HomeಮುಖಪುಟCAA ವಿರುದ್ಧ ಮಹಿಳೆಯರ ಪ್ರತಿಭಟನೆ ತಡೆಯಲು ಊಟ ಮತ್ತು ಹೊದಿಕೆಗಳನ್ನು ಹೊತ್ತೊಯ್ದ ಯುಪಿ ಪೊಲೀಸರು..! ವಿಡಿಯೋ...

CAA ವಿರುದ್ಧ ಮಹಿಳೆಯರ ಪ್ರತಿಭಟನೆ ತಡೆಯಲು ಊಟ ಮತ್ತು ಹೊದಿಕೆಗಳನ್ನು ಹೊತ್ತೊಯ್ದ ಯುಪಿ ಪೊಲೀಸರು..! ವಿಡಿಯೋ ನೋಡಿ

- Advertisement -
- Advertisement -

ಲಕ್ನೋದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ, ಎನ್‌ಆರ್‌ಸಿ ವಿರುದ್ಧ ಮಹಿಳೆಯರು ಪ್ರತಿಭಟನೆ ನಡೆಸುತ್ತಿದ್ದ ವೇಳೆ ಪ್ರತಿಭಟನಾಕಾರರ ಕಂಬಳಿ ಮತ್ತು ಆಹಾರವನ್ನು ಪೊಲೀಸರು ತೆಗೆದುಕೊಂಡು ಹೋಗಿದ್ದಾರೆ ಎಂದು ಮಹಿಳೆಯರು ಆರೋಪಿಸಿದ್ದಾರೆ. ಆರೋಪಗಳನ್ನು ತಳ್ಳಿಹಾಕಿದ ಲಕ್ನೋ ಪೊಲೀಸರು ವದಂತಿಗಳನ್ನು ಹರಡಬೇಡಿ, ಕಾನೂನು ಪ್ರಕಾರವೇ ಕಂಬಳಿಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ.

ಮೊಬೈಲ್ ಫೋನ್‌ಗಳಲ್ಲಿ ಸೆರೆಹಿಡಿಯಲಾದ ದೃಶ್ಯಗಳಲ್ಲಿ, ಪೊಲೀಸರು ಶನಿವಾರ ಸಂಜೆ ಪ್ರತಿಭಟನೆಯ ಸ್ಥಳದಲ್ಲಿ ಗೊಂದಲ ಎಬ್ಬಿಸಿ ಪ್ರತಿಭಟನಾ ಸ್ಥಳದಿಂದ ಆಹಾರ ಪ್ಯಾಕೆಟ್‌ಗಳನ್ನು ಮತ್ತು ಕಂಬಳಿಗಳನ್ನು ತೆಗೆದುಕೊಂಡು ಹೋಗುವುದನ್ನು ಕಾಣಬಹುದು. ಆಶ್ಚರ್‍ಯವೆಂದರೆ ಕೆಲ ಪೊಲೀಸರು ತಮ್ಮ ಗುರುತು ಸಿಗದಂತೆ ಹೆಲ್ಮೆಟ್ ಧರಿಸಿದ್ದು, ರಾತ್ರಿ ಉಳಿಯಲು ತಂದಿದ್ದ ಚಾಪೆ, ಹೊದಿಗೆ, ಬಟ್ಟೆಯ ಪೆಟ್ಟಿಗೆ, ಊಟ ಎಲ್ಲವನ್ನು ಹೊತ್ತೊಯ್ದಿದ್ದಾರೆ.

ಸುಮಾರು 50 ಮಹಿಳೆಯರು ಶುಕ್ರವಾರ ಧರಣಿ ಪ್ರದರ್ಶನವನ್ನು ಪ್ರಾರಂಭಿಸಿದರು. ಲಕ್ನೋದ ಪ್ರಸಿದ್ದ ಗಡಿಯಾರ ಗೋಪುರದ ಮೆಟ್ಟಿಲುಗಳ ಮೇಲೆ ಕುಳಿತು ಅವರು ತಮ್ಮ ಪ್ರತಿಭಟನೆ ಅನಿರ್ದಿಷ್ಟ ಮತ್ತು ಕಾನೂನು ರದ್ದುಗೊಳ್ಳುವವರೆಗೂ ಮುಂದುವರಿಯುತ್ತದೆ ಎಂದು ಘೋಷಿಸಿದ್ದರು. ತದನಂತರ ಶನಿವಾರ ಪ್ರತಿಭಟನೆಗೆ ಮಹಿಳೆಯರು ಮತ್ತು ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದರಿಂದ ಶನಿವಾರ ರಾತ್ರಿ ಜನಸಂದಣಿ ಹೆಚ್ಚಾಯಿತು. ಆಗ ಪ್ರತಿಭಟನೆಯನ್ನು ನಿಲ್ಲಿಸಲು ಪೊಲೀಸರು ಈ ರೀತಿ ನಡೆದುಕೊಂಡಿದ್ದಾರೆ ಎಂದು ಮಹಿಳೆಯರು ಆರೋಪಿಸಿದ್ದಾರೆ.

ಮಹಿಳಾ ಪ್ರತಿಭಟನಾಕಾರರು ಕೆಲವು ಪೊಲೀಸರ ಹಿಂದೆ ಓಡುತ್ತಾ, “ನೀವು ಕಂಬಳಿಗಳನ್ನು ಏಕೆ ತೆಗೆದುಕೊಳ್ಳುತ್ತಿದ್ದೀರಿ? ಎಂದು ಕೂಗಿದ್ದಾರೆ. ಆದರೆ ಪೊಲೀಸರು ಯಾವುದೇ ಉತ್ತರ ನೀಡಿಲ್ಲ.

ಮಹಿಳೆಯರು ಮತ್ತು ಮಕ್ಕಳಿಗೆ ಆಹಾರ ಕೊಡಲು ನಾನು ಅಲ್ಲಿಗೆ ಹೋದಾಗ ಕೆಲವು ಪೊಲೀಸರು ನಮ್ಮನ್ನು ತಡೆಯಲು ಪ್ರಯತ್ನಿಸಿದರು. ಆದರೆ ಒಂದಿಬ್ಬರು ನನ್ನನ್ನು ಒಳಗೆ ಬಿಟ್ಟರು. ಹೋರಾಟನಿರತ ಜನರಿಗೆ ಸಹಾಯ ಮಾಡುವುದು ಮೂಲ ಮಾನವೀಯತೆ. ಆದ್ದರಿಂದ ನಾವು ಇಲ್ಲಿದ್ದೇವೆ ಎಂದು ಸಿಖ್ ವ್ಯಕ್ತಿಯೊಬ್ಬರು ಪ್ರತಿಕ್ರಿಯಿಸಿದ್ದಾರೆ.

“ಲಖನೌದಲ್ಲಿನ ಗಡಿಯಾರ ಗೋಪುರದಲ್ಲಿ ಅಕ್ರಮ ಪ್ರತಿಭಟನೆಯ ಸಮಯದಲ್ಲಿ ಕೆಲವರು ಟೆಂಟ್ ಹಾಕಲು ಪ್ರಯತ್ನಿಸಿದರು ಮತ್ತು ಅವರಿಗೆ ಅನುಮತಿ ನಿರಾಕರಿಸಲಾಯಿತು. ಕೆಲವು ಗುಂಪುಗಳು ಉದ್ಯಾನದಲ್ಲಿ ಕಂಬಳಿ ವಿತರಿಸುತ್ತಿದ್ದವು ಆದರೆ ಪ್ರತಿಭಟನೆಯ ಭಾಗವಲ್ಲದ ಅನೇಕ ಜನರು ಜನರು ಸಹ ಕಂಬಳಿಗಳನ್ನು ತೆಗೆದುಕೊಳ್ಳುತ್ತಿದ್ದರು. ಹಾಗಾಗಿ ನಾವು ಅಲ್ಲಿನ ಜನಸಮೂಹವನ್ನು ಚದುರಿಸಬೇಕಾಗಿತ್ತು. ಸರಿಯಾದ ಪ್ರಕ್ರಿಯೆಯ ನಂತರ ಕಂಬಳಿಗಳನ್ನು ವಶಪಡಿಸಿಕೊಳ್ಳಲಾಗಿದೆ. ದಯವಿಟ್ಟು ವದಂತಿಗಳನ್ನು ಹರಡಬೇಡಿ” ಎಂದು ಲಕ್ನೋ ಪೊಲೀಸರು ಇಂದು ಹೇಳಿಕೆ ನೀಡಿದ್ದಾರೆ.

ಲಕ್ನೋ ಪೊಲೀಸರ ತೊಂದರೆಯ,  ನಂತರವೂ ಗಡಿಯಾರ ಗೋಪುರದಲ್ಲಿ ಶನಿವಾರ ರಾತ್ರಿ ಅವ್ಯವಸ್ಥೆಯ ಹೊರತಾಗಿಯೂ ಧರಣಿ ಇಂದು ಬೆಳಿಗ್ಗೆ ಮುಂದುವರೆಯಿತು ಮತ್ತು ಹೆಚ್ಚಿನ ಮಹಿಳೆಯರು ಬೆಳಿಗ್ಗೆ 4 ಗಂಟೆಗೆ ಘೋಷಣೆಗಳನ್ನು ಕೂಗುತ್ತಿರುವುದು ಕಂಡುಬಂದಿದೆ. ಇಂದು ಕೂಡ ಹೋರಾಟ ಮುಂದುವರೆಯುತ್ತಿದೆ.

ರಾಜ್ಯ ರಾಜಧಾನಿಯಲ್ಲಿ ಪೌರತ್ವ ಕಾನೂನಿನ ಬಗ್ಗೆ ಘರ್ಷಣೆಗಳು ಸಂಭವಿಸಿ ಹಲವರು ಸಾವನ್ನಪ್ಪಿದ ನಂತರವೂ ಹೊಸ ಪ್ರತಿಭಟನೆಯ ಅಲೆಗಳು ಏಳುತ್ತಿವೆ. ಕಳೆದ ಒಂದು ತಿಂಗಳಲ್ಲಿ ಪೌರತ್ವ ಕಾನೂನಿನ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಉತ್ತರ ಪ್ರದೇಶದ ವಿವಿಧ ಭಾಗಗಳಲ್ಲಿ ಇಪ್ಪತ್ತೊಂದು ಜನರು ಸಾವನ್ನಪ್ಪಿದ್ದು ಇದು ದೇಶದಲ್ಲಿಯೇ ಅತಿ ಹೆಚ್ಚಾಗಿದೆ.

ಈ ನಡುವೆ ಗಣರಾಜ್ಯೋತ್ಸವಕ್ಕೂ ಮುನ್ನ ಲಕ್ನೋದಲ್ಲಿ ದೊಡ್ಡ ಪ್ರತಿಭಟನೆಗಳನ್ನು ನಿಷೇಧಿಸಲಾಗಿದೆ ಎಂದು ನಗರ ಪೊಲೀಸರು ಶನಿವಾರ ಟ್ವೀಟ್ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸುಡಾನ್: ನೈಲ್ ನದಿಯಲ್ಲಿ ದೋಣಿ ಮುಳುಗಿ ಕನಿಷ್ಠ 21 ಸಾವು, ಹಲವರು ನಾಪತ್ತೆ!

ಉತ್ತರ ಸುಡಾನ್‌ನ ನೈಲ್ ರಾಜ್ಯದ ನೈಲ್ ನದಿಯಲ್ಲಿ ಪ್ರಯಾಣಿಕರ ದೋಣಿ ಮುಳುಗಿದ ನಂತರ ಕನಿಷ್ಠ 21 ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವಾರು ಜನರು ಕಾಣೆಯಾಗಿದ್ದಾರೆ ಎಂದು ಯುದ್ಧ ಪೀಡಿತ ದೇಶದ ನಾಗರಿಕ ರಕ್ಷಣಾ...

ಹೊಸಕೋಟೆ ಭೀಕರ ಅಪಘಾತದಲ್ಲಿ 7 ಮಂದಿ ಸಾವು: ಮೃತರಲ್ಲಿ 6 ಮಂದಿ 17-18 ವರ್ಷದ ವಿದ್ಯಾರ್ಥಿಗಳು!

ಬೆಂಗಳೂರು: ಫೆಬ್ರವರಿ 13, ಶುಕ್ರವಾರ ಬೆಳಗಿನ ಜಾವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯ ಹೊರವಲಯದಲ್ಲಿ ಸಂಭವಿಸಿದ ಭೀಕರ ಸರಣಿ ರಸ್ತೆ ಅಪಘಾತದಲ್ಲಿ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ದೃಢಪಡಿಸಿದ್ದಾರೆ. ಪೊಲೀಸರ ಪ್ರಕಾರ,...

85 ಕೋಟಿ ರೂ. ವಂಚನೆ ಪ್ರಕರಣ: ಲೋಧಾ ಡೆವಲಪರ್ಸ್‌ನ ಮಾಜಿ ನಿರ್ದೇಶಕರನ್ನು ಬಂಧಿಸಿದ ಇಡಿ

85 ಕೋಟಿ ರೂಪಾಯಿ ಹಗರಣದಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ಮುಂಬೈ ಮೂಲದ ರಿಯಲ್ ಎಸ್ಟೇಟ್ ಸಂಸ್ಥೆ ಲೋಧಾ ಡೆವಲಪರ್ಸ್‌ನ ಮಾಜಿ ನಿರ್ದೇಶಕ ರಾಜೇಂದ್ರ ಲೋಧಾ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಗುರುವಾರ (Pe.13)...

ಹೆತ್ತವರ ಹತ್ಯೆ ಪ್ರಕರಣ: ಸ್ಕಿಜೋಫ್ರೇನಿಯಾ ಎಂಬ ಮನೋರೋಗದಿಂದ ಬಳಲುತ್ತಿದ್ದ ಬೆಂಗಳೂರು ಟೆಕ್ಕಿ ರೋಹನ್ ಚಂದ್ರ ಭಟ್ 

ಬೆಂಗಳೂರು: ಬುಧವಾರ ತನ್ನ ಹೆತ್ತವರನ್ನು ಇರಿದು ಕೊಂದ 33 ವರ್ಷದ ಅಮೆರಿಕದಿಂದ ಹಿಂದಿರುಗಿದ ಟೆಕ್ಕಿ ರೋಹನ್ ಚಂದ್ರ ಭಟ್, ವರ್ಷಗಳಿಂದ ಕೆಲಸವಿಲ್ಲದ ಕಾರಣ ಮಾನಸಿಕವಾಗಿ ಅಸ್ವಸ್ಥನಾಗಿದ್ದ ಅನ್ನುವುದು ದೃಢವಾಗಿದೆ.  ಬುಧವಾರ ಬೆಳಿಗ್ಗೆ 8.30 ರ...

ಬಿಕ್ಲುಶಿವ ಹತ್ಯೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಬೈರತಿ ಬಸವರಾಜ್ ಬಂಧನ: ಇಂದು ಕೋರ್ಟ್‌ಗೆ ಹಾಜರು

ಬೆಂಗಳೂರು ನಗರ ಪೊಲೀಸ್‌ ವ್ಯಾಪ್ತಿಯ ರೌಡಿ ಶಿವಪ್ರಕಾಶ್ ಅಲಿಯಾಸ್ ಬಿಕ್ಲುಶಿವ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆ.ಆರ್‌.ಪುರ ಕ್ಷೇತ್ರದ ಬಿಜೆಪಿ ಶಾಸಕ ಬೈರತಿ ಬಸವರಾಜ್ ಅವರಿಗೆ ಆರಿ ಹಿನ್ನಡೆಯಾಗಿದೆ. ಕೊಲೆ ಪ್ರಕರಣ ಸಂಬಂಧ ಸುಪ್ರೀಂಕೋರ್ಟ್‌ನಲ್ಲಿ...

ಸಾರ್ವತ್ರಿಕ ಮುಷ್ಕರ | ಕೆಲ ರಾಜ್ಯಗಳಲ್ಲಿ ಸಾಮಾನ್ಯ ಜನಜೀವನ ಅಸ್ತವ್ಯಸ್ತ; ಬ್ಯಾಂಕಿಂಗ್, ಸಾರಿಗೆ ವ್ಯವಸ್ಥೆಯಲ್ಲಿ ವ್ಯತ್ಯಯ

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ 'ಕಾರ್ಮಿಕ, ರೈತ ವಿರೋಧಿ ಹಾಗೂ ಕಾರ್ಪೊರೇಟ್ ಪರ ನೀತಿಗಳ' ವಿರುದ್ಧ ಕಾರ್ಮಿಕ ಸಂಘಟನೆಗಳು ಗುರುವಾರ (ಫೆ.12) ಕರೆ ನೀಡಿದ್ದ ರಾಷ್ಟ್ರವ್ಯಾಪಿ ಮುಷ್ಕರದಿಂದ ವಿವಿಧ ರಾಜ್ಯಗಳಲ್ಲಿ ಜನ ಜೀವನ...

ಅದಾನಿ ಮಾನನಷ್ಟ ಪ್ರಕರಣದಲ್ಲಿ ಪತ್ರಕರ್ತ ರವಿ ನಾಯರ್‌ಗೆ ಶಿಕ್ಷೆ: ‘ಇದು ಪತ್ರಿಕಾ ಸ್ವಾತಂತ್ರ್ಯಕ್ಕೆ ಹೊಡೆತ’ ಎಂದ ಪತ್ರಕರ್ತರ ಸಂಘಟನೆಗಳು

ಅದಾನಿ ಎಂಟರ್‌ಪ್ರೈಸಸ್ ದಾಖಲಿಸಿದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ತನಿಖಾ ಪತ್ರಕರ್ತ ರವಿ ನಾಯರ್ ಅವರಿಗೆ ಒಂದು ವರ್ಷ ಜೈಲು ಶಿಕ್ಷೆ ವಿಧಿಸಿರುವುದನ್ನು ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಮತ್ತು ಹಲವಾರು ಪತ್ರಿಕಾ ಸಂಸ್ಥೆಗಳು...

‘ನಾವು ಯಾರನ್ನೂ ನಿಂದಿಸಿಲ್ಲ’: ಚೇಂಬರ್ ‘ದುರ್ವರ್ತನೆ’ ಆರೋಪಕ್ಕೆ ಪ್ರಿಯಾಂಕಾ ಗಾಂಧಿ ಸ್ಪಷ್ಟನೆ 

ನವದೆಹಲಿ: ಸ್ಪೀಕರ್ ಓಂ ಬಿರ್ಲಾ ಅವರ ಕೊಠಡಿಯಲ್ಲಿ ತಮ್ಮ ಪಕ್ಷದ ಸಂಸದರು "ಅನುಚಿತವಾಗಿ ವರ್ತಿಸಿದ್ದಾರೆ" ಎಂದು ಆರೋಪಿಸಿದಾಗ, ಅವರನ್ನು ಬೆಂಬಲಿಸಿದ್ದೇನೆ ಎಂದು ಹೇಳಿದ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಸಂಸದೀಯ ವ್ಯವಹಾರಗಳ...

‘ಭಾರತಕ್ಕೆ ಮರಳಲು ಇದು ಕೊನೆಯ ಅವಕಾಶ’: ವಿಜಯ್ ಮಲ್ಯಗೆ ಬಾಂಬೆ ಹೈಕೋರ್ಟ್‌ ಎಚ್ಚರಿಕೆ

ಭಾರತದ ಹೊರಗೆ ಇರುವ ಉದ್ಯಮಿ ವಿಜಯ್ ಮಲ್ಯ ನ್ಯಾಯಾಲಯದ ಪ್ರಕ್ರಿಯೆಗಳಿಂದ ಉದ್ದೇಶಪೂರ್ವಕವಾಗಿ ತಪ್ಪಿಸಿಕೊಳ್ಳುತ್ತಿದ್ದಾರೆ ಎಂದು ಗಂಭೀರವಾಗಿ ಪರಿಗಣಿಸಿರುವ ಬಾಂಬೆ ಹೈಕೋರ್ಟ್, ಅವರಿಗೆ ಭಾರತಕ್ಕೆ ಮರಳಲು “ಒಂದು ಕೊನೆಯ ಅವಕಾಶ” ನೀಡಿದೆ. ಒಂದು ವೇಳೆ...

ಕೆಲಸದ ಸ್ಥಳದಲ್ಲಿ ಜಾತಿ ತಾರತಮ್ಯದ ಬಗ್ಗೆ ರಾಜ್ಯಸಭೆಯಲ್ಲಿ ಖರ್ಗೆ ಕಳವಳ; ಒಡಿಶಾ ಅಂಗನವಾಡಿ ಘಟನೆ ಉಲ್ಲೇಖ

ಕೆಲಸದ ಸ್ಥಳಗಳಲ್ಲಿ ಆಗುತ್ತಿರುವ ಜಾತಿ ತಾರತಮ್ಯದ ಕುರಿತು ರಾಜ್ಯಸಭೆಯಲ್ಲಿ ಗುರುವಾರ (ಫೆ.12) ವಿಪಕ್ಷ ನಾಯಕ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಳವಳ ವ್ಯಕ್ತಪಡಿಸಿದರು. ಒಡಿಶಾದ ಅಂಗನವಾಡಿಯೊಂದರಲ್ಲಿ ದಲಿತ ಮಹಿಳೆ ತಯಾರಿಸಿದ ಆಹಾರವನ್ನು...