Homeಮುಖಪುಟಲುಲುಮಾಲ್: ಬೇಕಂತಲೇ ನಮಾಜ್‌ ಮಾಡಿ ವಿವಾದ ಸೃಷ್ಟಿ; ಪಿತೂರಿಯ ಹಿಂದೆ ಯಾರಿದ್ದಾರೆ?

ಲುಲುಮಾಲ್: ಬೇಕಂತಲೇ ನಮಾಜ್‌ ಮಾಡಿ ವಿವಾದ ಸೃಷ್ಟಿ; ಪಿತೂರಿಯ ಹಿಂದೆ ಯಾರಿದ್ದಾರೆ?

- Advertisement -
- Advertisement -

ಲಕ್ನೋದಲ್ಲಿ ಹೊಸದಾಗಿ ತೆರೆಯಲಾದ ಲುಲು ಮಾಲ್‌ನಲ್ಲಿ ಕೆಲವರು ನಮಾಜ್ ಮಾಡುತ್ತಿರುವ ವಿಡಿಯೊ ವೈರಲ್ ಆದ ಕುರಿತು ವಿವಾದ ಸೃಷ್ಟಿಯಾಗಿದೆ. ಆದರೆ ಇದೊಂದು ಪಿತೂರಿ ಕೃತ್ಯವಾಗಿದ್ದು, ಬೇಕಂತಲೇ ಕಿಡಿಗೇಡಿಗಳು ದ್ವೇಷ ಹರಡಲು ಯತ್ನಿಸಿದ್ದಾರೆಂಬ ಸಂಗತಿ ಬಯಲಾಗಿದೆ.

ನಮಾಜ್‌ ವಿಡಿಯೊ ವೈರಲ್‌ ಆದ ತಕ್ಷಣ ಹಿಂದುತ್ವ ಸಂಘಟನೆಯಾದ ಅಖಿಲ ಭಾರತೀಯ ಹಿಂದೂ ಮಹಾಸಭಾ ಪ್ರತಿಭಟನೆ ನಡೆಸುವುದಾಗಿ ಹೇಳಿತು. ಉತ್ತರ ಪ್ರದೇಶದ ಪೊಲೀಸರು ನಮಾಜ್‌ ಮಾಡಿದ ಅಪರಿಚಿತ ವ್ಯಕ್ತಿಗಳ ವಿರುದ್ಧ ಎಫ್‌ಐಆರ್‌ ದಾಖಲಿಸಿದರು. ‘ಧಾರ್ಮಿಕ ಗುಂಪುಗಳ ನಡುವಿನ ದ್ವೇಷ ಬೆಳೆಸುವ ಯತ್ನ’ ಆರೋಪವನ್ನು ಹೊರಿಸಲಾಗಿದೆ.

ಮಾಲ್‌ನ ಅಂಗಳದಲ್ಲಿ ನಮಾಜ್ ಮಾಡಲು ಅವಕಾಶ ನೀಡಲಾಗಿದೆ ಎಂದು ಲುಲು ಗ್ರೂಪ್ ಮತ್ತು ಅದರ ಮಾಲೀಕ ಯೂಸುಫಲಿ ಎಂ.ಎ. ವಿರುದ್ಧ ಹಿಂದೂ ಮಹಾಸಭಾ ಲಕ್ನೋದಲ್ಲಿ ಪ್ರತಿಭಟನೆ ಆರಂಭಿಸಿತು. ಮಾಲ್‌ನ ಆಡಳಿತ ಮಂಡಳಿ ಹಾಗೂ ವಿಡಿಯೊದಲ್ಲಿ ಸೆರೆಯಾಗಿರುವ ಜನರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಮಹಾಸಭಾ ಕಾರ್ಯಕರ್ತರು ಜಿಲ್ಲಾಡಳಿತವನ್ನು ಆಗ್ರಹಿಸಿದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮಾಲ್‌ನ ಅಧಿಕಾರಿಗಳು ಹೇಳಿಕೆಯನ್ನು ಬಿಡುಗಡೆ ಮಾಡಿದ್ದು, ಘಟನೆಗೆ ಸಂಬಂಧಿಸಿದಂತೆ ಸುಶಾಂತ್ ಗಾಲ್ಫ್ ಸಿಟಿ ಪೊಲೀಸರಿಗೆ ಪತ್ರವನ್ನೂ ಕಳುಹಿಸಿದ್ದಾರೆ. “ನಮಾಜ್ ಮಾಡಿರುವವರು ಮಾಲ್‌ನ ಉದ್ಯೋಗಿಗಳಲ್ಲ. ಮಾಲ್‌ಗೆ ಭೇಟಿ ನೀಡಿದವರು ನಮಾಜ್‌ ಮಾಡಿದ್ದಾರೆ” ಎಂದು ಆಡಳಿತ ವಿಭಾಗ ಸ್ಪಷ್ಟಪಡಿಸಿದೆ. “ಅಂತಹ ಯಾವುದೇ ಘಟನೆ ಮರುಕಳಿಸದಂತೆ ನೋಡಿಕೊಳ್ಳಲಾಗುತ್ತದೆ. ಮಾಲ್‌ನಲ್ಲಿ ಯಾವುದೇ ಧಾರ್ಮಿಕ ಪ್ರಾರ್ಥನೆಗೆ ಅವಕಾಶ ನೀಡುವುದಿಲ್ಲ” ಎಂದು ಆಡಳಿತ ಮಂಡಳಿ ಪ್ರತಿಕ್ರಿಯೆ ನೀಡಿದೆ.

ಮಾಲ್ ಮ್ಯಾನೇಜ್‌ಮೆಂಟ್‌ ಸ್ಪಷ್ಟೀಕರಣ ನೀಡಿದರೂ ಹಿಂದುತ್ವ ಗ್ರೂಪ್‌ಗಳು ಸಮಾಧಾನವಾಗಿಲ್ಲ. ಲುಲು ಗ್ರೂಪ್‌ ಮಾಲೀಕ ಯೂಸುಫಲಿ ಮುಸ್ಲಿಂ ಆಗಿರುವ ಕಾರಣ ನೇರವಾಗಿ ಮಾಲೀಕನನ್ನೇ ಈ ಹಿಂದುತ್ವ ಗ್ರೂಪ್‌ಗಳು ಟಾರ್ಗೆಟ್ ಮಾಡಿವೆ.

‘ಲುಲು ಮಾಲ್ ಮಾಲೀಕ ಕೇವಲ ಮುಸ್ಲಿಮರನ್ನು ನೇಮಿಸಿಕೊಂಡಿದ್ದಾರೆ. ಭಾರತದಲ್ಲಿ ಗಳಿಸಿದ ಲಾಭವನ್ನು ದುಬೈಗೆ ಕಳುಹಿಸುತ್ತಿದ್ದಾರೆ. ಇಲ್ಲಿ ಕೆಲಸ ಮಾಡುವ ಶೇ. 70ರಷ್ಟು ಪುರುಷರು ಮುಸ್ಲಿಮರಾಗಿದ್ದಾರೆ. ಶೇ. 30ರಷ್ಟು ಹಿಂದೂ ಮಹಿಳೆಯರಿದ್ದಾರೆ. ಲವ್‌ ಜಿಹಾದ್‌ ನಡೆಸಲು ಸಂಚು ರೂಪಿಸಲಾಗಿದೆ” ಎಂದು ಹಿಂದೂ ಮಹಾಸಭಾ ಆರೋಪಿಸಿತು.

ಮಹಾಸಭಾದ ಸದಸ್ಯರು ಕೂಡ ಲಕ್ನೋದ ಗಾಲ್ಫ್ ಸಿಟಿ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದಾರೆ. ಮಾಲ್‌ನಲ್ಲಿ ರಾಮಾಯಣ ಪಠಿಸಲು ಅನುಮತಿ ನೀಡಬೇಕು ಎಂದಿರುವ ಅವರು, ‘ಲವ್ ಜಿಹಾದ್’ಅನ್ನು ಪ್ರಚಾರ ಮಾಡಲು ಲುಲು ಮಾಲ್ ಬಳಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿರಿ: ಮುಸ್ಲಿಂ ಮಹಿಳೆಯರನ್ನು ರೇಪ್‌ ಮಾಡಲು ಕರೆ ನೀಡಿದ್ದ ‘ಬಜರಂಗಮುನಿ’ಯನ್ನು ‘ಗೌರವಾನ್ವಿತ’ ಎಂದ ಸರ್ಕಾರ!

ಇಷ್ಟೆಲ್ಲ ಬೆಳವಣಿಗೆಗಳ ನಡುವೆ ಹೊಸ ವಿಚಾರಗಳು ಮುನ್ನೆಲೆಗೆ ಬಂದಿವೆ. ಈ ಪ್ರಕರಣ ಒಂದು ಪಿತೂರಿಯದ್ದಾಗಿದೆ. ನಮಾಜ್ ಮಾಡಿದವರಿಗೆ ವಾಸ್ತವವಾಗಿ ನಮಾಜ್‌ ಸಲ್ಲಿಸುವುದು ಹೇಗೆಂಬ ಅರಿವು ಕೂಡ ಇರಲಿಲ್ಲ ಎಂದು ‘ನ್ಯಾಷನಲ್‌ ಹೆರಾಲ್ಡ್‌’ ವರದಿ ಮಾಡಿದೆ. ಇದರ ಹಿಂದೆ ಯಾವ ಕಾಣದ ಕೈಗಳು ಕೆಲಸ ಮಾಡುತ್ತಿವೆ?

ನ್ಯಾಷನಲ್‌ ಹೆರಾಲ್ಡ್‌ ವರದಿ ಹೇಳುವುದೇನು?

ಲುಲು ಮಾಲ್‌ನ ಹೆಸರು ಕೆಡಿಸಲು, ಸಮುದಾಯಗಳ ನಡುವೆ ದ್ವೇಷ ಬಿತ್ತಲು ಉದ್ದೇಶಪೂರ್ವಕವಾಗಿ ಮಾಡಿದ ಕಿಡಿಗೇಡಿ ಕೃತ್ಯ ಇದಾಗಿದೆ ಎಂಬ ವಿಷಯ ಸಿಸಿಟಿವಿ ದೃಶ್ಯಾವಳಿಗಳಿಂದ ತಿಳಿದುಬರುತ್ತದೆ.

ಮಾಲ್‌ ಮ್ಯಾನೇಜ್‌ಮೆಂಟ್‌ ಹಂಚಿಕೊಂಡಿರುವ ಸಿಸಿಟಿವಿ ದೃಶ್ಯಾವಳಿಗಳಲ್ಲಿ ಎಂಟು ಪುರುಷರು ಒಟ್ಟಿಗೆ ಮಾಲ್‌ಗೆ ಪ್ರವೇಶಿಸುವುದನ್ನು ಕಾಣಬಹುದು. ಅವರಲ್ಲಿ ಯಾರೊಬ್ಬರೂ ಮಾಲ್‌ನ ಒಳಗೆ ಸುತ್ತಾಡುವುದಿಲ್ಲ. ಯಾವುದೇ ಶೋರೂಂಗೆ ಭೇಟಿ ನೀಡುವ ಪ್ರಯತ್ನವನ್ನೂ ಮಾಡುವುದಿಲ್ಲ. ಅವರು ಏನನ್ನೂ ಖರೀದಿಸುವುದಿಲ್ಲ. ಮಾಲ್‌ನಲ್ಲಿ ಸೆಲ್ಫಿ ತೆಗೆದುಕೊಳ್ಳುವ ಆಸಕ್ತಿಯನ್ನೂ ತೋರುವುದಿಲ್ಲ.

ಆತುರಾತುರವಾಗಿ ಕೂತು ನಮಾಜ್ ಮಾಡಲು ಸ್ಥಳ ಹುಡುಕತೊಡಗುತ್ತಾರೆ. ಅವರು ಮೊದಲು ನೆಲಮಾಳಿಗೆಯನ್ನು ಪ್ರಯತ್ನಿಸುತ್ತಾರೆ. ನೆಲ ಮಹಡಿ ಮತ್ತು ಮೊದಲ ಮಹಡಿಯಲ್ಲಿ ಭದ್ರತಾ ಸಿಬ್ಬಂದಿ ಅವರನ್ನು ತಡೆಯುತ್ತಾರೆ. ನಂತರ ಅವರು ಎರಡನೇ ಮಹಡಿಗೆ ತೆರಳುತ್ತಾರೆ. ಅಲ್ಲಿ ಕಡಿಮೆ ಜನರಿದ್ದರು. ಆರು ಜನರು ತಕ್ಷಣ ನಮಾಜ್ ಮಾಡಲು ಕುಳಿತುಕೊಳ್ಳುತ್ತಾರೆ. ಉಳಿದ ಇಬ್ಬರು ವೀಡಿಯೊಗಳನ್ನು ರೆಕಾರ್ಡ್ ಮಾಡುವುದರಲ್ಲಿ, ಛಾಯಾಚಿತ್ರಗಳನ್ನು ತೆಗೆಯುವಲ್ಲಿ ನಿರತರಾಗುತ್ತಾರೆ.

‘ನಮಾಜ್ ಹೇಗೆ ಸಲ್ಲಿಸಲಾಗುತ್ತದೆ ಎಂಬ ಪ್ರಾಥಮಿಕ ತಿಳಿವಳಿಕೆ ಇಲ್ಲಿ ನಮಾಜ್‌ ಮಾಡಿದವರಿಗೆ ಇರಲಿಲ್ಲ ಎಂಬುದು ಸಿಸಿಟಿವಿ ದೃಶ್ಯಾವಳಿಗಳಿಂದ ಸ್ಪಷ್ಟವಾಗುತ್ತದೆ’ ಎಂದು ಹೆಚ್ಚುವರಿ ಪೊಲೀಸ್ ಉಪ ಆಯುಕ್ತ (ದಕ್ಷಿಣ) ರಾಜೇಶ್ ಕುಮಾರ್ ಶ್ರೀವಾಸ್ತವ ತಿಳಿಸಿದ್ದಾರೆ. ‘ಶೀಘ್ರವೇ ಕಿಡಿಗೇಡಿಗಳನ್ನು ಬಂಧಿಸಲಾಗುವುದು’ ಎಂದು ಭರವಸೆ ನೀಡಿದ್ದಾರೆ.

‘ನಮಾಜ್ ಪೂರ್ಣಗೊಳಿಸಲು ಏಳರಿಂದ ಎಂಟು ನಿಮಿಷಗಳನ್ನು ತೆಗೆದುಕೊಳ್ಳಲಾಗುತ್ತದೆ. ಆದರೆ ಇವರು ಆತುರಾತುರವಾಗಿ ಒಂದು ನಿಮಿಷಕ್ಕಿಂತ ಕಡಿಮೆ ಅವಧಿಯಲ್ಲಿ ಪೂರ್ಣಗೊಳಿಸುತ್ತಾರೆ.

ವಿವಾದದ ಆರಂಭದಲ್ಲಿಯೇ ಪಿತೂರಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ ಸಾಮಾಜಿಕ ಕಾರ್ಯಕರ್ತೆ ತಾಹಿರಾ ಹಸನ್, “ಕಾಬಾದ ಕಡೆ ಮುಖ ಮಾಡಿ ನಮಾಜ್‌ ಸಲ್ಲಿಸಲಾಗುತ್ತದೆ ಎಂಬುದು ಇಲ್ಲಿ ನಮಾಜ್‌ ಮಾಡಿದವರಿಗೆ ತಿಳಿದಿಲ್ಲ. ಉತ್ತರ ಭಾರತದಲ್ಲಿ ನಮಾಜ್‌ ಮಾಡುವಾಗ ಪಶ್ಚಿಮ ದಿಕ್ಕಿಗೆ ಮುಖ ಮಾಡಲಾಗುತ್ತದೆ. ಅಲ್ಲಿ ನಮಾಜ್‌ ಮಾಡಿದವರಲ್ಲಿ ಎಲ್ಲರೂ ಪಶ್ಚಿಮದ ಕಡೆಗೆ ಮುಖ ಮಾಡಿದರೆ, ಅವರಲ್ಲಿ ಒಬ್ಬನು ತನ್ನ ಮುಖವನ್ನು ಬೇರೆ ದಿಕ್ಕಿಗೆ ತಿರುಗಿಸಿದ್ದಾನೆ” ಎಂದಿದ್ದಾರೆ.

ಇದನ್ನೂ ಓದಿರಿ: ಮುಸ್ಲಿಂ ವಿದ್ಯಾರ್ಥಿಗೆ ಕಿರುಕುಳ: ಅಜೀಂ ಪ್ರೇಮ್‌ಜಿ ವಿಶ್ವವಿದ್ಯಾಲಯದಿಂದ ಎಬಿವಿಪಿ ಕಾರ್ಯಕರ್ತ ಅಮಾನತು

ತರಾತುರಿಯಲ್ಲಿ ನಮಾಜ್ ಮಾಡಿ ವೀಡಿಯೋ ರೆಕಾರ್ಡ್ ಮಾಡಿದ ನಂತರ ಅವರು ಮಾಲ್‌ನಿಂದ ತಕ್ಷಣವೇ ನಿರ್ಗಮಿಸುತ್ತಾರೆ. ಮಾಲ್‌ನಲ್ಲಿ ಸುತ್ತಾಡುವುದನ್ನಾಗಲೀ, ಅಲ್ಲೇ ಸ್ವಲ್ಪ ಹೊತ್ತು ನಿಲ್ಲುವ ಪ್ರಯತ್ನವನ್ನಾಗಲೀ ನಮಾಜ್‌ ಮಾಡಿದವರು ಮಾಡಿಲ್ಲ.

ಡಿಸಿಪಿ (ದಕ್ಷಿಣ) ಮತ್ತು ಸುಶಾಂತ್ ಗಾಲ್ಫ್ ಸಿಟಿ ಇನ್ಸ್‌ಪೆಕ್ಟರ್ ವಿವಾದದ ಆರಂಭದಲ್ಲಿ ಸಿಸಿಟಿವಿ ದೃಶ್ಯಗಳನ್ನು ಸ್ಕ್ಯಾನ್ ಮಾಡಲು ವಿಫಲವಾದ ಕಾರಣ ಅವರನ್ನು ಬದಲಾಯಿಸಲಾಗಿದೆ. ಮಾಲ್ ಮ್ಯಾನೇಜ್‌ಮೆಂಟ್ ದೃಶ್ಯಗಳನ್ನು ಸ್ಕ್ಯಾನ್ ಮಾಡಲು ಸಮಯ ಕೇಳಿದೆ. ವಿವಾದ ಸೃಷ್ಟಿಸಿರುವ ದೃಶ್ಯಗಳನ್ನು ಪೊಲೀಸರೊಂದಿಗೆ ಮಾಲ್‌ ಮ್ಯಾನೇಜ್‌ಮೆಂಟ್ ಹಂಚಿಕೊಂಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...