Homeಮುಖಪುಟಮೊಯಿತ್ರಾ-ಹಿರಾನಂದಾನಿ ನಡುವಿನ ನಗದು ವಹಿವಾಟಿನ ತನಿಖೆಗೆ ಸಮಿತಿ ಶಿಫಾರಸ್ಸು

ಮೊಯಿತ್ರಾ-ಹಿರಾನಂದಾನಿ ನಡುವಿನ ನಗದು ವಹಿವಾಟಿನ ತನಿಖೆಗೆ ಸಮಿತಿ ಶಿಫಾರಸ್ಸು

- Advertisement -
- Advertisement -

ಟಿಎಂಸಿ ಸಂಸದೆಯಾಗಿದ್ದ ಮಹುವಾ ಮೊಯಿತ್ರಾ ಅವರನ್ನು ಪ್ರಶ್ನೆಗಾಗಿ ನಗದು ಆರೋಪಕ್ಕೆ ಸಂಬಂಧಿಸಿ ನಿನ್ನೆ ಲೋಕಸಭೆ ನೈತಿಕ ಸಮಿತಿಯ ಶಿಫಾರಸ್ಸಿನ ಮೇರೆಗೆ ಲೋಕಸಭೆಯಿಂದ ಉಚ್ಛಾಟನೆ ಮಾಡಲಾಗಿದೆ. ಸಮಿತಿಯು ವರದಿಯಲ್ಲಿ ಮೊಯಿತ್ರಾ ಮತ್ತು ಉದ್ಯಮಿ ದರ್ಶನ್ ಹಿರಾನಂದಾನಿ ನಡುವಿನ ನಗದು ವಹಿವಾಟಿನ ಕುರಿತು ಪರಿಶೀಲಿಸಲು ಸರ್ಕಾರ ತನಿಖೆಯನ್ನು ಪ್ರಾರಂಭಿಸಬೇಕು ಎಂದು ಶಿಫಾರಸ್ಸು ಮಾಡಿದೆ.

ಬಿಜೆಪಿ ಸಂಸದ ವಿನೋದ್ ಸೋಂಕರ್ ನೇತೃತ್ವದ ಲೋಕಸಭೆ ಸಮಿತಿಯು 502 ಪುಟಗಳ ವರದಿಯಲ್ಲಿ, ಮಹುವಾ ಅವರ ನಡವಳಿಕೆಯು ಅನೈತಿಕ ಮತ್ತು ಮಹುವಾ ಅವರ ಐಡಿ, ಪಾಸ್‌ವರ್ಡ್ ಸೇರಿದಂತೆ ಲೋಕಸಭೆಯ ಲಾಗಿನ್ ಮಾಹಿತಿಯನ್ನು ಅನಧಿಕೃತ ವ್ಯಕ್ತಿಗಳೊಂದಿಗೆ  ಹಂಚಿಕೊಂಡಿರುವುದು ಸದನದ ನಿಯಮಗಳ ಉಲ್ಲಂಘನೆ. ಇದರಿಂದಾಗಿ ರಾಷ್ಟ್ರೀಯ ಭದ್ರತೆಯ ಮೇಲೆ ಪರಿಣಾಮ ಬೀರುತ್ತದೆ. ಹಿರಾನಂದನಿ ಜೊತೆಗೆ ಈ ವಿಚಾರಗಳನ್ನು ಹಂಚಿಕೊಳ್ಳಲು ಮಹುವಾ ನಗದು ಸ್ವೀಕರಿಸಿದ್ದಾರೆ ಎಂದು ವರದಿಯು ಹೇಳಿದೆ.

ಮಹುವಾ ಮೊಯಿತ್ರಾ ಮತ್ತು ದರ್ಶನ್ ಹಿರಾನಂದಾನಿ ನಡುವಿನ ನಗದು ವಹಿವಾಟಿನ ಬಗ್ಗೆ ಭಾರತ ಸರ್ಕಾರವು ತನಿಖೆ ನಡೆಸಬೇಕು ಎಂದು ವರದಿ ಹೇಳಿದೆ. ಬಿಎಸ್‌ಪಿ ಸಂಸದ ಕುನಾವರ್ ಡ್ಯಾನಿಶ್ ಅಲಿ ಅವರು ಸೋಂಕರ್ ಅವರು ಮೊಯಿತ್ರಾಗೆ ಕೇಳಿದ ಪ್ರಶ್ನೆಗಳನ್ನು ಕುತಂತ್ರದಿಂದ ತಿರುಚಿದ್ದಾರೆ ಎಂದು ವರದಿಯು ಆರೋಪಿಸಿದೆ ಅವರ ವಿರುದ್ಧ ಕ್ರಮಕ್ಕೂ ಆಗ್ರಹಿಸಿದೆ.

​ತನ್ನ ಲಾಗಿನ್ ಮಾಹಿತಿಗಳನ್ನು ಹಂಚಿಕೊಂಡ ನಂತರ, ಮಹುವಾ ಐಫೋನ್‌ಗಳು, ವಜ್ರ ಮತ್ತು ಮೌಲ್ಯಯುತ ಐಷಾರಾಮಿ ವಸ್ತುಗಳು ಮತ್ತು ದುಬಾರಿ 35 ಜೋಡಿ ಶೂಗಳನ್ನು ಸ್ವೀಕರಿಸಿದ್ದಾರೆ. ಉಡುಗೊರೆಗಳಲ್ಲಿ ಹತ್ತಾರು ದುಬಾರಿ ಫ್ರೆಂಚ್ ಮತ್ತು ಇಟಾಲಿಯನ್ ವೈನ್‌ಗಳ ಬಾಟಲಿಗಳು, ದುಬೈನಿಂದ ಐಷಾರಾಮಿ ಸೌಂದರ್ಯವರ್ಧಕಗಳ ಗಿಫ್ಟ್‌ , ಬ್ಯಾಗ್‌ಗಳು ಮತ್ತು ಬರ್ಲುಟಿಯಿಂದ ಮೊಸಳೆ ಚರ್ಮದಿಂದ ನಿರ್ಮಿಸಿದ ಬ್ಯಾಗ್‌ಗಳು ಮತ್ತು ನಗದನ್ನು ಉಡುಗೊರೆಯಾಗಿ ಪಡೆದಿದ್ದಾರೆ ಎಂದು ಆರೋಪಿಸಲಾಗಿದೆ.

ಸಮಿತಿಯು ತನ್ನ ವರದಿಯಲ್ಲಿ ಉಲ್ಲೇಖಿಸಿರುವಂತೆ ವಿವಿಧ ಸಚಿವಾಲಯಗಳಿಂದ ಮಾಹಿತಿಗಳನ್ನು ಈ ಬಗ್ಗೆ ಸಂಗ್ರಹಿಸಿದೆ. ಹಿರಾನಂದನಿ ಅವರು ಮಹುವಾ ಅವರ ಖಾತೆಗೆ  ಜುಲೈ 8, 2019ರಿಂದ ಏಪ್ರಿಲ್ 4, 2023ರ ನಡುವೆ 61 ಬಾರಿ ಲಾಗಿನ್‌ ಆಗಿದ್ದಾರೆ ಎಂದು ಮಾಹಿತಿ ಮತ್ತು ತಂತ್ರಜ್ಞಾನ ಇಲಾಖೆ ಮಾಹಿತಿ ಉಲ್ಲೇಖಿಸಿದ್ದಾರೆ.

ಅನಧಿಕೃತ ವ್ಯಕ್ತಿಗಳಿಗೆ ಲೋಕಸಭೆಯ ಲಾಗಿನ್‌ ಮಾಹಿತಿ ನೀಡುವುದರಿಂದ ವಿದೇಶಿ ಘಟಕಗಳಿಗೆ ಸೂಕ್ಷ್ಮ ಮಾಹಿತಿ ಸೋರಿಕೆಯ ಸಾಧ್ಯತೆ ಬಗ್ಗೆ ಗೃಹ ವ್ಯವಹಾರಗಳ ಸಚಿವಾಲಯ ಕಳವಳ ವ್ಯಕ್ತಪಡಿಸಿದೆ. ಹಿರಾನಂದನಿ ಲಾಗಿನ್ ಮಾಡಿದ ಅವಧಿಯಲ್ಲಿ ಮಹುವಾ 4 ಬಾರಿ ದುಬೈಗೆ ಭೇಟಿ ನೀಡಿದ್ದರು ಎಂದು ಗೃಹ ಸಚಿವಾಲಯ  ಗಮನಿಸಿದೆ.

2023ರ ಅ.20ರಂದು  ಉರ್ಮಿಲ್ ಅಸಿವಾಲ್ ಅವರ ಸಮ್ಮುಖದಲ್ಲಿ ಹಿರನಂದಾನಿ ಅವರು ತಮ್ಮ ಅಫಿಡವಿಟ್‌ಗೆ ಸಹಿ ಹಾಕಿದ್ದಾರೆ ಮತ್ತು ಅಸಿವಾಲ್ ಅವರ ಸೀಲ್ ಮತ್ತು ಸಹಿ ಎರಡನ್ನೂ ಅಧಿಕೃತವೆಂದು ದೃಢಪಡಿಸಿದರು ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ ಎಂದು ಲೋಕಸಬೆಯ ಸಮಿತಿಯು ತನ್ನ ವರದಿಯಲ್ಲಿ ಉಲ್ಲೇಖಿಸಿದೆ.

ಇದನ್ನು ಓದಿ: ಪ್ರಶ್ನೆಗಾಗಿ ನಗದು ಪ್ರಕರಣ: ಲೋಕಸಭೆಯಿಂದ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಉಚ್ಚಾಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂ : 15 ಮಂದಿಗೆ 24 ಗಂಟೆಯೊಳಗೆ ದೇಶ ತೊರೆಯಲು ಆದೇಶ : ಮಾಧ್ಯಮಗಳ ಮೂಲಕ ವಿಷಯ ತಿಳಿದುಕೊಂಡ ಕುಟುಂಬಸ್ಥರು

ಅಸ್ಸಾಂನ ನಾಗಾಂವ್ ಜಿಲ್ಲಾಡಳಿತವು 15 ಘೋಷಿತ ವಿದೇಶಿಯರಿಗೆ 24 ಗಂಟೆಗಳ ಒಳಗೆ ರಾಜ್ಯ ತೊರೆಯುವಂತೆ ಆದೇಶಿಸಿದ ಬಗ್ಗೆ ವರದಿಯಾಗಿದೆ. ಬುಧವಾರ (ಡಿ.17) ಜಿಲ್ಲಾಡಳಿತ ಈ ಆದೇಶ ನೀಡಿತ್ತು. ಆದರೆ, ಇದುವರೆಗೆ (ಡಿ.20) ಈ 15...

ಸಿರಿಯಾದ ಐಸಿಸ್ ಅಡಗುತಾಣಗಳ ಮೇಲೆ ಅಮೆರಿಕ ವಾಯುದಾಳಿ

ಕಳೆದ ವಾರ ಅಮೆರಿಕದ ಸಿಬ್ಬಂದಿ ಮೇಲೆ ನಡೆದ ಮಾರಕ ದಾಳಿಗೆ ಪ್ರತೀಕಾರವಾಗಿ ಅಮೆರಿಕವು ಮಧ್ಯ ಸಿರಿಯಾದಾದ್ಯಂತ ಡಜನ್‌ಗಟ್ಟಲೆ ಇಸ್ಲಾಮಿಕ್ ಸ್ಟೇಟ್ (ಐಎಸ್) ನೆಲೆಗಳ ಮೇಲೆ ವಾಯುದಾಳಿ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 'ಆಪರೇಷನ್ ಹಾಕೈ...

16 ಲಕ್ಷಕ್ಕೂ ಹೆಚ್ಚು ಕಾರ್ಮಿಕರನ್ನು ‘ಮನರೇಗಾ’ ಪಟ್ಟಿಯಿಂದ ಕೈಬಿಟ್ಟ ಕೇಂದ್ರ ಸರ್ಕಾರ: ವರದಿ

ಯುಪಿಎ ಸರ್ಕಾರದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ಮನರೇಗಾ) ಹೆಸರನ್ನು ಬದಲಿಸಲು ಪ್ರಯತ್ನಿಸುವ 'ವಿಕ್ಷಿತ್ ಭಾರತ್ - ಗ್ಯಾರಂಟಿ ಫಾರ್ ರೋಜ್‌ಗಾರ್ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) (ವಿಬಿ–ಜಿ...

ಅಮೆರಿಕದ ಬಹು ನಿರೀಕ್ಷಿತ ‘ಎಪ್‌ಸ್ಟೀನ್ ಫೈಲ್ಸ್’ ಬಿಡುಗಡೆ : ಬಿಲ್ ಕ್ಲಿಂಟನ್, ಮೈಕಲ್ ಜಾಕ್ಸನ್ ಸೇರಿದಂತೆ ಪ್ರಮುಖರ ಫೋಟೋಗಳು ಬಹಿರಂಗ

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ(ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಕೆಲ ದಾಖಲೆಗಳನ್ನು...

ಕೋಮು ಸಾಮರಸ್ಯಕ್ಕಾಗಿ ಭಾರತದ ಮುಸ್ಲಿಮರು ಸಾಮೂಹಿಕ ಪ್ರಯತ್ನಗಳೊಂದಿಗೆ ಮುಂದೆ ಬರಬೇಕು: ಜಮಾಅತ್ ಅಧ್ಯಕ್ಷ

'ಭಾರತದ ಮುಸ್ಲಿಮರು, ದೇಶದಲ್ಲಿ ಕೋಮು ಸಾಮರಸ್ಯಕ್ಕಾಗಿ ವೈಯಕ್ತಿಕ ಮತ್ತು ಸಾಮೂಹಿಕ ಪ್ರಯತ್ನಗಳೊಂದಿಗೆ ಮುಂದೆ ಬರಬೇಕು' ಎಂದು ಜಮಾಅತೆ-ಇ-ಇಸ್ಲಾಮಿ ಹಿಂದ್ ಅಧ್ಯಕ್ಷ ಸೈಯದ್ ಸಾದತುಲ್ಲಾ ಹುಸೈನಿ ಅವರು ಒತ್ತಾಯಿಸಿದರು. ಕೋಮು ಸಾಮರಸ್ಯ ಇಲಾಖೆಯು ಆಯೋಜಿಸಿದ್ದ 'ಅಖಿಲ...

3 ವರ್ಷಗಳಲ್ಲಿ ರಷ್ಯಾ ಸೇನೆ ಸೇರಿದ 200 ಕ್ಕೂ ಹೆಚ್ಚು ಭಾರತೀಯರು; 26 ಮಂದಿ ಸಾವು: ವಿದೇಶಾಂಗ ಸಚಿವಾಲಯ

2022 ರಿಂದ ಕನಿಷ್ಠ 202 ಭಾರತೀಯ ಪ್ರಜೆಗಳು ರಷ್ಯಾದ ಸಶಸ್ತ್ರ ಪಡೆಗಳಿಗೆ ಸೇರಿದ್ದಾರೆ ಎಂದು ವರದಿಯಾಗಿದೆ. ಇದರಲ್ಲಿ 26 ಮಂದಿ ಸಾವನ್ನಪ್ಪಿದ್ದು, ಇಬ್ಬರನ್ನು ರಷ್ಯಾದಲ್ಲಿ ಅಂತ್ಯಕ್ರಿಯೆ ಮಾಡಲಾಗಿದೆ ಎಂದು ವಿದೇಶಾಂಗ ಸಚಿವಾಲಯ (ಎಂಇಎ)...

ಎಸ್‌ಐಆರ್‌ ಬಳಿಕ ಕರಡು ಮತದಾರರ ಪಟ್ಟಿ ಪ್ರಕಟ : ತಮಿಳುನಾಡಿನಲ್ಲಿ 97 ಲಕ್ಷ, ಗುಜರಾತ್‌ನಲ್ಲಿ 73 ಲಕ್ಷ ಹೆಸರು ಡಿಲೀಟ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ ತಮಿಳುನಾಡು ಮತ್ತು ಗುಜರಾತ್‌ನ ಕರಡು ಮತದಾರರ ಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಪ್ರಕಟಿಸಿದ್ದು, ಕ್ರಮವಾಗಿ 97.3 ಮತ್ತು 73.7 ಲಕ್ಷ ಮತದಾರರ...

ಅಸ್ಸಾಂ | ರಾಜಧಾನಿ ಎಕ್ಸ್ ಪ್ರೆಸ್ ರೈಲು ಢಿಕ್ಕಿ : 8 ಆನೆಗಳು ಸಾವು

ಶನಿವಾರ (ಡಿಸೆಂಬರ್ 20, 2025) ಬೆಳಗಿನ ಜಾವ ಅಸ್ಸಾಂನ ಹೊಜೈ ಜಿಲ್ಲೆಯಲ್ಲಿ ಸಾಯಿರಂಗ್-ನವದೆಹಲಿ ರಾಜಧಾನಿ ಎಕ್ಸ್‌ಪ್ರೆಸ್‌ ರೈಲು ಡಿಕ್ಕಿ ಹೊಡೆದ ಪರಿಣಾಮ ಎಂಟು ಆನೆಗಳು ಸಾವನ್ನಪ್ಪಿದ್ದು, ಒಂದು ಗಾಯಗೊಂಡಿದೆ ಎಂದು ವರದಿಯಾಗಿದೆ. ಘಟನೆಯಲ್ಲಿ ಐದು...

ಮಲಯಾಳಂ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಶ್ರೀನಿವಾಸನ್ ನಿಧನ

ಮಲಯಾಳಂ ಚಿತ್ರರಂಗದ ಹಿರಿಯ ನಟ, ಚಿತ್ರಕಥೆಗಾರ, ನಿರ್ದೇಶಕ ಹಾಗೂ ನಿರ್ಮಾಪಕ ಶ್ರೀನಿವಾಸನ್ ಶನಿವಾರ (ಡಿ.20) ನಿಧನರಾದರು. ಅವರಿಗೆ 69 ವರ್ಷ ವಯಸ್ಸಾಗಿತ್ತು. ದೀರ್ಘ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀನಿವಾಸನ್ ಅವರು, ಚಿಕಿತ್ಸೆ...

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...