Homeದಲಿತ್ ಫೈಲ್ಸ್ಲಕ್ನೋ: ಜಾತಿ ನಿಂದನೆ ದೂರು ನೀಡಿದ ದಲಿತ ಪತ್ರಕರ್ತ; ಬ್ರಾಹ್ಮಣ ಪತ್ರಕರ್ತನ ವಿರುದ್ಧ ಎಫ್‌ಐಆರ್‌

ಲಕ್ನೋ: ಜಾತಿ ನಿಂದನೆ ದೂರು ನೀಡಿದ ದಲಿತ ಪತ್ರಕರ್ತ; ಬ್ರಾಹ್ಮಣ ಪತ್ರಕರ್ತನ ವಿರುದ್ಧ ಎಫ್‌ಐಆರ್‌

- Advertisement -
- Advertisement -

ರಾಜೇಂದ್ರ ಗೌತಮ್ ಅವರು ಉತ್ತರ ಪ್ರದೇಶದ ಲಕ್ನೋದಲ್ಲಿ ಹಿರಿಯ ಪತ್ರಕರ್ತ ಹೇಮಂತ್ ತಿವಾರಿ ವಿರುದ್ಧ ಜಾತಿ ನಿಂದನೆಯ ಪ್ರಕರಣ ದಾಖಲಿಸಿದ್ದಾರೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ದೌರ್ಜನ್ಯ ತಡೆ ಕಾಯ್ದೆಯಡಿಯಲ್ಲಿ ಎಫ್‌ಐಆರ್ ದಾಖಲಾಗಿದೆ. 44 ವರ್ಷದ ಗೌತಮ್ ದಲಿತರಾಗಿದ್ದು, 56 ವರ್ಷದ ತಿವಾರಿ ಬ್ರಾಹ್ಮಣ ಜಾತಿಗೆ ಸೇರಿದ್ದಾರೆ.

ಆಗಸ್ಟ್ 3 ರಂದು ಎಫ್‌ಐಆರ್‌ ದಾಖಲಾಗಿದೆ. “ತಿವಾರಿಯವರು ನನ್ನ ಪತ್ನಿ ಮತ್ತು ಮಗನ ವಿರುದ್ಧ ಜಾತಿ ನಿಂದನೆ ಮಾಡಿದ್ದಾರೆ” ಎಂದು ಗೌತಮ್‌ ಆರೋಪಿಸಿದ್ದಾರೆ. ಈ ಆರೋಪವನ್ನು ತಿವಾರಿ ನಿರಾಕರಿಸಿದ್ದಾರೆ.

“ನಾನು 2019ರಿಂದಲೂ ತಿವಾರಿ ಅವರನ್ನು ಸಹಿಸಿಕೊಳ್ಳುತ್ತಿದ್ದೇನೆ. ಅವರು ನನ್ನ ಹೆಂಡತಿ ಮತ್ತು ಮಗನ ವಿರುದ್ಧ ಟೀಕೆಗಳನ್ನು ಮಾಡಲು ಆರಂಭಿಸಿದ ಬಳಿಕ ಸಹಿಸಿಕೊಳ್ಳಲು ಸಾಧ್ಯವಾಗಲಿಲ್ಲ. ಹಾಗಾಗಿ ನಾನು ಪೊಲೀಸರಿಗೆ ಹೋಗಿ ದೂರು ನೀಡಿತ್ತು. ಇದು ಕಷ್ಟಕಷ್ಟವಾದರೂ ಅನಿವಾರ್ಯವಾಗಿತ್ತು” ಎಂದಿದ್ದಾರೆ ಗೌತಮ್‌.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಲಕ್ನೋದಲ್ಲಿನ ತನ್ನ ಅಪಾರ್ಟ್‌‌ಮೆಂಟ್‌‌ನಲ್ಲಿಯೇ ಕಚೇರಿಯನ್ನು ಮಾಡಿಕೊಂಡಿರುವ ಗೌತಮ್ ಅವರು, ‘ತಿಜರತ್’ ಮತ್ತು ‘ನಿಷ್ಪಾಕ್ಷ್ ದಿವ್ಯ ಸಂದೇಶ್’ ಎಂಬ ಎರಡು ಪತ್ರಿಕೆಗಳನ್ನು ನಡೆಸುತ್ತಿದ್ದಾರೆ.

ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾಕ್ಕೂ ದೂರು ನೀಡುವಂತೆ  ಸಹೋದ್ಯೋಗಿಗಳು ಸೂಚಿಸಿದ್ದಾರೆ. ಈ ಕ್ರಮ ಜರುಗಿಸಲೂ ಮುಂದಾಗಿದ್ದೇನೆ ಎಂದು ಗೌತಮ್ ತಿಳಿಸಿರುವುದಾಗಿ ‘ನ್ಯೂಸ್‌ಲಾಂಡ್ರಿ’ ವರದಿ ಮಾಡಿದೆ.

ಉತ್ತರ ಪ್ರದೇಶ ರಾಜ್ಯ ಸರ್ಕಾರದಿಂದ ಮಾನ್ಯತೆ ಪಡೆದ ‘ವರದಿಗಾರರ ಸಮಿತಿ’ಯ ಚುನಾವಣೆಯಲ್ಲಿ ತಿವಾರಿ ಅವರನ್ನು ಬೆಂಬಲಿಸಲು ನಿರಾಕರಿಸಿದೆ. ಆನಂತರದಲ್ಲಿ ತಿವಾರಿ ತನ್ನ ಮೇಲೆ ಜಾತಿವಾದಿ ನಿಂದನೆಗಳನ್ನು ಮಾಡಲಾರಂಭಿಸಿದರು ಎನ್ನುತ್ತಾರೆ ಗೌತಮ್‌.

ಚುನಾವಣೆಯು ಮಾರ್ಚ್ 2021ರಲ್ಲಿ ನಡೆಯಿತು. ಈ ಹಿಂದೆ ದೈನಿಕ್ ಜಾಗರಣ್‌ ಸೇರಿದಂತೆ ಇತರ ಪತ್ರಿಕೆಗಳಲ್ಲಿ ಕೆಲಸ ಮಾಡಿದ ತಿವಾರಿ ಅವರು ಅಧ್ಯಕ್ಷರಾಗಿಯೂ ಆಯ್ಕೆಯಾದರು.

“ಮಾಧ್ಯಮದಲ್ಲಿಯೂ ಚಾಮ್ಮರರು ನಮ್ಮನ್ನು ಸೋಲಿಸುತ್ತಾರೆಯೇ?” ಎಂದು ಜಾತಿ ಸೂಚಕ ನಿಂದನೆಗಳನ್ನು ಮಾಡಿದ್ದಾರೆಂಬ ಆರೋಪ ತಿವಾರಿ ಮೇಲೆ ಬಂದಿದೆ.

“ದಲಿತನಾಗಿ ಹುಟ್ಟಿದ್ದು ನನ್ನ ತಪ್ಪಲ್ಲ. ನಾನು ನನ್ನ ಪತ್ರಿಕೋದ್ಯಮವನ್ನು ಅತ್ಯಂತ ಪ್ರಾಮಾಣಿಕತೆಯಿಂದ ಮಾಡಿದ್ದೇನೆ. ಅದಕ್ಕಾಗಿಯೇ ಹೇಮಂತ್ ತಿವಾರಿಯಂತಹ ಪತ್ರಕರ್ತರಿಗೆ ಸಮಸ್ಯೆಯಾಗಿ ಕಾಣುತ್ತೇನೆ. ನಾನು ಹಿಂದುಳಿದ ಹಿನ್ನೆಲೆಯಿಂದ ಬಂದು ಈ ವೃತ್ತಿಯಲ್ಲಿ ತೊಡಗಿಸಿಕೊಂಡಿದ್ದೇನೆ. ನನಗೆ ತಿವಾರಿ ಬಗ್ಗೆ ಗೌರವವಿತ್ತು. ಆದರೆ ಆತ ನನ್ನ ಹೆಂಡತಿ ಮತ್ತು ಮಗನನ್ನು ‌ಎಳೆದುತಂದು ಗಡಿ ದಾಟಿದ್ದಾನೆ” ಎನ್ನುತ್ತಾರೆ ಗೌತಮ್‌.

ಕೆಲವು ವಾರಗಳ ಹಿಂದೆ, ತಿವಾರಿ ಅವರು ಗೌತಮ್ ಅವರ ಪತ್ನಿ ರೇಖಾ ಗೌತಮ್ ಮತ್ತು ಮಗ ನಿರ್ಭಯ್ ರಾಜ್ ವಿರುದ್ಧ ಪ್ರಕರಣ ದಾಖಲಿಸಿದ್ದರು. ಪುಸ್ತಕ, ಪತ್ರಿಕಾ ಮತ್ತು ನೋಂದಣಿ ಕಾಯಿದೆ, ಮಾಹಿತಿ ತಂತ್ರಜ್ಞಾನ ಕಾಯ್ದೆ ಮತ್ತು ಭಾರತೀಯ ದಂಡ ಸಂಹಿತೆ ಎಫ್‌ಐಆರ್ ದಾಖಲಿಸಿದ್ದರು. ಆಧಾರ ರಹಿತ ಸುದ್ದಿಯನ್ನು ತಮ್ಮ ಪತ್ರಿಕೆಯಲ್ಲಿ ಪ್ರಕಟಿಸಿ, ಅಂತರ್ಜಾಲದಲ್ಲಿ ಹರಿಬಿಟ್ಟು ಕಿರುಕುಳ ನೀಡಿದ್ದಾರೆ. ಮಾನಹಾನಿ ಮಾಡಿದ್ದಾರೆ ಎಂದು ಆರೋಪಿಸಿದ್ದರು.

ರೇಖಾ ಅವರು ನಿಷ್ಪಾಕ್ಷ್ ದಿವ್ಯ ಸಂದೇಶ ಮತ್ತು ತಿಜರತ್‌ನ ಸಂಪಾದಕರಾಗಿದ್ದಾರೆ. ನಿರ್ಭಯ್ ರಾಜ್‌ ವರದಿಗಾರರಾಗಿ ಕೆಲಸ ಮಾಡುತ್ತಿದ್ದಾರೆ.

“ರಾಜೇಂದ್ರ ಗೌತಮ್ ನನ್ನನ್ನು ದೂಷಿಸಲು ಪ್ರಯತ್ನಿಸುತ್ತಿದ್ದಾರೆ. ನಾನು ಅವರ ಮೇಲೆ ಯಾವತ್ತೂ ಜಾತಿ ನಿಂದನೆ ಮಾಡಿಲ್ಲ. ನಾನು 34 ವರ್ಷಗಳಿಂದ ಈ ವೃತ್ತಿಯಲ್ಲಿದ್ದೇನೆ. ನನ್ನ ವಿರುದ್ಧ ಇಂತಹ ಆರೋಪ ಬಂದಿರುವುದು ಇದೇ ಮೊದಲು” ಎಂದಿದ್ದಾರೆ ತಿವಾರಿ.

ಇದನ್ನೂ ಓದಿರಿ: ಹೆಣ್ಣು ಮಕ್ಕಳನ್ನು ಹೆತ್ತಿದ್ದಕ್ಕೆ ಗಂಡನ ಕಿರುಕುಳ; ಭಾರತ ಮೂಲದ ಮಹಿಳೆ ಅಮೆರಿಕದಲ್ಲಿ ಆತ್ಮಹತ್ಯೆ

“ಗೌತಮ್ ಅವರು ಎಸ್‌ಸಿ, ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯನ್ನು ದುರುಪಯೋಗ ಮಾಡಿಕೊಂಡಿದ್ದಾರೆ. ನಾನು ಯಾವಾಗ ನಿಂದನೆ ಮಾಡಿದೆ, ಎಲ್ಲಿ ಮಾಡಿದೆ ಎಂಬ ವಿವರಗಳು ದೂರಿನಲ್ಲಿ ಉಲ್ಲೇಖವಾಗಿಲ್ಲ” ಎಂದು ತಿವಾರಿ ಪ್ರತಿಕ್ರಿಯೆ ನೀಡಿದ್ದಾರೆ.

“ಬ್ಲ್ಯಾಕ್ ಮೇಲ್ ಮಾಡುವ ವ್ಯಕ್ತಿ ನನ್ನ ವಿರುದ್ಧ ಸೇಡಿನ ಕ್ರಮ ಜರುಗಿಸಿದ್ದಾರೆ” ಅವರು ಆರೋಪಿಸಿದ್ದಾರೆ.

ಈ ಪ್ರಕರಣವು ಲಕ್ನೋ ಪತ್ರಕರ್ತರ ನಡುವಿನ ಭ್ರಾತೃತ್ವಕ್ಕೆ ಪೆಟ್ಟು ನೀಡಿದೆ ಎಂಬ ಅಭಿಪ್ರಾಯಗಳು ವ್ಯಕ್ತವಾಗುತ್ತಿವೆ. “ಪತ್ರಕರ್ತರು ಸಮಾಜದ ಪರಿವರ್ತನೆಗಾಗಿ ಕೆಲಸ ಮಾಡಬೇಕು ಎಂಬುದನ್ನು ನೆನಪಿನಲ್ಲಿಟ್ಟುಕೊಳ್ಳಬೇಕು. ಅದಕ್ಕಾಗಿ ಬದ್ಧರಾಗಿರಬೇಕು. ಸ್ವತಃ ತಾವೇ ಸುದ್ದಿಯಾಗಬಾರದು” ಎಂದು ದೈನಿಕ್ ಭಾಸ್ಕರ್ ಮಾಜಿ ಸಂಪಾದಕ ರತನ್ ಮಣಿ ಲಾಲ್ ಹೇಳಿದ್ದಾರೆ. ಈ ಸಂಘರ್ಷವನ್ನು “ದುರದೃಷ್ಟಕರ” ಎಂದಿರುವ ಅವರು ಜಾತಿ ನಿಂದನೆಯನ್ನು ಸಮರ್ಥಿಸಲಾಗದು ಎಂದು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...