HomeಮುಖಪುಟCAA ವಿರುದ್ಧ ಮಹಿಳೆಯರ ಪ್ರತಿಭಟನೆ ತಡೆಯಲು ಊಟ ಮತ್ತು ಹೊದಿಕೆಗಳನ್ನು ಹೊತ್ತೊಯ್ದ ಯುಪಿ ಪೊಲೀಸರು..! ವಿಡಿಯೋ...

CAA ವಿರುದ್ಧ ಮಹಿಳೆಯರ ಪ್ರತಿಭಟನೆ ತಡೆಯಲು ಊಟ ಮತ್ತು ಹೊದಿಕೆಗಳನ್ನು ಹೊತ್ತೊಯ್ದ ಯುಪಿ ಪೊಲೀಸರು..! ವಿಡಿಯೋ ನೋಡಿ

- Advertisement -
- Advertisement -

ಲಕ್ನೋದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ, ಎನ್‌ಆರ್‌ಸಿ ವಿರುದ್ಧ ಮಹಿಳೆಯರು ಪ್ರತಿಭಟನೆ ನಡೆಸುತ್ತಿದ್ದ ವೇಳೆ ಪ್ರತಿಭಟನಾಕಾರರ ಕಂಬಳಿ ಮತ್ತು ಆಹಾರವನ್ನು ಪೊಲೀಸರು ತೆಗೆದುಕೊಂಡು ಹೋಗಿದ್ದಾರೆ ಎಂದು ಮಹಿಳೆಯರು ಆರೋಪಿಸಿದ್ದಾರೆ. ಆರೋಪಗಳನ್ನು ತಳ್ಳಿಹಾಕಿದ ಲಕ್ನೋ ಪೊಲೀಸರು ವದಂತಿಗಳನ್ನು ಹರಡಬೇಡಿ, ಕಾನೂನು ಪ್ರಕಾರವೇ ಕಂಬಳಿಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ.

ಮೊಬೈಲ್ ಫೋನ್‌ಗಳಲ್ಲಿ ಸೆರೆಹಿಡಿಯಲಾದ ದೃಶ್ಯಗಳಲ್ಲಿ, ಪೊಲೀಸರು ಶನಿವಾರ ಸಂಜೆ ಪ್ರತಿಭಟನೆಯ ಸ್ಥಳದಲ್ಲಿ ಗೊಂದಲ ಎಬ್ಬಿಸಿ ಪ್ರತಿಭಟನಾ ಸ್ಥಳದಿಂದ ಆಹಾರ ಪ್ಯಾಕೆಟ್‌ಗಳನ್ನು ಮತ್ತು ಕಂಬಳಿಗಳನ್ನು ತೆಗೆದುಕೊಂಡು ಹೋಗುವುದನ್ನು ಕಾಣಬಹುದು. ಆಶ್ಚರ್‍ಯವೆಂದರೆ ಕೆಲ ಪೊಲೀಸರು ತಮ್ಮ ಗುರುತು ಸಿಗದಂತೆ ಹೆಲ್ಮೆಟ್ ಧರಿಸಿದ್ದು, ರಾತ್ರಿ ಉಳಿಯಲು ತಂದಿದ್ದ ಚಾಪೆ, ಹೊದಿಗೆ, ಬಟ್ಟೆಯ ಪೆಟ್ಟಿಗೆ, ಊಟ ಎಲ್ಲವನ್ನು ಹೊತ್ತೊಯ್ದಿದ್ದಾರೆ.

ಸುಮಾರು 50 ಮಹಿಳೆಯರು ಶುಕ್ರವಾರ ಧರಣಿ ಪ್ರದರ್ಶನವನ್ನು ಪ್ರಾರಂಭಿಸಿದರು. ಲಕ್ನೋದ ಪ್ರಸಿದ್ದ ಗಡಿಯಾರ ಗೋಪುರದ ಮೆಟ್ಟಿಲುಗಳ ಮೇಲೆ ಕುಳಿತು ಅವರು ತಮ್ಮ ಪ್ರತಿಭಟನೆ ಅನಿರ್ದಿಷ್ಟ ಮತ್ತು ಕಾನೂನು ರದ್ದುಗೊಳ್ಳುವವರೆಗೂ ಮುಂದುವರಿಯುತ್ತದೆ ಎಂದು ಘೋಷಿಸಿದ್ದರು. ತದನಂತರ ಶನಿವಾರ ಪ್ರತಿಭಟನೆಗೆ ಮಹಿಳೆಯರು ಮತ್ತು ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದರಿಂದ ಶನಿವಾರ ರಾತ್ರಿ ಜನಸಂದಣಿ ಹೆಚ್ಚಾಯಿತು. ಆಗ ಪ್ರತಿಭಟನೆಯನ್ನು ನಿಲ್ಲಿಸಲು ಪೊಲೀಸರು ಈ ರೀತಿ ನಡೆದುಕೊಂಡಿದ್ದಾರೆ ಎಂದು ಮಹಿಳೆಯರು ಆರೋಪಿಸಿದ್ದಾರೆ.

ಮಹಿಳಾ ಪ್ರತಿಭಟನಾಕಾರರು ಕೆಲವು ಪೊಲೀಸರ ಹಿಂದೆ ಓಡುತ್ತಾ, “ನೀವು ಕಂಬಳಿಗಳನ್ನು ಏಕೆ ತೆಗೆದುಕೊಳ್ಳುತ್ತಿದ್ದೀರಿ? ಎಂದು ಕೂಗಿದ್ದಾರೆ. ಆದರೆ ಪೊಲೀಸರು ಯಾವುದೇ ಉತ್ತರ ನೀಡಿಲ್ಲ.

ಮಹಿಳೆಯರು ಮತ್ತು ಮಕ್ಕಳಿಗೆ ಆಹಾರ ಕೊಡಲು ನಾನು ಅಲ್ಲಿಗೆ ಹೋದಾಗ ಕೆಲವು ಪೊಲೀಸರು ನಮ್ಮನ್ನು ತಡೆಯಲು ಪ್ರಯತ್ನಿಸಿದರು. ಆದರೆ ಒಂದಿಬ್ಬರು ನನ್ನನ್ನು ಒಳಗೆ ಬಿಟ್ಟರು. ಹೋರಾಟನಿರತ ಜನರಿಗೆ ಸಹಾಯ ಮಾಡುವುದು ಮೂಲ ಮಾನವೀಯತೆ. ಆದ್ದರಿಂದ ನಾವು ಇಲ್ಲಿದ್ದೇವೆ ಎಂದು ಸಿಖ್ ವ್ಯಕ್ತಿಯೊಬ್ಬರು ಪ್ರತಿಕ್ರಿಯಿಸಿದ್ದಾರೆ.

“ಲಖನೌದಲ್ಲಿನ ಗಡಿಯಾರ ಗೋಪುರದಲ್ಲಿ ಅಕ್ರಮ ಪ್ರತಿಭಟನೆಯ ಸಮಯದಲ್ಲಿ ಕೆಲವರು ಟೆಂಟ್ ಹಾಕಲು ಪ್ರಯತ್ನಿಸಿದರು ಮತ್ತು ಅವರಿಗೆ ಅನುಮತಿ ನಿರಾಕರಿಸಲಾಯಿತು. ಕೆಲವು ಗುಂಪುಗಳು ಉದ್ಯಾನದಲ್ಲಿ ಕಂಬಳಿ ವಿತರಿಸುತ್ತಿದ್ದವು ಆದರೆ ಪ್ರತಿಭಟನೆಯ ಭಾಗವಲ್ಲದ ಅನೇಕ ಜನರು ಜನರು ಸಹ ಕಂಬಳಿಗಳನ್ನು ತೆಗೆದುಕೊಳ್ಳುತ್ತಿದ್ದರು. ಹಾಗಾಗಿ ನಾವು ಅಲ್ಲಿನ ಜನಸಮೂಹವನ್ನು ಚದುರಿಸಬೇಕಾಗಿತ್ತು. ಸರಿಯಾದ ಪ್ರಕ್ರಿಯೆಯ ನಂತರ ಕಂಬಳಿಗಳನ್ನು ವಶಪಡಿಸಿಕೊಳ್ಳಲಾಗಿದೆ. ದಯವಿಟ್ಟು ವದಂತಿಗಳನ್ನು ಹರಡಬೇಡಿ” ಎಂದು ಲಕ್ನೋ ಪೊಲೀಸರು ಇಂದು ಹೇಳಿಕೆ ನೀಡಿದ್ದಾರೆ.

ಲಕ್ನೋ ಪೊಲೀಸರ ತೊಂದರೆಯ,  ನಂತರವೂ ಗಡಿಯಾರ ಗೋಪುರದಲ್ಲಿ ಶನಿವಾರ ರಾತ್ರಿ ಅವ್ಯವಸ್ಥೆಯ ಹೊರತಾಗಿಯೂ ಧರಣಿ ಇಂದು ಬೆಳಿಗ್ಗೆ ಮುಂದುವರೆಯಿತು ಮತ್ತು ಹೆಚ್ಚಿನ ಮಹಿಳೆಯರು ಬೆಳಿಗ್ಗೆ 4 ಗಂಟೆಗೆ ಘೋಷಣೆಗಳನ್ನು ಕೂಗುತ್ತಿರುವುದು ಕಂಡುಬಂದಿದೆ. ಇಂದು ಕೂಡ ಹೋರಾಟ ಮುಂದುವರೆಯುತ್ತಿದೆ.

ರಾಜ್ಯ ರಾಜಧಾನಿಯಲ್ಲಿ ಪೌರತ್ವ ಕಾನೂನಿನ ಬಗ್ಗೆ ಘರ್ಷಣೆಗಳು ಸಂಭವಿಸಿ ಹಲವರು ಸಾವನ್ನಪ್ಪಿದ ನಂತರವೂ ಹೊಸ ಪ್ರತಿಭಟನೆಯ ಅಲೆಗಳು ಏಳುತ್ತಿವೆ. ಕಳೆದ ಒಂದು ತಿಂಗಳಲ್ಲಿ ಪೌರತ್ವ ಕಾನೂನಿನ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಉತ್ತರ ಪ್ರದೇಶದ ವಿವಿಧ ಭಾಗಗಳಲ್ಲಿ ಇಪ್ಪತ್ತೊಂದು ಜನರು ಸಾವನ್ನಪ್ಪಿದ್ದು ಇದು ದೇಶದಲ್ಲಿಯೇ ಅತಿ ಹೆಚ್ಚಾಗಿದೆ.

ಈ ನಡುವೆ ಗಣರಾಜ್ಯೋತ್ಸವಕ್ಕೂ ಮುನ್ನ ಲಕ್ನೋದಲ್ಲಿ ದೊಡ್ಡ ಪ್ರತಿಭಟನೆಗಳನ್ನು ನಿಷೇಧಿಸಲಾಗಿದೆ ಎಂದು ನಗರ ಪೊಲೀಸರು ಶನಿವಾರ ಟ್ವೀಟ್ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...