Homeಕರ್ನಾಟಕಮಹಾರಾಷ್ಟ್ರಕ್ಕೂ ಕಾಲಿಟ್ಟ ಲಂಪಿ ವೈರಸ್‌; ಜಾನುವಾರುಗಳ ಸರಣಿ ಸಾವು; ಎಚ್ಚೆತ್ತುಕೊಂಡಿದೆಯೇ ಕರ್ನಾಟಕ ಸರ್ಕಾರ?

ಮಹಾರಾಷ್ಟ್ರಕ್ಕೂ ಕಾಲಿಟ್ಟ ಲಂಪಿ ವೈರಸ್‌; ಜಾನುವಾರುಗಳ ಸರಣಿ ಸಾವು; ಎಚ್ಚೆತ್ತುಕೊಂಡಿದೆಯೇ ಕರ್ನಾಟಕ ಸರ್ಕಾರ?

- Advertisement -
- Advertisement -

ಮಹಾರಾಷ್ಟ್ರದಲ್ಲಿ ಲಂಪಿ ವೈರಸ್‌ನಿಂದ 126 ಜಾನುವಾರುಗಳು ಸಾವನ್ನಪ್ಪಿವೆ. ಇಲ್ಲಿನ 25 ಜಿಲ್ಲೆಗಳು ಸೋಂಕಿಗೆ ಒಳಗಾಗಿವೆ ಎಂದು ರಾಜ್ಯದ ಪಶುಸಂಗೋಪನಾ ಇಲಾಖೆ ಶನಿವಾರ ಮಾಹಿತಿ ನೀಡಿದೆ.

“ಜಲಗಾಂವ್ ಜಿಲ್ಲೆಯಲ್ಲಿ 47, ಅಹ್ಮದ್‌ನಗರ ಜಿಲ್ಲೆಯಲ್ಲಿ 21, ಧುಲೆಯಲ್ಲಿ 2, ಅಕೋಲಾದಲ್ಲಿ 18, ಪುಣೆಯಲ್ಲಿ 14, ಲಾತೂರ್‌ನಲ್ಲಿ 2, ಸತಾರಾದಲ್ಲಿ 6, ಬುಲ್ಧಾನದಲ್ಲಿ 5, ಅಮರಾವತಿಯಲ್ಲಿ 7, ಸಾಂಗ್ಲಿ, ವಾಶಿಮ್‌, ಜಲ್ನಾ ಮತ್ತು ನಾಗ್ಪುರ ಜಿಲ್ಲೆಯಲ್ಲಿ ಒಂದೊಂದು ಪ್ರಕರಣ ಸೇರಿದಂತೆ ಒಟ್ಟು 126 ಸೋಂಕಿತ ಪ್ರಾಣಿಗಳು ಸಾವನ್ನಪ್ಪಿವೆ” ಎಂದು ಪ್ರಕಟಣೆ ತಿಳಿಸಿದೆ.

ಲಂಪಿ ಸ್ಕಿನ್ ಡಿಸೀಸ್ (ಎಲ್‌ಎಸ್‌ಡಿ) ವೇಗವಾಗಿ ಹರಡುತ್ತಿದ್ದರೂ, ಇದು ಪ್ರಾಣಿಗಳಿಂದ ಅಥವಾ ಹಸುವಿನ ಹಾಲಿನ ಮೂಲಕ ಮನುಷ್ಯರಿಗೆ ಹರಡುವುದಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಮಹಾರಾಷ್ಟ್ರ ರಾಜ್ಯದಾದ್ಯಂತ ಲಂಪಿ ಸ್ಕಿನ್ ಡಿಸೀಸ್ (ಎಲ್‌ಎಸ್‌ಡಿ) ವೇಗವಾಗಿ ಹರಡುತ್ತಿದೆ. ಇದು ಹಸುವಿನ ಚರ್ಮದ ವೈರಲ್ ಕಾಯಿಲೆಯಾಗಿದೆ. ಈ ರೋಗವು ಪ್ರಾಣಿಗಳಿಂದ ಅಥವಾ ಹಸುವಿನ ಹಾಲಿನಿಂದ ಮನುಷ್ಯರಿಗೆ ಹರಡುವುದಿಲ್ಲ” ಎಂದು ಮಹಾರಾಷ್ಟ್ರ ಪಶುಸಂಗೋಪನಾ ಇಲಾಖೆಯ ಪ್ರಕಟಣೆ ತಿಳಿಸಿದೆ.

ಸರಕಾರದ ಪರವಾಗಿ ಐಎಎಸ್‌ ಅಧಿಕಾರಿ ಸಚೀಂದ್ರ ಪ್ರತಾಪ್‌ ಸಿಂಗ್‌ ಮನವಿ ಮಾಡಿದ್ದು, “ರೋಗವು ಹಸು, ರಾಸುಗಳಿಗೆ ಮಾತ್ರ ಹರಡಿದ್ದು, ಝೂನೋಟಿಕ್ ಆಗಿರುವುದಿಲ್ಲ. ಸಾಮಾಜಿಕ ಜಾಲತಾಣಗಳಲ್ಲಿ ವದಂತಿ ಹಬ್ಬಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು” ಎಂದು ಎಚ್ಚರಿಸಿದ್ದಾರೆ.

ಪರಿಸ್ಥಿತಿಯನ್ನು ಎದುರಿಸಲು ಮಾಡಲಾಗುತ್ತಿರುವ ವ್ಯವಸ್ಥೆಗಳ ಬಗ್ಗೆ ಅವರು ಮತ್ತಷ್ಟು ಮಾಹಿತಿ ನೀಡಿದ್ದಾರೆ. ಪಶುಸಂಗೋಪನಾ ಇಲಾಖೆ ಪ್ರಕಾರ, ರೋಗದ ಚಿಕಿತ್ಸೆಗೆ ಅಗತ್ಯವಿರುವ ಔಷಧಗಳನ್ನು ಖರೀದಿಸಲು ಪ್ರತಿ ಜಿಲ್ಲೆಗೆ ₹ 1 ಕೋಟಿ ರೂ ನೀಡಲಾಗುತ್ತಿದೆ. ಮಹಾರಾಷ್ಟ್ರ ಪ್ರಾಣಿ ಮತ್ತು ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾನಿಲಯದ (MAFSU) ವ್ಯಾಕ್ಸಿನೇಟರ್‌ಗಳು ಮತ್ತು ಇಂಟರ್ನ್‌ಗಳಿಗೆ ಪ್ರತಿ ಲಸಿಕೆಗೆ ₹ 3 ಗೌರವಧನವನ್ನೂ ನೀಡಲಾಗುತ್ತಿದೆ.

“ಸರ್ಕಾರಿ ಪಶುವೈದ್ಯಾಧಿಕಾರಿಗಳು ಮತ್ತು ಖಾಸಗಿ ವೈದ್ಯರು ಎಂಎಎಫ್‌ಎಸ್‌ಯು ಚಿಕಿತ್ಸಾ ಕಾರ್ಯಸೂಚಿಯಂತೆ ಕ್ರಮ ಕೈಗೊಳ್ಳಬೇಕು. ಜಾನುವಾರುಗಳಲ್ಲಿನ ಯಾವುದೇ ರೋಗಲಕ್ಷಣಗಳ ಬಗ್ಗೆ ಹತ್ತಿರದ ಸರ್ಕಾರಿ ಜಾನುವಾರು ಅಭಿವೃದ್ಧಿ ಅಧಿಕಾರಿಗಳಿಗೆ ತಿಳಿಸಬೇಕು” ಎಂದು ಸೂಚಿಸಲಾಗಿದೆ.

ಇದನ್ನೂ ಓದಿರಿ: ನೆರೆರಾಜ್ಯಗಳಲ್ಲಿಯೂ ಹೈನುಗಾರಿಕೆ ಬಿಕ್ಕಟ್ಟಿನಲ್ಲಿ…

ಪಶುಸಂಗೋಪನಾ ಇಲಾಖೆಯ ಆಯುಕ್ತರು ಪ್ರತಿಕ್ರಿಯೆ ನೀಡಿದ್ದು, “ಪ್ರಾಣಿಗಳಲ್ಲಿ ಈ ರೋಗದ ಲಕ್ಷಣಗಳು ಕಂಡುಬಂದಲ್ಲಿ ಹತ್ತಿರದ ಪಶುವೈದ್ಯಕೀಯ ಸಂಸ್ಥೆಗೆ ಮಾಹಿತಿ ನೀಡಬೇಕೆಂದು ‘ಪ್ರಾಣಿಗಳ ಅಧಿನಿಯಮ, 2009’ರ ಪ್ರಕಾರ ನಿರ್ದೇಶಿಸಲಾಗಿದೆ” ಎಂದಿದ್ದಾರೆ.

ನೊಣಗಳು, ಸೊಳ್ಳೆಗಳು, ಉಣ್ಣಿಗಳ ಮೂಲಕ ರೋಗ ಹರಡುವುದರಿಂದ ಕೀಟನಾಶಕಗಳ ಸಿಂಪಡಣೆ ಮಾಡುವಂತೆ ಮಹಾರಾಷ್ಟ್ರದ ಪಶುಸಂಗೋಪನಾ ಇಲಾಖೆಯು ಗ್ರಾಮ-ಪಂಚಾಯತ್‌ಗಳಿಗೆ ಆದೇಶಿಸಿದೆ.

ತಿಂಗಳ ಹಿಂದೆಯೇ ಕಾಣಿಸಿಕೊಂಡಿತ್ತು ಲಂಪಿ ಹಾವಳಿ

ಆಗಸ್ಟ್ ತಿಂಗಳಲ್ಲಿಯೇ ಲಂಪಿ ವೈರಸ್‌ ಹಾವಳಿ ಕಾಣಿಸಿಕೊಂಡಿತ್ತು. ದೇಶದ ವಿವಿಧ ರಾಜ್ಯಗಳಲ್ಲಿ ಸೋಂಕು ತಗುಲಿರುವ ಕುರಿತು ವರದಿಯಾಗಿದ್ದವು.

“ಒಂದು ಕೇಂದ್ರಾಡಳಿತ ಪ್ರದೇಶ ಸೇರಿದಂತೆ ಎಂಟು ರಾಜ್ಯಗಳಲ್ಲಿ 7,300 ಕ್ಕೂ ಹೆಚ್ಚು ಜಾನುವಾರುಗಳು ಸಾವನ್ನಪ್ಪಿವೆ. ಸೋಂಕನ್ನು ತಡೆಗಟ್ಟಲು ಲಸಿಕೆ ಅಭಿಯಾನವನ್ನು ಹೆಚ್ಚಿಸಲಾಗಿದೆ” ಎಂದು ಹಿರಿಯ ಸರ್ಕಾರಿ ಅಧಿಕಾರಿಯೊಬ್ಬರು ತಿಳಿಸಿರುವುದಾಗಿ ಆಗಸ್ಟ್‌ 21ರಂದು ‘ದಿ ಹಿಂದೂ’ ವರದಿ ಮಾಡಿತ್ತು.

ಲಂಪಿ ಸ್ಕಿನ್ ಡಿಸೀಸ್ (ಎಲ್‌ಎಸ್‌ಡಿ) ಜಾನುವಾರುಗಳನ್ನು ಬಾಧಿಸುವ ಸಾಂಕ್ರಾಮಿಕ ವೈರಲ್ ಕಾಯಿಲೆಯಾಗಿದೆ. ಈ ವೈರಸ್‌ನಿಂದಾಗಿ ಜಾನುವಾರುಗಳು ಜ್ವರಕ್ಕೆ ತುತ್ತಾಗುತ್ತವೆ. ಚರ್ಮದ ಮೇಲೆ ಗಂಟುಗಳು ಮೂಡುತ್ತವೆ.

ಎಲ್‌ಎಸ್‌ಡಿ ಇತ್ತೀಚಿನ ವರ್ಷಗಳಲ್ಲಿ ಮಧ್ಯಪ್ರಾಚ್ಯ ಮತ್ತು ಯುರೋಪ್‌ ದೇಶಗಳಲ್ಲಿ ಏಕಾಏಕಿ ಹರಡಿತು. ನಂತರ ಏಷ್ಯಕ್ಕೆ ಕಾಲಿಟ್ಟಿತು. ಜುಲೈ 2019ರಲ್ಲಿ ಬಾಂಗ್ಲಾದೇಶದಲ್ಲಿ ಈ ರೋಗವು ಪತ್ತೆಯಾಗಿತ್ತು.

2019ರಲ್ಲಿ ಭಾರತದಲ್ಲಿಯೂ ಎಲ್‌ಎಸ್‌ಡಿ ವರದಿಯಾಗಿತ್ತು. ಪೂರ್ವ ರಾಜ್ಯಗಳಲ್ಲಿ, ವಿಶೇಷವಾಗಿ ಪಶ್ಚಿಮ ಬಂಗಾಳ ಮತ್ತು ಒಡಿಶಾದಲ್ಲಿ ಎಲ್ಎಸ್‌ಡಿ ಮೊದಲ ಪ್ರಕರಣ ವರದಿಯಾಯಿತು. ಆದರೆ ಈ ವರ್ಷ ಪಶ್ಚಿಮ ಮತ್ತು ಉತ್ತರ ರಾಜ್ಯಗಳಲ್ಲಿ, ಅಂಡಮಾನ್ ನಿಕೋಬಾರ್‌ನಲ್ಲಿ ಈ ರೋಗ ವರದಿಯಾಗಿದೆ ಎಂದು ‘ದಿ ಹಿಂದೂ’ ವರದಿ ತಿಳಿಸಿತ್ತು.

“ಮೊದಲಿಗೆ ಗುಜರಾತ್‌ನಲ್ಲಿ ಎಲ್‌ಎಸ್‌ಡಿ ವರದಿಯಾಗಿದೆ. ಇದು ಈಗ ಎಂಟು ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳಿಗೆ ಹರಡಿದೆ. ಇದುವರೆಗೆ 1.85 ಲಕ್ಷಕ್ಕೂ ಹೆಚ್ಚು ಜಾನುವಾರುಗಳು ಬಾಧಿತವಾಗಿವೆ. ಜುಲೈನಲ್ಲಿ ರೋಗ ಹರಡಿದ ನಂತರ 7,300ಕ್ಕೂ ಹೆಚ್ಚು ಜಾನುವಾರುಗಳು ಸಾವನ್ನಪ್ಪಿವೆ” ಎಂದು ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದ್ದರು.

ಪಂಜಾಬ್‌ನಲ್ಲಿ ಇದುವರೆಗೆ ಸುಮಾರು 74,325 ಜಾನುವಾರುಗಳು ಬಾಧಿತವಾಗಿದ್ದರೆ, ಗುಜರಾತ್‌ನಲ್ಲಿ 58,546, ರಾಜಸ್ಥಾನದಲ್ಲಿ 43,962, ಜಮ್ಮು ಮತ್ತು ಕಾಶ್ಮೀರದಲ್ಲಿ 6,385, ಉತ್ತರಾಖಂಡದಲ್ಲಿ 1,300, ಹಿಮಾಚಲ ಪ್ರದೇಶದಲ್ಲಿ 532, ಅಂಡಮಾನ್ ಮತ್ತು ನಿಕೋಬಾರ್‌ನಲ್ಲಿ 260 ಜಾನುವಾರುಗಳು ಹಾನಿಗೊಳಗಾಗಿವೆ ಎಂದು ಅವರು ಹೇಳಿದ್ದರು.

ಸಚಿವಾಲಯದ ಅಂಕಿಅಂಶಗಳ ಪ್ರಕಾರ, ಇದುವರೆಗೆ (ಆಗಸ್ಟ್‌ವರೆಗೆ) 7,300 ಜಾನುವಾರುಗಳು ಸಾವನ್ನಪ್ಪಿವೆ. ಪಂಜಾಬ್‌ನಲ್ಲಿ 3,359, ರಾಜಸ್ಥಾನದಲ್ಲಿ 2,111, ಗುಜರಾತ್‌ನಲ್ಲಿ 1,679, ಜಮ್ಮು ಮತ್ತು ಕಾಶ್ಮೀರದಲ್ಲಿ 62, ಹಿಮಾಚಲ ಪ್ರದೇಶದಲ್ಲಿ 38, ಉತ್ತರಾಖಂಡದಲ್ಲಿ 36 ಮತ್ತು ಅಂಡಮಾನ್ ನಿಕೋಬಾರ್‌ನಲ್ಲಿ 29 ಪ್ರಾಣಿಗಳು ಸಾವನ್ನಪ್ಪಿವೆ. ಹರಿಯಾಣದಲ್ಲೂ ಎಲ್‌ಎಸ್‌ಡಿ ಸೋಂಕಿನ ವರದಿಗಳಿವೆ.

ಕರ್ನಾಟಕದಲ್ಲಿ ಮುಂಜಾಗ್ರತೆ ವಹಿಸಲಾಗಿದೆಯೇ?

“ಕರ್ನಾಟಕದಲ್ಲಿ ಎಲ್‌ಎಸ್‌ಡಿ ಸೋಂಕಿಗೆ ಸಂಬಂಧಿಸಿದಂತೆ ಯಾವುದಾದರೂ ಕ್ರಮ ಜರುಗಿಸಲಾಗಿದೆಯೇ?” ಎಂಬ ಪ್ರಶ್ನೆ ಮೂಡಿದೆ. ರಾಜ್ಯದ ಪರಿಸ್ಥಿತಿಯ ಕುರಿತು ‘ನಾನುಗೌರಿ.ಕಾಂ’ಗೆ ಪ್ರತಿಕ್ರಿಯೆ ನೀಡಿದ ಮೈಸೂರು ಜಿಲ್ಲೆಯ ವೈದ್ಯಾಧಿಕಾರಿ ಡಾ.ಮಹೇಶ್‌ಕುಮಾರ್‌, “ಸಾಮಾನ್ಯವಾಗಿ ಈ ರೀತಿಯ ಪ್ರಕರಣಗಳು ವರದಿಯಾದಾಗ, ಗಡಿ ಜಿಲ್ಲೆಗಳಲ್ಲಿ, ಚೆಕ್‌ ಪೋಸ್ಟ್‌ಗಳಲ್ಲಿ ಎಚ್ಚರ ವಹಿಸಲಾಗುತ್ತದೆ. ಯಾವುದೇ ಜಾನುವಾರು ಗಡಿ ದಾಟದಂತೆ ನೋಡಿಕೊಳ್ಳಲಾಗುತ್ತದೆ. ಕೋವಿಡ್‌ ಹರಡಿದ ಸಂದರ್ಭದಲ್ಲಿ ಈ ಸೋಂಕು ಕಾಣಿಸಿಕೊಂಡಿತು. ಮುಂಜಾಗ್ರತೆ ಅಗತ್ಯವಿದೆ. ಸೋಂಕಿನ ಲಕ್ಷಣಗಳು ಕಂಡ ತಕ್ಷಣ ವೈದ್ಯರಿಗೆ ತಿಳಿಸಬೇಕು” ಎಂದು ರೈತರಿಗೆ ಮನವಿ ಮಾಡಿದರು.

“ಜಾನುವಾರುಗಳಿಗೆ ಕಾಯಿಲೆಗಳು ಬಂದಾಗ ರೈತರು ಕೆಲವೊಮ್ಮೆ ನಾಟಿ ಔಷಧಿ ಕೊಡಿಸಿ, ಮೂರ್ನಾಲ್ಕು ದಿನಗಳ ನಂತರ ನಮ್ಮ ಬಳಿ ಬರುತ್ತಾರೆ. ಎಲ್‌ಎಸ್‌ಡಿ ಸೋಂಕಿಗೆ ನಿರ್ದಿಷ್ಟ ವಾಕ್ಸಿನ್‌ ನಮ್ಮಲ್ಲಿ ಲಭ್ಯವಾಗಿಲ್ಲ. ಆದರೆ ಈಗ ನೀಡಲಾಗುತ್ತಿರುವ ವಾಕ್ಸಿನ್‌, ಈ ಕಾಯಿಲೆಗೆ ಕೊಂಚ ಹತ್ತಿರದ ಸಂಬಂಧ ಹೊಂದಿರುವ ಲಸಿಕೆಯಾಗಿದೆ. ಈ ಲಸಿಕೆಯನ್ನು ನೀಡುವ ಮೂಲಕವೂ ಒಂದಿಷ್ಟು ಸೋಂಕು ತಡೆಗಟ್ಟಲಾಗುತ್ತಿದೆ. ಆರಂಭಿಕ ಹಂತದಲ್ಲೇ ಮುಂಜಾಗ್ರತೆ ವಹಿಸಿದರೆ ಜಾನುವಾರುಗಳು ಗುಣಮುಖವಾಗಬಹುದು” ಎಂದರು.

ಇದನ್ನೂ ಓದಿರಿ: ಗೋವು ಸಾಕಣೆಯ ಗೋಳು ಕೇಳುವವರ್‍ಯಾರು? ಇದು ಹೈನುಗಾರಿಕೆಯ ಕಥೆ-ವ್ಯಥೆ!

ಪಶುವೈದ್ಯಾಧಿಕಾರಿ ಟಿ.ಎಸ್.ರಮಾನಂದ್ ಅವರು ‘ನಾನುಗೌರಿ.ಕಾಂ’ ಜೊತೆ ಮಾತನಾಡಿ, “ಬೇರೆ ದೇಶಗಳಲ್ಲಿ ವಾಕ್ಸಿನ್ ಅಭಿವೃದ್ಧಿಪಡಿಸಿದ್ದಾರೆ. ಮೇಕೆಗೆ ತಗುಲುವ ಪೋಕ್ಸ್‌ ವೈರಾಣುವಿಗೆ ಸಂಬಂಧಿಸಿದಂತೆ ನೀಡುವ ಲಸಿಕೆಯನ್ನು ನಮ್ಮಲ್ಲಿ ಕೆಲವು ಕಡೆ ಬಳಸುತ್ತಿದ್ದಾರೆ. ಎಲ್‌ಎಸ್‌ಡಿ ಹದಿನೈದು ದಿನ ಹರಡಿ ನಂತರ ಕಡಿಮೆಯಾಗುತ್ತದೆ. ಆದರೆ ಜಾನುವಾರುಗಳು ಸಾಯುತ್ತಿರುವುದು ನಮ್ಮ ದುರ್ದೈವ” ಎಂದು ವಿಷಾದಿಸಿದರು.

“ರೈತರು ಎಚ್ಚರಿಕೆ ವಹಿಸಬೇಕು. ಯಾವುದಾದರೂ ಒಂದು ಜಾನುವಾರಿಗೆ ಈ ಕಾಯಿಲೆ ಕಾಣಿಸಿಕೊಂಡ ತಕ್ಷಣ ಐಸೊಲೇಷನ್‌ ಮಾಡಬೇಕು. ಆರೋಗ್ಯವಂತ ಜಾನುವಾರುಗಳನ್ನು ಬೇರೆಡೆ ಇರಿಸಿಬೇಕು. ಕೊಟ್ಟಿಗೆಯನ್ನು ಶುಚಿಗೊಳಿಸಬೇಕು” ಎಂದು ಸಲಹೆ ನೀಡಿದರು.

“ನಮ್ಮ ವೈದ್ಯರು ನೀಡುವ ಮಾಹಿತಿ ಪ್ರಕಾರ ಜಾಗೃತಿ ಮೂಡಿಸುವ ಕೆಲಸಗಳಾಗುತ್ತಿವೆ. ಸೋಂಕು ಕಾಣಿಸಿಕೊಂಡ ಜಾನುವಾರುಗಳನ್ನು ಬೇರೆಡೆ ಇರಿಸಲು ಸೂಚನೆಗಳನ್ನು ನೀಡುತ್ತಿದ್ದಾರೆ” ಎಂದು ತಿಳಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...