Homeಮುಖಪುಟಲುಲು ಮಾಲ್‌ ವಿವಾದ: ಕೋಮು ಪ್ರಚೋದನೆ ಮಾಡುವವರ ಹೆಡೆಮುರಿ ಕಟ್ಟಲು ಆದಿತ್ಯನಾಥ್ ಸೂಚನೆ

ಲುಲು ಮಾಲ್‌ ವಿವಾದ: ಕೋಮು ಪ್ರಚೋದನೆ ಮಾಡುವವರ ಹೆಡೆಮುರಿ ಕಟ್ಟಲು ಆದಿತ್ಯನಾಥ್ ಸೂಚನೆ

- Advertisement -
- Advertisement -

ಹೊಸದಾಗಿ ತೆರೆಯಲಾದ ಲುಲು ಮಾಲ್‌ಗೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದವನ್ನು ಬಹಳ ಗಂಭೀರವಾಗಿ ಪರಿಗಣಿಸುವಂತೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಲಕ್ನೋ ಸ್ಥಳೀಯ ಆಡಳಿತಕ್ಕೆ ಸೂಚನೆ ನೀಡಿದ್ದಾರೆ.

ಕೆಲವರು ಅನಗತ್ಯ ಟೀಕೆಗಳನ್ನು ಮಾಡಿ ಜನರಿಗೆ ಅಡ್ಡಿಪಡಿಸಲು ಪ್ರತಿಭಟನೆ ನಡೆಸುತ್ತಿದ್ದಾರೆ ಎಂದಿರುವ ಅವರು ಇಂತಹ ಅನಾಹುತ ಸೃಷ್ಟಿಸಲು ಯತ್ನಿಸುವ ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕು ಎಂದಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ವ್ಯಾಪಾರ ಚಟುವಟಿಕೆ ನಡೆಸುತ್ತಿರುವ ಲುಲು ಮಾಲ್ ರಾಜಕೀಯ ಕೇಂದ್ರವಾಗಿ ಮಾರ್ಪಟ್ಟಿದೆ. ಕೆಲವು ವ್ಯಕ್ತಿಗಳು ಅನಗತ್ಯ ಹೇಳಿಕೆಗಳನ್ನು ನೀಡುತ್ತಿದ ಮಾಲ್‌ಗೆ ಭೇಟಿ ನೀಡುವ ಜನರ ಸಂಚಾರಕ್ಕೆ ಅಡ್ಡಿಪಡಿಸಲು ಪ್ರತಿಭಟನೆಗಳನ್ನು ಹಮ್ಮಿಕೊಳ್ಳಲಾಗುತ್ತಿದೆ” ಎಂದು ಸಿಎಂ ಹೇಳಿರುವುದಾಗಿ ವರದಿಯಾಗಿದೆ.

“ಲಕ್ನೋ ಆಡಳಿತವು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಬೇಕು. ಅಂತಹ ಅಸ್ವಸ್ಥತೆಯನ್ನು ಸಹಿಸಲಾಗುವುದಿಲ್ಲ. ಮಾಲ್‌ನಲ್ಲಿ ಗಲಭೆ ಸೃಷ್ಟಿಸಲು ಯತ್ನಿಸುತ್ತಿರುವ ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕು” ಎಂದು ತಿಳಿಸಿದ್ದಾರೆ.

“ಪ್ರಾರ್ಥನೆ ಅಥವಾ ಇತರ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ರಸ್ತೆಯಲ್ಲಿ ಸಂಚಾರಕ್ಕೆ ಅಡ್ಡಿಪಡಿಸಲು ಯಾರಿಗೂ ಅನುಮತಿ ನೀಡಬಾರದು. ಅಧಿಕಾರಿಗಳು ರಾಜ್ಯ ಸರ್ಕಾರದ ಆದೇಶವನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಬೇಕು” ಎಂದು ಆದೇಶಿಸಿದ್ದಾರೆ.

ಇದನ್ನೂ ಓದಿರಿ: ನಮ್ಮ ಉದ್ಯೋಗಿಗಳಲ್ಲಿ ಶೇ.80ರಷ್ಟು ಹಿಂದೂಗಳಿದ್ದಾರೆ: ‘ಲವ್‌ ಜಿಹಾದ್’ ಆರೋಪಕ್ಕೆ ಲುಲು ಮಾಲ್ ಸ್ಪಷ್ಟನೆ

ಲುಲು ಮಾಲ್‌ಗೆ ನುಗ್ಗಿ ಹನುಮಾನ್ ಚಾಲೀಸಾ ಪಠಿಸಲು ಆರಂಭಿಸಿದ ಇಬ್ಬರ ಬಂಧನವನ್ನು ಪೊಲೀಸರು ಖಚಿತಪಡಿಸಿದ ಒಂದು ದಿನದ ನಂತರ ಯೋಗಿ ಆದಿತ್ಯನಾಥ್ ಹೇಳಿಕೆ ಹೊರಬಿದ್ದಿದೆ.

ಇಬ್ಬರ ಬಂಧನದ ಸ್ವಲ್ಪ ಸಮಯದ ನಂತರ, ಶಾಪಿಂಗ್ ಮಾಲ್‌ಗೆ ಪ್ರವೇಶಿಸಲು ಪ್ರಯತ್ನಿಸಿ ಗಲಾಟೆ ಮಾಡಿದ್ದಕ್ಕಾಗಿ ಬಲಪಂಥೀಯ ಗುಂಪಿನ ಕನಿಷ್ಠ 15 ಸದಸ್ಯರನ್ನು ಬಂಧಿಸಲಾಯಿತು. ಗಲಾಟೆ ಸೃಷ್ಟಿಸದಂತೆ ಎಚ್ಚರಿಕೆ ನೀಡಿ ಅಂತಿಮವಾಗಿ ಅವರನ್ನು ಬಿಡುಗಡೆ ಮಾಡಲಾಗಿದೆ.

“ಇಬ್ಬರು ಮಾಲ್‌ಗೆ ಪ್ರವೇಶಿಸಿ, ನೆಲದ ಮೇಲೆ ಕುಳಿತು ಧಾರ್ಮಿಕ ಪ್ರಾರ್ಥನೆ ಮಾಡಲು ಪ್ರಾರಂಭಿಸಿದರು. ಮಾಲ್‌ನ ಭದ್ರತಾ ಸಿಬ್ಬಂದಿ ಪೊಲೀಸರಿಗೆ ತಿಳಿಸಿದ ನಂತರ ಅವರನ್ನು ಬಂಧಿಸಲಾಯಿತು” ಎಂದು ಉಪ ಪೊಲೀಸ್ ಆಯುಕ್ತ (ದಕ್ಷಿಣ) ಗೋಪಾಲ್ ಕೃಷ್ಣ ಚೌಧರಿ ತಿಳಿಸಿದ್ದಾರೆ.

ಮಾಲ್‌ನಲ್ಲಿ ಜನರ ಗುಂಪೊಂದು ನಮಾಜ್ ಮಾಡಿದ ವೀಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್‌ ಆದ ನಂತರ ವಿವಾದ ಭುಗಿಲೆದ್ದಿದೆ. ನಮಾಜ್‌ ಮಾಡಿದ ಅಪರಿಚಿತ ವ್ಯಕ್ತಿಗಳ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 153 ಎ (ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು) ಮತ್ತು 295ಎ (ಧಾರ್ಮಿಕ ಭಾವನೆಗಳನ್ನು ಕೆರಳಿಸುವ ಉದ್ದೇಶದ ಕೃತ್ಯ) ಅಡಿಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ.

ಈ ವಿವಾದದ ಬಳಿ ಹಿಂದುತ್ವ ಮೂಲಭೂತವಾದಿಗಳು ಮಾಲ್‌ನಲ್ಲಿ ಹನುಮಾನ್ ಚಾಲೀಸಾವನ್ನು ಪಠಿಸಲು ಸಂಬಂಧಪಟ್ಟ ಅಧಿಕಾರಿಗಳಿಂದ ಅನುಮತಿ ಕೋರಿದ್ದಾರೆ. ಆದರೆ ಪೊಲೀಸರು ಇದಕ್ಕೆ ಅನುಮತಿ ನೀಡಿಲ್ಲ.

ಸಂಚಾರಕ್ಕೆ ಅಡ್ಡಿಯಾಗುವ ಧಾರ್ಮಿಕ ಚಟುವಟಿಕೆಗಳನ್ನು ನಿಷೇಧಿಸುವಂತೆಯೂ ಯುಪಿ ಮುಖ್ಯಮಂತ್ರಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಇದನ್ನೂ ಓದಿರಿ: ಲುಲುಮಾಲ್: ಬೇಕಂತಲೇ ನಮಾಜ್‌ ಮಾಡಿ ವಿವಾದ ಸೃಷ್ಟಿ; ಪಿತೂರಿಯ ಹಿಂದೆ ಯಾರಿದ್ದಾರೆ?

ವಿಡಿಯೋ ಕಾನ್ಫರೆನ್ಸ್‌ ಮೂಲಕ ರಾಜ್ಯದ ಹಿರಿಯ ಅಧಿಕಾರಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ಧಾರ್ಮಿಕ ಯಾತ್ರೆಗಳು ಮತ್ತು ಮೆರವಣಿಗೆಗಳಲ್ಲಿ ಶಸ್ತ್ರಾಸ್ತ್ರಗಳ ಪ್ರದರ್ಶನ ಇರದಂತೆ ಖಚಿತಪಡಿಸಿಕೊಳ್ಳಲು ಅಧಿಕಾರಿಗಳಿಗೆ ಸೂಚಿಸಿದ್ದಾರೆ ಎಂದು ವರದಿಯಾಗಿದೆ.

“ರಸ್ತೆಗಳು ಜನರ ಪ್ರಯಾಣಕ್ಕೆ ಯೋಗ್ಯವಾಗಿಬೇಕು. ಯಾವುದೇ ಧಾರ್ಮಿಕ ಕಾರ್ಯಕ್ರಮಗಳು ಸಂಚಾರಕ್ಕೆ ಅಡ್ಡಿಯಾಗಬಾರದು. ಈ ನಿಟ್ಟಿನಲ್ಲಿ ಸ್ಪಷ್ಟ ನಿರ್ದೇಶನಗಳನ್ನು ನೀಡಲಾಗಿದೆ. ಅದನ್ನು ಕಟ್ಟುನಿಟ್ಟಾಗಿ ಅನುಸರಿಸಬೇಕು” ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.

ಶ್ರಾವಣ ಮಾಸದಲ್ಲಿ ಶಿವನ ದೇವಾಲಯಗಳಲ್ಲಿ ಜನಸಂದಣಿ ಇರುತ್ತದೆ, ಪರಿಸ್ಥಿತಿಯನ್ನು ನಿಭಾಯಿಸಲು ದೇವಾಲಯದ ಆಡಳಿತ ಮಂಡಳಿಗಳೊಂದಿಗೆ ಮಾತುಕತೆ ನಡೆಸಬೇಕು ಎಂದಿದ್ದಾರೆ.

ಲುಲು ಮಾಲ್‌ ಉದ್ಘಾಟನೆಯಲ್ಲಿ ಸಿಎಂ ಯೋಗಿ ಆದಿತ್ಯನಾಥ್‌

ಜುಲೈ 10ರಂದು ರಾಜ್ಯದ ರಾಜಧಾನಿ ಲಕ್ನೋದಲ್ಲಿ ಲುಲು ಗ್ರೂಪ್ ಅಧ್ಯಕ್ಷ ಯೂಸುಫಲಿ ಎಂಎ ಅವರು ಆಯೋಜಿಸಿದ್ದ ಬೃಹತ್‌ ಸಮಾರಂಭದಲ್ಲಿ ಮುಖ್ಯಮಂತ್ರಿ ಆದಿತ್ಯನಾಥ್ ಅವರೂ ಪಾಲ್ಗೊಂಡು, ಲುಲು ಮಾಲ್ ಉದ್ಘಾಟಿಸಿದ್ದರು. ಮುಖ್ಯಮಂತ್ರಿಯವರ ಚಿತ್ರಗಳನ್ನು ಹೊಂದಿರುವ ಪೂರ್ಣ ಪುಟದ ಜಾಹೀರಾತನ್ನು ಲುಲು ಗ್ರೂಪ್‌ ರಾಜ್ಯದ ಎಲ್ಲ ಪ್ರಮುಖ ಪತ್ರಿಕೆಗಳಿಗೆ ನೀಡಿತ್ತು. ಉದ್ಘಾಟನಾ ಸಮಾರಂಭದಲ್ಲಿ ಯುಪಿ ಅಸೆಂಬ್ಲಿಯ ಸ್ಪೀಕರ್ ಸತೀಶ್ ಮಹಾನಾ ಮತ್ತು ಮಾಜಿ ಉಪಮುಖ್ಯಮಂತ್ರಿ ಡಾ. ದಿನೇಶ್ ಶರ್ಮಾ ಹಾಜರಿದ್ದರು.

ಸಮಾರಂಭದಲ್ಲಿ ಮಾತನಾಡಿದ್ದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌, “ಪ್ರಯಾಗರಾಜ್, ವಾರಣಾಸಿ, ಗೋರಖ್‌ಪುರ ಮತ್ತು ಕಾನ್ಪುರ ಸೇರಿದಂತೆ ರಾಜ್ಯದ ಇತರ ಪಟ್ಟಣಗಳಲ್ಲಿ ಲುಲು ಗ್ರೂಪ್‌ ಹೂಡಿಕೆ ಮಾಡಲು ಮುಂದಾಗಿರುವುದು ಸಂತಸ ತಂದಿದೆ”  ಎಂದಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...