HomeಮುಖಪುಟCAA ವಿರುದ್ಧ ಮಹಿಳೆಯರ ಪ್ರತಿಭಟನೆ ತಡೆಯಲು ಊಟ ಮತ್ತು ಹೊದಿಕೆಗಳನ್ನು ಹೊತ್ತೊಯ್ದ ಯುಪಿ ಪೊಲೀಸರು..! ವಿಡಿಯೋ...

CAA ವಿರುದ್ಧ ಮಹಿಳೆಯರ ಪ್ರತಿಭಟನೆ ತಡೆಯಲು ಊಟ ಮತ್ತು ಹೊದಿಕೆಗಳನ್ನು ಹೊತ್ತೊಯ್ದ ಯುಪಿ ಪೊಲೀಸರು..! ವಿಡಿಯೋ ನೋಡಿ

- Advertisement -
- Advertisement -

ಲಕ್ನೋದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ, ಎನ್‌ಆರ್‌ಸಿ ವಿರುದ್ಧ ಮಹಿಳೆಯರು ಪ್ರತಿಭಟನೆ ನಡೆಸುತ್ತಿದ್ದ ವೇಳೆ ಪ್ರತಿಭಟನಾಕಾರರ ಕಂಬಳಿ ಮತ್ತು ಆಹಾರವನ್ನು ಪೊಲೀಸರು ತೆಗೆದುಕೊಂಡು ಹೋಗಿದ್ದಾರೆ ಎಂದು ಮಹಿಳೆಯರು ಆರೋಪಿಸಿದ್ದಾರೆ. ಆರೋಪಗಳನ್ನು ತಳ್ಳಿಹಾಕಿದ ಲಕ್ನೋ ಪೊಲೀಸರು ವದಂತಿಗಳನ್ನು ಹರಡಬೇಡಿ, ಕಾನೂನು ಪ್ರಕಾರವೇ ಕಂಬಳಿಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ.

ಮೊಬೈಲ್ ಫೋನ್‌ಗಳಲ್ಲಿ ಸೆರೆಹಿಡಿಯಲಾದ ದೃಶ್ಯಗಳಲ್ಲಿ, ಪೊಲೀಸರು ಶನಿವಾರ ಸಂಜೆ ಪ್ರತಿಭಟನೆಯ ಸ್ಥಳದಲ್ಲಿ ಗೊಂದಲ ಎಬ್ಬಿಸಿ ಪ್ರತಿಭಟನಾ ಸ್ಥಳದಿಂದ ಆಹಾರ ಪ್ಯಾಕೆಟ್‌ಗಳನ್ನು ಮತ್ತು ಕಂಬಳಿಗಳನ್ನು ತೆಗೆದುಕೊಂಡು ಹೋಗುವುದನ್ನು ಕಾಣಬಹುದು. ಆಶ್ಚರ್‍ಯವೆಂದರೆ ಕೆಲ ಪೊಲೀಸರು ತಮ್ಮ ಗುರುತು ಸಿಗದಂತೆ ಹೆಲ್ಮೆಟ್ ಧರಿಸಿದ್ದು, ರಾತ್ರಿ ಉಳಿಯಲು ತಂದಿದ್ದ ಚಾಪೆ, ಹೊದಿಗೆ, ಬಟ್ಟೆಯ ಪೆಟ್ಟಿಗೆ, ಊಟ ಎಲ್ಲವನ್ನು ಹೊತ್ತೊಯ್ದಿದ್ದಾರೆ.

ಸುಮಾರು 50 ಮಹಿಳೆಯರು ಶುಕ್ರವಾರ ಧರಣಿ ಪ್ರದರ್ಶನವನ್ನು ಪ್ರಾರಂಭಿಸಿದರು. ಲಕ್ನೋದ ಪ್ರಸಿದ್ದ ಗಡಿಯಾರ ಗೋಪುರದ ಮೆಟ್ಟಿಲುಗಳ ಮೇಲೆ ಕುಳಿತು ಅವರು ತಮ್ಮ ಪ್ರತಿಭಟನೆ ಅನಿರ್ದಿಷ್ಟ ಮತ್ತು ಕಾನೂನು ರದ್ದುಗೊಳ್ಳುವವರೆಗೂ ಮುಂದುವರಿಯುತ್ತದೆ ಎಂದು ಘೋಷಿಸಿದ್ದರು. ತದನಂತರ ಶನಿವಾರ ಪ್ರತಿಭಟನೆಗೆ ಮಹಿಳೆಯರು ಮತ್ತು ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದರಿಂದ ಶನಿವಾರ ರಾತ್ರಿ ಜನಸಂದಣಿ ಹೆಚ್ಚಾಯಿತು. ಆಗ ಪ್ರತಿಭಟನೆಯನ್ನು ನಿಲ್ಲಿಸಲು ಪೊಲೀಸರು ಈ ರೀತಿ ನಡೆದುಕೊಂಡಿದ್ದಾರೆ ಎಂದು ಮಹಿಳೆಯರು ಆರೋಪಿಸಿದ್ದಾರೆ.

ಮಹಿಳಾ ಪ್ರತಿಭಟನಾಕಾರರು ಕೆಲವು ಪೊಲೀಸರ ಹಿಂದೆ ಓಡುತ್ತಾ, “ನೀವು ಕಂಬಳಿಗಳನ್ನು ಏಕೆ ತೆಗೆದುಕೊಳ್ಳುತ್ತಿದ್ದೀರಿ? ಎಂದು ಕೂಗಿದ್ದಾರೆ. ಆದರೆ ಪೊಲೀಸರು ಯಾವುದೇ ಉತ್ತರ ನೀಡಿಲ್ಲ.

ಮಹಿಳೆಯರು ಮತ್ತು ಮಕ್ಕಳಿಗೆ ಆಹಾರ ಕೊಡಲು ನಾನು ಅಲ್ಲಿಗೆ ಹೋದಾಗ ಕೆಲವು ಪೊಲೀಸರು ನಮ್ಮನ್ನು ತಡೆಯಲು ಪ್ರಯತ್ನಿಸಿದರು. ಆದರೆ ಒಂದಿಬ್ಬರು ನನ್ನನ್ನು ಒಳಗೆ ಬಿಟ್ಟರು. ಹೋರಾಟನಿರತ ಜನರಿಗೆ ಸಹಾಯ ಮಾಡುವುದು ಮೂಲ ಮಾನವೀಯತೆ. ಆದ್ದರಿಂದ ನಾವು ಇಲ್ಲಿದ್ದೇವೆ ಎಂದು ಸಿಖ್ ವ್ಯಕ್ತಿಯೊಬ್ಬರು ಪ್ರತಿಕ್ರಿಯಿಸಿದ್ದಾರೆ.

“ಲಖನೌದಲ್ಲಿನ ಗಡಿಯಾರ ಗೋಪುರದಲ್ಲಿ ಅಕ್ರಮ ಪ್ರತಿಭಟನೆಯ ಸಮಯದಲ್ಲಿ ಕೆಲವರು ಟೆಂಟ್ ಹಾಕಲು ಪ್ರಯತ್ನಿಸಿದರು ಮತ್ತು ಅವರಿಗೆ ಅನುಮತಿ ನಿರಾಕರಿಸಲಾಯಿತು. ಕೆಲವು ಗುಂಪುಗಳು ಉದ್ಯಾನದಲ್ಲಿ ಕಂಬಳಿ ವಿತರಿಸುತ್ತಿದ್ದವು ಆದರೆ ಪ್ರತಿಭಟನೆಯ ಭಾಗವಲ್ಲದ ಅನೇಕ ಜನರು ಜನರು ಸಹ ಕಂಬಳಿಗಳನ್ನು ತೆಗೆದುಕೊಳ್ಳುತ್ತಿದ್ದರು. ಹಾಗಾಗಿ ನಾವು ಅಲ್ಲಿನ ಜನಸಮೂಹವನ್ನು ಚದುರಿಸಬೇಕಾಗಿತ್ತು. ಸರಿಯಾದ ಪ್ರಕ್ರಿಯೆಯ ನಂತರ ಕಂಬಳಿಗಳನ್ನು ವಶಪಡಿಸಿಕೊಳ್ಳಲಾಗಿದೆ. ದಯವಿಟ್ಟು ವದಂತಿಗಳನ್ನು ಹರಡಬೇಡಿ” ಎಂದು ಲಕ್ನೋ ಪೊಲೀಸರು ಇಂದು ಹೇಳಿಕೆ ನೀಡಿದ್ದಾರೆ.

ಲಕ್ನೋ ಪೊಲೀಸರ ತೊಂದರೆಯ,  ನಂತರವೂ ಗಡಿಯಾರ ಗೋಪುರದಲ್ಲಿ ಶನಿವಾರ ರಾತ್ರಿ ಅವ್ಯವಸ್ಥೆಯ ಹೊರತಾಗಿಯೂ ಧರಣಿ ಇಂದು ಬೆಳಿಗ್ಗೆ ಮುಂದುವರೆಯಿತು ಮತ್ತು ಹೆಚ್ಚಿನ ಮಹಿಳೆಯರು ಬೆಳಿಗ್ಗೆ 4 ಗಂಟೆಗೆ ಘೋಷಣೆಗಳನ್ನು ಕೂಗುತ್ತಿರುವುದು ಕಂಡುಬಂದಿದೆ. ಇಂದು ಕೂಡ ಹೋರಾಟ ಮುಂದುವರೆಯುತ್ತಿದೆ.

ರಾಜ್ಯ ರಾಜಧಾನಿಯಲ್ಲಿ ಪೌರತ್ವ ಕಾನೂನಿನ ಬಗ್ಗೆ ಘರ್ಷಣೆಗಳು ಸಂಭವಿಸಿ ಹಲವರು ಸಾವನ್ನಪ್ಪಿದ ನಂತರವೂ ಹೊಸ ಪ್ರತಿಭಟನೆಯ ಅಲೆಗಳು ಏಳುತ್ತಿವೆ. ಕಳೆದ ಒಂದು ತಿಂಗಳಲ್ಲಿ ಪೌರತ್ವ ಕಾನೂನಿನ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಉತ್ತರ ಪ್ರದೇಶದ ವಿವಿಧ ಭಾಗಗಳಲ್ಲಿ ಇಪ್ಪತ್ತೊಂದು ಜನರು ಸಾವನ್ನಪ್ಪಿದ್ದು ಇದು ದೇಶದಲ್ಲಿಯೇ ಅತಿ ಹೆಚ್ಚಾಗಿದೆ.

ಈ ನಡುವೆ ಗಣರಾಜ್ಯೋತ್ಸವಕ್ಕೂ ಮುನ್ನ ಲಕ್ನೋದಲ್ಲಿ ದೊಡ್ಡ ಪ್ರತಿಭಟನೆಗಳನ್ನು ನಿಷೇಧಿಸಲಾಗಿದೆ ಎಂದು ನಗರ ಪೊಲೀಸರು ಶನಿವಾರ ಟ್ವೀಟ್ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...