Homeದಲಿತ್ ಫೈಲ್ಸ್ಲಕ್ನೋ: ಜಾತಿ ನಿಂದನೆ ದೂರು ನೀಡಿದ ದಲಿತ ಪತ್ರಕರ್ತ; ಬ್ರಾಹ್ಮಣ ಪತ್ರಕರ್ತನ ವಿರುದ್ಧ ಎಫ್‌ಐಆರ್‌

ಲಕ್ನೋ: ಜಾತಿ ನಿಂದನೆ ದೂರು ನೀಡಿದ ದಲಿತ ಪತ್ರಕರ್ತ; ಬ್ರಾಹ್ಮಣ ಪತ್ರಕರ್ತನ ವಿರುದ್ಧ ಎಫ್‌ಐಆರ್‌

- Advertisement -
- Advertisement -

ರಾಜೇಂದ್ರ ಗೌತಮ್ ಅವರು ಉತ್ತರ ಪ್ರದೇಶದ ಲಕ್ನೋದಲ್ಲಿ ಹಿರಿಯ ಪತ್ರಕರ್ತ ಹೇಮಂತ್ ತಿವಾರಿ ವಿರುದ್ಧ ಜಾತಿ ನಿಂದನೆಯ ಪ್ರಕರಣ ದಾಖಲಿಸಿದ್ದಾರೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ದೌರ್ಜನ್ಯ ತಡೆ ಕಾಯ್ದೆಯಡಿಯಲ್ಲಿ ಎಫ್‌ಐಆರ್ ದಾಖಲಾಗಿದೆ. 44 ವರ್ಷದ ಗೌತಮ್ ದಲಿತರಾಗಿದ್ದು, 56 ವರ್ಷದ ತಿವಾರಿ ಬ್ರಾಹ್ಮಣ ಜಾತಿಗೆ ಸೇರಿದ್ದಾರೆ.

ಆಗಸ್ಟ್ 3 ರಂದು ಎಫ್‌ಐಆರ್‌ ದಾಖಲಾಗಿದೆ. “ತಿವಾರಿಯವರು ನನ್ನ ಪತ್ನಿ ಮತ್ತು ಮಗನ ವಿರುದ್ಧ ಜಾತಿ ನಿಂದನೆ ಮಾಡಿದ್ದಾರೆ” ಎಂದು ಗೌತಮ್‌ ಆರೋಪಿಸಿದ್ದಾರೆ. ಈ ಆರೋಪವನ್ನು ತಿವಾರಿ ನಿರಾಕರಿಸಿದ್ದಾರೆ.

“ನಾನು 2019ರಿಂದಲೂ ತಿವಾರಿ ಅವರನ್ನು ಸಹಿಸಿಕೊಳ್ಳುತ್ತಿದ್ದೇನೆ. ಅವರು ನನ್ನ ಹೆಂಡತಿ ಮತ್ತು ಮಗನ ವಿರುದ್ಧ ಟೀಕೆಗಳನ್ನು ಮಾಡಲು ಆರಂಭಿಸಿದ ಬಳಿಕ ಸಹಿಸಿಕೊಳ್ಳಲು ಸಾಧ್ಯವಾಗಲಿಲ್ಲ. ಹಾಗಾಗಿ ನಾನು ಪೊಲೀಸರಿಗೆ ಹೋಗಿ ದೂರು ನೀಡಿತ್ತು. ಇದು ಕಷ್ಟಕಷ್ಟವಾದರೂ ಅನಿವಾರ್ಯವಾಗಿತ್ತು” ಎಂದಿದ್ದಾರೆ ಗೌತಮ್‌.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಲಕ್ನೋದಲ್ಲಿನ ತನ್ನ ಅಪಾರ್ಟ್‌‌ಮೆಂಟ್‌‌ನಲ್ಲಿಯೇ ಕಚೇರಿಯನ್ನು ಮಾಡಿಕೊಂಡಿರುವ ಗೌತಮ್ ಅವರು, ‘ತಿಜರತ್’ ಮತ್ತು ‘ನಿಷ್ಪಾಕ್ಷ್ ದಿವ್ಯ ಸಂದೇಶ್’ ಎಂಬ ಎರಡು ಪತ್ರಿಕೆಗಳನ್ನು ನಡೆಸುತ್ತಿದ್ದಾರೆ.

ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾಕ್ಕೂ ದೂರು ನೀಡುವಂತೆ  ಸಹೋದ್ಯೋಗಿಗಳು ಸೂಚಿಸಿದ್ದಾರೆ. ಈ ಕ್ರಮ ಜರುಗಿಸಲೂ ಮುಂದಾಗಿದ್ದೇನೆ ಎಂದು ಗೌತಮ್ ತಿಳಿಸಿರುವುದಾಗಿ ‘ನ್ಯೂಸ್‌ಲಾಂಡ್ರಿ’ ವರದಿ ಮಾಡಿದೆ.

ಉತ್ತರ ಪ್ರದೇಶ ರಾಜ್ಯ ಸರ್ಕಾರದಿಂದ ಮಾನ್ಯತೆ ಪಡೆದ ‘ವರದಿಗಾರರ ಸಮಿತಿ’ಯ ಚುನಾವಣೆಯಲ್ಲಿ ತಿವಾರಿ ಅವರನ್ನು ಬೆಂಬಲಿಸಲು ನಿರಾಕರಿಸಿದೆ. ಆನಂತರದಲ್ಲಿ ತಿವಾರಿ ತನ್ನ ಮೇಲೆ ಜಾತಿವಾದಿ ನಿಂದನೆಗಳನ್ನು ಮಾಡಲಾರಂಭಿಸಿದರು ಎನ್ನುತ್ತಾರೆ ಗೌತಮ್‌.

ಚುನಾವಣೆಯು ಮಾರ್ಚ್ 2021ರಲ್ಲಿ ನಡೆಯಿತು. ಈ ಹಿಂದೆ ದೈನಿಕ್ ಜಾಗರಣ್‌ ಸೇರಿದಂತೆ ಇತರ ಪತ್ರಿಕೆಗಳಲ್ಲಿ ಕೆಲಸ ಮಾಡಿದ ತಿವಾರಿ ಅವರು ಅಧ್ಯಕ್ಷರಾಗಿಯೂ ಆಯ್ಕೆಯಾದರು.

“ಮಾಧ್ಯಮದಲ್ಲಿಯೂ ಚಾಮ್ಮರರು ನಮ್ಮನ್ನು ಸೋಲಿಸುತ್ತಾರೆಯೇ?” ಎಂದು ಜಾತಿ ಸೂಚಕ ನಿಂದನೆಗಳನ್ನು ಮಾಡಿದ್ದಾರೆಂಬ ಆರೋಪ ತಿವಾರಿ ಮೇಲೆ ಬಂದಿದೆ.

“ದಲಿತನಾಗಿ ಹುಟ್ಟಿದ್ದು ನನ್ನ ತಪ್ಪಲ್ಲ. ನಾನು ನನ್ನ ಪತ್ರಿಕೋದ್ಯಮವನ್ನು ಅತ್ಯಂತ ಪ್ರಾಮಾಣಿಕತೆಯಿಂದ ಮಾಡಿದ್ದೇನೆ. ಅದಕ್ಕಾಗಿಯೇ ಹೇಮಂತ್ ತಿವಾರಿಯಂತಹ ಪತ್ರಕರ್ತರಿಗೆ ಸಮಸ್ಯೆಯಾಗಿ ಕಾಣುತ್ತೇನೆ. ನಾನು ಹಿಂದುಳಿದ ಹಿನ್ನೆಲೆಯಿಂದ ಬಂದು ಈ ವೃತ್ತಿಯಲ್ಲಿ ತೊಡಗಿಸಿಕೊಂಡಿದ್ದೇನೆ. ನನಗೆ ತಿವಾರಿ ಬಗ್ಗೆ ಗೌರವವಿತ್ತು. ಆದರೆ ಆತ ನನ್ನ ಹೆಂಡತಿ ಮತ್ತು ಮಗನನ್ನು ‌ಎಳೆದುತಂದು ಗಡಿ ದಾಟಿದ್ದಾನೆ” ಎನ್ನುತ್ತಾರೆ ಗೌತಮ್‌.

ಕೆಲವು ವಾರಗಳ ಹಿಂದೆ, ತಿವಾರಿ ಅವರು ಗೌತಮ್ ಅವರ ಪತ್ನಿ ರೇಖಾ ಗೌತಮ್ ಮತ್ತು ಮಗ ನಿರ್ಭಯ್ ರಾಜ್ ವಿರುದ್ಧ ಪ್ರಕರಣ ದಾಖಲಿಸಿದ್ದರು. ಪುಸ್ತಕ, ಪತ್ರಿಕಾ ಮತ್ತು ನೋಂದಣಿ ಕಾಯಿದೆ, ಮಾಹಿತಿ ತಂತ್ರಜ್ಞಾನ ಕಾಯ್ದೆ ಮತ್ತು ಭಾರತೀಯ ದಂಡ ಸಂಹಿತೆ ಎಫ್‌ಐಆರ್ ದಾಖಲಿಸಿದ್ದರು. ಆಧಾರ ರಹಿತ ಸುದ್ದಿಯನ್ನು ತಮ್ಮ ಪತ್ರಿಕೆಯಲ್ಲಿ ಪ್ರಕಟಿಸಿ, ಅಂತರ್ಜಾಲದಲ್ಲಿ ಹರಿಬಿಟ್ಟು ಕಿರುಕುಳ ನೀಡಿದ್ದಾರೆ. ಮಾನಹಾನಿ ಮಾಡಿದ್ದಾರೆ ಎಂದು ಆರೋಪಿಸಿದ್ದರು.

ರೇಖಾ ಅವರು ನಿಷ್ಪಾಕ್ಷ್ ದಿವ್ಯ ಸಂದೇಶ ಮತ್ತು ತಿಜರತ್‌ನ ಸಂಪಾದಕರಾಗಿದ್ದಾರೆ. ನಿರ್ಭಯ್ ರಾಜ್‌ ವರದಿಗಾರರಾಗಿ ಕೆಲಸ ಮಾಡುತ್ತಿದ್ದಾರೆ.

“ರಾಜೇಂದ್ರ ಗೌತಮ್ ನನ್ನನ್ನು ದೂಷಿಸಲು ಪ್ರಯತ್ನಿಸುತ್ತಿದ್ದಾರೆ. ನಾನು ಅವರ ಮೇಲೆ ಯಾವತ್ತೂ ಜಾತಿ ನಿಂದನೆ ಮಾಡಿಲ್ಲ. ನಾನು 34 ವರ್ಷಗಳಿಂದ ಈ ವೃತ್ತಿಯಲ್ಲಿದ್ದೇನೆ. ನನ್ನ ವಿರುದ್ಧ ಇಂತಹ ಆರೋಪ ಬಂದಿರುವುದು ಇದೇ ಮೊದಲು” ಎಂದಿದ್ದಾರೆ ತಿವಾರಿ.

ಇದನ್ನೂ ಓದಿರಿ: ಹೆಣ್ಣು ಮಕ್ಕಳನ್ನು ಹೆತ್ತಿದ್ದಕ್ಕೆ ಗಂಡನ ಕಿರುಕುಳ; ಭಾರತ ಮೂಲದ ಮಹಿಳೆ ಅಮೆರಿಕದಲ್ಲಿ ಆತ್ಮಹತ್ಯೆ

“ಗೌತಮ್ ಅವರು ಎಸ್‌ಸಿ, ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯನ್ನು ದುರುಪಯೋಗ ಮಾಡಿಕೊಂಡಿದ್ದಾರೆ. ನಾನು ಯಾವಾಗ ನಿಂದನೆ ಮಾಡಿದೆ, ಎಲ್ಲಿ ಮಾಡಿದೆ ಎಂಬ ವಿವರಗಳು ದೂರಿನಲ್ಲಿ ಉಲ್ಲೇಖವಾಗಿಲ್ಲ” ಎಂದು ತಿವಾರಿ ಪ್ರತಿಕ್ರಿಯೆ ನೀಡಿದ್ದಾರೆ.

“ಬ್ಲ್ಯಾಕ್ ಮೇಲ್ ಮಾಡುವ ವ್ಯಕ್ತಿ ನನ್ನ ವಿರುದ್ಧ ಸೇಡಿನ ಕ್ರಮ ಜರುಗಿಸಿದ್ದಾರೆ” ಅವರು ಆರೋಪಿಸಿದ್ದಾರೆ.

ಈ ಪ್ರಕರಣವು ಲಕ್ನೋ ಪತ್ರಕರ್ತರ ನಡುವಿನ ಭ್ರಾತೃತ್ವಕ್ಕೆ ಪೆಟ್ಟು ನೀಡಿದೆ ಎಂಬ ಅಭಿಪ್ರಾಯಗಳು ವ್ಯಕ್ತವಾಗುತ್ತಿವೆ. “ಪತ್ರಕರ್ತರು ಸಮಾಜದ ಪರಿವರ್ತನೆಗಾಗಿ ಕೆಲಸ ಮಾಡಬೇಕು ಎಂಬುದನ್ನು ನೆನಪಿನಲ್ಲಿಟ್ಟುಕೊಳ್ಳಬೇಕು. ಅದಕ್ಕಾಗಿ ಬದ್ಧರಾಗಿರಬೇಕು. ಸ್ವತಃ ತಾವೇ ಸುದ್ದಿಯಾಗಬಾರದು” ಎಂದು ದೈನಿಕ್ ಭಾಸ್ಕರ್ ಮಾಜಿ ಸಂಪಾದಕ ರತನ್ ಮಣಿ ಲಾಲ್ ಹೇಳಿದ್ದಾರೆ. ಈ ಸಂಘರ್ಷವನ್ನು “ದುರದೃಷ್ಟಕರ” ಎಂದಿರುವ ಅವರು ಜಾತಿ ನಿಂದನೆಯನ್ನು ಸಮರ್ಥಿಸಲಾಗದು ಎಂದು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...