Homeದಲಿತ್ ಫೈಲ್ಸ್ಲಕ್ನೋ: ಜಾತಿ ನಿಂದನೆ ದೂರು ನೀಡಿದ ದಲಿತ ಪತ್ರಕರ್ತ; ಬ್ರಾಹ್ಮಣ ಪತ್ರಕರ್ತನ ವಿರುದ್ಧ ಎಫ್‌ಐಆರ್‌

ಲಕ್ನೋ: ಜಾತಿ ನಿಂದನೆ ದೂರು ನೀಡಿದ ದಲಿತ ಪತ್ರಕರ್ತ; ಬ್ರಾಹ್ಮಣ ಪತ್ರಕರ್ತನ ವಿರುದ್ಧ ಎಫ್‌ಐಆರ್‌

- Advertisement -
- Advertisement -

ರಾಜೇಂದ್ರ ಗೌತಮ್ ಅವರು ಉತ್ತರ ಪ್ರದೇಶದ ಲಕ್ನೋದಲ್ಲಿ ಹಿರಿಯ ಪತ್ರಕರ್ತ ಹೇಮಂತ್ ತಿವಾರಿ ವಿರುದ್ಧ ಜಾತಿ ನಿಂದನೆಯ ಪ್ರಕರಣ ದಾಖಲಿಸಿದ್ದಾರೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ದೌರ್ಜನ್ಯ ತಡೆ ಕಾಯ್ದೆಯಡಿಯಲ್ಲಿ ಎಫ್‌ಐಆರ್ ದಾಖಲಾಗಿದೆ. 44 ವರ್ಷದ ಗೌತಮ್ ದಲಿತರಾಗಿದ್ದು, 56 ವರ್ಷದ ತಿವಾರಿ ಬ್ರಾಹ್ಮಣ ಜಾತಿಗೆ ಸೇರಿದ್ದಾರೆ.

ಆಗಸ್ಟ್ 3 ರಂದು ಎಫ್‌ಐಆರ್‌ ದಾಖಲಾಗಿದೆ. “ತಿವಾರಿಯವರು ನನ್ನ ಪತ್ನಿ ಮತ್ತು ಮಗನ ವಿರುದ್ಧ ಜಾತಿ ನಿಂದನೆ ಮಾಡಿದ್ದಾರೆ” ಎಂದು ಗೌತಮ್‌ ಆರೋಪಿಸಿದ್ದಾರೆ. ಈ ಆರೋಪವನ್ನು ತಿವಾರಿ ನಿರಾಕರಿಸಿದ್ದಾರೆ.

“ನಾನು 2019ರಿಂದಲೂ ತಿವಾರಿ ಅವರನ್ನು ಸಹಿಸಿಕೊಳ್ಳುತ್ತಿದ್ದೇನೆ. ಅವರು ನನ್ನ ಹೆಂಡತಿ ಮತ್ತು ಮಗನ ವಿರುದ್ಧ ಟೀಕೆಗಳನ್ನು ಮಾಡಲು ಆರಂಭಿಸಿದ ಬಳಿಕ ಸಹಿಸಿಕೊಳ್ಳಲು ಸಾಧ್ಯವಾಗಲಿಲ್ಲ. ಹಾಗಾಗಿ ನಾನು ಪೊಲೀಸರಿಗೆ ಹೋಗಿ ದೂರು ನೀಡಿತ್ತು. ಇದು ಕಷ್ಟಕಷ್ಟವಾದರೂ ಅನಿವಾರ್ಯವಾಗಿತ್ತು” ಎಂದಿದ್ದಾರೆ ಗೌತಮ್‌.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಲಕ್ನೋದಲ್ಲಿನ ತನ್ನ ಅಪಾರ್ಟ್‌‌ಮೆಂಟ್‌‌ನಲ್ಲಿಯೇ ಕಚೇರಿಯನ್ನು ಮಾಡಿಕೊಂಡಿರುವ ಗೌತಮ್ ಅವರು, ‘ತಿಜರತ್’ ಮತ್ತು ‘ನಿಷ್ಪಾಕ್ಷ್ ದಿವ್ಯ ಸಂದೇಶ್’ ಎಂಬ ಎರಡು ಪತ್ರಿಕೆಗಳನ್ನು ನಡೆಸುತ್ತಿದ್ದಾರೆ.

ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾಕ್ಕೂ ದೂರು ನೀಡುವಂತೆ  ಸಹೋದ್ಯೋಗಿಗಳು ಸೂಚಿಸಿದ್ದಾರೆ. ಈ ಕ್ರಮ ಜರುಗಿಸಲೂ ಮುಂದಾಗಿದ್ದೇನೆ ಎಂದು ಗೌತಮ್ ತಿಳಿಸಿರುವುದಾಗಿ ‘ನ್ಯೂಸ್‌ಲಾಂಡ್ರಿ’ ವರದಿ ಮಾಡಿದೆ.

ಉತ್ತರ ಪ್ರದೇಶ ರಾಜ್ಯ ಸರ್ಕಾರದಿಂದ ಮಾನ್ಯತೆ ಪಡೆದ ‘ವರದಿಗಾರರ ಸಮಿತಿ’ಯ ಚುನಾವಣೆಯಲ್ಲಿ ತಿವಾರಿ ಅವರನ್ನು ಬೆಂಬಲಿಸಲು ನಿರಾಕರಿಸಿದೆ. ಆನಂತರದಲ್ಲಿ ತಿವಾರಿ ತನ್ನ ಮೇಲೆ ಜಾತಿವಾದಿ ನಿಂದನೆಗಳನ್ನು ಮಾಡಲಾರಂಭಿಸಿದರು ಎನ್ನುತ್ತಾರೆ ಗೌತಮ್‌.

ಚುನಾವಣೆಯು ಮಾರ್ಚ್ 2021ರಲ್ಲಿ ನಡೆಯಿತು. ಈ ಹಿಂದೆ ದೈನಿಕ್ ಜಾಗರಣ್‌ ಸೇರಿದಂತೆ ಇತರ ಪತ್ರಿಕೆಗಳಲ್ಲಿ ಕೆಲಸ ಮಾಡಿದ ತಿವಾರಿ ಅವರು ಅಧ್ಯಕ್ಷರಾಗಿಯೂ ಆಯ್ಕೆಯಾದರು.

“ಮಾಧ್ಯಮದಲ್ಲಿಯೂ ಚಾಮ್ಮರರು ನಮ್ಮನ್ನು ಸೋಲಿಸುತ್ತಾರೆಯೇ?” ಎಂದು ಜಾತಿ ಸೂಚಕ ನಿಂದನೆಗಳನ್ನು ಮಾಡಿದ್ದಾರೆಂಬ ಆರೋಪ ತಿವಾರಿ ಮೇಲೆ ಬಂದಿದೆ.

“ದಲಿತನಾಗಿ ಹುಟ್ಟಿದ್ದು ನನ್ನ ತಪ್ಪಲ್ಲ. ನಾನು ನನ್ನ ಪತ್ರಿಕೋದ್ಯಮವನ್ನು ಅತ್ಯಂತ ಪ್ರಾಮಾಣಿಕತೆಯಿಂದ ಮಾಡಿದ್ದೇನೆ. ಅದಕ್ಕಾಗಿಯೇ ಹೇಮಂತ್ ತಿವಾರಿಯಂತಹ ಪತ್ರಕರ್ತರಿಗೆ ಸಮಸ್ಯೆಯಾಗಿ ಕಾಣುತ್ತೇನೆ. ನಾನು ಹಿಂದುಳಿದ ಹಿನ್ನೆಲೆಯಿಂದ ಬಂದು ಈ ವೃತ್ತಿಯಲ್ಲಿ ತೊಡಗಿಸಿಕೊಂಡಿದ್ದೇನೆ. ನನಗೆ ತಿವಾರಿ ಬಗ್ಗೆ ಗೌರವವಿತ್ತು. ಆದರೆ ಆತ ನನ್ನ ಹೆಂಡತಿ ಮತ್ತು ಮಗನನ್ನು ‌ಎಳೆದುತಂದು ಗಡಿ ದಾಟಿದ್ದಾನೆ” ಎನ್ನುತ್ತಾರೆ ಗೌತಮ್‌.

ಕೆಲವು ವಾರಗಳ ಹಿಂದೆ, ತಿವಾರಿ ಅವರು ಗೌತಮ್ ಅವರ ಪತ್ನಿ ರೇಖಾ ಗೌತಮ್ ಮತ್ತು ಮಗ ನಿರ್ಭಯ್ ರಾಜ್ ವಿರುದ್ಧ ಪ್ರಕರಣ ದಾಖಲಿಸಿದ್ದರು. ಪುಸ್ತಕ, ಪತ್ರಿಕಾ ಮತ್ತು ನೋಂದಣಿ ಕಾಯಿದೆ, ಮಾಹಿತಿ ತಂತ್ರಜ್ಞಾನ ಕಾಯ್ದೆ ಮತ್ತು ಭಾರತೀಯ ದಂಡ ಸಂಹಿತೆ ಎಫ್‌ಐಆರ್ ದಾಖಲಿಸಿದ್ದರು. ಆಧಾರ ರಹಿತ ಸುದ್ದಿಯನ್ನು ತಮ್ಮ ಪತ್ರಿಕೆಯಲ್ಲಿ ಪ್ರಕಟಿಸಿ, ಅಂತರ್ಜಾಲದಲ್ಲಿ ಹರಿಬಿಟ್ಟು ಕಿರುಕುಳ ನೀಡಿದ್ದಾರೆ. ಮಾನಹಾನಿ ಮಾಡಿದ್ದಾರೆ ಎಂದು ಆರೋಪಿಸಿದ್ದರು.

ರೇಖಾ ಅವರು ನಿಷ್ಪಾಕ್ಷ್ ದಿವ್ಯ ಸಂದೇಶ ಮತ್ತು ತಿಜರತ್‌ನ ಸಂಪಾದಕರಾಗಿದ್ದಾರೆ. ನಿರ್ಭಯ್ ರಾಜ್‌ ವರದಿಗಾರರಾಗಿ ಕೆಲಸ ಮಾಡುತ್ತಿದ್ದಾರೆ.

“ರಾಜೇಂದ್ರ ಗೌತಮ್ ನನ್ನನ್ನು ದೂಷಿಸಲು ಪ್ರಯತ್ನಿಸುತ್ತಿದ್ದಾರೆ. ನಾನು ಅವರ ಮೇಲೆ ಯಾವತ್ತೂ ಜಾತಿ ನಿಂದನೆ ಮಾಡಿಲ್ಲ. ನಾನು 34 ವರ್ಷಗಳಿಂದ ಈ ವೃತ್ತಿಯಲ್ಲಿದ್ದೇನೆ. ನನ್ನ ವಿರುದ್ಧ ಇಂತಹ ಆರೋಪ ಬಂದಿರುವುದು ಇದೇ ಮೊದಲು” ಎಂದಿದ್ದಾರೆ ತಿವಾರಿ.

ಇದನ್ನೂ ಓದಿರಿ: ಹೆಣ್ಣು ಮಕ್ಕಳನ್ನು ಹೆತ್ತಿದ್ದಕ್ಕೆ ಗಂಡನ ಕಿರುಕುಳ; ಭಾರತ ಮೂಲದ ಮಹಿಳೆ ಅಮೆರಿಕದಲ್ಲಿ ಆತ್ಮಹತ್ಯೆ

“ಗೌತಮ್ ಅವರು ಎಸ್‌ಸಿ, ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯನ್ನು ದುರುಪಯೋಗ ಮಾಡಿಕೊಂಡಿದ್ದಾರೆ. ನಾನು ಯಾವಾಗ ನಿಂದನೆ ಮಾಡಿದೆ, ಎಲ್ಲಿ ಮಾಡಿದೆ ಎಂಬ ವಿವರಗಳು ದೂರಿನಲ್ಲಿ ಉಲ್ಲೇಖವಾಗಿಲ್ಲ” ಎಂದು ತಿವಾರಿ ಪ್ರತಿಕ್ರಿಯೆ ನೀಡಿದ್ದಾರೆ.

“ಬ್ಲ್ಯಾಕ್ ಮೇಲ್ ಮಾಡುವ ವ್ಯಕ್ತಿ ನನ್ನ ವಿರುದ್ಧ ಸೇಡಿನ ಕ್ರಮ ಜರುಗಿಸಿದ್ದಾರೆ” ಅವರು ಆರೋಪಿಸಿದ್ದಾರೆ.

ಈ ಪ್ರಕರಣವು ಲಕ್ನೋ ಪತ್ರಕರ್ತರ ನಡುವಿನ ಭ್ರಾತೃತ್ವಕ್ಕೆ ಪೆಟ್ಟು ನೀಡಿದೆ ಎಂಬ ಅಭಿಪ್ರಾಯಗಳು ವ್ಯಕ್ತವಾಗುತ್ತಿವೆ. “ಪತ್ರಕರ್ತರು ಸಮಾಜದ ಪರಿವರ್ತನೆಗಾಗಿ ಕೆಲಸ ಮಾಡಬೇಕು ಎಂಬುದನ್ನು ನೆನಪಿನಲ್ಲಿಟ್ಟುಕೊಳ್ಳಬೇಕು. ಅದಕ್ಕಾಗಿ ಬದ್ಧರಾಗಿರಬೇಕು. ಸ್ವತಃ ತಾವೇ ಸುದ್ದಿಯಾಗಬಾರದು” ಎಂದು ದೈನಿಕ್ ಭಾಸ್ಕರ್ ಮಾಜಿ ಸಂಪಾದಕ ರತನ್ ಮಣಿ ಲಾಲ್ ಹೇಳಿದ್ದಾರೆ. ಈ ಸಂಘರ್ಷವನ್ನು “ದುರದೃಷ್ಟಕರ” ಎಂದಿರುವ ಅವರು ಜಾತಿ ನಿಂದನೆಯನ್ನು ಸಮರ್ಥಿಸಲಾಗದು ಎಂದು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...