Homeಮುಖಪುಟಲುಲು ಮಾಲ್‌ ವಿವಾದ: ಕೋಮು ಪ್ರಚೋದನೆ ಮಾಡುವವರ ಹೆಡೆಮುರಿ ಕಟ್ಟಲು ಆದಿತ್ಯನಾಥ್ ಸೂಚನೆ

ಲುಲು ಮಾಲ್‌ ವಿವಾದ: ಕೋಮು ಪ್ರಚೋದನೆ ಮಾಡುವವರ ಹೆಡೆಮುರಿ ಕಟ್ಟಲು ಆದಿತ್ಯನಾಥ್ ಸೂಚನೆ

- Advertisement -
- Advertisement -

ಹೊಸದಾಗಿ ತೆರೆಯಲಾದ ಲುಲು ಮಾಲ್‌ಗೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದವನ್ನು ಬಹಳ ಗಂಭೀರವಾಗಿ ಪರಿಗಣಿಸುವಂತೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಲಕ್ನೋ ಸ್ಥಳೀಯ ಆಡಳಿತಕ್ಕೆ ಸೂಚನೆ ನೀಡಿದ್ದಾರೆ.

ಕೆಲವರು ಅನಗತ್ಯ ಟೀಕೆಗಳನ್ನು ಮಾಡಿ ಜನರಿಗೆ ಅಡ್ಡಿಪಡಿಸಲು ಪ್ರತಿಭಟನೆ ನಡೆಸುತ್ತಿದ್ದಾರೆ ಎಂದಿರುವ ಅವರು ಇಂತಹ ಅನಾಹುತ ಸೃಷ್ಟಿಸಲು ಯತ್ನಿಸುವ ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕು ಎಂದಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ವ್ಯಾಪಾರ ಚಟುವಟಿಕೆ ನಡೆಸುತ್ತಿರುವ ಲುಲು ಮಾಲ್ ರಾಜಕೀಯ ಕೇಂದ್ರವಾಗಿ ಮಾರ್ಪಟ್ಟಿದೆ. ಕೆಲವು ವ್ಯಕ್ತಿಗಳು ಅನಗತ್ಯ ಹೇಳಿಕೆಗಳನ್ನು ನೀಡುತ್ತಿದ ಮಾಲ್‌ಗೆ ಭೇಟಿ ನೀಡುವ ಜನರ ಸಂಚಾರಕ್ಕೆ ಅಡ್ಡಿಪಡಿಸಲು ಪ್ರತಿಭಟನೆಗಳನ್ನು ಹಮ್ಮಿಕೊಳ್ಳಲಾಗುತ್ತಿದೆ” ಎಂದು ಸಿಎಂ ಹೇಳಿರುವುದಾಗಿ ವರದಿಯಾಗಿದೆ.

“ಲಕ್ನೋ ಆಡಳಿತವು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಬೇಕು. ಅಂತಹ ಅಸ್ವಸ್ಥತೆಯನ್ನು ಸಹಿಸಲಾಗುವುದಿಲ್ಲ. ಮಾಲ್‌ನಲ್ಲಿ ಗಲಭೆ ಸೃಷ್ಟಿಸಲು ಯತ್ನಿಸುತ್ತಿರುವ ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕು” ಎಂದು ತಿಳಿಸಿದ್ದಾರೆ.

“ಪ್ರಾರ್ಥನೆ ಅಥವಾ ಇತರ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ರಸ್ತೆಯಲ್ಲಿ ಸಂಚಾರಕ್ಕೆ ಅಡ್ಡಿಪಡಿಸಲು ಯಾರಿಗೂ ಅನುಮತಿ ನೀಡಬಾರದು. ಅಧಿಕಾರಿಗಳು ರಾಜ್ಯ ಸರ್ಕಾರದ ಆದೇಶವನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಬೇಕು” ಎಂದು ಆದೇಶಿಸಿದ್ದಾರೆ.

ಇದನ್ನೂ ಓದಿರಿ: ನಮ್ಮ ಉದ್ಯೋಗಿಗಳಲ್ಲಿ ಶೇ.80ರಷ್ಟು ಹಿಂದೂಗಳಿದ್ದಾರೆ: ‘ಲವ್‌ ಜಿಹಾದ್’ ಆರೋಪಕ್ಕೆ ಲುಲು ಮಾಲ್ ಸ್ಪಷ್ಟನೆ

ಲುಲು ಮಾಲ್‌ಗೆ ನುಗ್ಗಿ ಹನುಮಾನ್ ಚಾಲೀಸಾ ಪಠಿಸಲು ಆರಂಭಿಸಿದ ಇಬ್ಬರ ಬಂಧನವನ್ನು ಪೊಲೀಸರು ಖಚಿತಪಡಿಸಿದ ಒಂದು ದಿನದ ನಂತರ ಯೋಗಿ ಆದಿತ್ಯನಾಥ್ ಹೇಳಿಕೆ ಹೊರಬಿದ್ದಿದೆ.

ಇಬ್ಬರ ಬಂಧನದ ಸ್ವಲ್ಪ ಸಮಯದ ನಂತರ, ಶಾಪಿಂಗ್ ಮಾಲ್‌ಗೆ ಪ್ರವೇಶಿಸಲು ಪ್ರಯತ್ನಿಸಿ ಗಲಾಟೆ ಮಾಡಿದ್ದಕ್ಕಾಗಿ ಬಲಪಂಥೀಯ ಗುಂಪಿನ ಕನಿಷ್ಠ 15 ಸದಸ್ಯರನ್ನು ಬಂಧಿಸಲಾಯಿತು. ಗಲಾಟೆ ಸೃಷ್ಟಿಸದಂತೆ ಎಚ್ಚರಿಕೆ ನೀಡಿ ಅಂತಿಮವಾಗಿ ಅವರನ್ನು ಬಿಡುಗಡೆ ಮಾಡಲಾಗಿದೆ.

“ಇಬ್ಬರು ಮಾಲ್‌ಗೆ ಪ್ರವೇಶಿಸಿ, ನೆಲದ ಮೇಲೆ ಕುಳಿತು ಧಾರ್ಮಿಕ ಪ್ರಾರ್ಥನೆ ಮಾಡಲು ಪ್ರಾರಂಭಿಸಿದರು. ಮಾಲ್‌ನ ಭದ್ರತಾ ಸಿಬ್ಬಂದಿ ಪೊಲೀಸರಿಗೆ ತಿಳಿಸಿದ ನಂತರ ಅವರನ್ನು ಬಂಧಿಸಲಾಯಿತು” ಎಂದು ಉಪ ಪೊಲೀಸ್ ಆಯುಕ್ತ (ದಕ್ಷಿಣ) ಗೋಪಾಲ್ ಕೃಷ್ಣ ಚೌಧರಿ ತಿಳಿಸಿದ್ದಾರೆ.

ಮಾಲ್‌ನಲ್ಲಿ ಜನರ ಗುಂಪೊಂದು ನಮಾಜ್ ಮಾಡಿದ ವೀಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್‌ ಆದ ನಂತರ ವಿವಾದ ಭುಗಿಲೆದ್ದಿದೆ. ನಮಾಜ್‌ ಮಾಡಿದ ಅಪರಿಚಿತ ವ್ಯಕ್ತಿಗಳ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 153 ಎ (ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು) ಮತ್ತು 295ಎ (ಧಾರ್ಮಿಕ ಭಾವನೆಗಳನ್ನು ಕೆರಳಿಸುವ ಉದ್ದೇಶದ ಕೃತ್ಯ) ಅಡಿಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ.

ಈ ವಿವಾದದ ಬಳಿ ಹಿಂದುತ್ವ ಮೂಲಭೂತವಾದಿಗಳು ಮಾಲ್‌ನಲ್ಲಿ ಹನುಮಾನ್ ಚಾಲೀಸಾವನ್ನು ಪಠಿಸಲು ಸಂಬಂಧಪಟ್ಟ ಅಧಿಕಾರಿಗಳಿಂದ ಅನುಮತಿ ಕೋರಿದ್ದಾರೆ. ಆದರೆ ಪೊಲೀಸರು ಇದಕ್ಕೆ ಅನುಮತಿ ನೀಡಿಲ್ಲ.

ಸಂಚಾರಕ್ಕೆ ಅಡ್ಡಿಯಾಗುವ ಧಾರ್ಮಿಕ ಚಟುವಟಿಕೆಗಳನ್ನು ನಿಷೇಧಿಸುವಂತೆಯೂ ಯುಪಿ ಮುಖ್ಯಮಂತ್ರಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಇದನ್ನೂ ಓದಿರಿ: ಲುಲುಮಾಲ್: ಬೇಕಂತಲೇ ನಮಾಜ್‌ ಮಾಡಿ ವಿವಾದ ಸೃಷ್ಟಿ; ಪಿತೂರಿಯ ಹಿಂದೆ ಯಾರಿದ್ದಾರೆ?

ವಿಡಿಯೋ ಕಾನ್ಫರೆನ್ಸ್‌ ಮೂಲಕ ರಾಜ್ಯದ ಹಿರಿಯ ಅಧಿಕಾರಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ಧಾರ್ಮಿಕ ಯಾತ್ರೆಗಳು ಮತ್ತು ಮೆರವಣಿಗೆಗಳಲ್ಲಿ ಶಸ್ತ್ರಾಸ್ತ್ರಗಳ ಪ್ರದರ್ಶನ ಇರದಂತೆ ಖಚಿತಪಡಿಸಿಕೊಳ್ಳಲು ಅಧಿಕಾರಿಗಳಿಗೆ ಸೂಚಿಸಿದ್ದಾರೆ ಎಂದು ವರದಿಯಾಗಿದೆ.

“ರಸ್ತೆಗಳು ಜನರ ಪ್ರಯಾಣಕ್ಕೆ ಯೋಗ್ಯವಾಗಿಬೇಕು. ಯಾವುದೇ ಧಾರ್ಮಿಕ ಕಾರ್ಯಕ್ರಮಗಳು ಸಂಚಾರಕ್ಕೆ ಅಡ್ಡಿಯಾಗಬಾರದು. ಈ ನಿಟ್ಟಿನಲ್ಲಿ ಸ್ಪಷ್ಟ ನಿರ್ದೇಶನಗಳನ್ನು ನೀಡಲಾಗಿದೆ. ಅದನ್ನು ಕಟ್ಟುನಿಟ್ಟಾಗಿ ಅನುಸರಿಸಬೇಕು” ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.

ಶ್ರಾವಣ ಮಾಸದಲ್ಲಿ ಶಿವನ ದೇವಾಲಯಗಳಲ್ಲಿ ಜನಸಂದಣಿ ಇರುತ್ತದೆ, ಪರಿಸ್ಥಿತಿಯನ್ನು ನಿಭಾಯಿಸಲು ದೇವಾಲಯದ ಆಡಳಿತ ಮಂಡಳಿಗಳೊಂದಿಗೆ ಮಾತುಕತೆ ನಡೆಸಬೇಕು ಎಂದಿದ್ದಾರೆ.

ಲುಲು ಮಾಲ್‌ ಉದ್ಘಾಟನೆಯಲ್ಲಿ ಸಿಎಂ ಯೋಗಿ ಆದಿತ್ಯನಾಥ್‌

ಜುಲೈ 10ರಂದು ರಾಜ್ಯದ ರಾಜಧಾನಿ ಲಕ್ನೋದಲ್ಲಿ ಲುಲು ಗ್ರೂಪ್ ಅಧ್ಯಕ್ಷ ಯೂಸುಫಲಿ ಎಂಎ ಅವರು ಆಯೋಜಿಸಿದ್ದ ಬೃಹತ್‌ ಸಮಾರಂಭದಲ್ಲಿ ಮುಖ್ಯಮಂತ್ರಿ ಆದಿತ್ಯನಾಥ್ ಅವರೂ ಪಾಲ್ಗೊಂಡು, ಲುಲು ಮಾಲ್ ಉದ್ಘಾಟಿಸಿದ್ದರು. ಮುಖ್ಯಮಂತ್ರಿಯವರ ಚಿತ್ರಗಳನ್ನು ಹೊಂದಿರುವ ಪೂರ್ಣ ಪುಟದ ಜಾಹೀರಾತನ್ನು ಲುಲು ಗ್ರೂಪ್‌ ರಾಜ್ಯದ ಎಲ್ಲ ಪ್ರಮುಖ ಪತ್ರಿಕೆಗಳಿಗೆ ನೀಡಿತ್ತು. ಉದ್ಘಾಟನಾ ಸಮಾರಂಭದಲ್ಲಿ ಯುಪಿ ಅಸೆಂಬ್ಲಿಯ ಸ್ಪೀಕರ್ ಸತೀಶ್ ಮಹಾನಾ ಮತ್ತು ಮಾಜಿ ಉಪಮುಖ್ಯಮಂತ್ರಿ ಡಾ. ದಿನೇಶ್ ಶರ್ಮಾ ಹಾಜರಿದ್ದರು.

ಸಮಾರಂಭದಲ್ಲಿ ಮಾತನಾಡಿದ್ದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌, “ಪ್ರಯಾಗರಾಜ್, ವಾರಣಾಸಿ, ಗೋರಖ್‌ಪುರ ಮತ್ತು ಕಾನ್ಪುರ ಸೇರಿದಂತೆ ರಾಜ್ಯದ ಇತರ ಪಟ್ಟಣಗಳಲ್ಲಿ ಲುಲು ಗ್ರೂಪ್‌ ಹೂಡಿಕೆ ಮಾಡಲು ಮುಂದಾಗಿರುವುದು ಸಂತಸ ತಂದಿದೆ”  ಎಂದಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...