Homeಅಂತರಾಷ್ಟ್ರೀಯಎಲ್‌ಎಸ್‌ಇಯಿಂದ ಅಂಬೇಡ್ಕರ್‌ ಅವರ ಅಪರೂಪದ ದಾಖಲೆಗಳ ಆನ್ಲೈನ್ ವಸ್ತು ಪ್ರದರ್ಶನ

ಎಲ್‌ಎಸ್‌ಇಯಿಂದ ಅಂಬೇಡ್ಕರ್‌ ಅವರ ಅಪರೂಪದ ದಾಖಲೆಗಳ ಆನ್ಲೈನ್ ವಸ್ತು ಪ್ರದರ್ಶನ

- Advertisement -
- Advertisement -

ಲಂಡನ್ ಸ್ಕೂಲ್ ಆಫ್ ಎಕನಾಮಿಕ್ಸ್ (ಎಲ್‌ಎಸ್‌ಇ) ಸಂವಿಧಾನ ಶಿಲ್ಪಿ, ಬಾಬಾ ಸಾಹೇಬ್ ಡಾ. ಬಿ.ಆರ್‌.ಅಂಬೇಡ್ಕರ್‌ ಕುರಿತ ಅಪರೂಪದ ದಾಖಲೆಗಳ ಆನ್ಲೈನ್ ವಸ್ತು ಪ್ರದರ್ಶನ ನಡೆಸಿದೆ.

ಎಲ್ಎಸ್ಇ ದಕ್ಷಿಣ ಏಷ್ಯಾ ಕೇಂದ್ರ ಎಲ್ಎಸ್ಇ ಲೈಬ್ರರಿ ಮತ್ತು ಡಿಕೊಲೊನೈಸಿಂಗ್ ಎಲ್ಎಸ್ಇ ಕಲೆಕ್ಟಿವ್ ಎಂಬ ಮೂರು ಕೇಂದ್ರಗಳು ಸೇರಿ ನಡೆಸಿವೆ. ಇದರಲ್ಲಿ ಮೊದಲು 1916 ರಲ್ಲಿ ಅಂಬೇಡ್ಕರ್ ಅವರು ಲಂಡನ್ ಸ್ಕೂಲ್ ಆಫ್ ಎಕನಾಮಿಕ್ಸ್‌ಗೆ ದಾಖಲಾಗಿರುವ ಅರ್ಜಿಯನ್ನು ತೋರಿಸುವ ಮೂಲಕ ಆನ್ಲೈನ್ ಪ್ರದರ್ಶನವನ್ನು ಆರಂಭಿಸಲಾಗಿದೆ.

ಎಲ್ಎಸ್ಇಯೊಂದಿಗಿನ ಡಾ.ಬಿ.ಆರ್‌.ಅಂಬೇಡ್ಕರ್ ಅವರ ಸಂಬಂಧ, ಸಂವಹನಗಳ ದಾಖಲೆ, ಅಂಬೇಡ್ಕರ್ ಅವರ ಜೀವನದಿಂದ ಪ್ರೇರಿತವಾದ ಎಲ್ಎಸ್ಇಯಲ್ಲಿ ಅವರ ಚಟುವಟಿಕೆಯನ್ನು ದಾಖಲಿಸಲು ಈ ಪ್ರದರ್ಶನ ಒಂದು ಉತ್ತಮ ಕಾರ್ಯ ಸ್ಥಳವಾಗಿದೆ ಎಂದು ಎಲ್ಎಸ್ಇ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ಇದನ್ನೂ ಓದಿ: ಇಸ್ಲಾಂ ಮತ್ತು ಅಂಬೇಡ್ಕರ್‌‌ ಬಗೆಗಿನ ಸುಳ್ಳುಗಳು; ಮಹಾ ಮಾನವತಾವಾದಿಗೆ ‘ಸೂಲಿಬೆಲೆ’ ಮಾಡಿದ ಅವಮಾನ!

ವಸ್ತು ಪ್ರದರ್ಶನದ ಜೊತೆಗೆ ಅಂಬೇಡ್ಕರ್‌ ಕುರಿತ ಹಲವು ಕಾರ್ಯಕ್ರಮಗಳು, ಓದಿನ ಪಟ್ಟಿಗಳು, ಪಾಡ್‌ಕಾಸ್ಟ್‌ಗಳು ಮತ್ತು ಇತರ ವಿಷಯಗಳ ರೆಕಾರ್ಡಿಂಗ್‌ಗಳನ್ನು ಸೇರಿಸಲಾಗುತ್ತದೆ. ಜೊತೆಗೆ ಅಂಬೇಡ್ಕರ್ ಎಂದರೆ ನಮಗೆ ಏನು ಎಂಬುದರ ಕುರಿತು ಎಲ್ಎಸ್‌ಇ ಸಮುದಾಯದಿಂದ ವಿಚಾರಗಳನ್ನು ಪಡೆದು ಒಂದೆಡೆ ಸೇರಿಸಲಾಗುತ್ತದೆ ಎಂದು ತಿಳಿಸಲಾಗಿದೆ.

ಅಂಬೇಡ್ಕರ್ ಅವರು ತಮ್ಮ 25 ವರ್ಷದಲ್ಲಿ 1916 ರಲ್ಲಿ ಲಂಡನ್ ಸ್ಕೂಲ್ ಆಫ್ ಎಕನಾಮಿಕ್ಸ್‌ಗೆ ದಾಖಲಾಗಿದ್ದರು. ಇದಕ್ಕಿಂತ ಮೊದಲೇ ಬಾಂಬೆ ವಿಶ್ವವಿದ್ಯಾಲಯದಿಂದ ಅರ್ಥಶಾಸ್ತ್ರ ಮತ್ತು ರಾಜ್ಯಶಾಸ್ತ್ರದಲ್ಲಿ ಪದವಿ ಪಡೆದಿದ್ದರು. ಮುಂಬೈ ಎಲ್ಫಿನ್‌ಸ್ಟೋನ್ (Elphinstone) ಪ್ರೌಢಶಾಲೆಯಲ್ಲಿ ಅಧ್ಯಯನ ಮಾಡಿದ ಮೊದಲ ದಲಿತ ಸಮುದಾಯದ ವ್ಯಕ್ತಿ ಅಂಬೇಡ್ಕರ್.

A group photo of LSE students and staff

ತಮ್ಮ ಬಾಲ್ಯದುದ್ದಕ್ಕೂ “ಅಸ್ಪೃಶ್ಯ” ಎಂದು ತಾರತಮ್ಯವನ್ನು ಎದುರಿಸುತ್ತಿದ್ದ ಅವರು, ಬರೋಡಾ ರಾಜ್ಯದಿಂದ (ಈಗ ವಡೋದರಾ) ವಿದ್ಯಾರ್ಥಿವೇತನವನ್ನು ಪಡೆದರು. ಇದರಿಂದ ವಿದೇಶದಲ್ಲಿ ಕೊಲಂಬಿಯಾ ವಿಶ್ವವಿದ್ಯಾಲಯದಲ್ಲಿ ಅಧ್ಯಯನ ಮುಗಿಸಿ, ಡಾಕ್ಟರೇಟ್ ಪಡೆದು ಅಲ್ಲಿಂದ ಲಂಡನ್‌ಗೆ ಹೆಚ್ಚಿನ ವಿದ್ಯಾಭ್ಯಾಸಕ್ಕೆ ತೆರಳಿದ್ದರು.

ಈ ಆನ್ಲೈನ್ ವಸ್ತು ಪ್ರದರ್ಶನದಲ್ಲಿ ಅಂಬೇಡ್ಕರ್‌ ಅವರ ಕುರಿತ ಅಪರೂಪದ ಮಾಹಿತಿಗಳನ್ನು ಹಂಚಿಕೊಳ್ಳಲಾಗಿದೆ. ಲಂಡನ್‌ ಸ್ಕೂಲ್ ಆಫ್ ಎಕನಾಮಿಕ್ಸ್‌ ಮತ್ತು ಡಾ. ಬಿ.ಆರ್‌. ಅಂಬೇಡ್ಕರ್‌ ನಡುವಿನ ಅವಿನಾಭಾವ ಸಂಬಂಧವನ್ನು ಈ ಪ್ರದರ್ಶನ ತಿಳಿಸುತ್ತದೆ. ಭಾರತದ ಸಂವಿಧಾನ ರಚಿಸುವಲ್ಲಿಯೂ ಎಲ್‌ಎಸ್‌ಇ ಜೊತೆಗಿನ ನಂಟು ಕುರಿತು ಇದು ವಿವರಿಸುತ್ತದೆ.

A timeline showing the LSE connections with the Indian Subcontinent


ಇದನ್ನೂ ಓದಿ: ಚಿತ್ರರಂಗದ ಅಭಿವ್ಯಕ್ತಿಯನ್ನೇ ಕಿತ್ತುಕೊಳ್ಳುವ ಕೇಂದ್ರದ ಹೊಸ ಕಾನೂನು: ಕಮಲ್ ಹಾಸನ್ ಸೇರಿ ಚಿತ್ರತಾರೆಯರ ವಿರೋಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...