Homeದಲಿತ್ ಫೈಲ್ಸ್ಲಕ್ನೋ: ಜಾತಿ ನಿಂದನೆ ದೂರು ನೀಡಿದ ದಲಿತ ಪತ್ರಕರ್ತ; ಬ್ರಾಹ್ಮಣ ಪತ್ರಕರ್ತನ ವಿರುದ್ಧ ಎಫ್‌ಐಆರ್‌

ಲಕ್ನೋ: ಜಾತಿ ನಿಂದನೆ ದೂರು ನೀಡಿದ ದಲಿತ ಪತ್ರಕರ್ತ; ಬ್ರಾಹ್ಮಣ ಪತ್ರಕರ್ತನ ವಿರುದ್ಧ ಎಫ್‌ಐಆರ್‌

- Advertisement -
- Advertisement -

ರಾಜೇಂದ್ರ ಗೌತಮ್ ಅವರು ಉತ್ತರ ಪ್ರದೇಶದ ಲಕ್ನೋದಲ್ಲಿ ಹಿರಿಯ ಪತ್ರಕರ್ತ ಹೇಮಂತ್ ತಿವಾರಿ ವಿರುದ್ಧ ಜಾತಿ ನಿಂದನೆಯ ಪ್ರಕರಣ ದಾಖಲಿಸಿದ್ದಾರೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ದೌರ್ಜನ್ಯ ತಡೆ ಕಾಯ್ದೆಯಡಿಯಲ್ಲಿ ಎಫ್‌ಐಆರ್ ದಾಖಲಾಗಿದೆ. 44 ವರ್ಷದ ಗೌತಮ್ ದಲಿತರಾಗಿದ್ದು, 56 ವರ್ಷದ ತಿವಾರಿ ಬ್ರಾಹ್ಮಣ ಜಾತಿಗೆ ಸೇರಿದ್ದಾರೆ.

ಆಗಸ್ಟ್ 3 ರಂದು ಎಫ್‌ಐಆರ್‌ ದಾಖಲಾಗಿದೆ. “ತಿವಾರಿಯವರು ನನ್ನ ಪತ್ನಿ ಮತ್ತು ಮಗನ ವಿರುದ್ಧ ಜಾತಿ ನಿಂದನೆ ಮಾಡಿದ್ದಾರೆ” ಎಂದು ಗೌತಮ್‌ ಆರೋಪಿಸಿದ್ದಾರೆ. ಈ ಆರೋಪವನ್ನು ತಿವಾರಿ ನಿರಾಕರಿಸಿದ್ದಾರೆ.

“ನಾನು 2019ರಿಂದಲೂ ತಿವಾರಿ ಅವರನ್ನು ಸಹಿಸಿಕೊಳ್ಳುತ್ತಿದ್ದೇನೆ. ಅವರು ನನ್ನ ಹೆಂಡತಿ ಮತ್ತು ಮಗನ ವಿರುದ್ಧ ಟೀಕೆಗಳನ್ನು ಮಾಡಲು ಆರಂಭಿಸಿದ ಬಳಿಕ ಸಹಿಸಿಕೊಳ್ಳಲು ಸಾಧ್ಯವಾಗಲಿಲ್ಲ. ಹಾಗಾಗಿ ನಾನು ಪೊಲೀಸರಿಗೆ ಹೋಗಿ ದೂರು ನೀಡಿತ್ತು. ಇದು ಕಷ್ಟಕಷ್ಟವಾದರೂ ಅನಿವಾರ್ಯವಾಗಿತ್ತು” ಎಂದಿದ್ದಾರೆ ಗೌತಮ್‌.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಲಕ್ನೋದಲ್ಲಿನ ತನ್ನ ಅಪಾರ್ಟ್‌‌ಮೆಂಟ್‌‌ನಲ್ಲಿಯೇ ಕಚೇರಿಯನ್ನು ಮಾಡಿಕೊಂಡಿರುವ ಗೌತಮ್ ಅವರು, ‘ತಿಜರತ್’ ಮತ್ತು ‘ನಿಷ್ಪಾಕ್ಷ್ ದಿವ್ಯ ಸಂದೇಶ್’ ಎಂಬ ಎರಡು ಪತ್ರಿಕೆಗಳನ್ನು ನಡೆಸುತ್ತಿದ್ದಾರೆ.

ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾಕ್ಕೂ ದೂರು ನೀಡುವಂತೆ  ಸಹೋದ್ಯೋಗಿಗಳು ಸೂಚಿಸಿದ್ದಾರೆ. ಈ ಕ್ರಮ ಜರುಗಿಸಲೂ ಮುಂದಾಗಿದ್ದೇನೆ ಎಂದು ಗೌತಮ್ ತಿಳಿಸಿರುವುದಾಗಿ ‘ನ್ಯೂಸ್‌ಲಾಂಡ್ರಿ’ ವರದಿ ಮಾಡಿದೆ.

ಉತ್ತರ ಪ್ರದೇಶ ರಾಜ್ಯ ಸರ್ಕಾರದಿಂದ ಮಾನ್ಯತೆ ಪಡೆದ ‘ವರದಿಗಾರರ ಸಮಿತಿ’ಯ ಚುನಾವಣೆಯಲ್ಲಿ ತಿವಾರಿ ಅವರನ್ನು ಬೆಂಬಲಿಸಲು ನಿರಾಕರಿಸಿದೆ. ಆನಂತರದಲ್ಲಿ ತಿವಾರಿ ತನ್ನ ಮೇಲೆ ಜಾತಿವಾದಿ ನಿಂದನೆಗಳನ್ನು ಮಾಡಲಾರಂಭಿಸಿದರು ಎನ್ನುತ್ತಾರೆ ಗೌತಮ್‌.

ಚುನಾವಣೆಯು ಮಾರ್ಚ್ 2021ರಲ್ಲಿ ನಡೆಯಿತು. ಈ ಹಿಂದೆ ದೈನಿಕ್ ಜಾಗರಣ್‌ ಸೇರಿದಂತೆ ಇತರ ಪತ್ರಿಕೆಗಳಲ್ಲಿ ಕೆಲಸ ಮಾಡಿದ ತಿವಾರಿ ಅವರು ಅಧ್ಯಕ್ಷರಾಗಿಯೂ ಆಯ್ಕೆಯಾದರು.

“ಮಾಧ್ಯಮದಲ್ಲಿಯೂ ಚಾಮ್ಮರರು ನಮ್ಮನ್ನು ಸೋಲಿಸುತ್ತಾರೆಯೇ?” ಎಂದು ಜಾತಿ ಸೂಚಕ ನಿಂದನೆಗಳನ್ನು ಮಾಡಿದ್ದಾರೆಂಬ ಆರೋಪ ತಿವಾರಿ ಮೇಲೆ ಬಂದಿದೆ.

“ದಲಿತನಾಗಿ ಹುಟ್ಟಿದ್ದು ನನ್ನ ತಪ್ಪಲ್ಲ. ನಾನು ನನ್ನ ಪತ್ರಿಕೋದ್ಯಮವನ್ನು ಅತ್ಯಂತ ಪ್ರಾಮಾಣಿಕತೆಯಿಂದ ಮಾಡಿದ್ದೇನೆ. ಅದಕ್ಕಾಗಿಯೇ ಹೇಮಂತ್ ತಿವಾರಿಯಂತಹ ಪತ್ರಕರ್ತರಿಗೆ ಸಮಸ್ಯೆಯಾಗಿ ಕಾಣುತ್ತೇನೆ. ನಾನು ಹಿಂದುಳಿದ ಹಿನ್ನೆಲೆಯಿಂದ ಬಂದು ಈ ವೃತ್ತಿಯಲ್ಲಿ ತೊಡಗಿಸಿಕೊಂಡಿದ್ದೇನೆ. ನನಗೆ ತಿವಾರಿ ಬಗ್ಗೆ ಗೌರವವಿತ್ತು. ಆದರೆ ಆತ ನನ್ನ ಹೆಂಡತಿ ಮತ್ತು ಮಗನನ್ನು ‌ಎಳೆದುತಂದು ಗಡಿ ದಾಟಿದ್ದಾನೆ” ಎನ್ನುತ್ತಾರೆ ಗೌತಮ್‌.

ಕೆಲವು ವಾರಗಳ ಹಿಂದೆ, ತಿವಾರಿ ಅವರು ಗೌತಮ್ ಅವರ ಪತ್ನಿ ರೇಖಾ ಗೌತಮ್ ಮತ್ತು ಮಗ ನಿರ್ಭಯ್ ರಾಜ್ ವಿರುದ್ಧ ಪ್ರಕರಣ ದಾಖಲಿಸಿದ್ದರು. ಪುಸ್ತಕ, ಪತ್ರಿಕಾ ಮತ್ತು ನೋಂದಣಿ ಕಾಯಿದೆ, ಮಾಹಿತಿ ತಂತ್ರಜ್ಞಾನ ಕಾಯ್ದೆ ಮತ್ತು ಭಾರತೀಯ ದಂಡ ಸಂಹಿತೆ ಎಫ್‌ಐಆರ್ ದಾಖಲಿಸಿದ್ದರು. ಆಧಾರ ರಹಿತ ಸುದ್ದಿಯನ್ನು ತಮ್ಮ ಪತ್ರಿಕೆಯಲ್ಲಿ ಪ್ರಕಟಿಸಿ, ಅಂತರ್ಜಾಲದಲ್ಲಿ ಹರಿಬಿಟ್ಟು ಕಿರುಕುಳ ನೀಡಿದ್ದಾರೆ. ಮಾನಹಾನಿ ಮಾಡಿದ್ದಾರೆ ಎಂದು ಆರೋಪಿಸಿದ್ದರು.

ರೇಖಾ ಅವರು ನಿಷ್ಪಾಕ್ಷ್ ದಿವ್ಯ ಸಂದೇಶ ಮತ್ತು ತಿಜರತ್‌ನ ಸಂಪಾದಕರಾಗಿದ್ದಾರೆ. ನಿರ್ಭಯ್ ರಾಜ್‌ ವರದಿಗಾರರಾಗಿ ಕೆಲಸ ಮಾಡುತ್ತಿದ್ದಾರೆ.

“ರಾಜೇಂದ್ರ ಗೌತಮ್ ನನ್ನನ್ನು ದೂಷಿಸಲು ಪ್ರಯತ್ನಿಸುತ್ತಿದ್ದಾರೆ. ನಾನು ಅವರ ಮೇಲೆ ಯಾವತ್ತೂ ಜಾತಿ ನಿಂದನೆ ಮಾಡಿಲ್ಲ. ನಾನು 34 ವರ್ಷಗಳಿಂದ ಈ ವೃತ್ತಿಯಲ್ಲಿದ್ದೇನೆ. ನನ್ನ ವಿರುದ್ಧ ಇಂತಹ ಆರೋಪ ಬಂದಿರುವುದು ಇದೇ ಮೊದಲು” ಎಂದಿದ್ದಾರೆ ತಿವಾರಿ.

ಇದನ್ನೂ ಓದಿರಿ: ಹೆಣ್ಣು ಮಕ್ಕಳನ್ನು ಹೆತ್ತಿದ್ದಕ್ಕೆ ಗಂಡನ ಕಿರುಕುಳ; ಭಾರತ ಮೂಲದ ಮಹಿಳೆ ಅಮೆರಿಕದಲ್ಲಿ ಆತ್ಮಹತ್ಯೆ

“ಗೌತಮ್ ಅವರು ಎಸ್‌ಸಿ, ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯನ್ನು ದುರುಪಯೋಗ ಮಾಡಿಕೊಂಡಿದ್ದಾರೆ. ನಾನು ಯಾವಾಗ ನಿಂದನೆ ಮಾಡಿದೆ, ಎಲ್ಲಿ ಮಾಡಿದೆ ಎಂಬ ವಿವರಗಳು ದೂರಿನಲ್ಲಿ ಉಲ್ಲೇಖವಾಗಿಲ್ಲ” ಎಂದು ತಿವಾರಿ ಪ್ರತಿಕ್ರಿಯೆ ನೀಡಿದ್ದಾರೆ.

“ಬ್ಲ್ಯಾಕ್ ಮೇಲ್ ಮಾಡುವ ವ್ಯಕ್ತಿ ನನ್ನ ವಿರುದ್ಧ ಸೇಡಿನ ಕ್ರಮ ಜರುಗಿಸಿದ್ದಾರೆ” ಅವರು ಆರೋಪಿಸಿದ್ದಾರೆ.

ಈ ಪ್ರಕರಣವು ಲಕ್ನೋ ಪತ್ರಕರ್ತರ ನಡುವಿನ ಭ್ರಾತೃತ್ವಕ್ಕೆ ಪೆಟ್ಟು ನೀಡಿದೆ ಎಂಬ ಅಭಿಪ್ರಾಯಗಳು ವ್ಯಕ್ತವಾಗುತ್ತಿವೆ. “ಪತ್ರಕರ್ತರು ಸಮಾಜದ ಪರಿವರ್ತನೆಗಾಗಿ ಕೆಲಸ ಮಾಡಬೇಕು ಎಂಬುದನ್ನು ನೆನಪಿನಲ್ಲಿಟ್ಟುಕೊಳ್ಳಬೇಕು. ಅದಕ್ಕಾಗಿ ಬದ್ಧರಾಗಿರಬೇಕು. ಸ್ವತಃ ತಾವೇ ಸುದ್ದಿಯಾಗಬಾರದು” ಎಂದು ದೈನಿಕ್ ಭಾಸ್ಕರ್ ಮಾಜಿ ಸಂಪಾದಕ ರತನ್ ಮಣಿ ಲಾಲ್ ಹೇಳಿದ್ದಾರೆ. ಈ ಸಂಘರ್ಷವನ್ನು “ದುರದೃಷ್ಟಕರ” ಎಂದಿರುವ ಅವರು ಜಾತಿ ನಿಂದನೆಯನ್ನು ಸಮರ್ಥಿಸಲಾಗದು ಎಂದು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...