Homeಮುಖಪುಟಮೊಯಿತ್ರಾ-ಹಿರಾನಂದಾನಿ ನಡುವಿನ ನಗದು ವಹಿವಾಟಿನ ತನಿಖೆಗೆ ಸಮಿತಿ ಶಿಫಾರಸ್ಸು

ಮೊಯಿತ್ರಾ-ಹಿರಾನಂದಾನಿ ನಡುವಿನ ನಗದು ವಹಿವಾಟಿನ ತನಿಖೆಗೆ ಸಮಿತಿ ಶಿಫಾರಸ್ಸು

- Advertisement -
- Advertisement -

ಟಿಎಂಸಿ ಸಂಸದೆಯಾಗಿದ್ದ ಮಹುವಾ ಮೊಯಿತ್ರಾ ಅವರನ್ನು ಪ್ರಶ್ನೆಗಾಗಿ ನಗದು ಆರೋಪಕ್ಕೆ ಸಂಬಂಧಿಸಿ ನಿನ್ನೆ ಲೋಕಸಭೆ ನೈತಿಕ ಸಮಿತಿಯ ಶಿಫಾರಸ್ಸಿನ ಮೇರೆಗೆ ಲೋಕಸಭೆಯಿಂದ ಉಚ್ಛಾಟನೆ ಮಾಡಲಾಗಿದೆ. ಸಮಿತಿಯು ವರದಿಯಲ್ಲಿ ಮೊಯಿತ್ರಾ ಮತ್ತು ಉದ್ಯಮಿ ದರ್ಶನ್ ಹಿರಾನಂದಾನಿ ನಡುವಿನ ನಗದು ವಹಿವಾಟಿನ ಕುರಿತು ಪರಿಶೀಲಿಸಲು ಸರ್ಕಾರ ತನಿಖೆಯನ್ನು ಪ್ರಾರಂಭಿಸಬೇಕು ಎಂದು ಶಿಫಾರಸ್ಸು ಮಾಡಿದೆ.

ಬಿಜೆಪಿ ಸಂಸದ ವಿನೋದ್ ಸೋಂಕರ್ ನೇತೃತ್ವದ ಲೋಕಸಭೆ ಸಮಿತಿಯು 502 ಪುಟಗಳ ವರದಿಯಲ್ಲಿ, ಮಹುವಾ ಅವರ ನಡವಳಿಕೆಯು ಅನೈತಿಕ ಮತ್ತು ಮಹುವಾ ಅವರ ಐಡಿ, ಪಾಸ್‌ವರ್ಡ್ ಸೇರಿದಂತೆ ಲೋಕಸಭೆಯ ಲಾಗಿನ್ ಮಾಹಿತಿಯನ್ನು ಅನಧಿಕೃತ ವ್ಯಕ್ತಿಗಳೊಂದಿಗೆ  ಹಂಚಿಕೊಂಡಿರುವುದು ಸದನದ ನಿಯಮಗಳ ಉಲ್ಲಂಘನೆ. ಇದರಿಂದಾಗಿ ರಾಷ್ಟ್ರೀಯ ಭದ್ರತೆಯ ಮೇಲೆ ಪರಿಣಾಮ ಬೀರುತ್ತದೆ. ಹಿರಾನಂದನಿ ಜೊತೆಗೆ ಈ ವಿಚಾರಗಳನ್ನು ಹಂಚಿಕೊಳ್ಳಲು ಮಹುವಾ ನಗದು ಸ್ವೀಕರಿಸಿದ್ದಾರೆ ಎಂದು ವರದಿಯು ಹೇಳಿದೆ.

ಮಹುವಾ ಮೊಯಿತ್ರಾ ಮತ್ತು ದರ್ಶನ್ ಹಿರಾನಂದಾನಿ ನಡುವಿನ ನಗದು ವಹಿವಾಟಿನ ಬಗ್ಗೆ ಭಾರತ ಸರ್ಕಾರವು ತನಿಖೆ ನಡೆಸಬೇಕು ಎಂದು ವರದಿ ಹೇಳಿದೆ. ಬಿಎಸ್‌ಪಿ ಸಂಸದ ಕುನಾವರ್ ಡ್ಯಾನಿಶ್ ಅಲಿ ಅವರು ಸೋಂಕರ್ ಅವರು ಮೊಯಿತ್ರಾಗೆ ಕೇಳಿದ ಪ್ರಶ್ನೆಗಳನ್ನು ಕುತಂತ್ರದಿಂದ ತಿರುಚಿದ್ದಾರೆ ಎಂದು ವರದಿಯು ಆರೋಪಿಸಿದೆ ಅವರ ವಿರುದ್ಧ ಕ್ರಮಕ್ಕೂ ಆಗ್ರಹಿಸಿದೆ.

​ತನ್ನ ಲಾಗಿನ್ ಮಾಹಿತಿಗಳನ್ನು ಹಂಚಿಕೊಂಡ ನಂತರ, ಮಹುವಾ ಐಫೋನ್‌ಗಳು, ವಜ್ರ ಮತ್ತು ಮೌಲ್ಯಯುತ ಐಷಾರಾಮಿ ವಸ್ತುಗಳು ಮತ್ತು ದುಬಾರಿ 35 ಜೋಡಿ ಶೂಗಳನ್ನು ಸ್ವೀಕರಿಸಿದ್ದಾರೆ. ಉಡುಗೊರೆಗಳಲ್ಲಿ ಹತ್ತಾರು ದುಬಾರಿ ಫ್ರೆಂಚ್ ಮತ್ತು ಇಟಾಲಿಯನ್ ವೈನ್‌ಗಳ ಬಾಟಲಿಗಳು, ದುಬೈನಿಂದ ಐಷಾರಾಮಿ ಸೌಂದರ್ಯವರ್ಧಕಗಳ ಗಿಫ್ಟ್‌ , ಬ್ಯಾಗ್‌ಗಳು ಮತ್ತು ಬರ್ಲುಟಿಯಿಂದ ಮೊಸಳೆ ಚರ್ಮದಿಂದ ನಿರ್ಮಿಸಿದ ಬ್ಯಾಗ್‌ಗಳು ಮತ್ತು ನಗದನ್ನು ಉಡುಗೊರೆಯಾಗಿ ಪಡೆದಿದ್ದಾರೆ ಎಂದು ಆರೋಪಿಸಲಾಗಿದೆ.

ಸಮಿತಿಯು ತನ್ನ ವರದಿಯಲ್ಲಿ ಉಲ್ಲೇಖಿಸಿರುವಂತೆ ವಿವಿಧ ಸಚಿವಾಲಯಗಳಿಂದ ಮಾಹಿತಿಗಳನ್ನು ಈ ಬಗ್ಗೆ ಸಂಗ್ರಹಿಸಿದೆ. ಹಿರಾನಂದನಿ ಅವರು ಮಹುವಾ ಅವರ ಖಾತೆಗೆ  ಜುಲೈ 8, 2019ರಿಂದ ಏಪ್ರಿಲ್ 4, 2023ರ ನಡುವೆ 61 ಬಾರಿ ಲಾಗಿನ್‌ ಆಗಿದ್ದಾರೆ ಎಂದು ಮಾಹಿತಿ ಮತ್ತು ತಂತ್ರಜ್ಞಾನ ಇಲಾಖೆ ಮಾಹಿತಿ ಉಲ್ಲೇಖಿಸಿದ್ದಾರೆ.

ಅನಧಿಕೃತ ವ್ಯಕ್ತಿಗಳಿಗೆ ಲೋಕಸಭೆಯ ಲಾಗಿನ್‌ ಮಾಹಿತಿ ನೀಡುವುದರಿಂದ ವಿದೇಶಿ ಘಟಕಗಳಿಗೆ ಸೂಕ್ಷ್ಮ ಮಾಹಿತಿ ಸೋರಿಕೆಯ ಸಾಧ್ಯತೆ ಬಗ್ಗೆ ಗೃಹ ವ್ಯವಹಾರಗಳ ಸಚಿವಾಲಯ ಕಳವಳ ವ್ಯಕ್ತಪಡಿಸಿದೆ. ಹಿರಾನಂದನಿ ಲಾಗಿನ್ ಮಾಡಿದ ಅವಧಿಯಲ್ಲಿ ಮಹುವಾ 4 ಬಾರಿ ದುಬೈಗೆ ಭೇಟಿ ನೀಡಿದ್ದರು ಎಂದು ಗೃಹ ಸಚಿವಾಲಯ  ಗಮನಿಸಿದೆ.

2023ರ ಅ.20ರಂದು  ಉರ್ಮಿಲ್ ಅಸಿವಾಲ್ ಅವರ ಸಮ್ಮುಖದಲ್ಲಿ ಹಿರನಂದಾನಿ ಅವರು ತಮ್ಮ ಅಫಿಡವಿಟ್‌ಗೆ ಸಹಿ ಹಾಕಿದ್ದಾರೆ ಮತ್ತು ಅಸಿವಾಲ್ ಅವರ ಸೀಲ್ ಮತ್ತು ಸಹಿ ಎರಡನ್ನೂ ಅಧಿಕೃತವೆಂದು ದೃಢಪಡಿಸಿದರು ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ ಎಂದು ಲೋಕಸಬೆಯ ಸಮಿತಿಯು ತನ್ನ ವರದಿಯಲ್ಲಿ ಉಲ್ಲೇಖಿಸಿದೆ.

ಇದನ್ನು ಓದಿ: ಪ್ರಶ್ನೆಗಾಗಿ ನಗದು ಪ್ರಕರಣ: ಲೋಕಸಭೆಯಿಂದ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಉಚ್ಚಾಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...