Homeಅಂತರಾಷ್ಟ್ರೀಯಎಲ್‌ಎಸ್‌ಇಯಿಂದ ಅಂಬೇಡ್ಕರ್‌ ಅವರ ಅಪರೂಪದ ದಾಖಲೆಗಳ ಆನ್ಲೈನ್ ವಸ್ತು ಪ್ರದರ್ಶನ

ಎಲ್‌ಎಸ್‌ಇಯಿಂದ ಅಂಬೇಡ್ಕರ್‌ ಅವರ ಅಪರೂಪದ ದಾಖಲೆಗಳ ಆನ್ಲೈನ್ ವಸ್ತು ಪ್ರದರ್ಶನ

- Advertisement -
- Advertisement -

ಲಂಡನ್ ಸ್ಕೂಲ್ ಆಫ್ ಎಕನಾಮಿಕ್ಸ್ (ಎಲ್‌ಎಸ್‌ಇ) ಸಂವಿಧಾನ ಶಿಲ್ಪಿ, ಬಾಬಾ ಸಾಹೇಬ್ ಡಾ. ಬಿ.ಆರ್‌.ಅಂಬೇಡ್ಕರ್‌ ಕುರಿತ ಅಪರೂಪದ ದಾಖಲೆಗಳ ಆನ್ಲೈನ್ ವಸ್ತು ಪ್ರದರ್ಶನ ನಡೆಸಿದೆ.

ಎಲ್ಎಸ್ಇ ದಕ್ಷಿಣ ಏಷ್ಯಾ ಕೇಂದ್ರ ಎಲ್ಎಸ್ಇ ಲೈಬ್ರರಿ ಮತ್ತು ಡಿಕೊಲೊನೈಸಿಂಗ್ ಎಲ್ಎಸ್ಇ ಕಲೆಕ್ಟಿವ್ ಎಂಬ ಮೂರು ಕೇಂದ್ರಗಳು ಸೇರಿ ನಡೆಸಿವೆ. ಇದರಲ್ಲಿ ಮೊದಲು 1916 ರಲ್ಲಿ ಅಂಬೇಡ್ಕರ್ ಅವರು ಲಂಡನ್ ಸ್ಕೂಲ್ ಆಫ್ ಎಕನಾಮಿಕ್ಸ್‌ಗೆ ದಾಖಲಾಗಿರುವ ಅರ್ಜಿಯನ್ನು ತೋರಿಸುವ ಮೂಲಕ ಆನ್ಲೈನ್ ಪ್ರದರ್ಶನವನ್ನು ಆರಂಭಿಸಲಾಗಿದೆ.

ಎಲ್ಎಸ್ಇಯೊಂದಿಗಿನ ಡಾ.ಬಿ.ಆರ್‌.ಅಂಬೇಡ್ಕರ್ ಅವರ ಸಂಬಂಧ, ಸಂವಹನಗಳ ದಾಖಲೆ, ಅಂಬೇಡ್ಕರ್ ಅವರ ಜೀವನದಿಂದ ಪ್ರೇರಿತವಾದ ಎಲ್ಎಸ್ಇಯಲ್ಲಿ ಅವರ ಚಟುವಟಿಕೆಯನ್ನು ದಾಖಲಿಸಲು ಈ ಪ್ರದರ್ಶನ ಒಂದು ಉತ್ತಮ ಕಾರ್ಯ ಸ್ಥಳವಾಗಿದೆ ಎಂದು ಎಲ್ಎಸ್ಇ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ಇದನ್ನೂ ಓದಿ: ಇಸ್ಲಾಂ ಮತ್ತು ಅಂಬೇಡ್ಕರ್‌‌ ಬಗೆಗಿನ ಸುಳ್ಳುಗಳು; ಮಹಾ ಮಾನವತಾವಾದಿಗೆ ‘ಸೂಲಿಬೆಲೆ’ ಮಾಡಿದ ಅವಮಾನ!

ವಸ್ತು ಪ್ರದರ್ಶನದ ಜೊತೆಗೆ ಅಂಬೇಡ್ಕರ್‌ ಕುರಿತ ಹಲವು ಕಾರ್ಯಕ್ರಮಗಳು, ಓದಿನ ಪಟ್ಟಿಗಳು, ಪಾಡ್‌ಕಾಸ್ಟ್‌ಗಳು ಮತ್ತು ಇತರ ವಿಷಯಗಳ ರೆಕಾರ್ಡಿಂಗ್‌ಗಳನ್ನು ಸೇರಿಸಲಾಗುತ್ತದೆ. ಜೊತೆಗೆ ಅಂಬೇಡ್ಕರ್ ಎಂದರೆ ನಮಗೆ ಏನು ಎಂಬುದರ ಕುರಿತು ಎಲ್ಎಸ್‌ಇ ಸಮುದಾಯದಿಂದ ವಿಚಾರಗಳನ್ನು ಪಡೆದು ಒಂದೆಡೆ ಸೇರಿಸಲಾಗುತ್ತದೆ ಎಂದು ತಿಳಿಸಲಾಗಿದೆ.

ಅಂಬೇಡ್ಕರ್ ಅವರು ತಮ್ಮ 25 ವರ್ಷದಲ್ಲಿ 1916 ರಲ್ಲಿ ಲಂಡನ್ ಸ್ಕೂಲ್ ಆಫ್ ಎಕನಾಮಿಕ್ಸ್‌ಗೆ ದಾಖಲಾಗಿದ್ದರು. ಇದಕ್ಕಿಂತ ಮೊದಲೇ ಬಾಂಬೆ ವಿಶ್ವವಿದ್ಯಾಲಯದಿಂದ ಅರ್ಥಶಾಸ್ತ್ರ ಮತ್ತು ರಾಜ್ಯಶಾಸ್ತ್ರದಲ್ಲಿ ಪದವಿ ಪಡೆದಿದ್ದರು. ಮುಂಬೈ ಎಲ್ಫಿನ್‌ಸ್ಟೋನ್ (Elphinstone) ಪ್ರೌಢಶಾಲೆಯಲ್ಲಿ ಅಧ್ಯಯನ ಮಾಡಿದ ಮೊದಲ ದಲಿತ ಸಮುದಾಯದ ವ್ಯಕ್ತಿ ಅಂಬೇಡ್ಕರ್.

A group photo of LSE students and staff

ತಮ್ಮ ಬಾಲ್ಯದುದ್ದಕ್ಕೂ “ಅಸ್ಪೃಶ್ಯ” ಎಂದು ತಾರತಮ್ಯವನ್ನು ಎದುರಿಸುತ್ತಿದ್ದ ಅವರು, ಬರೋಡಾ ರಾಜ್ಯದಿಂದ (ಈಗ ವಡೋದರಾ) ವಿದ್ಯಾರ್ಥಿವೇತನವನ್ನು ಪಡೆದರು. ಇದರಿಂದ ವಿದೇಶದಲ್ಲಿ ಕೊಲಂಬಿಯಾ ವಿಶ್ವವಿದ್ಯಾಲಯದಲ್ಲಿ ಅಧ್ಯಯನ ಮುಗಿಸಿ, ಡಾಕ್ಟರೇಟ್ ಪಡೆದು ಅಲ್ಲಿಂದ ಲಂಡನ್‌ಗೆ ಹೆಚ್ಚಿನ ವಿದ್ಯಾಭ್ಯಾಸಕ್ಕೆ ತೆರಳಿದ್ದರು.

ಈ ಆನ್ಲೈನ್ ವಸ್ತು ಪ್ರದರ್ಶನದಲ್ಲಿ ಅಂಬೇಡ್ಕರ್‌ ಅವರ ಕುರಿತ ಅಪರೂಪದ ಮಾಹಿತಿಗಳನ್ನು ಹಂಚಿಕೊಳ್ಳಲಾಗಿದೆ. ಲಂಡನ್‌ ಸ್ಕೂಲ್ ಆಫ್ ಎಕನಾಮಿಕ್ಸ್‌ ಮತ್ತು ಡಾ. ಬಿ.ಆರ್‌. ಅಂಬೇಡ್ಕರ್‌ ನಡುವಿನ ಅವಿನಾಭಾವ ಸಂಬಂಧವನ್ನು ಈ ಪ್ರದರ್ಶನ ತಿಳಿಸುತ್ತದೆ. ಭಾರತದ ಸಂವಿಧಾನ ರಚಿಸುವಲ್ಲಿಯೂ ಎಲ್‌ಎಸ್‌ಇ ಜೊತೆಗಿನ ನಂಟು ಕುರಿತು ಇದು ವಿವರಿಸುತ್ತದೆ.

A timeline showing the LSE connections with the Indian Subcontinent


ಇದನ್ನೂ ಓದಿ: ಚಿತ್ರರಂಗದ ಅಭಿವ್ಯಕ್ತಿಯನ್ನೇ ಕಿತ್ತುಕೊಳ್ಳುವ ಕೇಂದ್ರದ ಹೊಸ ಕಾನೂನು: ಕಮಲ್ ಹಾಸನ್ ಸೇರಿ ಚಿತ್ರತಾರೆಯರ ವಿರೋಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...