Homeಮುಖಪುಟಲಕ್ನೋ: ಆತಂಕಿತ ಮಹಿಳೆಯರ ಭಾವನೆ ಗ್ರಹಿಸಿ ಪೊಲೀಸರಿಗೆ ಮಾಹಿತಿ ನೀಡುವ ಸ್ಮಾರ್ಟ್ ಕ್ಯಾಮರಗಳ ಅಳವಡಿಕೆ!

ಲಕ್ನೋ: ಆತಂಕಿತ ಮಹಿಳೆಯರ ಭಾವನೆ ಗ್ರಹಿಸಿ ಪೊಲೀಸರಿಗೆ ಮಾಹಿತಿ ನೀಡುವ ಸ್ಮಾರ್ಟ್ ಕ್ಯಾಮರಗಳ ಅಳವಡಿಕೆ!

ಆತಂಕದಲ್ಲಿರುವ ಮಹಿಳೆಯರು ಫೋನ್ ತೆಗೆದುಕೊಂಡು ಸಹಾಯಕ್ಕಾಗಿ 100 ಅಥವಾ 112 ಡಯಲ್ ಮಾಡುವ ಮುನ್ನವೇ ಕ್ಯಾಮರಗಳ ಸಹಾಯದಿಂದ ಆ ವಿಷಯ ಪೊಲೀಸ್ ಠಾಣೆಗೆ ತಿಳಿದಿರುತ್ತದೆ...

- Advertisement -
- Advertisement -

ಉತ್ತರ ಪ್ರದೇಶ ರಾಜ್ಯವು ದೇಶದಲ್ಲಿಯೇ ಅತಿ ಹೆಚ್ಚು ಅಪರಾಧಗಳು ನಡೆಯುವ ಹಾಗೂ ಮಹಿಳೆಯರು ಮತ್ತು ಮಕ್ಕಳ ಮೇಲಿನ ಅತ್ಯಾಚಾರ, ಹಲ್ಲೆ, ಕೊಲೆ, ಹಿಂಸಾಚಾರಕ್ಕೆ ಕುಖ್ಯಾತಿಯಾದ ರಾಜ್ಯವಾಗಿದೆ. ಅಲ್ಲಿನ ಸರ್ಕಾರವಾಗಲಿ, ಪೊಲೀಸ್ ವ್ಯವಸ್ಥೆಯಾಗಲಿ ಅಪರಾಧ ತಡೆಗೆ ಪ್ರಾಮಾಣಿಕ ಪಯತ್ನ ಮಾಡುತ್ತಿಲ್ಲ ಎಂಬ ಆರೋಪವಿದೆ. ಇಂತಹ ರಾಜ್ಯದ ರಾಜಧಾನಿ ಲಕ್ನೋದಲ್ಲಿನ ಮಹಿಳೆಯರ ಮೇಲಿನ ಅಪರಾಧಗಳ ತಡೆಗೆ ಪೊಲೀಸರು ಕ್ಯಾಮರಗಳ ಮೊರೆ ಹೋಗಿದ್ದಾರೆ.

ಸಾರ್ವಜನಿಕ ಸ್ಥಳಗಳನ್ನು ಎಐ-ಸಾಮರ್ಥ್ಯವುಳ್ಳ ಕ್ಯಾಮೆರಾಗಳೊಂದಿಗೆ ಸಜ್ಜುಗೊಳಿಸಲು ಲಕ್ನೋ ಪೊಲೀಸರು ಸಜ್ಜಾಗಿದ್ದಾರೆ. ಆ ಕ್ಯಾಮರಗಳು ಮುಖದ ಅಭಿವ್ಯಕ್ತಿಗಳ ಆಧಾರದ ಮೇಲೆ ತೊಂದರೆಯಲ್ಲಿರುವ ಮಹಿಳೆಯರ ಚಿತ್ರಗಳನ್ನು ಕ್ಲಿಕ್ ಮಾಡುತ್ತದೆ ಮತ್ತು ಹತ್ತಿರದ ಪೊಲೀಸ್ ಠಾಣೆಗೆ ಎಚ್ಚರಿಕೆ ನೀಡುತ್ತದೆ ಎಂದು ಪೊಲೀಸ್ ಹೇಳಿಕೆ ಉಲ್ಲೇಖಿಸಿ ದಿ ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

ಸಾರ್ವಜನಿಕ ಸ್ಥಳದಲ್ಲಿ ಹುಡುಗಿಯರು ತಮ್ಮ ಮುಖಭಾವನೆಗಳನ್ನು ಬದಲಿಸಿದ ಕೂಡಲೇ “ಅವರನ್ನು ಯಾರೋ ಹಿಂಬಾಲಿಸುತ್ತಿದ್ದಾರೆ, ಬೆದರಿಸುತ್ತಿದ್ದಾರೆ ಅಥವಾ ಚುಡಾಯಿಸುತ್ತಿದ್ದಾರೆ” ಎಂಬುದನ್ನು ಗುರುತಿಸುವ ಕ್ಯಾಮರಗಳು ಹತ್ತಿರದ ಪೊಲೀಸರಿಗೆ ಮಾಹಿತಿ ನೀಡಿ ಆರೋಪಿಗಳನ್ನು ಬಂಧಿಸಲು ಸಹಾಯ ಮಾಡುತ್ತವೆ ಎಂದು ಪೊಲೀಸ್ ಕಮಿಷನರ್ ಡಿಕೆ ಠಾಕೂರ್ ತಿಳಿಸಿದ್ದಾರೆ.

ಜಿಲ್ಲೆಯ ಸುರಕ್ಷತೆಯ ವಿಷಯವಾಗಿ “ಆಶಿಶ್, ಅಭಯ್ ಮತ್ತು ಅಭ್ಯುದಯ” ಎಂಬ ಕಾರ್ಯಗಾರದಲ್ಲಿ ಮಾತನಾಡಿದ ಅವರು, ‘ಜಿಲ್ಲೆಯಲ್ಲಿ ಹೆಚ್ಚಾಗಿ ಮಹಿಳೆಯರು ಓಡಾಡುವ ಮತ್ತು ಅಪರಾಧಗಳು ದಾಖಲಾಗಿರುವ 200 ಸ್ಥಳಗಳನ್ನು ಗುರುತಿಸಿದ್ದೇವೆ’ ಎಂದಿದ್ದಾರೆ.

ಸಾರ್ವಜನಿಕ ಸ್ಥಳಗಳಲ್ಲಿ ಎಐ-ಸಾಮರ್ಥ್ಯವುಳ್ಳ ಕ್ಯಾಮರಗಳನ್ನು ಅಳವಡಿಸುತ್ತಿದ್ದೇವೆ. ಇವು ತ್ವರಿತವಾಗಿ ಪೊಲೀಸ್ ಠಾಣೆಗಳಿಗೆ ಮಾಹಿತಿ ಒದಗಿಸುತ್ತವೆ. ಯಾವುದೇ ಮಹಿಳೆಯರು ಆತಂಕಿತ ಸ್ಥಿತಿಯಲ್ಲಿದ್ದರೆ ಅವರ ಮುಖಭಾವನೆಗಳನ್ನು ಆಧರಿಸಿ ಆ ಮಾಹಿತಿಯನ್ನು ವೇಗವಾಗಿ ಪೊಲೀಸ್ ಠಾಣೆಗಳಿಗೆ ಕಳಿಸುತ್ತದೆ. ಆಕೆ ಫೋನ್ ತೆಗೆದುಕೊಂಡು ಸಹಾಯಕ್ಕಾಗಿ 100 ಅಥವಾ 112 ಡಯಲ್ ಮಾಡುವ ಮುನ್ನವೇ ಆ ವಿಷಯ ಪೊಲೀಸ್ ಠಾಣೆಗೆ ತಿಳಿದಿರುತ್ತದೆ ಎಂದು ಡಿಕೆ ಠಾಕೂರ್ ಹೇಳಿದ್ದಾರೆ.

ಉತ್ತರ ಪ್ರದೇಶದಲ್ಲಿ ಲಕ್ನೋ ನಗರ ಮಾತ್ರವೇ ದೇಶದ ಮಹಿಳಾ ಸುರಕ್ಷತಾ ನಗರವೆಂದು ಸೇರ್ಪಡೆಗೊಂಡಿದೆ ಎಂದು ಕಮಿಷನರ್ ತಿಳಿಸಿದ್ದಾರೆ. ಇಲ್ಲಿ 31 ಪಿಂಕ್ ಬೂತ್‌ಗಳು, 10 ಸಂಚಾರಿ ಪೊಲೀಸ್ ವಾಹನಗಳು, ಮಹಿಲಾ ಕಾನ್ಸ್ಟೇಬಲ್‌ಗಳನ್ನೊಳಗೊಂಡ 100 ಸ್ಕೂಟಿಗಳನ್ನು ಈಗಾಗಲೇ ನಿಯೋಜಿಸಲಾಗಿದೆ ಎಂದಿದ್ದಾರೆ.

ಲಕ್ನೋ ಪೊಲೀಸರ ಈ ಹೊಸ ಕ್ಯಾಮರ ಅವತಾರವನ್ನು ಮಹಿಳೆಯರು ಹೇಗೆ ಸ್ವೀಕರಿಸುತ್ತಾರೆ ನೋಡಬೇಕಿದೆ. ಏಕೆಂದರೆ ಮಹಿಳೆಯರು ಯಾವ ವಿಷಯಕ್ಕೆ ಬೇಕಾದರೂ ಆತಂಕಗೊಳ್ಳಬಹುದು. ಅದೆಲ್ಲವೂ ಪೊಲೀಸರಿಗೆ ತಿಳಿಯಬೇಕೆ? ಮಹಿಳೆಯರಿಗೆ ಖಾಸಗಿತನವೆಂಬುದಿಲ್ಲವೇ? ಅನವಶ್ಯಕವಾಗಿ ಪೊಲೀಸರು ಮೂಗು ತೂರಿಸಿದಂತಾಗುವುದಿಲ್ಲವೇ? ಎಂಬ ಪ್ರಶ್ನೆಗಳು ಎದ್ದಿವೆ.

ಇದುವರೆಗೂ ಮಹಿಳೆಯರು ನೀಡಿದ ದೂರುಗಳಲ್ಲಿ ಎಷ್ಟನ್ನು ಪೊಲೀಸರು ಗಂಭೀರವಾಗಿ ತೆಗೆದುಕೊಂಡು ತನಿಖೆ ನಡೆಸುತ್ತಿದ್ದಾರೆ? ಆ ದೂರುಗಳಲ್ಲಿ ಎಷ್ಟು ಜನರಿಗೆ ಶಿಕ್ಷೆಯಾಗಿದೆ? ಪೊಲೀಸರು ತಾವು ಮಾಡಬೇಕಾದ ಕರ್ತವ್ಯಗಳನ್ನು ಮರೆತು ಕ್ಯಾಮರ ಮೊರೆ ಹೋಗುವುದು ಸರಿಯಲ್ಲ ಎಂದು ಅಭಿಪ್ರಾಯಗಳು ಸಾಮಾಜಿಕ ಜಾಲತಾಣದಲ್ಲಿ ವ್ಯಕ್ತವಾಗಿವೆ.


ಇದನ್ನೂ ಓದಿ; ಕೊವಾಕ್ಸಿನ್‌‌ ತೆಗೆದುಕೊಂಡಂತೆ ನಟನೆ ಮಾಡಿದ ಜಿಲ್ಲಾ ವೈದ್ಯಾಧಿಕಾರಿ- ವಿಡಿಯೋ ವೈರಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...