HomeಮುಖಪುಟCAA ವಿರುದ್ಧ ಮಹಿಳೆಯರ ಪ್ರತಿಭಟನೆ ತಡೆಯಲು ಊಟ ಮತ್ತು ಹೊದಿಕೆಗಳನ್ನು ಹೊತ್ತೊಯ್ದ ಯುಪಿ ಪೊಲೀಸರು..! ವಿಡಿಯೋ...

CAA ವಿರುದ್ಧ ಮಹಿಳೆಯರ ಪ್ರತಿಭಟನೆ ತಡೆಯಲು ಊಟ ಮತ್ತು ಹೊದಿಕೆಗಳನ್ನು ಹೊತ್ತೊಯ್ದ ಯುಪಿ ಪೊಲೀಸರು..! ವಿಡಿಯೋ ನೋಡಿ

- Advertisement -
- Advertisement -

ಲಕ್ನೋದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ, ಎನ್‌ಆರ್‌ಸಿ ವಿರುದ್ಧ ಮಹಿಳೆಯರು ಪ್ರತಿಭಟನೆ ನಡೆಸುತ್ತಿದ್ದ ವೇಳೆ ಪ್ರತಿಭಟನಾಕಾರರ ಕಂಬಳಿ ಮತ್ತು ಆಹಾರವನ್ನು ಪೊಲೀಸರು ತೆಗೆದುಕೊಂಡು ಹೋಗಿದ್ದಾರೆ ಎಂದು ಮಹಿಳೆಯರು ಆರೋಪಿಸಿದ್ದಾರೆ. ಆರೋಪಗಳನ್ನು ತಳ್ಳಿಹಾಕಿದ ಲಕ್ನೋ ಪೊಲೀಸರು ವದಂತಿಗಳನ್ನು ಹರಡಬೇಡಿ, ಕಾನೂನು ಪ್ರಕಾರವೇ ಕಂಬಳಿಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ.

ಮೊಬೈಲ್ ಫೋನ್‌ಗಳಲ್ಲಿ ಸೆರೆಹಿಡಿಯಲಾದ ದೃಶ್ಯಗಳಲ್ಲಿ, ಪೊಲೀಸರು ಶನಿವಾರ ಸಂಜೆ ಪ್ರತಿಭಟನೆಯ ಸ್ಥಳದಲ್ಲಿ ಗೊಂದಲ ಎಬ್ಬಿಸಿ ಪ್ರತಿಭಟನಾ ಸ್ಥಳದಿಂದ ಆಹಾರ ಪ್ಯಾಕೆಟ್‌ಗಳನ್ನು ಮತ್ತು ಕಂಬಳಿಗಳನ್ನು ತೆಗೆದುಕೊಂಡು ಹೋಗುವುದನ್ನು ಕಾಣಬಹುದು. ಆಶ್ಚರ್‍ಯವೆಂದರೆ ಕೆಲ ಪೊಲೀಸರು ತಮ್ಮ ಗುರುತು ಸಿಗದಂತೆ ಹೆಲ್ಮೆಟ್ ಧರಿಸಿದ್ದು, ರಾತ್ರಿ ಉಳಿಯಲು ತಂದಿದ್ದ ಚಾಪೆ, ಹೊದಿಗೆ, ಬಟ್ಟೆಯ ಪೆಟ್ಟಿಗೆ, ಊಟ ಎಲ್ಲವನ್ನು ಹೊತ್ತೊಯ್ದಿದ್ದಾರೆ.

ಸುಮಾರು 50 ಮಹಿಳೆಯರು ಶುಕ್ರವಾರ ಧರಣಿ ಪ್ರದರ್ಶನವನ್ನು ಪ್ರಾರಂಭಿಸಿದರು. ಲಕ್ನೋದ ಪ್ರಸಿದ್ದ ಗಡಿಯಾರ ಗೋಪುರದ ಮೆಟ್ಟಿಲುಗಳ ಮೇಲೆ ಕುಳಿತು ಅವರು ತಮ್ಮ ಪ್ರತಿಭಟನೆ ಅನಿರ್ದಿಷ್ಟ ಮತ್ತು ಕಾನೂನು ರದ್ದುಗೊಳ್ಳುವವರೆಗೂ ಮುಂದುವರಿಯುತ್ತದೆ ಎಂದು ಘೋಷಿಸಿದ್ದರು. ತದನಂತರ ಶನಿವಾರ ಪ್ರತಿಭಟನೆಗೆ ಮಹಿಳೆಯರು ಮತ್ತು ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದರಿಂದ ಶನಿವಾರ ರಾತ್ರಿ ಜನಸಂದಣಿ ಹೆಚ್ಚಾಯಿತು. ಆಗ ಪ್ರತಿಭಟನೆಯನ್ನು ನಿಲ್ಲಿಸಲು ಪೊಲೀಸರು ಈ ರೀತಿ ನಡೆದುಕೊಂಡಿದ್ದಾರೆ ಎಂದು ಮಹಿಳೆಯರು ಆರೋಪಿಸಿದ್ದಾರೆ.

ಮಹಿಳಾ ಪ್ರತಿಭಟನಾಕಾರರು ಕೆಲವು ಪೊಲೀಸರ ಹಿಂದೆ ಓಡುತ್ತಾ, “ನೀವು ಕಂಬಳಿಗಳನ್ನು ಏಕೆ ತೆಗೆದುಕೊಳ್ಳುತ್ತಿದ್ದೀರಿ? ಎಂದು ಕೂಗಿದ್ದಾರೆ. ಆದರೆ ಪೊಲೀಸರು ಯಾವುದೇ ಉತ್ತರ ನೀಡಿಲ್ಲ.

ಮಹಿಳೆಯರು ಮತ್ತು ಮಕ್ಕಳಿಗೆ ಆಹಾರ ಕೊಡಲು ನಾನು ಅಲ್ಲಿಗೆ ಹೋದಾಗ ಕೆಲವು ಪೊಲೀಸರು ನಮ್ಮನ್ನು ತಡೆಯಲು ಪ್ರಯತ್ನಿಸಿದರು. ಆದರೆ ಒಂದಿಬ್ಬರು ನನ್ನನ್ನು ಒಳಗೆ ಬಿಟ್ಟರು. ಹೋರಾಟನಿರತ ಜನರಿಗೆ ಸಹಾಯ ಮಾಡುವುದು ಮೂಲ ಮಾನವೀಯತೆ. ಆದ್ದರಿಂದ ನಾವು ಇಲ್ಲಿದ್ದೇವೆ ಎಂದು ಸಿಖ್ ವ್ಯಕ್ತಿಯೊಬ್ಬರು ಪ್ರತಿಕ್ರಿಯಿಸಿದ್ದಾರೆ.

“ಲಖನೌದಲ್ಲಿನ ಗಡಿಯಾರ ಗೋಪುರದಲ್ಲಿ ಅಕ್ರಮ ಪ್ರತಿಭಟನೆಯ ಸಮಯದಲ್ಲಿ ಕೆಲವರು ಟೆಂಟ್ ಹಾಕಲು ಪ್ರಯತ್ನಿಸಿದರು ಮತ್ತು ಅವರಿಗೆ ಅನುಮತಿ ನಿರಾಕರಿಸಲಾಯಿತು. ಕೆಲವು ಗುಂಪುಗಳು ಉದ್ಯಾನದಲ್ಲಿ ಕಂಬಳಿ ವಿತರಿಸುತ್ತಿದ್ದವು ಆದರೆ ಪ್ರತಿಭಟನೆಯ ಭಾಗವಲ್ಲದ ಅನೇಕ ಜನರು ಜನರು ಸಹ ಕಂಬಳಿಗಳನ್ನು ತೆಗೆದುಕೊಳ್ಳುತ್ತಿದ್ದರು. ಹಾಗಾಗಿ ನಾವು ಅಲ್ಲಿನ ಜನಸಮೂಹವನ್ನು ಚದುರಿಸಬೇಕಾಗಿತ್ತು. ಸರಿಯಾದ ಪ್ರಕ್ರಿಯೆಯ ನಂತರ ಕಂಬಳಿಗಳನ್ನು ವಶಪಡಿಸಿಕೊಳ್ಳಲಾಗಿದೆ. ದಯವಿಟ್ಟು ವದಂತಿಗಳನ್ನು ಹರಡಬೇಡಿ” ಎಂದು ಲಕ್ನೋ ಪೊಲೀಸರು ಇಂದು ಹೇಳಿಕೆ ನೀಡಿದ್ದಾರೆ.

ಲಕ್ನೋ ಪೊಲೀಸರ ತೊಂದರೆಯ,  ನಂತರವೂ ಗಡಿಯಾರ ಗೋಪುರದಲ್ಲಿ ಶನಿವಾರ ರಾತ್ರಿ ಅವ್ಯವಸ್ಥೆಯ ಹೊರತಾಗಿಯೂ ಧರಣಿ ಇಂದು ಬೆಳಿಗ್ಗೆ ಮುಂದುವರೆಯಿತು ಮತ್ತು ಹೆಚ್ಚಿನ ಮಹಿಳೆಯರು ಬೆಳಿಗ್ಗೆ 4 ಗಂಟೆಗೆ ಘೋಷಣೆಗಳನ್ನು ಕೂಗುತ್ತಿರುವುದು ಕಂಡುಬಂದಿದೆ. ಇಂದು ಕೂಡ ಹೋರಾಟ ಮುಂದುವರೆಯುತ್ತಿದೆ.

ರಾಜ್ಯ ರಾಜಧಾನಿಯಲ್ಲಿ ಪೌರತ್ವ ಕಾನೂನಿನ ಬಗ್ಗೆ ಘರ್ಷಣೆಗಳು ಸಂಭವಿಸಿ ಹಲವರು ಸಾವನ್ನಪ್ಪಿದ ನಂತರವೂ ಹೊಸ ಪ್ರತಿಭಟನೆಯ ಅಲೆಗಳು ಏಳುತ್ತಿವೆ. ಕಳೆದ ಒಂದು ತಿಂಗಳಲ್ಲಿ ಪೌರತ್ವ ಕಾನೂನಿನ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಉತ್ತರ ಪ್ರದೇಶದ ವಿವಿಧ ಭಾಗಗಳಲ್ಲಿ ಇಪ್ಪತ್ತೊಂದು ಜನರು ಸಾವನ್ನಪ್ಪಿದ್ದು ಇದು ದೇಶದಲ್ಲಿಯೇ ಅತಿ ಹೆಚ್ಚಾಗಿದೆ.

ಈ ನಡುವೆ ಗಣರಾಜ್ಯೋತ್ಸವಕ್ಕೂ ಮುನ್ನ ಲಕ್ನೋದಲ್ಲಿ ದೊಡ್ಡ ಪ್ರತಿಭಟನೆಗಳನ್ನು ನಿಷೇಧಿಸಲಾಗಿದೆ ಎಂದು ನಗರ ಪೊಲೀಸರು ಶನಿವಾರ ಟ್ವೀಟ್ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...