Homeದಲಿತ್ ಫೈಲ್ಸ್ಲಕ್ನೋ: ಜಾತಿ ನಿಂದನೆ ದೂರು ನೀಡಿದ ದಲಿತ ಪತ್ರಕರ್ತ; ಬ್ರಾಹ್ಮಣ ಪತ್ರಕರ್ತನ ವಿರುದ್ಧ ಎಫ್‌ಐಆರ್‌

ಲಕ್ನೋ: ಜಾತಿ ನಿಂದನೆ ದೂರು ನೀಡಿದ ದಲಿತ ಪತ್ರಕರ್ತ; ಬ್ರಾಹ್ಮಣ ಪತ್ರಕರ್ತನ ವಿರುದ್ಧ ಎಫ್‌ಐಆರ್‌

- Advertisement -
- Advertisement -

ರಾಜೇಂದ್ರ ಗೌತಮ್ ಅವರು ಉತ್ತರ ಪ್ರದೇಶದ ಲಕ್ನೋದಲ್ಲಿ ಹಿರಿಯ ಪತ್ರಕರ್ತ ಹೇಮಂತ್ ತಿವಾರಿ ವಿರುದ್ಧ ಜಾತಿ ನಿಂದನೆಯ ಪ್ರಕರಣ ದಾಖಲಿಸಿದ್ದಾರೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ದೌರ್ಜನ್ಯ ತಡೆ ಕಾಯ್ದೆಯಡಿಯಲ್ಲಿ ಎಫ್‌ಐಆರ್ ದಾಖಲಾಗಿದೆ. 44 ವರ್ಷದ ಗೌತಮ್ ದಲಿತರಾಗಿದ್ದು, 56 ವರ್ಷದ ತಿವಾರಿ ಬ್ರಾಹ್ಮಣ ಜಾತಿಗೆ ಸೇರಿದ್ದಾರೆ.

ಆಗಸ್ಟ್ 3 ರಂದು ಎಫ್‌ಐಆರ್‌ ದಾಖಲಾಗಿದೆ. “ತಿವಾರಿಯವರು ನನ್ನ ಪತ್ನಿ ಮತ್ತು ಮಗನ ವಿರುದ್ಧ ಜಾತಿ ನಿಂದನೆ ಮಾಡಿದ್ದಾರೆ” ಎಂದು ಗೌತಮ್‌ ಆರೋಪಿಸಿದ್ದಾರೆ. ಈ ಆರೋಪವನ್ನು ತಿವಾರಿ ನಿರಾಕರಿಸಿದ್ದಾರೆ.

“ನಾನು 2019ರಿಂದಲೂ ತಿವಾರಿ ಅವರನ್ನು ಸಹಿಸಿಕೊಳ್ಳುತ್ತಿದ್ದೇನೆ. ಅವರು ನನ್ನ ಹೆಂಡತಿ ಮತ್ತು ಮಗನ ವಿರುದ್ಧ ಟೀಕೆಗಳನ್ನು ಮಾಡಲು ಆರಂಭಿಸಿದ ಬಳಿಕ ಸಹಿಸಿಕೊಳ್ಳಲು ಸಾಧ್ಯವಾಗಲಿಲ್ಲ. ಹಾಗಾಗಿ ನಾನು ಪೊಲೀಸರಿಗೆ ಹೋಗಿ ದೂರು ನೀಡಿತ್ತು. ಇದು ಕಷ್ಟಕಷ್ಟವಾದರೂ ಅನಿವಾರ್ಯವಾಗಿತ್ತು” ಎಂದಿದ್ದಾರೆ ಗೌತಮ್‌.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಲಕ್ನೋದಲ್ಲಿನ ತನ್ನ ಅಪಾರ್ಟ್‌‌ಮೆಂಟ್‌‌ನಲ್ಲಿಯೇ ಕಚೇರಿಯನ್ನು ಮಾಡಿಕೊಂಡಿರುವ ಗೌತಮ್ ಅವರು, ‘ತಿಜರತ್’ ಮತ್ತು ‘ನಿಷ್ಪಾಕ್ಷ್ ದಿವ್ಯ ಸಂದೇಶ್’ ಎಂಬ ಎರಡು ಪತ್ರಿಕೆಗಳನ್ನು ನಡೆಸುತ್ತಿದ್ದಾರೆ.

ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾಕ್ಕೂ ದೂರು ನೀಡುವಂತೆ  ಸಹೋದ್ಯೋಗಿಗಳು ಸೂಚಿಸಿದ್ದಾರೆ. ಈ ಕ್ರಮ ಜರುಗಿಸಲೂ ಮುಂದಾಗಿದ್ದೇನೆ ಎಂದು ಗೌತಮ್ ತಿಳಿಸಿರುವುದಾಗಿ ‘ನ್ಯೂಸ್‌ಲಾಂಡ್ರಿ’ ವರದಿ ಮಾಡಿದೆ.

ಉತ್ತರ ಪ್ರದೇಶ ರಾಜ್ಯ ಸರ್ಕಾರದಿಂದ ಮಾನ್ಯತೆ ಪಡೆದ ‘ವರದಿಗಾರರ ಸಮಿತಿ’ಯ ಚುನಾವಣೆಯಲ್ಲಿ ತಿವಾರಿ ಅವರನ್ನು ಬೆಂಬಲಿಸಲು ನಿರಾಕರಿಸಿದೆ. ಆನಂತರದಲ್ಲಿ ತಿವಾರಿ ತನ್ನ ಮೇಲೆ ಜಾತಿವಾದಿ ನಿಂದನೆಗಳನ್ನು ಮಾಡಲಾರಂಭಿಸಿದರು ಎನ್ನುತ್ತಾರೆ ಗೌತಮ್‌.

ಚುನಾವಣೆಯು ಮಾರ್ಚ್ 2021ರಲ್ಲಿ ನಡೆಯಿತು. ಈ ಹಿಂದೆ ದೈನಿಕ್ ಜಾಗರಣ್‌ ಸೇರಿದಂತೆ ಇತರ ಪತ್ರಿಕೆಗಳಲ್ಲಿ ಕೆಲಸ ಮಾಡಿದ ತಿವಾರಿ ಅವರು ಅಧ್ಯಕ್ಷರಾಗಿಯೂ ಆಯ್ಕೆಯಾದರು.

“ಮಾಧ್ಯಮದಲ್ಲಿಯೂ ಚಾಮ್ಮರರು ನಮ್ಮನ್ನು ಸೋಲಿಸುತ್ತಾರೆಯೇ?” ಎಂದು ಜಾತಿ ಸೂಚಕ ನಿಂದನೆಗಳನ್ನು ಮಾಡಿದ್ದಾರೆಂಬ ಆರೋಪ ತಿವಾರಿ ಮೇಲೆ ಬಂದಿದೆ.

“ದಲಿತನಾಗಿ ಹುಟ್ಟಿದ್ದು ನನ್ನ ತಪ್ಪಲ್ಲ. ನಾನು ನನ್ನ ಪತ್ರಿಕೋದ್ಯಮವನ್ನು ಅತ್ಯಂತ ಪ್ರಾಮಾಣಿಕತೆಯಿಂದ ಮಾಡಿದ್ದೇನೆ. ಅದಕ್ಕಾಗಿಯೇ ಹೇಮಂತ್ ತಿವಾರಿಯಂತಹ ಪತ್ರಕರ್ತರಿಗೆ ಸಮಸ್ಯೆಯಾಗಿ ಕಾಣುತ್ತೇನೆ. ನಾನು ಹಿಂದುಳಿದ ಹಿನ್ನೆಲೆಯಿಂದ ಬಂದು ಈ ವೃತ್ತಿಯಲ್ಲಿ ತೊಡಗಿಸಿಕೊಂಡಿದ್ದೇನೆ. ನನಗೆ ತಿವಾರಿ ಬಗ್ಗೆ ಗೌರವವಿತ್ತು. ಆದರೆ ಆತ ನನ್ನ ಹೆಂಡತಿ ಮತ್ತು ಮಗನನ್ನು ‌ಎಳೆದುತಂದು ಗಡಿ ದಾಟಿದ್ದಾನೆ” ಎನ್ನುತ್ತಾರೆ ಗೌತಮ್‌.

ಕೆಲವು ವಾರಗಳ ಹಿಂದೆ, ತಿವಾರಿ ಅವರು ಗೌತಮ್ ಅವರ ಪತ್ನಿ ರೇಖಾ ಗೌತಮ್ ಮತ್ತು ಮಗ ನಿರ್ಭಯ್ ರಾಜ್ ವಿರುದ್ಧ ಪ್ರಕರಣ ದಾಖಲಿಸಿದ್ದರು. ಪುಸ್ತಕ, ಪತ್ರಿಕಾ ಮತ್ತು ನೋಂದಣಿ ಕಾಯಿದೆ, ಮಾಹಿತಿ ತಂತ್ರಜ್ಞಾನ ಕಾಯ್ದೆ ಮತ್ತು ಭಾರತೀಯ ದಂಡ ಸಂಹಿತೆ ಎಫ್‌ಐಆರ್ ದಾಖಲಿಸಿದ್ದರು. ಆಧಾರ ರಹಿತ ಸುದ್ದಿಯನ್ನು ತಮ್ಮ ಪತ್ರಿಕೆಯಲ್ಲಿ ಪ್ರಕಟಿಸಿ, ಅಂತರ್ಜಾಲದಲ್ಲಿ ಹರಿಬಿಟ್ಟು ಕಿರುಕುಳ ನೀಡಿದ್ದಾರೆ. ಮಾನಹಾನಿ ಮಾಡಿದ್ದಾರೆ ಎಂದು ಆರೋಪಿಸಿದ್ದರು.

ರೇಖಾ ಅವರು ನಿಷ್ಪಾಕ್ಷ್ ದಿವ್ಯ ಸಂದೇಶ ಮತ್ತು ತಿಜರತ್‌ನ ಸಂಪಾದಕರಾಗಿದ್ದಾರೆ. ನಿರ್ಭಯ್ ರಾಜ್‌ ವರದಿಗಾರರಾಗಿ ಕೆಲಸ ಮಾಡುತ್ತಿದ್ದಾರೆ.

“ರಾಜೇಂದ್ರ ಗೌತಮ್ ನನ್ನನ್ನು ದೂಷಿಸಲು ಪ್ರಯತ್ನಿಸುತ್ತಿದ್ದಾರೆ. ನಾನು ಅವರ ಮೇಲೆ ಯಾವತ್ತೂ ಜಾತಿ ನಿಂದನೆ ಮಾಡಿಲ್ಲ. ನಾನು 34 ವರ್ಷಗಳಿಂದ ಈ ವೃತ್ತಿಯಲ್ಲಿದ್ದೇನೆ. ನನ್ನ ವಿರುದ್ಧ ಇಂತಹ ಆರೋಪ ಬಂದಿರುವುದು ಇದೇ ಮೊದಲು” ಎಂದಿದ್ದಾರೆ ತಿವಾರಿ.

ಇದನ್ನೂ ಓದಿರಿ: ಹೆಣ್ಣು ಮಕ್ಕಳನ್ನು ಹೆತ್ತಿದ್ದಕ್ಕೆ ಗಂಡನ ಕಿರುಕುಳ; ಭಾರತ ಮೂಲದ ಮಹಿಳೆ ಅಮೆರಿಕದಲ್ಲಿ ಆತ್ಮಹತ್ಯೆ

“ಗೌತಮ್ ಅವರು ಎಸ್‌ಸಿ, ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯನ್ನು ದುರುಪಯೋಗ ಮಾಡಿಕೊಂಡಿದ್ದಾರೆ. ನಾನು ಯಾವಾಗ ನಿಂದನೆ ಮಾಡಿದೆ, ಎಲ್ಲಿ ಮಾಡಿದೆ ಎಂಬ ವಿವರಗಳು ದೂರಿನಲ್ಲಿ ಉಲ್ಲೇಖವಾಗಿಲ್ಲ” ಎಂದು ತಿವಾರಿ ಪ್ರತಿಕ್ರಿಯೆ ನೀಡಿದ್ದಾರೆ.

“ಬ್ಲ್ಯಾಕ್ ಮೇಲ್ ಮಾಡುವ ವ್ಯಕ್ತಿ ನನ್ನ ವಿರುದ್ಧ ಸೇಡಿನ ಕ್ರಮ ಜರುಗಿಸಿದ್ದಾರೆ” ಅವರು ಆರೋಪಿಸಿದ್ದಾರೆ.

ಈ ಪ್ರಕರಣವು ಲಕ್ನೋ ಪತ್ರಕರ್ತರ ನಡುವಿನ ಭ್ರಾತೃತ್ವಕ್ಕೆ ಪೆಟ್ಟು ನೀಡಿದೆ ಎಂಬ ಅಭಿಪ್ರಾಯಗಳು ವ್ಯಕ್ತವಾಗುತ್ತಿವೆ. “ಪತ್ರಕರ್ತರು ಸಮಾಜದ ಪರಿವರ್ತನೆಗಾಗಿ ಕೆಲಸ ಮಾಡಬೇಕು ಎಂಬುದನ್ನು ನೆನಪಿನಲ್ಲಿಟ್ಟುಕೊಳ್ಳಬೇಕು. ಅದಕ್ಕಾಗಿ ಬದ್ಧರಾಗಿರಬೇಕು. ಸ್ವತಃ ತಾವೇ ಸುದ್ದಿಯಾಗಬಾರದು” ಎಂದು ದೈನಿಕ್ ಭಾಸ್ಕರ್ ಮಾಜಿ ಸಂಪಾದಕ ರತನ್ ಮಣಿ ಲಾಲ್ ಹೇಳಿದ್ದಾರೆ. ಈ ಸಂಘರ್ಷವನ್ನು “ದುರದೃಷ್ಟಕರ” ಎಂದಿರುವ ಅವರು ಜಾತಿ ನಿಂದನೆಯನ್ನು ಸಮರ್ಥಿಸಲಾಗದು ಎಂದು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....