Homeಮುಖಪುಟಲಕ್ನೋ: ಆತಂಕಿತ ಮಹಿಳೆಯರ ಭಾವನೆ ಗ್ರಹಿಸಿ ಪೊಲೀಸರಿಗೆ ಮಾಹಿತಿ ನೀಡುವ ಸ್ಮಾರ್ಟ್ ಕ್ಯಾಮರಗಳ ಅಳವಡಿಕೆ!

ಲಕ್ನೋ: ಆತಂಕಿತ ಮಹಿಳೆಯರ ಭಾವನೆ ಗ್ರಹಿಸಿ ಪೊಲೀಸರಿಗೆ ಮಾಹಿತಿ ನೀಡುವ ಸ್ಮಾರ್ಟ್ ಕ್ಯಾಮರಗಳ ಅಳವಡಿಕೆ!

ಆತಂಕದಲ್ಲಿರುವ ಮಹಿಳೆಯರು ಫೋನ್ ತೆಗೆದುಕೊಂಡು ಸಹಾಯಕ್ಕಾಗಿ 100 ಅಥವಾ 112 ಡಯಲ್ ಮಾಡುವ ಮುನ್ನವೇ ಕ್ಯಾಮರಗಳ ಸಹಾಯದಿಂದ ಆ ವಿಷಯ ಪೊಲೀಸ್ ಠಾಣೆಗೆ ತಿಳಿದಿರುತ್ತದೆ...

- Advertisement -
- Advertisement -

ಉತ್ತರ ಪ್ರದೇಶ ರಾಜ್ಯವು ದೇಶದಲ್ಲಿಯೇ ಅತಿ ಹೆಚ್ಚು ಅಪರಾಧಗಳು ನಡೆಯುವ ಹಾಗೂ ಮಹಿಳೆಯರು ಮತ್ತು ಮಕ್ಕಳ ಮೇಲಿನ ಅತ್ಯಾಚಾರ, ಹಲ್ಲೆ, ಕೊಲೆ, ಹಿಂಸಾಚಾರಕ್ಕೆ ಕುಖ್ಯಾತಿಯಾದ ರಾಜ್ಯವಾಗಿದೆ. ಅಲ್ಲಿನ ಸರ್ಕಾರವಾಗಲಿ, ಪೊಲೀಸ್ ವ್ಯವಸ್ಥೆಯಾಗಲಿ ಅಪರಾಧ ತಡೆಗೆ ಪ್ರಾಮಾಣಿಕ ಪಯತ್ನ ಮಾಡುತ್ತಿಲ್ಲ ಎಂಬ ಆರೋಪವಿದೆ. ಇಂತಹ ರಾಜ್ಯದ ರಾಜಧಾನಿ ಲಕ್ನೋದಲ್ಲಿನ ಮಹಿಳೆಯರ ಮೇಲಿನ ಅಪರಾಧಗಳ ತಡೆಗೆ ಪೊಲೀಸರು ಕ್ಯಾಮರಗಳ ಮೊರೆ ಹೋಗಿದ್ದಾರೆ.

ಸಾರ್ವಜನಿಕ ಸ್ಥಳಗಳನ್ನು ಎಐ-ಸಾಮರ್ಥ್ಯವುಳ್ಳ ಕ್ಯಾಮೆರಾಗಳೊಂದಿಗೆ ಸಜ್ಜುಗೊಳಿಸಲು ಲಕ್ನೋ ಪೊಲೀಸರು ಸಜ್ಜಾಗಿದ್ದಾರೆ. ಆ ಕ್ಯಾಮರಗಳು ಮುಖದ ಅಭಿವ್ಯಕ್ತಿಗಳ ಆಧಾರದ ಮೇಲೆ ತೊಂದರೆಯಲ್ಲಿರುವ ಮಹಿಳೆಯರ ಚಿತ್ರಗಳನ್ನು ಕ್ಲಿಕ್ ಮಾಡುತ್ತದೆ ಮತ್ತು ಹತ್ತಿರದ ಪೊಲೀಸ್ ಠಾಣೆಗೆ ಎಚ್ಚರಿಕೆ ನೀಡುತ್ತದೆ ಎಂದು ಪೊಲೀಸ್ ಹೇಳಿಕೆ ಉಲ್ಲೇಖಿಸಿ ದಿ ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

ಸಾರ್ವಜನಿಕ ಸ್ಥಳದಲ್ಲಿ ಹುಡುಗಿಯರು ತಮ್ಮ ಮುಖಭಾವನೆಗಳನ್ನು ಬದಲಿಸಿದ ಕೂಡಲೇ “ಅವರನ್ನು ಯಾರೋ ಹಿಂಬಾಲಿಸುತ್ತಿದ್ದಾರೆ, ಬೆದರಿಸುತ್ತಿದ್ದಾರೆ ಅಥವಾ ಚುಡಾಯಿಸುತ್ತಿದ್ದಾರೆ” ಎಂಬುದನ್ನು ಗುರುತಿಸುವ ಕ್ಯಾಮರಗಳು ಹತ್ತಿರದ ಪೊಲೀಸರಿಗೆ ಮಾಹಿತಿ ನೀಡಿ ಆರೋಪಿಗಳನ್ನು ಬಂಧಿಸಲು ಸಹಾಯ ಮಾಡುತ್ತವೆ ಎಂದು ಪೊಲೀಸ್ ಕಮಿಷನರ್ ಡಿಕೆ ಠಾಕೂರ್ ತಿಳಿಸಿದ್ದಾರೆ.

ಜಿಲ್ಲೆಯ ಸುರಕ್ಷತೆಯ ವಿಷಯವಾಗಿ “ಆಶಿಶ್, ಅಭಯ್ ಮತ್ತು ಅಭ್ಯುದಯ” ಎಂಬ ಕಾರ್ಯಗಾರದಲ್ಲಿ ಮಾತನಾಡಿದ ಅವರು, ‘ಜಿಲ್ಲೆಯಲ್ಲಿ ಹೆಚ್ಚಾಗಿ ಮಹಿಳೆಯರು ಓಡಾಡುವ ಮತ್ತು ಅಪರಾಧಗಳು ದಾಖಲಾಗಿರುವ 200 ಸ್ಥಳಗಳನ್ನು ಗುರುತಿಸಿದ್ದೇವೆ’ ಎಂದಿದ್ದಾರೆ.

ಸಾರ್ವಜನಿಕ ಸ್ಥಳಗಳಲ್ಲಿ ಎಐ-ಸಾಮರ್ಥ್ಯವುಳ್ಳ ಕ್ಯಾಮರಗಳನ್ನು ಅಳವಡಿಸುತ್ತಿದ್ದೇವೆ. ಇವು ತ್ವರಿತವಾಗಿ ಪೊಲೀಸ್ ಠಾಣೆಗಳಿಗೆ ಮಾಹಿತಿ ಒದಗಿಸುತ್ತವೆ. ಯಾವುದೇ ಮಹಿಳೆಯರು ಆತಂಕಿತ ಸ್ಥಿತಿಯಲ್ಲಿದ್ದರೆ ಅವರ ಮುಖಭಾವನೆಗಳನ್ನು ಆಧರಿಸಿ ಆ ಮಾಹಿತಿಯನ್ನು ವೇಗವಾಗಿ ಪೊಲೀಸ್ ಠಾಣೆಗಳಿಗೆ ಕಳಿಸುತ್ತದೆ. ಆಕೆ ಫೋನ್ ತೆಗೆದುಕೊಂಡು ಸಹಾಯಕ್ಕಾಗಿ 100 ಅಥವಾ 112 ಡಯಲ್ ಮಾಡುವ ಮುನ್ನವೇ ಆ ವಿಷಯ ಪೊಲೀಸ್ ಠಾಣೆಗೆ ತಿಳಿದಿರುತ್ತದೆ ಎಂದು ಡಿಕೆ ಠಾಕೂರ್ ಹೇಳಿದ್ದಾರೆ.

ಉತ್ತರ ಪ್ರದೇಶದಲ್ಲಿ ಲಕ್ನೋ ನಗರ ಮಾತ್ರವೇ ದೇಶದ ಮಹಿಳಾ ಸುರಕ್ಷತಾ ನಗರವೆಂದು ಸೇರ್ಪಡೆಗೊಂಡಿದೆ ಎಂದು ಕಮಿಷನರ್ ತಿಳಿಸಿದ್ದಾರೆ. ಇಲ್ಲಿ 31 ಪಿಂಕ್ ಬೂತ್‌ಗಳು, 10 ಸಂಚಾರಿ ಪೊಲೀಸ್ ವಾಹನಗಳು, ಮಹಿಲಾ ಕಾನ್ಸ್ಟೇಬಲ್‌ಗಳನ್ನೊಳಗೊಂಡ 100 ಸ್ಕೂಟಿಗಳನ್ನು ಈಗಾಗಲೇ ನಿಯೋಜಿಸಲಾಗಿದೆ ಎಂದಿದ್ದಾರೆ.

ಲಕ್ನೋ ಪೊಲೀಸರ ಈ ಹೊಸ ಕ್ಯಾಮರ ಅವತಾರವನ್ನು ಮಹಿಳೆಯರು ಹೇಗೆ ಸ್ವೀಕರಿಸುತ್ತಾರೆ ನೋಡಬೇಕಿದೆ. ಏಕೆಂದರೆ ಮಹಿಳೆಯರು ಯಾವ ವಿಷಯಕ್ಕೆ ಬೇಕಾದರೂ ಆತಂಕಗೊಳ್ಳಬಹುದು. ಅದೆಲ್ಲವೂ ಪೊಲೀಸರಿಗೆ ತಿಳಿಯಬೇಕೆ? ಮಹಿಳೆಯರಿಗೆ ಖಾಸಗಿತನವೆಂಬುದಿಲ್ಲವೇ? ಅನವಶ್ಯಕವಾಗಿ ಪೊಲೀಸರು ಮೂಗು ತೂರಿಸಿದಂತಾಗುವುದಿಲ್ಲವೇ? ಎಂಬ ಪ್ರಶ್ನೆಗಳು ಎದ್ದಿವೆ.

ಇದುವರೆಗೂ ಮಹಿಳೆಯರು ನೀಡಿದ ದೂರುಗಳಲ್ಲಿ ಎಷ್ಟನ್ನು ಪೊಲೀಸರು ಗಂಭೀರವಾಗಿ ತೆಗೆದುಕೊಂಡು ತನಿಖೆ ನಡೆಸುತ್ತಿದ್ದಾರೆ? ಆ ದೂರುಗಳಲ್ಲಿ ಎಷ್ಟು ಜನರಿಗೆ ಶಿಕ್ಷೆಯಾಗಿದೆ? ಪೊಲೀಸರು ತಾವು ಮಾಡಬೇಕಾದ ಕರ್ತವ್ಯಗಳನ್ನು ಮರೆತು ಕ್ಯಾಮರ ಮೊರೆ ಹೋಗುವುದು ಸರಿಯಲ್ಲ ಎಂದು ಅಭಿಪ್ರಾಯಗಳು ಸಾಮಾಜಿಕ ಜಾಲತಾಣದಲ್ಲಿ ವ್ಯಕ್ತವಾಗಿವೆ.


ಇದನ್ನೂ ಓದಿ; ಕೊವಾಕ್ಸಿನ್‌‌ ತೆಗೆದುಕೊಂಡಂತೆ ನಟನೆ ಮಾಡಿದ ಜಿಲ್ಲಾ ವೈದ್ಯಾಧಿಕಾರಿ- ವಿಡಿಯೋ ವೈರಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...