Homeಮುಖಪುಟಮೊಯಿತ್ರಾ-ಹಿರಾನಂದಾನಿ ನಡುವಿನ ನಗದು ವಹಿವಾಟಿನ ತನಿಖೆಗೆ ಸಮಿತಿ ಶಿಫಾರಸ್ಸು

ಮೊಯಿತ್ರಾ-ಹಿರಾನಂದಾನಿ ನಡುವಿನ ನಗದು ವಹಿವಾಟಿನ ತನಿಖೆಗೆ ಸಮಿತಿ ಶಿಫಾರಸ್ಸು

- Advertisement -
- Advertisement -

ಟಿಎಂಸಿ ಸಂಸದೆಯಾಗಿದ್ದ ಮಹುವಾ ಮೊಯಿತ್ರಾ ಅವರನ್ನು ಪ್ರಶ್ನೆಗಾಗಿ ನಗದು ಆರೋಪಕ್ಕೆ ಸಂಬಂಧಿಸಿ ನಿನ್ನೆ ಲೋಕಸಭೆ ನೈತಿಕ ಸಮಿತಿಯ ಶಿಫಾರಸ್ಸಿನ ಮೇರೆಗೆ ಲೋಕಸಭೆಯಿಂದ ಉಚ್ಛಾಟನೆ ಮಾಡಲಾಗಿದೆ. ಸಮಿತಿಯು ವರದಿಯಲ್ಲಿ ಮೊಯಿತ್ರಾ ಮತ್ತು ಉದ್ಯಮಿ ದರ್ಶನ್ ಹಿರಾನಂದಾನಿ ನಡುವಿನ ನಗದು ವಹಿವಾಟಿನ ಕುರಿತು ಪರಿಶೀಲಿಸಲು ಸರ್ಕಾರ ತನಿಖೆಯನ್ನು ಪ್ರಾರಂಭಿಸಬೇಕು ಎಂದು ಶಿಫಾರಸ್ಸು ಮಾಡಿದೆ.

ಬಿಜೆಪಿ ಸಂಸದ ವಿನೋದ್ ಸೋಂಕರ್ ನೇತೃತ್ವದ ಲೋಕಸಭೆ ಸಮಿತಿಯು 502 ಪುಟಗಳ ವರದಿಯಲ್ಲಿ, ಮಹುವಾ ಅವರ ನಡವಳಿಕೆಯು ಅನೈತಿಕ ಮತ್ತು ಮಹುವಾ ಅವರ ಐಡಿ, ಪಾಸ್‌ವರ್ಡ್ ಸೇರಿದಂತೆ ಲೋಕಸಭೆಯ ಲಾಗಿನ್ ಮಾಹಿತಿಯನ್ನು ಅನಧಿಕೃತ ವ್ಯಕ್ತಿಗಳೊಂದಿಗೆ  ಹಂಚಿಕೊಂಡಿರುವುದು ಸದನದ ನಿಯಮಗಳ ಉಲ್ಲಂಘನೆ. ಇದರಿಂದಾಗಿ ರಾಷ್ಟ್ರೀಯ ಭದ್ರತೆಯ ಮೇಲೆ ಪರಿಣಾಮ ಬೀರುತ್ತದೆ. ಹಿರಾನಂದನಿ ಜೊತೆಗೆ ಈ ವಿಚಾರಗಳನ್ನು ಹಂಚಿಕೊಳ್ಳಲು ಮಹುವಾ ನಗದು ಸ್ವೀಕರಿಸಿದ್ದಾರೆ ಎಂದು ವರದಿಯು ಹೇಳಿದೆ.

ಮಹುವಾ ಮೊಯಿತ್ರಾ ಮತ್ತು ದರ್ಶನ್ ಹಿರಾನಂದಾನಿ ನಡುವಿನ ನಗದು ವಹಿವಾಟಿನ ಬಗ್ಗೆ ಭಾರತ ಸರ್ಕಾರವು ತನಿಖೆ ನಡೆಸಬೇಕು ಎಂದು ವರದಿ ಹೇಳಿದೆ. ಬಿಎಸ್‌ಪಿ ಸಂಸದ ಕುನಾವರ್ ಡ್ಯಾನಿಶ್ ಅಲಿ ಅವರು ಸೋಂಕರ್ ಅವರು ಮೊಯಿತ್ರಾಗೆ ಕೇಳಿದ ಪ್ರಶ್ನೆಗಳನ್ನು ಕುತಂತ್ರದಿಂದ ತಿರುಚಿದ್ದಾರೆ ಎಂದು ವರದಿಯು ಆರೋಪಿಸಿದೆ ಅವರ ವಿರುದ್ಧ ಕ್ರಮಕ್ಕೂ ಆಗ್ರಹಿಸಿದೆ.

​ತನ್ನ ಲಾಗಿನ್ ಮಾಹಿತಿಗಳನ್ನು ಹಂಚಿಕೊಂಡ ನಂತರ, ಮಹುವಾ ಐಫೋನ್‌ಗಳು, ವಜ್ರ ಮತ್ತು ಮೌಲ್ಯಯುತ ಐಷಾರಾಮಿ ವಸ್ತುಗಳು ಮತ್ತು ದುಬಾರಿ 35 ಜೋಡಿ ಶೂಗಳನ್ನು ಸ್ವೀಕರಿಸಿದ್ದಾರೆ. ಉಡುಗೊರೆಗಳಲ್ಲಿ ಹತ್ತಾರು ದುಬಾರಿ ಫ್ರೆಂಚ್ ಮತ್ತು ಇಟಾಲಿಯನ್ ವೈನ್‌ಗಳ ಬಾಟಲಿಗಳು, ದುಬೈನಿಂದ ಐಷಾರಾಮಿ ಸೌಂದರ್ಯವರ್ಧಕಗಳ ಗಿಫ್ಟ್‌ , ಬ್ಯಾಗ್‌ಗಳು ಮತ್ತು ಬರ್ಲುಟಿಯಿಂದ ಮೊಸಳೆ ಚರ್ಮದಿಂದ ನಿರ್ಮಿಸಿದ ಬ್ಯಾಗ್‌ಗಳು ಮತ್ತು ನಗದನ್ನು ಉಡುಗೊರೆಯಾಗಿ ಪಡೆದಿದ್ದಾರೆ ಎಂದು ಆರೋಪಿಸಲಾಗಿದೆ.

ಸಮಿತಿಯು ತನ್ನ ವರದಿಯಲ್ಲಿ ಉಲ್ಲೇಖಿಸಿರುವಂತೆ ವಿವಿಧ ಸಚಿವಾಲಯಗಳಿಂದ ಮಾಹಿತಿಗಳನ್ನು ಈ ಬಗ್ಗೆ ಸಂಗ್ರಹಿಸಿದೆ. ಹಿರಾನಂದನಿ ಅವರು ಮಹುವಾ ಅವರ ಖಾತೆಗೆ  ಜುಲೈ 8, 2019ರಿಂದ ಏಪ್ರಿಲ್ 4, 2023ರ ನಡುವೆ 61 ಬಾರಿ ಲಾಗಿನ್‌ ಆಗಿದ್ದಾರೆ ಎಂದು ಮಾಹಿತಿ ಮತ್ತು ತಂತ್ರಜ್ಞಾನ ಇಲಾಖೆ ಮಾಹಿತಿ ಉಲ್ಲೇಖಿಸಿದ್ದಾರೆ.

ಅನಧಿಕೃತ ವ್ಯಕ್ತಿಗಳಿಗೆ ಲೋಕಸಭೆಯ ಲಾಗಿನ್‌ ಮಾಹಿತಿ ನೀಡುವುದರಿಂದ ವಿದೇಶಿ ಘಟಕಗಳಿಗೆ ಸೂಕ್ಷ್ಮ ಮಾಹಿತಿ ಸೋರಿಕೆಯ ಸಾಧ್ಯತೆ ಬಗ್ಗೆ ಗೃಹ ವ್ಯವಹಾರಗಳ ಸಚಿವಾಲಯ ಕಳವಳ ವ್ಯಕ್ತಪಡಿಸಿದೆ. ಹಿರಾನಂದನಿ ಲಾಗಿನ್ ಮಾಡಿದ ಅವಧಿಯಲ್ಲಿ ಮಹುವಾ 4 ಬಾರಿ ದುಬೈಗೆ ಭೇಟಿ ನೀಡಿದ್ದರು ಎಂದು ಗೃಹ ಸಚಿವಾಲಯ  ಗಮನಿಸಿದೆ.

2023ರ ಅ.20ರಂದು  ಉರ್ಮಿಲ್ ಅಸಿವಾಲ್ ಅವರ ಸಮ್ಮುಖದಲ್ಲಿ ಹಿರನಂದಾನಿ ಅವರು ತಮ್ಮ ಅಫಿಡವಿಟ್‌ಗೆ ಸಹಿ ಹಾಕಿದ್ದಾರೆ ಮತ್ತು ಅಸಿವಾಲ್ ಅವರ ಸೀಲ್ ಮತ್ತು ಸಹಿ ಎರಡನ್ನೂ ಅಧಿಕೃತವೆಂದು ದೃಢಪಡಿಸಿದರು ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ ಎಂದು ಲೋಕಸಬೆಯ ಸಮಿತಿಯು ತನ್ನ ವರದಿಯಲ್ಲಿ ಉಲ್ಲೇಖಿಸಿದೆ.

ಇದನ್ನು ಓದಿ: ಪ್ರಶ್ನೆಗಾಗಿ ನಗದು ಪ್ರಕರಣ: ಲೋಕಸಭೆಯಿಂದ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಉಚ್ಚಾಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...