Homeದಲಿತ್ ಫೈಲ್ಸ್ಲಕ್ನೋ: ಜಾತಿ ನಿಂದನೆ ದೂರು ನೀಡಿದ ದಲಿತ ಪತ್ರಕರ್ತ; ಬ್ರಾಹ್ಮಣ ಪತ್ರಕರ್ತನ ವಿರುದ್ಧ ಎಫ್‌ಐಆರ್‌

ಲಕ್ನೋ: ಜಾತಿ ನಿಂದನೆ ದೂರು ನೀಡಿದ ದಲಿತ ಪತ್ರಕರ್ತ; ಬ್ರಾಹ್ಮಣ ಪತ್ರಕರ್ತನ ವಿರುದ್ಧ ಎಫ್‌ಐಆರ್‌

- Advertisement -
- Advertisement -

ರಾಜೇಂದ್ರ ಗೌತಮ್ ಅವರು ಉತ್ತರ ಪ್ರದೇಶದ ಲಕ್ನೋದಲ್ಲಿ ಹಿರಿಯ ಪತ್ರಕರ್ತ ಹೇಮಂತ್ ತಿವಾರಿ ವಿರುದ್ಧ ಜಾತಿ ನಿಂದನೆಯ ಪ್ರಕರಣ ದಾಖಲಿಸಿದ್ದಾರೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ದೌರ್ಜನ್ಯ ತಡೆ ಕಾಯ್ದೆಯಡಿಯಲ್ಲಿ ಎಫ್‌ಐಆರ್ ದಾಖಲಾಗಿದೆ. 44 ವರ್ಷದ ಗೌತಮ್ ದಲಿತರಾಗಿದ್ದು, 56 ವರ್ಷದ ತಿವಾರಿ ಬ್ರಾಹ್ಮಣ ಜಾತಿಗೆ ಸೇರಿದ್ದಾರೆ.

ಆಗಸ್ಟ್ 3 ರಂದು ಎಫ್‌ಐಆರ್‌ ದಾಖಲಾಗಿದೆ. “ತಿವಾರಿಯವರು ನನ್ನ ಪತ್ನಿ ಮತ್ತು ಮಗನ ವಿರುದ್ಧ ಜಾತಿ ನಿಂದನೆ ಮಾಡಿದ್ದಾರೆ” ಎಂದು ಗೌತಮ್‌ ಆರೋಪಿಸಿದ್ದಾರೆ. ಈ ಆರೋಪವನ್ನು ತಿವಾರಿ ನಿರಾಕರಿಸಿದ್ದಾರೆ.

“ನಾನು 2019ರಿಂದಲೂ ತಿವಾರಿ ಅವರನ್ನು ಸಹಿಸಿಕೊಳ್ಳುತ್ತಿದ್ದೇನೆ. ಅವರು ನನ್ನ ಹೆಂಡತಿ ಮತ್ತು ಮಗನ ವಿರುದ್ಧ ಟೀಕೆಗಳನ್ನು ಮಾಡಲು ಆರಂಭಿಸಿದ ಬಳಿಕ ಸಹಿಸಿಕೊಳ್ಳಲು ಸಾಧ್ಯವಾಗಲಿಲ್ಲ. ಹಾಗಾಗಿ ನಾನು ಪೊಲೀಸರಿಗೆ ಹೋಗಿ ದೂರು ನೀಡಿತ್ತು. ಇದು ಕಷ್ಟಕಷ್ಟವಾದರೂ ಅನಿವಾರ್ಯವಾಗಿತ್ತು” ಎಂದಿದ್ದಾರೆ ಗೌತಮ್‌.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಲಕ್ನೋದಲ್ಲಿನ ತನ್ನ ಅಪಾರ್ಟ್‌‌ಮೆಂಟ್‌‌ನಲ್ಲಿಯೇ ಕಚೇರಿಯನ್ನು ಮಾಡಿಕೊಂಡಿರುವ ಗೌತಮ್ ಅವರು, ‘ತಿಜರತ್’ ಮತ್ತು ‘ನಿಷ್ಪಾಕ್ಷ್ ದಿವ್ಯ ಸಂದೇಶ್’ ಎಂಬ ಎರಡು ಪತ್ರಿಕೆಗಳನ್ನು ನಡೆಸುತ್ತಿದ್ದಾರೆ.

ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾಕ್ಕೂ ದೂರು ನೀಡುವಂತೆ  ಸಹೋದ್ಯೋಗಿಗಳು ಸೂಚಿಸಿದ್ದಾರೆ. ಈ ಕ್ರಮ ಜರುಗಿಸಲೂ ಮುಂದಾಗಿದ್ದೇನೆ ಎಂದು ಗೌತಮ್ ತಿಳಿಸಿರುವುದಾಗಿ ‘ನ್ಯೂಸ್‌ಲಾಂಡ್ರಿ’ ವರದಿ ಮಾಡಿದೆ.

ಉತ್ತರ ಪ್ರದೇಶ ರಾಜ್ಯ ಸರ್ಕಾರದಿಂದ ಮಾನ್ಯತೆ ಪಡೆದ ‘ವರದಿಗಾರರ ಸಮಿತಿ’ಯ ಚುನಾವಣೆಯಲ್ಲಿ ತಿವಾರಿ ಅವರನ್ನು ಬೆಂಬಲಿಸಲು ನಿರಾಕರಿಸಿದೆ. ಆನಂತರದಲ್ಲಿ ತಿವಾರಿ ತನ್ನ ಮೇಲೆ ಜಾತಿವಾದಿ ನಿಂದನೆಗಳನ್ನು ಮಾಡಲಾರಂಭಿಸಿದರು ಎನ್ನುತ್ತಾರೆ ಗೌತಮ್‌.

ಚುನಾವಣೆಯು ಮಾರ್ಚ್ 2021ರಲ್ಲಿ ನಡೆಯಿತು. ಈ ಹಿಂದೆ ದೈನಿಕ್ ಜಾಗರಣ್‌ ಸೇರಿದಂತೆ ಇತರ ಪತ್ರಿಕೆಗಳಲ್ಲಿ ಕೆಲಸ ಮಾಡಿದ ತಿವಾರಿ ಅವರು ಅಧ್ಯಕ್ಷರಾಗಿಯೂ ಆಯ್ಕೆಯಾದರು.

“ಮಾಧ್ಯಮದಲ್ಲಿಯೂ ಚಾಮ್ಮರರು ನಮ್ಮನ್ನು ಸೋಲಿಸುತ್ತಾರೆಯೇ?” ಎಂದು ಜಾತಿ ಸೂಚಕ ನಿಂದನೆಗಳನ್ನು ಮಾಡಿದ್ದಾರೆಂಬ ಆರೋಪ ತಿವಾರಿ ಮೇಲೆ ಬಂದಿದೆ.

“ದಲಿತನಾಗಿ ಹುಟ್ಟಿದ್ದು ನನ್ನ ತಪ್ಪಲ್ಲ. ನಾನು ನನ್ನ ಪತ್ರಿಕೋದ್ಯಮವನ್ನು ಅತ್ಯಂತ ಪ್ರಾಮಾಣಿಕತೆಯಿಂದ ಮಾಡಿದ್ದೇನೆ. ಅದಕ್ಕಾಗಿಯೇ ಹೇಮಂತ್ ತಿವಾರಿಯಂತಹ ಪತ್ರಕರ್ತರಿಗೆ ಸಮಸ್ಯೆಯಾಗಿ ಕಾಣುತ್ತೇನೆ. ನಾನು ಹಿಂದುಳಿದ ಹಿನ್ನೆಲೆಯಿಂದ ಬಂದು ಈ ವೃತ್ತಿಯಲ್ಲಿ ತೊಡಗಿಸಿಕೊಂಡಿದ್ದೇನೆ. ನನಗೆ ತಿವಾರಿ ಬಗ್ಗೆ ಗೌರವವಿತ್ತು. ಆದರೆ ಆತ ನನ್ನ ಹೆಂಡತಿ ಮತ್ತು ಮಗನನ್ನು ‌ಎಳೆದುತಂದು ಗಡಿ ದಾಟಿದ್ದಾನೆ” ಎನ್ನುತ್ತಾರೆ ಗೌತಮ್‌.

ಕೆಲವು ವಾರಗಳ ಹಿಂದೆ, ತಿವಾರಿ ಅವರು ಗೌತಮ್ ಅವರ ಪತ್ನಿ ರೇಖಾ ಗೌತಮ್ ಮತ್ತು ಮಗ ನಿರ್ಭಯ್ ರಾಜ್ ವಿರುದ್ಧ ಪ್ರಕರಣ ದಾಖಲಿಸಿದ್ದರು. ಪುಸ್ತಕ, ಪತ್ರಿಕಾ ಮತ್ತು ನೋಂದಣಿ ಕಾಯಿದೆ, ಮಾಹಿತಿ ತಂತ್ರಜ್ಞಾನ ಕಾಯ್ದೆ ಮತ್ತು ಭಾರತೀಯ ದಂಡ ಸಂಹಿತೆ ಎಫ್‌ಐಆರ್ ದಾಖಲಿಸಿದ್ದರು. ಆಧಾರ ರಹಿತ ಸುದ್ದಿಯನ್ನು ತಮ್ಮ ಪತ್ರಿಕೆಯಲ್ಲಿ ಪ್ರಕಟಿಸಿ, ಅಂತರ್ಜಾಲದಲ್ಲಿ ಹರಿಬಿಟ್ಟು ಕಿರುಕುಳ ನೀಡಿದ್ದಾರೆ. ಮಾನಹಾನಿ ಮಾಡಿದ್ದಾರೆ ಎಂದು ಆರೋಪಿಸಿದ್ದರು.

ರೇಖಾ ಅವರು ನಿಷ್ಪಾಕ್ಷ್ ದಿವ್ಯ ಸಂದೇಶ ಮತ್ತು ತಿಜರತ್‌ನ ಸಂಪಾದಕರಾಗಿದ್ದಾರೆ. ನಿರ್ಭಯ್ ರಾಜ್‌ ವರದಿಗಾರರಾಗಿ ಕೆಲಸ ಮಾಡುತ್ತಿದ್ದಾರೆ.

“ರಾಜೇಂದ್ರ ಗೌತಮ್ ನನ್ನನ್ನು ದೂಷಿಸಲು ಪ್ರಯತ್ನಿಸುತ್ತಿದ್ದಾರೆ. ನಾನು ಅವರ ಮೇಲೆ ಯಾವತ್ತೂ ಜಾತಿ ನಿಂದನೆ ಮಾಡಿಲ್ಲ. ನಾನು 34 ವರ್ಷಗಳಿಂದ ಈ ವೃತ್ತಿಯಲ್ಲಿದ್ದೇನೆ. ನನ್ನ ವಿರುದ್ಧ ಇಂತಹ ಆರೋಪ ಬಂದಿರುವುದು ಇದೇ ಮೊದಲು” ಎಂದಿದ್ದಾರೆ ತಿವಾರಿ.

ಇದನ್ನೂ ಓದಿರಿ: ಹೆಣ್ಣು ಮಕ್ಕಳನ್ನು ಹೆತ್ತಿದ್ದಕ್ಕೆ ಗಂಡನ ಕಿರುಕುಳ; ಭಾರತ ಮೂಲದ ಮಹಿಳೆ ಅಮೆರಿಕದಲ್ಲಿ ಆತ್ಮಹತ್ಯೆ

“ಗೌತಮ್ ಅವರು ಎಸ್‌ಸಿ, ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯನ್ನು ದುರುಪಯೋಗ ಮಾಡಿಕೊಂಡಿದ್ದಾರೆ. ನಾನು ಯಾವಾಗ ನಿಂದನೆ ಮಾಡಿದೆ, ಎಲ್ಲಿ ಮಾಡಿದೆ ಎಂಬ ವಿವರಗಳು ದೂರಿನಲ್ಲಿ ಉಲ್ಲೇಖವಾಗಿಲ್ಲ” ಎಂದು ತಿವಾರಿ ಪ್ರತಿಕ್ರಿಯೆ ನೀಡಿದ್ದಾರೆ.

“ಬ್ಲ್ಯಾಕ್ ಮೇಲ್ ಮಾಡುವ ವ್ಯಕ್ತಿ ನನ್ನ ವಿರುದ್ಧ ಸೇಡಿನ ಕ್ರಮ ಜರುಗಿಸಿದ್ದಾರೆ” ಅವರು ಆರೋಪಿಸಿದ್ದಾರೆ.

ಈ ಪ್ರಕರಣವು ಲಕ್ನೋ ಪತ್ರಕರ್ತರ ನಡುವಿನ ಭ್ರಾತೃತ್ವಕ್ಕೆ ಪೆಟ್ಟು ನೀಡಿದೆ ಎಂಬ ಅಭಿಪ್ರಾಯಗಳು ವ್ಯಕ್ತವಾಗುತ್ತಿವೆ. “ಪತ್ರಕರ್ತರು ಸಮಾಜದ ಪರಿವರ್ತನೆಗಾಗಿ ಕೆಲಸ ಮಾಡಬೇಕು ಎಂಬುದನ್ನು ನೆನಪಿನಲ್ಲಿಟ್ಟುಕೊಳ್ಳಬೇಕು. ಅದಕ್ಕಾಗಿ ಬದ್ಧರಾಗಿರಬೇಕು. ಸ್ವತಃ ತಾವೇ ಸುದ್ದಿಯಾಗಬಾರದು” ಎಂದು ದೈನಿಕ್ ಭಾಸ್ಕರ್ ಮಾಜಿ ಸಂಪಾದಕ ರತನ್ ಮಣಿ ಲಾಲ್ ಹೇಳಿದ್ದಾರೆ. ಈ ಸಂಘರ್ಷವನ್ನು “ದುರದೃಷ್ಟಕರ” ಎಂದಿರುವ ಅವರು ಜಾತಿ ನಿಂದನೆಯನ್ನು ಸಮರ್ಥಿಸಲಾಗದು ಎಂದು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...