Homeಮುಖಪುಟಲಕ್ನೋ: ಆತಂಕಿತ ಮಹಿಳೆಯರ ಭಾವನೆ ಗ್ರಹಿಸಿ ಪೊಲೀಸರಿಗೆ ಮಾಹಿತಿ ನೀಡುವ ಸ್ಮಾರ್ಟ್ ಕ್ಯಾಮರಗಳ ಅಳವಡಿಕೆ!

ಲಕ್ನೋ: ಆತಂಕಿತ ಮಹಿಳೆಯರ ಭಾವನೆ ಗ್ರಹಿಸಿ ಪೊಲೀಸರಿಗೆ ಮಾಹಿತಿ ನೀಡುವ ಸ್ಮಾರ್ಟ್ ಕ್ಯಾಮರಗಳ ಅಳವಡಿಕೆ!

ಆತಂಕದಲ್ಲಿರುವ ಮಹಿಳೆಯರು ಫೋನ್ ತೆಗೆದುಕೊಂಡು ಸಹಾಯಕ್ಕಾಗಿ 100 ಅಥವಾ 112 ಡಯಲ್ ಮಾಡುವ ಮುನ್ನವೇ ಕ್ಯಾಮರಗಳ ಸಹಾಯದಿಂದ ಆ ವಿಷಯ ಪೊಲೀಸ್ ಠಾಣೆಗೆ ತಿಳಿದಿರುತ್ತದೆ...

- Advertisement -
- Advertisement -

ಉತ್ತರ ಪ್ರದೇಶ ರಾಜ್ಯವು ದೇಶದಲ್ಲಿಯೇ ಅತಿ ಹೆಚ್ಚು ಅಪರಾಧಗಳು ನಡೆಯುವ ಹಾಗೂ ಮಹಿಳೆಯರು ಮತ್ತು ಮಕ್ಕಳ ಮೇಲಿನ ಅತ್ಯಾಚಾರ, ಹಲ್ಲೆ, ಕೊಲೆ, ಹಿಂಸಾಚಾರಕ್ಕೆ ಕುಖ್ಯಾತಿಯಾದ ರಾಜ್ಯವಾಗಿದೆ. ಅಲ್ಲಿನ ಸರ್ಕಾರವಾಗಲಿ, ಪೊಲೀಸ್ ವ್ಯವಸ್ಥೆಯಾಗಲಿ ಅಪರಾಧ ತಡೆಗೆ ಪ್ರಾಮಾಣಿಕ ಪಯತ್ನ ಮಾಡುತ್ತಿಲ್ಲ ಎಂಬ ಆರೋಪವಿದೆ. ಇಂತಹ ರಾಜ್ಯದ ರಾಜಧಾನಿ ಲಕ್ನೋದಲ್ಲಿನ ಮಹಿಳೆಯರ ಮೇಲಿನ ಅಪರಾಧಗಳ ತಡೆಗೆ ಪೊಲೀಸರು ಕ್ಯಾಮರಗಳ ಮೊರೆ ಹೋಗಿದ್ದಾರೆ.

ಸಾರ್ವಜನಿಕ ಸ್ಥಳಗಳನ್ನು ಎಐ-ಸಾಮರ್ಥ್ಯವುಳ್ಳ ಕ್ಯಾಮೆರಾಗಳೊಂದಿಗೆ ಸಜ್ಜುಗೊಳಿಸಲು ಲಕ್ನೋ ಪೊಲೀಸರು ಸಜ್ಜಾಗಿದ್ದಾರೆ. ಆ ಕ್ಯಾಮರಗಳು ಮುಖದ ಅಭಿವ್ಯಕ್ತಿಗಳ ಆಧಾರದ ಮೇಲೆ ತೊಂದರೆಯಲ್ಲಿರುವ ಮಹಿಳೆಯರ ಚಿತ್ರಗಳನ್ನು ಕ್ಲಿಕ್ ಮಾಡುತ್ತದೆ ಮತ್ತು ಹತ್ತಿರದ ಪೊಲೀಸ್ ಠಾಣೆಗೆ ಎಚ್ಚರಿಕೆ ನೀಡುತ್ತದೆ ಎಂದು ಪೊಲೀಸ್ ಹೇಳಿಕೆ ಉಲ್ಲೇಖಿಸಿ ದಿ ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

ಸಾರ್ವಜನಿಕ ಸ್ಥಳದಲ್ಲಿ ಹುಡುಗಿಯರು ತಮ್ಮ ಮುಖಭಾವನೆಗಳನ್ನು ಬದಲಿಸಿದ ಕೂಡಲೇ “ಅವರನ್ನು ಯಾರೋ ಹಿಂಬಾಲಿಸುತ್ತಿದ್ದಾರೆ, ಬೆದರಿಸುತ್ತಿದ್ದಾರೆ ಅಥವಾ ಚುಡಾಯಿಸುತ್ತಿದ್ದಾರೆ” ಎಂಬುದನ್ನು ಗುರುತಿಸುವ ಕ್ಯಾಮರಗಳು ಹತ್ತಿರದ ಪೊಲೀಸರಿಗೆ ಮಾಹಿತಿ ನೀಡಿ ಆರೋಪಿಗಳನ್ನು ಬಂಧಿಸಲು ಸಹಾಯ ಮಾಡುತ್ತವೆ ಎಂದು ಪೊಲೀಸ್ ಕಮಿಷನರ್ ಡಿಕೆ ಠಾಕೂರ್ ತಿಳಿಸಿದ್ದಾರೆ.

ಜಿಲ್ಲೆಯ ಸುರಕ್ಷತೆಯ ವಿಷಯವಾಗಿ “ಆಶಿಶ್, ಅಭಯ್ ಮತ್ತು ಅಭ್ಯುದಯ” ಎಂಬ ಕಾರ್ಯಗಾರದಲ್ಲಿ ಮಾತನಾಡಿದ ಅವರು, ‘ಜಿಲ್ಲೆಯಲ್ಲಿ ಹೆಚ್ಚಾಗಿ ಮಹಿಳೆಯರು ಓಡಾಡುವ ಮತ್ತು ಅಪರಾಧಗಳು ದಾಖಲಾಗಿರುವ 200 ಸ್ಥಳಗಳನ್ನು ಗುರುತಿಸಿದ್ದೇವೆ’ ಎಂದಿದ್ದಾರೆ.

ಸಾರ್ವಜನಿಕ ಸ್ಥಳಗಳಲ್ಲಿ ಎಐ-ಸಾಮರ್ಥ್ಯವುಳ್ಳ ಕ್ಯಾಮರಗಳನ್ನು ಅಳವಡಿಸುತ್ತಿದ್ದೇವೆ. ಇವು ತ್ವರಿತವಾಗಿ ಪೊಲೀಸ್ ಠಾಣೆಗಳಿಗೆ ಮಾಹಿತಿ ಒದಗಿಸುತ್ತವೆ. ಯಾವುದೇ ಮಹಿಳೆಯರು ಆತಂಕಿತ ಸ್ಥಿತಿಯಲ್ಲಿದ್ದರೆ ಅವರ ಮುಖಭಾವನೆಗಳನ್ನು ಆಧರಿಸಿ ಆ ಮಾಹಿತಿಯನ್ನು ವೇಗವಾಗಿ ಪೊಲೀಸ್ ಠಾಣೆಗಳಿಗೆ ಕಳಿಸುತ್ತದೆ. ಆಕೆ ಫೋನ್ ತೆಗೆದುಕೊಂಡು ಸಹಾಯಕ್ಕಾಗಿ 100 ಅಥವಾ 112 ಡಯಲ್ ಮಾಡುವ ಮುನ್ನವೇ ಆ ವಿಷಯ ಪೊಲೀಸ್ ಠಾಣೆಗೆ ತಿಳಿದಿರುತ್ತದೆ ಎಂದು ಡಿಕೆ ಠಾಕೂರ್ ಹೇಳಿದ್ದಾರೆ.

ಉತ್ತರ ಪ್ರದೇಶದಲ್ಲಿ ಲಕ್ನೋ ನಗರ ಮಾತ್ರವೇ ದೇಶದ ಮಹಿಳಾ ಸುರಕ್ಷತಾ ನಗರವೆಂದು ಸೇರ್ಪಡೆಗೊಂಡಿದೆ ಎಂದು ಕಮಿಷನರ್ ತಿಳಿಸಿದ್ದಾರೆ. ಇಲ್ಲಿ 31 ಪಿಂಕ್ ಬೂತ್‌ಗಳು, 10 ಸಂಚಾರಿ ಪೊಲೀಸ್ ವಾಹನಗಳು, ಮಹಿಲಾ ಕಾನ್ಸ್ಟೇಬಲ್‌ಗಳನ್ನೊಳಗೊಂಡ 100 ಸ್ಕೂಟಿಗಳನ್ನು ಈಗಾಗಲೇ ನಿಯೋಜಿಸಲಾಗಿದೆ ಎಂದಿದ್ದಾರೆ.

ಲಕ್ನೋ ಪೊಲೀಸರ ಈ ಹೊಸ ಕ್ಯಾಮರ ಅವತಾರವನ್ನು ಮಹಿಳೆಯರು ಹೇಗೆ ಸ್ವೀಕರಿಸುತ್ತಾರೆ ನೋಡಬೇಕಿದೆ. ಏಕೆಂದರೆ ಮಹಿಳೆಯರು ಯಾವ ವಿಷಯಕ್ಕೆ ಬೇಕಾದರೂ ಆತಂಕಗೊಳ್ಳಬಹುದು. ಅದೆಲ್ಲವೂ ಪೊಲೀಸರಿಗೆ ತಿಳಿಯಬೇಕೆ? ಮಹಿಳೆಯರಿಗೆ ಖಾಸಗಿತನವೆಂಬುದಿಲ್ಲವೇ? ಅನವಶ್ಯಕವಾಗಿ ಪೊಲೀಸರು ಮೂಗು ತೂರಿಸಿದಂತಾಗುವುದಿಲ್ಲವೇ? ಎಂಬ ಪ್ರಶ್ನೆಗಳು ಎದ್ದಿವೆ.

ಇದುವರೆಗೂ ಮಹಿಳೆಯರು ನೀಡಿದ ದೂರುಗಳಲ್ಲಿ ಎಷ್ಟನ್ನು ಪೊಲೀಸರು ಗಂಭೀರವಾಗಿ ತೆಗೆದುಕೊಂಡು ತನಿಖೆ ನಡೆಸುತ್ತಿದ್ದಾರೆ? ಆ ದೂರುಗಳಲ್ಲಿ ಎಷ್ಟು ಜನರಿಗೆ ಶಿಕ್ಷೆಯಾಗಿದೆ? ಪೊಲೀಸರು ತಾವು ಮಾಡಬೇಕಾದ ಕರ್ತವ್ಯಗಳನ್ನು ಮರೆತು ಕ್ಯಾಮರ ಮೊರೆ ಹೋಗುವುದು ಸರಿಯಲ್ಲ ಎಂದು ಅಭಿಪ್ರಾಯಗಳು ಸಾಮಾಜಿಕ ಜಾಲತಾಣದಲ್ಲಿ ವ್ಯಕ್ತವಾಗಿವೆ.


ಇದನ್ನೂ ಓದಿ; ಕೊವಾಕ್ಸಿನ್‌‌ ತೆಗೆದುಕೊಂಡಂತೆ ನಟನೆ ಮಾಡಿದ ಜಿಲ್ಲಾ ವೈದ್ಯಾಧಿಕಾರಿ- ವಿಡಿಯೋ ವೈರಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...