HomeಮುಖಪುಟCAA ವಿರುದ್ಧ ಮಹಿಳೆಯರ ಪ್ರತಿಭಟನೆ ತಡೆಯಲು ಊಟ ಮತ್ತು ಹೊದಿಕೆಗಳನ್ನು ಹೊತ್ತೊಯ್ದ ಯುಪಿ ಪೊಲೀಸರು..! ವಿಡಿಯೋ...

CAA ವಿರುದ್ಧ ಮಹಿಳೆಯರ ಪ್ರತಿಭಟನೆ ತಡೆಯಲು ಊಟ ಮತ್ತು ಹೊದಿಕೆಗಳನ್ನು ಹೊತ್ತೊಯ್ದ ಯುಪಿ ಪೊಲೀಸರು..! ವಿಡಿಯೋ ನೋಡಿ

- Advertisement -
- Advertisement -

ಲಕ್ನೋದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ, ಎನ್‌ಆರ್‌ಸಿ ವಿರುದ್ಧ ಮಹಿಳೆಯರು ಪ್ರತಿಭಟನೆ ನಡೆಸುತ್ತಿದ್ದ ವೇಳೆ ಪ್ರತಿಭಟನಾಕಾರರ ಕಂಬಳಿ ಮತ್ತು ಆಹಾರವನ್ನು ಪೊಲೀಸರು ತೆಗೆದುಕೊಂಡು ಹೋಗಿದ್ದಾರೆ ಎಂದು ಮಹಿಳೆಯರು ಆರೋಪಿಸಿದ್ದಾರೆ. ಆರೋಪಗಳನ್ನು ತಳ್ಳಿಹಾಕಿದ ಲಕ್ನೋ ಪೊಲೀಸರು ವದಂತಿಗಳನ್ನು ಹರಡಬೇಡಿ, ಕಾನೂನು ಪ್ರಕಾರವೇ ಕಂಬಳಿಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ.

ಮೊಬೈಲ್ ಫೋನ್‌ಗಳಲ್ಲಿ ಸೆರೆಹಿಡಿಯಲಾದ ದೃಶ್ಯಗಳಲ್ಲಿ, ಪೊಲೀಸರು ಶನಿವಾರ ಸಂಜೆ ಪ್ರತಿಭಟನೆಯ ಸ್ಥಳದಲ್ಲಿ ಗೊಂದಲ ಎಬ್ಬಿಸಿ ಪ್ರತಿಭಟನಾ ಸ್ಥಳದಿಂದ ಆಹಾರ ಪ್ಯಾಕೆಟ್‌ಗಳನ್ನು ಮತ್ತು ಕಂಬಳಿಗಳನ್ನು ತೆಗೆದುಕೊಂಡು ಹೋಗುವುದನ್ನು ಕಾಣಬಹುದು. ಆಶ್ಚರ್‍ಯವೆಂದರೆ ಕೆಲ ಪೊಲೀಸರು ತಮ್ಮ ಗುರುತು ಸಿಗದಂತೆ ಹೆಲ್ಮೆಟ್ ಧರಿಸಿದ್ದು, ರಾತ್ರಿ ಉಳಿಯಲು ತಂದಿದ್ದ ಚಾಪೆ, ಹೊದಿಗೆ, ಬಟ್ಟೆಯ ಪೆಟ್ಟಿಗೆ, ಊಟ ಎಲ್ಲವನ್ನು ಹೊತ್ತೊಯ್ದಿದ್ದಾರೆ.

ಸುಮಾರು 50 ಮಹಿಳೆಯರು ಶುಕ್ರವಾರ ಧರಣಿ ಪ್ರದರ್ಶನವನ್ನು ಪ್ರಾರಂಭಿಸಿದರು. ಲಕ್ನೋದ ಪ್ರಸಿದ್ದ ಗಡಿಯಾರ ಗೋಪುರದ ಮೆಟ್ಟಿಲುಗಳ ಮೇಲೆ ಕುಳಿತು ಅವರು ತಮ್ಮ ಪ್ರತಿಭಟನೆ ಅನಿರ್ದಿಷ್ಟ ಮತ್ತು ಕಾನೂನು ರದ್ದುಗೊಳ್ಳುವವರೆಗೂ ಮುಂದುವರಿಯುತ್ತದೆ ಎಂದು ಘೋಷಿಸಿದ್ದರು. ತದನಂತರ ಶನಿವಾರ ಪ್ರತಿಭಟನೆಗೆ ಮಹಿಳೆಯರು ಮತ್ತು ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದರಿಂದ ಶನಿವಾರ ರಾತ್ರಿ ಜನಸಂದಣಿ ಹೆಚ್ಚಾಯಿತು. ಆಗ ಪ್ರತಿಭಟನೆಯನ್ನು ನಿಲ್ಲಿಸಲು ಪೊಲೀಸರು ಈ ರೀತಿ ನಡೆದುಕೊಂಡಿದ್ದಾರೆ ಎಂದು ಮಹಿಳೆಯರು ಆರೋಪಿಸಿದ್ದಾರೆ.

ಮಹಿಳಾ ಪ್ರತಿಭಟನಾಕಾರರು ಕೆಲವು ಪೊಲೀಸರ ಹಿಂದೆ ಓಡುತ್ತಾ, “ನೀವು ಕಂಬಳಿಗಳನ್ನು ಏಕೆ ತೆಗೆದುಕೊಳ್ಳುತ್ತಿದ್ದೀರಿ? ಎಂದು ಕೂಗಿದ್ದಾರೆ. ಆದರೆ ಪೊಲೀಸರು ಯಾವುದೇ ಉತ್ತರ ನೀಡಿಲ್ಲ.

ಮಹಿಳೆಯರು ಮತ್ತು ಮಕ್ಕಳಿಗೆ ಆಹಾರ ಕೊಡಲು ನಾನು ಅಲ್ಲಿಗೆ ಹೋದಾಗ ಕೆಲವು ಪೊಲೀಸರು ನಮ್ಮನ್ನು ತಡೆಯಲು ಪ್ರಯತ್ನಿಸಿದರು. ಆದರೆ ಒಂದಿಬ್ಬರು ನನ್ನನ್ನು ಒಳಗೆ ಬಿಟ್ಟರು. ಹೋರಾಟನಿರತ ಜನರಿಗೆ ಸಹಾಯ ಮಾಡುವುದು ಮೂಲ ಮಾನವೀಯತೆ. ಆದ್ದರಿಂದ ನಾವು ಇಲ್ಲಿದ್ದೇವೆ ಎಂದು ಸಿಖ್ ವ್ಯಕ್ತಿಯೊಬ್ಬರು ಪ್ರತಿಕ್ರಿಯಿಸಿದ್ದಾರೆ.

“ಲಖನೌದಲ್ಲಿನ ಗಡಿಯಾರ ಗೋಪುರದಲ್ಲಿ ಅಕ್ರಮ ಪ್ರತಿಭಟನೆಯ ಸಮಯದಲ್ಲಿ ಕೆಲವರು ಟೆಂಟ್ ಹಾಕಲು ಪ್ರಯತ್ನಿಸಿದರು ಮತ್ತು ಅವರಿಗೆ ಅನುಮತಿ ನಿರಾಕರಿಸಲಾಯಿತು. ಕೆಲವು ಗುಂಪುಗಳು ಉದ್ಯಾನದಲ್ಲಿ ಕಂಬಳಿ ವಿತರಿಸುತ್ತಿದ್ದವು ಆದರೆ ಪ್ರತಿಭಟನೆಯ ಭಾಗವಲ್ಲದ ಅನೇಕ ಜನರು ಜನರು ಸಹ ಕಂಬಳಿಗಳನ್ನು ತೆಗೆದುಕೊಳ್ಳುತ್ತಿದ್ದರು. ಹಾಗಾಗಿ ನಾವು ಅಲ್ಲಿನ ಜನಸಮೂಹವನ್ನು ಚದುರಿಸಬೇಕಾಗಿತ್ತು. ಸರಿಯಾದ ಪ್ರಕ್ರಿಯೆಯ ನಂತರ ಕಂಬಳಿಗಳನ್ನು ವಶಪಡಿಸಿಕೊಳ್ಳಲಾಗಿದೆ. ದಯವಿಟ್ಟು ವದಂತಿಗಳನ್ನು ಹರಡಬೇಡಿ” ಎಂದು ಲಕ್ನೋ ಪೊಲೀಸರು ಇಂದು ಹೇಳಿಕೆ ನೀಡಿದ್ದಾರೆ.

ಲಕ್ನೋ ಪೊಲೀಸರ ತೊಂದರೆಯ,  ನಂತರವೂ ಗಡಿಯಾರ ಗೋಪುರದಲ್ಲಿ ಶನಿವಾರ ರಾತ್ರಿ ಅವ್ಯವಸ್ಥೆಯ ಹೊರತಾಗಿಯೂ ಧರಣಿ ಇಂದು ಬೆಳಿಗ್ಗೆ ಮುಂದುವರೆಯಿತು ಮತ್ತು ಹೆಚ್ಚಿನ ಮಹಿಳೆಯರು ಬೆಳಿಗ್ಗೆ 4 ಗಂಟೆಗೆ ಘೋಷಣೆಗಳನ್ನು ಕೂಗುತ್ತಿರುವುದು ಕಂಡುಬಂದಿದೆ. ಇಂದು ಕೂಡ ಹೋರಾಟ ಮುಂದುವರೆಯುತ್ತಿದೆ.

ರಾಜ್ಯ ರಾಜಧಾನಿಯಲ್ಲಿ ಪೌರತ್ವ ಕಾನೂನಿನ ಬಗ್ಗೆ ಘರ್ಷಣೆಗಳು ಸಂಭವಿಸಿ ಹಲವರು ಸಾವನ್ನಪ್ಪಿದ ನಂತರವೂ ಹೊಸ ಪ್ರತಿಭಟನೆಯ ಅಲೆಗಳು ಏಳುತ್ತಿವೆ. ಕಳೆದ ಒಂದು ತಿಂಗಳಲ್ಲಿ ಪೌರತ್ವ ಕಾನೂನಿನ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಉತ್ತರ ಪ್ರದೇಶದ ವಿವಿಧ ಭಾಗಗಳಲ್ಲಿ ಇಪ್ಪತ್ತೊಂದು ಜನರು ಸಾವನ್ನಪ್ಪಿದ್ದು ಇದು ದೇಶದಲ್ಲಿಯೇ ಅತಿ ಹೆಚ್ಚಾಗಿದೆ.

ಈ ನಡುವೆ ಗಣರಾಜ್ಯೋತ್ಸವಕ್ಕೂ ಮುನ್ನ ಲಕ್ನೋದಲ್ಲಿ ದೊಡ್ಡ ಪ್ರತಿಭಟನೆಗಳನ್ನು ನಿಷೇಧಿಸಲಾಗಿದೆ ಎಂದು ನಗರ ಪೊಲೀಸರು ಶನಿವಾರ ಟ್ವೀಟ್ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...