವಾದರೂ ಏನಿತ್ತು ಎಂಬ ಸಂಶಯ ಕಾಡುತ್ತದೆ.

ಇದನ್ನೂ ಓದಿ: ಗೋಹತ್ಯೆ ನಿಷೇಧ ಮಸೂದೆ: ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸಿದ ರಾಜ್ಯ ಸರ್ಕಾರ

2020 ರ ನವಂಬರ್ 9 ರಂದು ಕೊವಾಕ್ಸಿನ್ ಮೂರನೇ ಹಂತವು, ’ಕ್ಲಿನಿಕಲ್ ಟ್ರಯಲ್ ರಿಜಿಸ್ಟ್ರಿ ಆಫ್ ಇಂಡಿಯಾ’ದಲ್ಲಿ ನೋಂದಣಿಯಾಗಿತ್ತು. 25,800 ಸ್ವಯಂಸೇವಕರ ಮೇಲೆ ಪ್ಲಾಸೆಬೊ ಆಧರಿತ ವಿವಿಧ ಪ್ರಯೋಗ ನಡೆಸಬೇಕಿತ್ತು. ಈ ಪ್ರಕ್ರಿಯೆಗೆ ಸ್ವಯಂಸೇವಕರ ಸೇರ್ಪಡೆ (ರಿಕ್ರೂಟ್‌ಮೆಂಟ್) ಶುರುವಾಗಿದ್ದೇ 2020ರ ನವಂಬರ್ 16 ರಂದು. ತನಗೆ ಸ್ವಯಂಸೇವಕರ ಕೊರತೆಯಿದೆ ಎಂದು ಭಾರತ್ ಬಯೋಟೆಕ್ ಒಪ್ಪಿಕೊಂಡ ಕೆಲವೇ ವಾರಗಳಲ್ಲಿ ಇದೀಗ ದೇಶದ ಔಷಧ ನಿಯಂತ್ರಣ ಮಂಡಳಿ ರಚಿಸಿದ ವಿಷಯವಾರು ತಜ್ಞ ಸಮಿತಿ ಕೊವಾಕ್ಷಿನ್ ತುರ್ತು ಬಳಕೆಗೆ ಅವಕಾಶ ನೀಡಿಬಿಟ್ಟಿದೆ!

ಬಾಕ್ಸ್ ಲಸಿಕೆಯನ್ನು ಎಲ್ಲರಿಗೂ ಉಚಿತವಾಗಿ ನೀಡಬೇಕಾದ್ದು ಸರ್ಕಾರದ ಕರ್ತವ್ಯ. ಇದಕ್ಕೇನೂ ಪಿಎಂ-ಕೇರ್ಸ್ ಹೆಸರಲ್ಲಿ ಗುಡ್ಡೆ ಹಾಕಿದ ಹಣ ನೀಡುವುದೂ ಬೇಡ. ಆರೋಗ್ಯ ಇಲಾಖೆಯ ಬಜೆಟ್, ವಿಪತ್ತು ನಿರ್ವಹಣಾ ನಿಧಿ ಬಳಸಿಕೊಂಡರೆ ಸಾಕು. ಆದರೆ, 3 ಕೋಟಿ ಆರೋಗ್ಯ ಕಾರ್ಯಕರ್ತರಿಗೆ ಉಚಿತ ಲಸಿಕೆ ಎಂದು ಸರ್ಕಾರ ಹೇಳಿದೊಡನೆ, ಉಳಿದವರು ರೊಕ್ಕ ಕೊಡಬೇಕು ಎಂದಾಗುತ್ತದೆ. ನಂತರದಲ್ಲಿ ಎಲ್ಲರಿಗೂ ಉಚಿತ ಎಂದು ಹೇಳುವ ಮೂಲಕ ತಾವೇನೋ ಮಹಾನ್ ಸಾಧನೆ ಮಾಡುತ್ತಿದ್ದೇವೆ ಎಂಬಂತೆ ಪೋಸ್ ಕೊಡಲಾಗುತ್ತಿದೆ.
ಏನೇ ಇರಲಿ, ಪ್ರಧಾನಮಂತ್ರಿ, ಗೃಹ ಮಂತ್ರಿ, ಆರೋಗ್ಯ ಮಂತ್ರಿ ಮತ್ತು ಇತರೆಲ್ಲ ಕೇಂದ್ರ ಸಚಿವರು ಕೊವಾಕ್ಸಿನ್ ಲಸಿಕೆ ಹಾಕಿಸಿಕೊಳ್ಳಲೇಬೇಕು. ಆ ಮೂಲಕ ದೇಸಿ ಲಸಿಕೆಗೆ ಗೌರವ ತೋರಬೇಕು ಅಲ್ಲವಾ?

ಇದನ್ನೂ ಓದಿ: ರೈತರ ಪ್ರತಿಭಟನೆ ಕುರಿತು ಅವಹೇಳನ: ಮೂವರು ಬಿಜೆಪಿ ನಾಯಕರಿಗೆ ಲೀಗಲ್ ನೋಟಿಸ್

ಐಸಿಎಂಆರ್ ಭಾರತ್ ಬಯೋಟೆಕ್‌ಗೆ ಸಹಯೋಗ ನೀಡಿದೆ. ಹೀಗಾಗಿ ಕೊವಾಕ್ಸಿನ್ ವಿವಾದ ಶುರುವಾಗುವುದೇ ಐಸಿಎಂಆರ್‌ನಿಂದ. ಐಸಿಎಂಆರ್ ಮುಖ್ಯಸ್ಥ ಡಾ.ಬಲರಾಮ್ ಭಾರ್ಗವ್ ಜುಲೈ 2 ರಂದು ಕೊವಾಕ್ಸಿನ್ ಉಸ್ತುವಾರಿ ನೋಡಿಕೊಳ್ಳುವ ಅಧಿಕಾರಿಗಳಿಗೆ ಒಂದು ಪತ್ರ ಬರೆದಿದ್ದರು. ಅಗಸ್ಟ್ 15 ರೊಳಗೆ ಲಸಿಕೆ ಸಿದ್ಧವಾಗಬೇಕು ಎಂದು ಆದೇಶಿಸಿದ್ದರು. ಆಗಿನ್ನೂ ಕೊವಾಕ್ಸಿನ್ ಮೊದಲ ಹಂತದ ಟ್ರಯಲ್ ಕೂಡ ಆರಂಭಿಸಿರಲಿಲ್ಲ. ಇದು ಟೀಕೆಗೆ ಒಳಗಾದ ನಂತರ ಡಾ. ಬಲರಾಮ್, ’ಹಾಗಲ್ಲ, ಕೆಲಸ ಬೇಗ ಬೇಗ ನಡೆಯಲಿ ಎಂಬ ಕಾರಣಕ್ಕೆ ಆ ಪತ್ರ ಬರೆದಿದ್ದು’ ಎಂದು ಲೋಕಲ್ ಪುಢಾರಿಯ ಧಾಟಿಯಲ್ಲಿ ಸಮಜಾಯಿಷಿ ನೀಡಿದ್ದರು! ಹೇಗಾದರೂ ಮಾಡಿ ಅಗಸ್ಟ್ 15 ರಂದು ಕೆಂಪುಕೋಟೆಯ ಮೇಲೆಯೇ ಲಸಿಕೆ ಬಿಡುಗಡೆ ಮಾಡಬೇಕು ಎಂದು ಅಂದುಕೊಂಡಿದ್ದರೇನೋ?

ಕೊವಾಕ್ಸಿನ್ 3 ನೆ ಮತ್ತು ಕೊನೆ ಹಂತದ ಟ್ರಯಲ್‌ನಲ್ಲಿ ಡಿಸೆಂಬರ್ 28 ರೊಳಗೆ ದೇಶದ ವಿವಿಧ ಭಾಗಗಳಲ್ಲಿ 26,000 ಸ್ವಯಂಸೇವಕರ ಮೇಲೆ ಪ್ರಯೋಗ ನಡೆಯಬೇಕಿತ್ತು. ಆದರೆ ದಾಖಲೆಗಳ ಪ್ರಕಾರ, ಭಾರತ್ ಬಯೋಟೆಕ್ ಕಂಪನಿಯು ಡಿಸೆಂಬರ್ 22 ರವರೆಗೆ ಕೇವಲ 13,000 ಸ್ವಯಂಸೇವಕರನ್ನು ನೋಂದಣಿ ಮಾಡಿಕೊಳ್ಳಲು ಶಕ್ತವಾಗಿತ್ತಷ್ಟೇ!

ಇದನ್ನೂ ಓದಿ: ರಾಜ್ಯ ಬಿಜೆಪಿಯಲ್ಲಿ ಬಿರುಕು: ಯತ್ನಾಳ್ ವಿರುದ್ಧ ರಾಷ್ಟ್ರ ನಾಯಕರಿಗೆ ದೂರು ನೀಡಿದ ಸಿಎಂ ಬೆಂಬಲಿಗರು!

ಮೂರನೇ ಹಂತದ ಟ್ರಯಲ್ ಅಪೂರ್ಣವಾಗಿದ್ದರೂ, ವಿಷಯವಾರು ತಜ್ಞ ಸಮಿತಿಯು ಕೊವಾಕ್ಸಿನ್ ತುರ್ತು ಬಳಕೆಗೆ ಅನುಮತಿ ನೀಡಿದ್ದನ್ನು ಐಸಿಎಂಆರ್ ಮುಖ್ಯಸ್ಥ ಡಾ.ಬಲರಾಮ್ ಸಮರ್ಥಿಸಿಕೊಳ್ಳುತ್ತಿದ್ದಾರೆ. ’ಲಸಿಕೆಯ ವಿಷಯದಲ್ಲಿ ಉಪಯೋಗ ಮತ್ತು ರಿಸ್ಕ್ ಎರಡೂ ಇರುತ್ತವೆ. ರಿಸ್ಕ್‌ಗಿಂತ ಉಪಯೋಗವೇ ಹೆಚ್ಚಿದೆ ಎಂದು ಅನಿಸಿದ ಕಾರಣಕ್ಕೆ ಔಷಧ ನಿಯಂತ್ರಕ ಮಂಡಳಿ ನೇಮಿಸಿದ ತಜ್ಞರ ಸಮಿತಿಯು ತುರ್ತು ಬಳಕೆಗೆ ಅವಕಾಶ ನೀಡಿದೆ. ಈ ತುರ್ತು ಕಾಲದಲ್ಲಿ ಇದು ಸರಿಯಾದ ತೀರ್ಮಾನವೇ ಆಗಿದೆ’ ಎಂದು ಕೊವಾಕ್ಸಿನ್ ಅನ್ನು ಬೆಂಬಲಿಸಿದ್ದಾರೆ.

ನೆನಪಿರಲಿ, ಭಾರತ್ ಬಯೋಟೆಕ್ ಮತ್ತು ಐಸಿಎಂಆರ್ ಸಹಯೋಗದಲ್ಲಿ ಈ ಕೊವಾಕ್ಸಿನ್ ಲಸಿಕೆ ತಯಾರಾಗಿದೆ. ಇದು ಈಗ ಏಕೈಕ ಸಂಪೂರ್ಣ ’ದೇಸಿ’ ಲಸಿಕೆ! ಆತ್ಮನಿರ್ಭರ ಅಂತಾ ಅದೇನೋ ಹೇಳ್ತಾರಲ್ಲ, ಅಂತಹದ್ದು ಇದು!


ಇದನ್ನೂ ಓದಿ: ಬಿಜೆಪಿ ಮೇಲೆ ನಂಬಿಕೆಯಿಲ್ಲ, ಕೊರೊನಾ ಲಸಿಕೆ ತೆಗೆದುಕೊಳ್ಳುವುದಿಲ್ಲ: ಅಖಿಲೇಶ್ ಯಾದವ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....