Homeಮುಖಪುಟಎಲ್​ಪಿಜಿ ಸಿಲಿಂಡರ್ ಬೆಲೆ 92 ರೂ. ಇಳಿಕೆ; ವಾಣಿಜ್ಯ ಸಿಲಿಂಡರ್‌ಗೆ ಮಾತ್ರ ಅನ್ವಯ

ಎಲ್​ಪಿಜಿ ಸಿಲಿಂಡರ್ ಬೆಲೆ 92 ರೂ. ಇಳಿಕೆ; ವಾಣಿಜ್ಯ ಸಿಲಿಂಡರ್‌ಗೆ ಮಾತ್ರ ಅನ್ವಯ

- Advertisement -
- Advertisement -

2023-24ರ ಆರ್ಥಿಕ ವರ್ಷದ ಮೊದಲ ದಿನವಾದ ಇಂದು ಸರ್ಕಾರ ಎಲ್​ಪಿಜಿ ಸಿಲಿಂಡರ್​​ಗಳ ಬೆಲೆಯನ್ನು ಪರಿಷ್ಕರಿಸಿದೆ. ಏಪ್ರಿಲ್ 1ರಂದು ಎಲ್​ಪಿಜಿ ಸಿಲಿಂಡರ್ ಬೆಲೆಯಲ್ಲಿ 92 ರೂಪಾಯಿಗಳಷ್ಟು ಇಳಿಕೆಯಾಗಿದೆ. ಆದರೆ ಇದು ವಾಣಿಜ್ಯ ಸಿಲಿಂಡರ್‌ಗಳಿಗೆ ಮಾತ್ರ ಅನ್ವಯವಾಗುತ್ತದೆ. ಗೃಹ ಬಳಕೆಯ ಎಲ್​ಪಿಜಿ ಸಿಲಿಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆಗಳು ಆಗಿಲ್ಲ.

14.2 ಕೆಜಿ ತೂಕದ ಗೃಹ ಬಳಕೆಯ ಸಿಲಿಂಡರ್ ಬೆಲೆ ಸ್ಥಿರವಾಗಿದೆ. ಮಾರ್ಚ್​ನಲ್ಲಿದ್ದ ದರದಲ್ಲಿಯೇ ಗೃಹ ಬಳಕೆಯ ಸಿಲಿಂಡರ್ ಖರೀದಿಸಬೇಕು. ಮಾರ್ಚ್​ ನಲ್ಲಿ ವಾಣಿಜ್ಯ ಸಿಲಿಂಡರ್ ಬೆಲೆ 50ರೂ. ಏರಿಕೆ ಮಾಡಲಾಗಿತ್ತು.

ಗಮನಾರ್ಹ ಮಾಹಿತಿ ಎಂದರೆ ಮಾರ್ಚ್‌ನಲ್ಲಿ ಸರ್ಕಾರವು ವಾಣಿಜ್ಯ ಗ್ಯಾಸ್ ಸಿಲಿಂಡರ್‌ನ ಬೆಲೆಯನ್ನು 350ರೂ. ಹೆಚ್ಚಿಸಿತ್ತು ಮತ್ತು ಏ.1ರಂದು ಅಂದರೆ ಇಂದಿನಿಂದ (ಶನಿವಾರ) 92 ಇಳಿಕೆ ಮಾಡಿದೆ.

ಇದನ್ನೂ ಓದಿ: ಜೆಡಿಎಸ್ ಅಧಿಕಾರಕ್ಕೆ ಬಂದರೆ 50% ಗ್ಯಾಸ್ ಸಬ್ಸಿಡಿ, 5 ಸಿಲಿಂಡರ್ ಉಚಿತ: ಹೆಚ್‌.ಡಿ ಕುಮಾರಸ್ವಾಮಿ

ದೇಶದ ಪ್ರಮುಖ ನಗರಗಳಲ್ಲಿ ವಾಣಿಜ್ಯ ಸಿಲಿಂಡರ್ ಬೆಲೆ:

ದೆಹಲಿ: 2,028ರೂ.

ಚೆನ್ನೈ: 2,192.50ರೂ.

ಕೋಲ್ಕತ್ತಾ: 2,132ರೂ.

ಮುಂಬೈ: 1,980ರೂ.

ಬೆಂಗಳೂರು: 1,685ರೂ.

ಗೃಹ ಬಳಕೆಯ ಸಿಲಿಂಡರ್ ಬೆಲೆ:

ದೆಹಲಿ: 1,103ರೂ.

ಚೆನ್ನೈ: 1,118.5ರೂ.

ಕೋಲ್ಕತ್ತಾ: 1,129ರೂ.

ಮುಂಬೈ: 1,112.5ರೂ.

ಬೆಂಗಳೂರು: 1,105.50ರೂ.

ಪಾಟ್ನಾ: 1,202ರೂ.

ಅಹಮದಾಬಾದ್: 1,110ರೂ.

ಭೋಪಾಲ್: 1,118.50ರೂ.

ಗೃಹಬಳಕೆಯ LPG ಸಿಲಿಂಡರ್‌ಗಳಿಗಿಂತ ಭಿನ್ನವಾಗಿ, ವಾಣಿಜ್ಯ ಅನಿಲ ದರಗಳು ಏರಿಳಿತಗೊಳ್ಳುತ್ತಲೇ ಇರುತ್ತವೆ. ಏಪ್ರಿಲ್ 1, 2022 ರಂದು ದೆಹಲಿಯಲ್ಲಿ 19 ಕೆಜಿ ವಾಣಿಜ್ಯ ಗ್ಯಾಸ್ ಸಿಲಿಂಡರ್  2,253 ರೂ.ಗೆ ಲಭ್ಯವಿತ್ತು ಮತ್ತು ಇಂದಿನಿಂದ ಬೆಲೆಗಳು 2,028 ರೂ.ಗೆ ಇಳಿಕೆಯಾಗಿದೆ.

ಕಳೆದ ಒಂದು ವರ್ಷದಲ್ಲಿ ದೆಹಲಿಯಲ್ಲಿ ಮಾತ್ರ ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆ 225 ರೂಪಾಯಿ ಇಳಿಕೆಯಾಗಿತ್ತು. ಉಳಿದ ಭಾಗದಲ್ಲಿ ಬೆಲೆ ಇಳಿಕೆಯಾಗಿರಲಿಲ್ಲ. ಬೆಲೆ ಏರಿಕೆ ಹಿನ್ನೆಲೆ ಮಾರ್ಚ್​ನಲ್ಲಿ ದೇಶದ ಪ್ರಮುಖ ನಗರಗಳಲ್ಲಿ ಪ್ರತಿಭಟನೆ ನಡೆಸಲಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...