HomeಮುಖಪುಟCAA ವಿರುದ್ಧ ಮಹಿಳೆಯರ ಪ್ರತಿಭಟನೆ ತಡೆಯಲು ಊಟ ಮತ್ತು ಹೊದಿಕೆಗಳನ್ನು ಹೊತ್ತೊಯ್ದ ಯುಪಿ ಪೊಲೀಸರು..! ವಿಡಿಯೋ...

CAA ವಿರುದ್ಧ ಮಹಿಳೆಯರ ಪ್ರತಿಭಟನೆ ತಡೆಯಲು ಊಟ ಮತ್ತು ಹೊದಿಕೆಗಳನ್ನು ಹೊತ್ತೊಯ್ದ ಯುಪಿ ಪೊಲೀಸರು..! ವಿಡಿಯೋ ನೋಡಿ

- Advertisement -
- Advertisement -

ಲಕ್ನೋದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ, ಎನ್‌ಆರ್‌ಸಿ ವಿರುದ್ಧ ಮಹಿಳೆಯರು ಪ್ರತಿಭಟನೆ ನಡೆಸುತ್ತಿದ್ದ ವೇಳೆ ಪ್ರತಿಭಟನಾಕಾರರ ಕಂಬಳಿ ಮತ್ತು ಆಹಾರವನ್ನು ಪೊಲೀಸರು ತೆಗೆದುಕೊಂಡು ಹೋಗಿದ್ದಾರೆ ಎಂದು ಮಹಿಳೆಯರು ಆರೋಪಿಸಿದ್ದಾರೆ. ಆರೋಪಗಳನ್ನು ತಳ್ಳಿಹಾಕಿದ ಲಕ್ನೋ ಪೊಲೀಸರು ವದಂತಿಗಳನ್ನು ಹರಡಬೇಡಿ, ಕಾನೂನು ಪ್ರಕಾರವೇ ಕಂಬಳಿಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ.

ಮೊಬೈಲ್ ಫೋನ್‌ಗಳಲ್ಲಿ ಸೆರೆಹಿಡಿಯಲಾದ ದೃಶ್ಯಗಳಲ್ಲಿ, ಪೊಲೀಸರು ಶನಿವಾರ ಸಂಜೆ ಪ್ರತಿಭಟನೆಯ ಸ್ಥಳದಲ್ಲಿ ಗೊಂದಲ ಎಬ್ಬಿಸಿ ಪ್ರತಿಭಟನಾ ಸ್ಥಳದಿಂದ ಆಹಾರ ಪ್ಯಾಕೆಟ್‌ಗಳನ್ನು ಮತ್ತು ಕಂಬಳಿಗಳನ್ನು ತೆಗೆದುಕೊಂಡು ಹೋಗುವುದನ್ನು ಕಾಣಬಹುದು. ಆಶ್ಚರ್‍ಯವೆಂದರೆ ಕೆಲ ಪೊಲೀಸರು ತಮ್ಮ ಗುರುತು ಸಿಗದಂತೆ ಹೆಲ್ಮೆಟ್ ಧರಿಸಿದ್ದು, ರಾತ್ರಿ ಉಳಿಯಲು ತಂದಿದ್ದ ಚಾಪೆ, ಹೊದಿಗೆ, ಬಟ್ಟೆಯ ಪೆಟ್ಟಿಗೆ, ಊಟ ಎಲ್ಲವನ್ನು ಹೊತ್ತೊಯ್ದಿದ್ದಾರೆ.

ಸುಮಾರು 50 ಮಹಿಳೆಯರು ಶುಕ್ರವಾರ ಧರಣಿ ಪ್ರದರ್ಶನವನ್ನು ಪ್ರಾರಂಭಿಸಿದರು. ಲಕ್ನೋದ ಪ್ರಸಿದ್ದ ಗಡಿಯಾರ ಗೋಪುರದ ಮೆಟ್ಟಿಲುಗಳ ಮೇಲೆ ಕುಳಿತು ಅವರು ತಮ್ಮ ಪ್ರತಿಭಟನೆ ಅನಿರ್ದಿಷ್ಟ ಮತ್ತು ಕಾನೂನು ರದ್ದುಗೊಳ್ಳುವವರೆಗೂ ಮುಂದುವರಿಯುತ್ತದೆ ಎಂದು ಘೋಷಿಸಿದ್ದರು. ತದನಂತರ ಶನಿವಾರ ಪ್ರತಿಭಟನೆಗೆ ಮಹಿಳೆಯರು ಮತ್ತು ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದರಿಂದ ಶನಿವಾರ ರಾತ್ರಿ ಜನಸಂದಣಿ ಹೆಚ್ಚಾಯಿತು. ಆಗ ಪ್ರತಿಭಟನೆಯನ್ನು ನಿಲ್ಲಿಸಲು ಪೊಲೀಸರು ಈ ರೀತಿ ನಡೆದುಕೊಂಡಿದ್ದಾರೆ ಎಂದು ಮಹಿಳೆಯರು ಆರೋಪಿಸಿದ್ದಾರೆ.

ಮಹಿಳಾ ಪ್ರತಿಭಟನಾಕಾರರು ಕೆಲವು ಪೊಲೀಸರ ಹಿಂದೆ ಓಡುತ್ತಾ, “ನೀವು ಕಂಬಳಿಗಳನ್ನು ಏಕೆ ತೆಗೆದುಕೊಳ್ಳುತ್ತಿದ್ದೀರಿ? ಎಂದು ಕೂಗಿದ್ದಾರೆ. ಆದರೆ ಪೊಲೀಸರು ಯಾವುದೇ ಉತ್ತರ ನೀಡಿಲ್ಲ.

ಮಹಿಳೆಯರು ಮತ್ತು ಮಕ್ಕಳಿಗೆ ಆಹಾರ ಕೊಡಲು ನಾನು ಅಲ್ಲಿಗೆ ಹೋದಾಗ ಕೆಲವು ಪೊಲೀಸರು ನಮ್ಮನ್ನು ತಡೆಯಲು ಪ್ರಯತ್ನಿಸಿದರು. ಆದರೆ ಒಂದಿಬ್ಬರು ನನ್ನನ್ನು ಒಳಗೆ ಬಿಟ್ಟರು. ಹೋರಾಟನಿರತ ಜನರಿಗೆ ಸಹಾಯ ಮಾಡುವುದು ಮೂಲ ಮಾನವೀಯತೆ. ಆದ್ದರಿಂದ ನಾವು ಇಲ್ಲಿದ್ದೇವೆ ಎಂದು ಸಿಖ್ ವ್ಯಕ್ತಿಯೊಬ್ಬರು ಪ್ರತಿಕ್ರಿಯಿಸಿದ್ದಾರೆ.

“ಲಖನೌದಲ್ಲಿನ ಗಡಿಯಾರ ಗೋಪುರದಲ್ಲಿ ಅಕ್ರಮ ಪ್ರತಿಭಟನೆಯ ಸಮಯದಲ್ಲಿ ಕೆಲವರು ಟೆಂಟ್ ಹಾಕಲು ಪ್ರಯತ್ನಿಸಿದರು ಮತ್ತು ಅವರಿಗೆ ಅನುಮತಿ ನಿರಾಕರಿಸಲಾಯಿತು. ಕೆಲವು ಗುಂಪುಗಳು ಉದ್ಯಾನದಲ್ಲಿ ಕಂಬಳಿ ವಿತರಿಸುತ್ತಿದ್ದವು ಆದರೆ ಪ್ರತಿಭಟನೆಯ ಭಾಗವಲ್ಲದ ಅನೇಕ ಜನರು ಜನರು ಸಹ ಕಂಬಳಿಗಳನ್ನು ತೆಗೆದುಕೊಳ್ಳುತ್ತಿದ್ದರು. ಹಾಗಾಗಿ ನಾವು ಅಲ್ಲಿನ ಜನಸಮೂಹವನ್ನು ಚದುರಿಸಬೇಕಾಗಿತ್ತು. ಸರಿಯಾದ ಪ್ರಕ್ರಿಯೆಯ ನಂತರ ಕಂಬಳಿಗಳನ್ನು ವಶಪಡಿಸಿಕೊಳ್ಳಲಾಗಿದೆ. ದಯವಿಟ್ಟು ವದಂತಿಗಳನ್ನು ಹರಡಬೇಡಿ” ಎಂದು ಲಕ್ನೋ ಪೊಲೀಸರು ಇಂದು ಹೇಳಿಕೆ ನೀಡಿದ್ದಾರೆ.

ಲಕ್ನೋ ಪೊಲೀಸರ ತೊಂದರೆಯ,  ನಂತರವೂ ಗಡಿಯಾರ ಗೋಪುರದಲ್ಲಿ ಶನಿವಾರ ರಾತ್ರಿ ಅವ್ಯವಸ್ಥೆಯ ಹೊರತಾಗಿಯೂ ಧರಣಿ ಇಂದು ಬೆಳಿಗ್ಗೆ ಮುಂದುವರೆಯಿತು ಮತ್ತು ಹೆಚ್ಚಿನ ಮಹಿಳೆಯರು ಬೆಳಿಗ್ಗೆ 4 ಗಂಟೆಗೆ ಘೋಷಣೆಗಳನ್ನು ಕೂಗುತ್ತಿರುವುದು ಕಂಡುಬಂದಿದೆ. ಇಂದು ಕೂಡ ಹೋರಾಟ ಮುಂದುವರೆಯುತ್ತಿದೆ.

ರಾಜ್ಯ ರಾಜಧಾನಿಯಲ್ಲಿ ಪೌರತ್ವ ಕಾನೂನಿನ ಬಗ್ಗೆ ಘರ್ಷಣೆಗಳು ಸಂಭವಿಸಿ ಹಲವರು ಸಾವನ್ನಪ್ಪಿದ ನಂತರವೂ ಹೊಸ ಪ್ರತಿಭಟನೆಯ ಅಲೆಗಳು ಏಳುತ್ತಿವೆ. ಕಳೆದ ಒಂದು ತಿಂಗಳಲ್ಲಿ ಪೌರತ್ವ ಕಾನೂನಿನ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಉತ್ತರ ಪ್ರದೇಶದ ವಿವಿಧ ಭಾಗಗಳಲ್ಲಿ ಇಪ್ಪತ್ತೊಂದು ಜನರು ಸಾವನ್ನಪ್ಪಿದ್ದು ಇದು ದೇಶದಲ್ಲಿಯೇ ಅತಿ ಹೆಚ್ಚಾಗಿದೆ.

ಈ ನಡುವೆ ಗಣರಾಜ್ಯೋತ್ಸವಕ್ಕೂ ಮುನ್ನ ಲಕ್ನೋದಲ್ಲಿ ದೊಡ್ಡ ಪ್ರತಿಭಟನೆಗಳನ್ನು ನಿಷೇಧಿಸಲಾಗಿದೆ ಎಂದು ನಗರ ಪೊಲೀಸರು ಶನಿವಾರ ಟ್ವೀಟ್ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...