Homeಮುಖಪುಟಮೊಯಿತ್ರಾ-ಹಿರಾನಂದಾನಿ ನಡುವಿನ ನಗದು ವಹಿವಾಟಿನ ತನಿಖೆಗೆ ಸಮಿತಿ ಶಿಫಾರಸ್ಸು

ಮೊಯಿತ್ರಾ-ಹಿರಾನಂದಾನಿ ನಡುವಿನ ನಗದು ವಹಿವಾಟಿನ ತನಿಖೆಗೆ ಸಮಿತಿ ಶಿಫಾರಸ್ಸು

- Advertisement -
- Advertisement -

ಟಿಎಂಸಿ ಸಂಸದೆಯಾಗಿದ್ದ ಮಹುವಾ ಮೊಯಿತ್ರಾ ಅವರನ್ನು ಪ್ರಶ್ನೆಗಾಗಿ ನಗದು ಆರೋಪಕ್ಕೆ ಸಂಬಂಧಿಸಿ ನಿನ್ನೆ ಲೋಕಸಭೆ ನೈತಿಕ ಸಮಿತಿಯ ಶಿಫಾರಸ್ಸಿನ ಮೇರೆಗೆ ಲೋಕಸಭೆಯಿಂದ ಉಚ್ಛಾಟನೆ ಮಾಡಲಾಗಿದೆ. ಸಮಿತಿಯು ವರದಿಯಲ್ಲಿ ಮೊಯಿತ್ರಾ ಮತ್ತು ಉದ್ಯಮಿ ದರ್ಶನ್ ಹಿರಾನಂದಾನಿ ನಡುವಿನ ನಗದು ವಹಿವಾಟಿನ ಕುರಿತು ಪರಿಶೀಲಿಸಲು ಸರ್ಕಾರ ತನಿಖೆಯನ್ನು ಪ್ರಾರಂಭಿಸಬೇಕು ಎಂದು ಶಿಫಾರಸ್ಸು ಮಾಡಿದೆ.

ಬಿಜೆಪಿ ಸಂಸದ ವಿನೋದ್ ಸೋಂಕರ್ ನೇತೃತ್ವದ ಲೋಕಸಭೆ ಸಮಿತಿಯು 502 ಪುಟಗಳ ವರದಿಯಲ್ಲಿ, ಮಹುವಾ ಅವರ ನಡವಳಿಕೆಯು ಅನೈತಿಕ ಮತ್ತು ಮಹುವಾ ಅವರ ಐಡಿ, ಪಾಸ್‌ವರ್ಡ್ ಸೇರಿದಂತೆ ಲೋಕಸಭೆಯ ಲಾಗಿನ್ ಮಾಹಿತಿಯನ್ನು ಅನಧಿಕೃತ ವ್ಯಕ್ತಿಗಳೊಂದಿಗೆ  ಹಂಚಿಕೊಂಡಿರುವುದು ಸದನದ ನಿಯಮಗಳ ಉಲ್ಲಂಘನೆ. ಇದರಿಂದಾಗಿ ರಾಷ್ಟ್ರೀಯ ಭದ್ರತೆಯ ಮೇಲೆ ಪರಿಣಾಮ ಬೀರುತ್ತದೆ. ಹಿರಾನಂದನಿ ಜೊತೆಗೆ ಈ ವಿಚಾರಗಳನ್ನು ಹಂಚಿಕೊಳ್ಳಲು ಮಹುವಾ ನಗದು ಸ್ವೀಕರಿಸಿದ್ದಾರೆ ಎಂದು ವರದಿಯು ಹೇಳಿದೆ.

ಮಹುವಾ ಮೊಯಿತ್ರಾ ಮತ್ತು ದರ್ಶನ್ ಹಿರಾನಂದಾನಿ ನಡುವಿನ ನಗದು ವಹಿವಾಟಿನ ಬಗ್ಗೆ ಭಾರತ ಸರ್ಕಾರವು ತನಿಖೆ ನಡೆಸಬೇಕು ಎಂದು ವರದಿ ಹೇಳಿದೆ. ಬಿಎಸ್‌ಪಿ ಸಂಸದ ಕುನಾವರ್ ಡ್ಯಾನಿಶ್ ಅಲಿ ಅವರು ಸೋಂಕರ್ ಅವರು ಮೊಯಿತ್ರಾಗೆ ಕೇಳಿದ ಪ್ರಶ್ನೆಗಳನ್ನು ಕುತಂತ್ರದಿಂದ ತಿರುಚಿದ್ದಾರೆ ಎಂದು ವರದಿಯು ಆರೋಪಿಸಿದೆ ಅವರ ವಿರುದ್ಧ ಕ್ರಮಕ್ಕೂ ಆಗ್ರಹಿಸಿದೆ.

​ತನ್ನ ಲಾಗಿನ್ ಮಾಹಿತಿಗಳನ್ನು ಹಂಚಿಕೊಂಡ ನಂತರ, ಮಹುವಾ ಐಫೋನ್‌ಗಳು, ವಜ್ರ ಮತ್ತು ಮೌಲ್ಯಯುತ ಐಷಾರಾಮಿ ವಸ್ತುಗಳು ಮತ್ತು ದುಬಾರಿ 35 ಜೋಡಿ ಶೂಗಳನ್ನು ಸ್ವೀಕರಿಸಿದ್ದಾರೆ. ಉಡುಗೊರೆಗಳಲ್ಲಿ ಹತ್ತಾರು ದುಬಾರಿ ಫ್ರೆಂಚ್ ಮತ್ತು ಇಟಾಲಿಯನ್ ವೈನ್‌ಗಳ ಬಾಟಲಿಗಳು, ದುಬೈನಿಂದ ಐಷಾರಾಮಿ ಸೌಂದರ್ಯವರ್ಧಕಗಳ ಗಿಫ್ಟ್‌ , ಬ್ಯಾಗ್‌ಗಳು ಮತ್ತು ಬರ್ಲುಟಿಯಿಂದ ಮೊಸಳೆ ಚರ್ಮದಿಂದ ನಿರ್ಮಿಸಿದ ಬ್ಯಾಗ್‌ಗಳು ಮತ್ತು ನಗದನ್ನು ಉಡುಗೊರೆಯಾಗಿ ಪಡೆದಿದ್ದಾರೆ ಎಂದು ಆರೋಪಿಸಲಾಗಿದೆ.

ಸಮಿತಿಯು ತನ್ನ ವರದಿಯಲ್ಲಿ ಉಲ್ಲೇಖಿಸಿರುವಂತೆ ವಿವಿಧ ಸಚಿವಾಲಯಗಳಿಂದ ಮಾಹಿತಿಗಳನ್ನು ಈ ಬಗ್ಗೆ ಸಂಗ್ರಹಿಸಿದೆ. ಹಿರಾನಂದನಿ ಅವರು ಮಹುವಾ ಅವರ ಖಾತೆಗೆ  ಜುಲೈ 8, 2019ರಿಂದ ಏಪ್ರಿಲ್ 4, 2023ರ ನಡುವೆ 61 ಬಾರಿ ಲಾಗಿನ್‌ ಆಗಿದ್ದಾರೆ ಎಂದು ಮಾಹಿತಿ ಮತ್ತು ತಂತ್ರಜ್ಞಾನ ಇಲಾಖೆ ಮಾಹಿತಿ ಉಲ್ಲೇಖಿಸಿದ್ದಾರೆ.

ಅನಧಿಕೃತ ವ್ಯಕ್ತಿಗಳಿಗೆ ಲೋಕಸಭೆಯ ಲಾಗಿನ್‌ ಮಾಹಿತಿ ನೀಡುವುದರಿಂದ ವಿದೇಶಿ ಘಟಕಗಳಿಗೆ ಸೂಕ್ಷ್ಮ ಮಾಹಿತಿ ಸೋರಿಕೆಯ ಸಾಧ್ಯತೆ ಬಗ್ಗೆ ಗೃಹ ವ್ಯವಹಾರಗಳ ಸಚಿವಾಲಯ ಕಳವಳ ವ್ಯಕ್ತಪಡಿಸಿದೆ. ಹಿರಾನಂದನಿ ಲಾಗಿನ್ ಮಾಡಿದ ಅವಧಿಯಲ್ಲಿ ಮಹುವಾ 4 ಬಾರಿ ದುಬೈಗೆ ಭೇಟಿ ನೀಡಿದ್ದರು ಎಂದು ಗೃಹ ಸಚಿವಾಲಯ  ಗಮನಿಸಿದೆ.

2023ರ ಅ.20ರಂದು  ಉರ್ಮಿಲ್ ಅಸಿವಾಲ್ ಅವರ ಸಮ್ಮುಖದಲ್ಲಿ ಹಿರನಂದಾನಿ ಅವರು ತಮ್ಮ ಅಫಿಡವಿಟ್‌ಗೆ ಸಹಿ ಹಾಕಿದ್ದಾರೆ ಮತ್ತು ಅಸಿವಾಲ್ ಅವರ ಸೀಲ್ ಮತ್ತು ಸಹಿ ಎರಡನ್ನೂ ಅಧಿಕೃತವೆಂದು ದೃಢಪಡಿಸಿದರು ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ ಎಂದು ಲೋಕಸಬೆಯ ಸಮಿತಿಯು ತನ್ನ ವರದಿಯಲ್ಲಿ ಉಲ್ಲೇಖಿಸಿದೆ.

ಇದನ್ನು ಓದಿ: ಪ್ರಶ್ನೆಗಾಗಿ ನಗದು ಪ್ರಕರಣ: ಲೋಕಸಭೆಯಿಂದ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಉಚ್ಚಾಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...