HomeಮುಖಪುಟCAA ವಿರುದ್ಧ ಮಹಿಳೆಯರ ಪ್ರತಿಭಟನೆ ತಡೆಯಲು ಊಟ ಮತ್ತು ಹೊದಿಕೆಗಳನ್ನು ಹೊತ್ತೊಯ್ದ ಯುಪಿ ಪೊಲೀಸರು..! ವಿಡಿಯೋ...

CAA ವಿರುದ್ಧ ಮಹಿಳೆಯರ ಪ್ರತಿಭಟನೆ ತಡೆಯಲು ಊಟ ಮತ್ತು ಹೊದಿಕೆಗಳನ್ನು ಹೊತ್ತೊಯ್ದ ಯುಪಿ ಪೊಲೀಸರು..! ವಿಡಿಯೋ ನೋಡಿ

- Advertisement -
- Advertisement -

ಲಕ್ನೋದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ, ಎನ್‌ಆರ್‌ಸಿ ವಿರುದ್ಧ ಮಹಿಳೆಯರು ಪ್ರತಿಭಟನೆ ನಡೆಸುತ್ತಿದ್ದ ವೇಳೆ ಪ್ರತಿಭಟನಾಕಾರರ ಕಂಬಳಿ ಮತ್ತು ಆಹಾರವನ್ನು ಪೊಲೀಸರು ತೆಗೆದುಕೊಂಡು ಹೋಗಿದ್ದಾರೆ ಎಂದು ಮಹಿಳೆಯರು ಆರೋಪಿಸಿದ್ದಾರೆ. ಆರೋಪಗಳನ್ನು ತಳ್ಳಿಹಾಕಿದ ಲಕ್ನೋ ಪೊಲೀಸರು ವದಂತಿಗಳನ್ನು ಹರಡಬೇಡಿ, ಕಾನೂನು ಪ್ರಕಾರವೇ ಕಂಬಳಿಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ.

ಮೊಬೈಲ್ ಫೋನ್‌ಗಳಲ್ಲಿ ಸೆರೆಹಿಡಿಯಲಾದ ದೃಶ್ಯಗಳಲ್ಲಿ, ಪೊಲೀಸರು ಶನಿವಾರ ಸಂಜೆ ಪ್ರತಿಭಟನೆಯ ಸ್ಥಳದಲ್ಲಿ ಗೊಂದಲ ಎಬ್ಬಿಸಿ ಪ್ರತಿಭಟನಾ ಸ್ಥಳದಿಂದ ಆಹಾರ ಪ್ಯಾಕೆಟ್‌ಗಳನ್ನು ಮತ್ತು ಕಂಬಳಿಗಳನ್ನು ತೆಗೆದುಕೊಂಡು ಹೋಗುವುದನ್ನು ಕಾಣಬಹುದು. ಆಶ್ಚರ್‍ಯವೆಂದರೆ ಕೆಲ ಪೊಲೀಸರು ತಮ್ಮ ಗುರುತು ಸಿಗದಂತೆ ಹೆಲ್ಮೆಟ್ ಧರಿಸಿದ್ದು, ರಾತ್ರಿ ಉಳಿಯಲು ತಂದಿದ್ದ ಚಾಪೆ, ಹೊದಿಗೆ, ಬಟ್ಟೆಯ ಪೆಟ್ಟಿಗೆ, ಊಟ ಎಲ್ಲವನ್ನು ಹೊತ್ತೊಯ್ದಿದ್ದಾರೆ.

ಸುಮಾರು 50 ಮಹಿಳೆಯರು ಶುಕ್ರವಾರ ಧರಣಿ ಪ್ರದರ್ಶನವನ್ನು ಪ್ರಾರಂಭಿಸಿದರು. ಲಕ್ನೋದ ಪ್ರಸಿದ್ದ ಗಡಿಯಾರ ಗೋಪುರದ ಮೆಟ್ಟಿಲುಗಳ ಮೇಲೆ ಕುಳಿತು ಅವರು ತಮ್ಮ ಪ್ರತಿಭಟನೆ ಅನಿರ್ದಿಷ್ಟ ಮತ್ತು ಕಾನೂನು ರದ್ದುಗೊಳ್ಳುವವರೆಗೂ ಮುಂದುವರಿಯುತ್ತದೆ ಎಂದು ಘೋಷಿಸಿದ್ದರು. ತದನಂತರ ಶನಿವಾರ ಪ್ರತಿಭಟನೆಗೆ ಮಹಿಳೆಯರು ಮತ್ತು ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದರಿಂದ ಶನಿವಾರ ರಾತ್ರಿ ಜನಸಂದಣಿ ಹೆಚ್ಚಾಯಿತು. ಆಗ ಪ್ರತಿಭಟನೆಯನ್ನು ನಿಲ್ಲಿಸಲು ಪೊಲೀಸರು ಈ ರೀತಿ ನಡೆದುಕೊಂಡಿದ್ದಾರೆ ಎಂದು ಮಹಿಳೆಯರು ಆರೋಪಿಸಿದ್ದಾರೆ.

ಮಹಿಳಾ ಪ್ರತಿಭಟನಾಕಾರರು ಕೆಲವು ಪೊಲೀಸರ ಹಿಂದೆ ಓಡುತ್ತಾ, “ನೀವು ಕಂಬಳಿಗಳನ್ನು ಏಕೆ ತೆಗೆದುಕೊಳ್ಳುತ್ತಿದ್ದೀರಿ? ಎಂದು ಕೂಗಿದ್ದಾರೆ. ಆದರೆ ಪೊಲೀಸರು ಯಾವುದೇ ಉತ್ತರ ನೀಡಿಲ್ಲ.

ಮಹಿಳೆಯರು ಮತ್ತು ಮಕ್ಕಳಿಗೆ ಆಹಾರ ಕೊಡಲು ನಾನು ಅಲ್ಲಿಗೆ ಹೋದಾಗ ಕೆಲವು ಪೊಲೀಸರು ನಮ್ಮನ್ನು ತಡೆಯಲು ಪ್ರಯತ್ನಿಸಿದರು. ಆದರೆ ಒಂದಿಬ್ಬರು ನನ್ನನ್ನು ಒಳಗೆ ಬಿಟ್ಟರು. ಹೋರಾಟನಿರತ ಜನರಿಗೆ ಸಹಾಯ ಮಾಡುವುದು ಮೂಲ ಮಾನವೀಯತೆ. ಆದ್ದರಿಂದ ನಾವು ಇಲ್ಲಿದ್ದೇವೆ ಎಂದು ಸಿಖ್ ವ್ಯಕ್ತಿಯೊಬ್ಬರು ಪ್ರತಿಕ್ರಿಯಿಸಿದ್ದಾರೆ.

“ಲಖನೌದಲ್ಲಿನ ಗಡಿಯಾರ ಗೋಪುರದಲ್ಲಿ ಅಕ್ರಮ ಪ್ರತಿಭಟನೆಯ ಸಮಯದಲ್ಲಿ ಕೆಲವರು ಟೆಂಟ್ ಹಾಕಲು ಪ್ರಯತ್ನಿಸಿದರು ಮತ್ತು ಅವರಿಗೆ ಅನುಮತಿ ನಿರಾಕರಿಸಲಾಯಿತು. ಕೆಲವು ಗುಂಪುಗಳು ಉದ್ಯಾನದಲ್ಲಿ ಕಂಬಳಿ ವಿತರಿಸುತ್ತಿದ್ದವು ಆದರೆ ಪ್ರತಿಭಟನೆಯ ಭಾಗವಲ್ಲದ ಅನೇಕ ಜನರು ಜನರು ಸಹ ಕಂಬಳಿಗಳನ್ನು ತೆಗೆದುಕೊಳ್ಳುತ್ತಿದ್ದರು. ಹಾಗಾಗಿ ನಾವು ಅಲ್ಲಿನ ಜನಸಮೂಹವನ್ನು ಚದುರಿಸಬೇಕಾಗಿತ್ತು. ಸರಿಯಾದ ಪ್ರಕ್ರಿಯೆಯ ನಂತರ ಕಂಬಳಿಗಳನ್ನು ವಶಪಡಿಸಿಕೊಳ್ಳಲಾಗಿದೆ. ದಯವಿಟ್ಟು ವದಂತಿಗಳನ್ನು ಹರಡಬೇಡಿ” ಎಂದು ಲಕ್ನೋ ಪೊಲೀಸರು ಇಂದು ಹೇಳಿಕೆ ನೀಡಿದ್ದಾರೆ.

ಲಕ್ನೋ ಪೊಲೀಸರ ತೊಂದರೆಯ,  ನಂತರವೂ ಗಡಿಯಾರ ಗೋಪುರದಲ್ಲಿ ಶನಿವಾರ ರಾತ್ರಿ ಅವ್ಯವಸ್ಥೆಯ ಹೊರತಾಗಿಯೂ ಧರಣಿ ಇಂದು ಬೆಳಿಗ್ಗೆ ಮುಂದುವರೆಯಿತು ಮತ್ತು ಹೆಚ್ಚಿನ ಮಹಿಳೆಯರು ಬೆಳಿಗ್ಗೆ 4 ಗಂಟೆಗೆ ಘೋಷಣೆಗಳನ್ನು ಕೂಗುತ್ತಿರುವುದು ಕಂಡುಬಂದಿದೆ. ಇಂದು ಕೂಡ ಹೋರಾಟ ಮುಂದುವರೆಯುತ್ತಿದೆ.

ರಾಜ್ಯ ರಾಜಧಾನಿಯಲ್ಲಿ ಪೌರತ್ವ ಕಾನೂನಿನ ಬಗ್ಗೆ ಘರ್ಷಣೆಗಳು ಸಂಭವಿಸಿ ಹಲವರು ಸಾವನ್ನಪ್ಪಿದ ನಂತರವೂ ಹೊಸ ಪ್ರತಿಭಟನೆಯ ಅಲೆಗಳು ಏಳುತ್ತಿವೆ. ಕಳೆದ ಒಂದು ತಿಂಗಳಲ್ಲಿ ಪೌರತ್ವ ಕಾನೂನಿನ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಉತ್ತರ ಪ್ರದೇಶದ ವಿವಿಧ ಭಾಗಗಳಲ್ಲಿ ಇಪ್ಪತ್ತೊಂದು ಜನರು ಸಾವನ್ನಪ್ಪಿದ್ದು ಇದು ದೇಶದಲ್ಲಿಯೇ ಅತಿ ಹೆಚ್ಚಾಗಿದೆ.

ಈ ನಡುವೆ ಗಣರಾಜ್ಯೋತ್ಸವಕ್ಕೂ ಮುನ್ನ ಲಕ್ನೋದಲ್ಲಿ ದೊಡ್ಡ ಪ್ರತಿಭಟನೆಗಳನ್ನು ನಿಷೇಧಿಸಲಾಗಿದೆ ಎಂದು ನಗರ ಪೊಲೀಸರು ಶನಿವಾರ ಟ್ವೀಟ್ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...