Homeಮುಖಪುಟಲೆಫ್ಟಿನೆಂಟ್ ಗವರ್ನರ್‌‌‌ ಸಾಹೇಬ್‌‌ ನಿಮ್ಮ ‘ಸೂಪರ್‌ ಬಾಸ್‌’‌ಗೆ ಸ್ವಲ್ಪ ಚಿಲ್ ಮಾಡಲು ಹೇಳಿ: ದೆಹಲಿ ಸಿಎಂ...

ಲೆಫ್ಟಿನೆಂಟ್ ಗವರ್ನರ್‌‌‌ ಸಾಹೇಬ್‌‌ ನಿಮ್ಮ ‘ಸೂಪರ್‌ ಬಾಸ್‌’‌ಗೆ ಸ್ವಲ್ಪ ಚಿಲ್ ಮಾಡಲು ಹೇಳಿ: ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್

- Advertisement -
- Advertisement -

ದೆಹಲಿಯ ಲೆಫ್ಟಿನೆಂಟ್ ಗವರ್ನರ್ ವಿ.ಕೆ. ಸಕ್ಸೇನಾ ಅವರೊಂದಿಗೆ ತಮ್ಮ ಸರ್ಕಾರವು ಅನೇಕ ವಿಷಯಗಳಲ್ಲಿ ಭಿನ್ನಾಭಿಪ್ರಾಯ ಹೊಂದಿದ್ದು, ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಗುರುವಾರ ತಮ್ಮ ಪತ್ನಿ ಕೂಡ ಲೆಫ್ಟಿನೆಂಟ್‌ ಗವರ್ನರ್‌‌ನಷ್ಟು “ಗದರಿಸುವುದಿಲ್ಲ” ಎಂದು ಹೇಳಿದ್ದಾರೆ.

ಕಳೆದ ಆರು ತಿಂಗಳಲ್ಲಿ ಲೆಫ್ಟಿನೆಂಟ್‌ ಗವರ್ನರ್‌‌ ಕೈಯಿಂದ ಪಡೆದಷ್ಟು ‘ಪ್ರೇಮ ಪತ್ರಗಳನ್ನು’ ಹೆಂಡತಿಯಿಂದ ಕೂಡಾ ಇಡೀ ಜೀವನದಲ್ಲಿ ಪಡೆದಿಲ್ಲ ಎಂದು ಟ್ವೀಟ್‌ನಲ್ಲಿ ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಲೆಫ್ಟಿನೆಂಟ್‌ ಗವರ್ನರ್‌‌ ಸಾಹೆಬ್‌, ಸ್ವಲ್ಪ ಚಿಲ್ ಮಾಡಿ ಮತ್ತು ಸ್ವಲ್ಪ ಚಿಲ್ ಆಗಿ ಎಂದು ನಿಮ್ಮ ಸೂಪರ್‌ ಬಾಸ್‌‌‌ಗೆ ಕೂಡಾ ಹೇಳಿ” ಎಂದು ಪರೋಕ್ಷವಾಗಿ ಪ್ರಧಾನಿ ಮೋದಿಯನ್ನು ವ್ಯಂಗ್ಯವಾಡಿದ್ದಾರೆ.

ಇದನ್ನೂ ಓದಿ: ದೆಹಲಿಯಲ್ಲಿ ಆಫರೇಷನ್‌ ಕಮಲ ವಿಫಲ’

ಮಹಾತ್ಮ ಗಾಂಧಿ ಮತ್ತು ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮ ದಿನಾಚರಣೆಯ ಸ್ಮರಣಾರ್ಥ ಮುಖ್ಯಮಂತ್ರಿ ಮತ್ತು ಅವರ ಸಚಿವ ಸಹೋದ್ಯೋಗಿಗಳು ರಾಜ್ ಘಾಟ್ ಮತ್ತು ವಿಜಯ್ ಘಾಟ್‌ನಲ್ಲಿ ಕಾರ್ಯಕ್ರಮಗಳಿಗೆ ಹಾಜರಾಗದೆ ‘ಅತ್ಯಂತ ನಿರ್ಲಕ್ಷ್ಯ’ ತೋರಿಸಿದ್ದಾರೆ ಎಂದು ಲೆಫ್ಟಿನೆಂಟ್‌ ಗವರ್ನರ್‌‌ ಸಕ್ಸೇನಾ ಪತ್ರದಲ್ಲಿ ಆರೋಪಿಸಿದ ಕೆಲವೇ ದಿನಗಳಲ್ಲಿ ಕೇಜ್ರಿವಾಲ್ ಈ ಹೇಳಿಕೆ ನೀಡಿದ್ದಾರೆ.

ಸಕ್ಸೇನಾ ಅವರು ಮುಖ್ಯಮಂತ್ರಿ ಮತ್ತು ಅವರ ಸಹೋದ್ಯೋಗಿಗಳ ಅನುಪಸ್ಥಿತಿಯು ‘ಸ್ವೀಕಾರಾರ್ಹವಲ್ಲ’, ಅದು ಭಯಾನಕ ಕೃತ್ಯ ಎಂದು ಹೇಳಿದ್ದರು. ಮೂಲಸೌಕರ್ಯ ಯೋಜನೆಗಳಲ್ಲಿನ ವಿಳಂಬವನ್ನು ಉಲ್ಲೇಖಿಸಿ, ಮರಗಳನ್ನು ಕಡಿಯಲು ಅನುಮತಿಯನ್ನು ತ್ವರಿತಗೊಳಿಸುವಂತೆ ಕಳೆದ ವಾರ ಸಕ್ಸೇನಾ ಕೇಜ್ರಿವಾಲ್‌ಗೆ ಪತ್ರ ಬರೆದಿದ್ದರು.

“ನನ್ನ ಹೆಂಡತಿ ಕೂಡ ನನ್ನನ್ನು ಲೆಫ್ಟಿನೆಂಟ್‌ ಗವರ್ನರ್‌‌ ಸಾಹಿಬ್‌ನಷ್ಟು ಬೈಯುವುದಿಲ್ಲ. ಕಳೆದ ಆರು ತಿಂಗಳಲ್ಲಿ ಲೆಫ್ಟಿನೆಂಟ್‌ ಗವರ್ನರ್‌‌ ಸಾಹಿಬ್ ಬರೆದಷ್ಟು ಪ್ರೇಮ ಪತ್ರಗಳನ್ನು ನನ್ನ ಹೆಂಡತಿ ಇಡೀ ಜೀವನದಲ್ಲಿ ನನಗೆ ಬರೆದಿಲ್ಲ” ಎಂದು ಅವರು ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.

ಮೇ ತಿಂಗಳಲ್ಲಿ ದೆಹಲಿಯ ಲೆಫ್ಟಿನೆಂಟ್ ಗವರ್ನರ್ ಆಗಿ ಸಕ್ಸೇನಾ ಅಧಿಕಾರ ವಹಿಸಿಕೊಂಡ ನಂತರ, ದೆಹಲಿಯ ಅಬಕಾರಿ ನೀತಿ(ಈಗ ಹಿಂಪಡೆಯಲಾಗಿದೆ), ತರಗತಿ ಕೊಠಡಿಗಳು ಮತ್ತು ಆಸ್ಪತ್ರೆಗಳ ನಿರ್ಮಾಣ ಸೇರಿದಂತೆ ಕೇಜ್ರಿವಾಲ್ ಸರ್ಕಾರದ ಹಲವಾರು ಉಪಕ್ರಮಗಳ ಬಗ್ಗೆ ಅವರು ತನಿಖೆಗೆ ಆದೇಶಿಸಿದ್ದಾರೆ. ಇತ್ತೀಚೆಗೆ ದೆಹಲಿಯ ವಿದ್ಯುತ್ ಸಬ್ಸಿಡಿ ಯೋಜನೆಯ ತನಿಖೆಗೆ ಕೂಡಾ ಆದೇಶಿಸಿದ್ದಾರೆ.

ಇದನ್ನೂ ಓದಿ: ಬಿಜೆಪಿ ‘ಸರಕಾರಗಳ ಸರಣಿ ಕೊಲೆಗಾರ’: ಕೇಜ್ರಿವಾಲ್

ಲೆಫ್ಟಿನೆಂಟ್ ಗವರ್ನರ್ ಅವರ ಈ ಕ್ರಮಗಳು ರಾಜಕೀಯ ಪ್ರೇರಿತವಾಗಿದ್ದು, ಅವರು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಆದೇಶದಂತೆ ಕೆಲಸ ಮಾಡುತ್ತಿದ್ದಾರೆ ಎಂದು ಆಮ್‌ ಆದ್ಮಿ ಪಾರ್ಟಿ ಆರೋಪಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...