Homeಮುಖಪುಟಲೆಫ್ಟಿನೆಂಟ್ ಗವರ್ನರ್‌‌‌ ಸಾಹೇಬ್‌‌ ನಿಮ್ಮ ‘ಸೂಪರ್‌ ಬಾಸ್‌’‌ಗೆ ಸ್ವಲ್ಪ ಚಿಲ್ ಮಾಡಲು ಹೇಳಿ: ದೆಹಲಿ ಸಿಎಂ...

ಲೆಫ್ಟಿನೆಂಟ್ ಗವರ್ನರ್‌‌‌ ಸಾಹೇಬ್‌‌ ನಿಮ್ಮ ‘ಸೂಪರ್‌ ಬಾಸ್‌’‌ಗೆ ಸ್ವಲ್ಪ ಚಿಲ್ ಮಾಡಲು ಹೇಳಿ: ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್

- Advertisement -
- Advertisement -

ದೆಹಲಿಯ ಲೆಫ್ಟಿನೆಂಟ್ ಗವರ್ನರ್ ವಿ.ಕೆ. ಸಕ್ಸೇನಾ ಅವರೊಂದಿಗೆ ತಮ್ಮ ಸರ್ಕಾರವು ಅನೇಕ ವಿಷಯಗಳಲ್ಲಿ ಭಿನ್ನಾಭಿಪ್ರಾಯ ಹೊಂದಿದ್ದು, ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಗುರುವಾರ ತಮ್ಮ ಪತ್ನಿ ಕೂಡ ಲೆಫ್ಟಿನೆಂಟ್‌ ಗವರ್ನರ್‌‌ನಷ್ಟು “ಗದರಿಸುವುದಿಲ್ಲ” ಎಂದು ಹೇಳಿದ್ದಾರೆ.

ಕಳೆದ ಆರು ತಿಂಗಳಲ್ಲಿ ಲೆಫ್ಟಿನೆಂಟ್‌ ಗವರ್ನರ್‌‌ ಕೈಯಿಂದ ಪಡೆದಷ್ಟು ‘ಪ್ರೇಮ ಪತ್ರಗಳನ್ನು’ ಹೆಂಡತಿಯಿಂದ ಕೂಡಾ ಇಡೀ ಜೀವನದಲ್ಲಿ ಪಡೆದಿಲ್ಲ ಎಂದು ಟ್ವೀಟ್‌ನಲ್ಲಿ ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಲೆಫ್ಟಿನೆಂಟ್‌ ಗವರ್ನರ್‌‌ ಸಾಹೆಬ್‌, ಸ್ವಲ್ಪ ಚಿಲ್ ಮಾಡಿ ಮತ್ತು ಸ್ವಲ್ಪ ಚಿಲ್ ಆಗಿ ಎಂದು ನಿಮ್ಮ ಸೂಪರ್‌ ಬಾಸ್‌‌‌ಗೆ ಕೂಡಾ ಹೇಳಿ” ಎಂದು ಪರೋಕ್ಷವಾಗಿ ಪ್ರಧಾನಿ ಮೋದಿಯನ್ನು ವ್ಯಂಗ್ಯವಾಡಿದ್ದಾರೆ.

ಇದನ್ನೂ ಓದಿ: ದೆಹಲಿಯಲ್ಲಿ ಆಫರೇಷನ್‌ ಕಮಲ ವಿಫಲ’

ಮಹಾತ್ಮ ಗಾಂಧಿ ಮತ್ತು ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮ ದಿನಾಚರಣೆಯ ಸ್ಮರಣಾರ್ಥ ಮುಖ್ಯಮಂತ್ರಿ ಮತ್ತು ಅವರ ಸಚಿವ ಸಹೋದ್ಯೋಗಿಗಳು ರಾಜ್ ಘಾಟ್ ಮತ್ತು ವಿಜಯ್ ಘಾಟ್‌ನಲ್ಲಿ ಕಾರ್ಯಕ್ರಮಗಳಿಗೆ ಹಾಜರಾಗದೆ ‘ಅತ್ಯಂತ ನಿರ್ಲಕ್ಷ್ಯ’ ತೋರಿಸಿದ್ದಾರೆ ಎಂದು ಲೆಫ್ಟಿನೆಂಟ್‌ ಗವರ್ನರ್‌‌ ಸಕ್ಸೇನಾ ಪತ್ರದಲ್ಲಿ ಆರೋಪಿಸಿದ ಕೆಲವೇ ದಿನಗಳಲ್ಲಿ ಕೇಜ್ರಿವಾಲ್ ಈ ಹೇಳಿಕೆ ನೀಡಿದ್ದಾರೆ.

ಸಕ್ಸೇನಾ ಅವರು ಮುಖ್ಯಮಂತ್ರಿ ಮತ್ತು ಅವರ ಸಹೋದ್ಯೋಗಿಗಳ ಅನುಪಸ್ಥಿತಿಯು ‘ಸ್ವೀಕಾರಾರ್ಹವಲ್ಲ’, ಅದು ಭಯಾನಕ ಕೃತ್ಯ ಎಂದು ಹೇಳಿದ್ದರು. ಮೂಲಸೌಕರ್ಯ ಯೋಜನೆಗಳಲ್ಲಿನ ವಿಳಂಬವನ್ನು ಉಲ್ಲೇಖಿಸಿ, ಮರಗಳನ್ನು ಕಡಿಯಲು ಅನುಮತಿಯನ್ನು ತ್ವರಿತಗೊಳಿಸುವಂತೆ ಕಳೆದ ವಾರ ಸಕ್ಸೇನಾ ಕೇಜ್ರಿವಾಲ್‌ಗೆ ಪತ್ರ ಬರೆದಿದ್ದರು.

“ನನ್ನ ಹೆಂಡತಿ ಕೂಡ ನನ್ನನ್ನು ಲೆಫ್ಟಿನೆಂಟ್‌ ಗವರ್ನರ್‌‌ ಸಾಹಿಬ್‌ನಷ್ಟು ಬೈಯುವುದಿಲ್ಲ. ಕಳೆದ ಆರು ತಿಂಗಳಲ್ಲಿ ಲೆಫ್ಟಿನೆಂಟ್‌ ಗವರ್ನರ್‌‌ ಸಾಹಿಬ್ ಬರೆದಷ್ಟು ಪ್ರೇಮ ಪತ್ರಗಳನ್ನು ನನ್ನ ಹೆಂಡತಿ ಇಡೀ ಜೀವನದಲ್ಲಿ ನನಗೆ ಬರೆದಿಲ್ಲ” ಎಂದು ಅವರು ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.

ಮೇ ತಿಂಗಳಲ್ಲಿ ದೆಹಲಿಯ ಲೆಫ್ಟಿನೆಂಟ್ ಗವರ್ನರ್ ಆಗಿ ಸಕ್ಸೇನಾ ಅಧಿಕಾರ ವಹಿಸಿಕೊಂಡ ನಂತರ, ದೆಹಲಿಯ ಅಬಕಾರಿ ನೀತಿ(ಈಗ ಹಿಂಪಡೆಯಲಾಗಿದೆ), ತರಗತಿ ಕೊಠಡಿಗಳು ಮತ್ತು ಆಸ್ಪತ್ರೆಗಳ ನಿರ್ಮಾಣ ಸೇರಿದಂತೆ ಕೇಜ್ರಿವಾಲ್ ಸರ್ಕಾರದ ಹಲವಾರು ಉಪಕ್ರಮಗಳ ಬಗ್ಗೆ ಅವರು ತನಿಖೆಗೆ ಆದೇಶಿಸಿದ್ದಾರೆ. ಇತ್ತೀಚೆಗೆ ದೆಹಲಿಯ ವಿದ್ಯುತ್ ಸಬ್ಸಿಡಿ ಯೋಜನೆಯ ತನಿಖೆಗೆ ಕೂಡಾ ಆದೇಶಿಸಿದ್ದಾರೆ.

ಇದನ್ನೂ ಓದಿ: ಬಿಜೆಪಿ ‘ಸರಕಾರಗಳ ಸರಣಿ ಕೊಲೆಗಾರ’: ಕೇಜ್ರಿವಾಲ್

ಲೆಫ್ಟಿನೆಂಟ್ ಗವರ್ನರ್ ಅವರ ಈ ಕ್ರಮಗಳು ರಾಜಕೀಯ ಪ್ರೇರಿತವಾಗಿದ್ದು, ಅವರು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಆದೇಶದಂತೆ ಕೆಲಸ ಮಾಡುತ್ತಿದ್ದಾರೆ ಎಂದು ಆಮ್‌ ಆದ್ಮಿ ಪಾರ್ಟಿ ಆರೋಪಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....