Homeಕರ್ನಾಟಕಮಹಾರಾಷ್ಟ್ರಕ್ಕೂ ಕಾಲಿಟ್ಟ ಲಂಪಿ ವೈರಸ್‌; ಜಾನುವಾರುಗಳ ಸರಣಿ ಸಾವು; ಎಚ್ಚೆತ್ತುಕೊಂಡಿದೆಯೇ ಕರ್ನಾಟಕ ಸರ್ಕಾರ?

ಮಹಾರಾಷ್ಟ್ರಕ್ಕೂ ಕಾಲಿಟ್ಟ ಲಂಪಿ ವೈರಸ್‌; ಜಾನುವಾರುಗಳ ಸರಣಿ ಸಾವು; ಎಚ್ಚೆತ್ತುಕೊಂಡಿದೆಯೇ ಕರ್ನಾಟಕ ಸರ್ಕಾರ?

- Advertisement -
- Advertisement -

ಮಹಾರಾಷ್ಟ್ರದಲ್ಲಿ ಲಂಪಿ ವೈರಸ್‌ನಿಂದ 126 ಜಾನುವಾರುಗಳು ಸಾವನ್ನಪ್ಪಿವೆ. ಇಲ್ಲಿನ 25 ಜಿಲ್ಲೆಗಳು ಸೋಂಕಿಗೆ ಒಳಗಾಗಿವೆ ಎಂದು ರಾಜ್ಯದ ಪಶುಸಂಗೋಪನಾ ಇಲಾಖೆ ಶನಿವಾರ ಮಾಹಿತಿ ನೀಡಿದೆ.

“ಜಲಗಾಂವ್ ಜಿಲ್ಲೆಯಲ್ಲಿ 47, ಅಹ್ಮದ್‌ನಗರ ಜಿಲ್ಲೆಯಲ್ಲಿ 21, ಧುಲೆಯಲ್ಲಿ 2, ಅಕೋಲಾದಲ್ಲಿ 18, ಪುಣೆಯಲ್ಲಿ 14, ಲಾತೂರ್‌ನಲ್ಲಿ 2, ಸತಾರಾದಲ್ಲಿ 6, ಬುಲ್ಧಾನದಲ್ಲಿ 5, ಅಮರಾವತಿಯಲ್ಲಿ 7, ಸಾಂಗ್ಲಿ, ವಾಶಿಮ್‌, ಜಲ್ನಾ ಮತ್ತು ನಾಗ್ಪುರ ಜಿಲ್ಲೆಯಲ್ಲಿ ಒಂದೊಂದು ಪ್ರಕರಣ ಸೇರಿದಂತೆ ಒಟ್ಟು 126 ಸೋಂಕಿತ ಪ್ರಾಣಿಗಳು ಸಾವನ್ನಪ್ಪಿವೆ” ಎಂದು ಪ್ರಕಟಣೆ ತಿಳಿಸಿದೆ.

ಲಂಪಿ ಸ್ಕಿನ್ ಡಿಸೀಸ್ (ಎಲ್‌ಎಸ್‌ಡಿ) ವೇಗವಾಗಿ ಹರಡುತ್ತಿದ್ದರೂ, ಇದು ಪ್ರಾಣಿಗಳಿಂದ ಅಥವಾ ಹಸುವಿನ ಹಾಲಿನ ಮೂಲಕ ಮನುಷ್ಯರಿಗೆ ಹರಡುವುದಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಮಹಾರಾಷ್ಟ್ರ ರಾಜ್ಯದಾದ್ಯಂತ ಲಂಪಿ ಸ್ಕಿನ್ ಡಿಸೀಸ್ (ಎಲ್‌ಎಸ್‌ಡಿ) ವೇಗವಾಗಿ ಹರಡುತ್ತಿದೆ. ಇದು ಹಸುವಿನ ಚರ್ಮದ ವೈರಲ್ ಕಾಯಿಲೆಯಾಗಿದೆ. ಈ ರೋಗವು ಪ್ರಾಣಿಗಳಿಂದ ಅಥವಾ ಹಸುವಿನ ಹಾಲಿನಿಂದ ಮನುಷ್ಯರಿಗೆ ಹರಡುವುದಿಲ್ಲ” ಎಂದು ಮಹಾರಾಷ್ಟ್ರ ಪಶುಸಂಗೋಪನಾ ಇಲಾಖೆಯ ಪ್ರಕಟಣೆ ತಿಳಿಸಿದೆ.

ಸರಕಾರದ ಪರವಾಗಿ ಐಎಎಸ್‌ ಅಧಿಕಾರಿ ಸಚೀಂದ್ರ ಪ್ರತಾಪ್‌ ಸಿಂಗ್‌ ಮನವಿ ಮಾಡಿದ್ದು, “ರೋಗವು ಹಸು, ರಾಸುಗಳಿಗೆ ಮಾತ್ರ ಹರಡಿದ್ದು, ಝೂನೋಟಿಕ್ ಆಗಿರುವುದಿಲ್ಲ. ಸಾಮಾಜಿಕ ಜಾಲತಾಣಗಳಲ್ಲಿ ವದಂತಿ ಹಬ್ಬಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು” ಎಂದು ಎಚ್ಚರಿಸಿದ್ದಾರೆ.

ಪರಿಸ್ಥಿತಿಯನ್ನು ಎದುರಿಸಲು ಮಾಡಲಾಗುತ್ತಿರುವ ವ್ಯವಸ್ಥೆಗಳ ಬಗ್ಗೆ ಅವರು ಮತ್ತಷ್ಟು ಮಾಹಿತಿ ನೀಡಿದ್ದಾರೆ. ಪಶುಸಂಗೋಪನಾ ಇಲಾಖೆ ಪ್ರಕಾರ, ರೋಗದ ಚಿಕಿತ್ಸೆಗೆ ಅಗತ್ಯವಿರುವ ಔಷಧಗಳನ್ನು ಖರೀದಿಸಲು ಪ್ರತಿ ಜಿಲ್ಲೆಗೆ ₹ 1 ಕೋಟಿ ರೂ ನೀಡಲಾಗುತ್ತಿದೆ. ಮಹಾರಾಷ್ಟ್ರ ಪ್ರಾಣಿ ಮತ್ತು ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾನಿಲಯದ (MAFSU) ವ್ಯಾಕ್ಸಿನೇಟರ್‌ಗಳು ಮತ್ತು ಇಂಟರ್ನ್‌ಗಳಿಗೆ ಪ್ರತಿ ಲಸಿಕೆಗೆ ₹ 3 ಗೌರವಧನವನ್ನೂ ನೀಡಲಾಗುತ್ತಿದೆ.

“ಸರ್ಕಾರಿ ಪಶುವೈದ್ಯಾಧಿಕಾರಿಗಳು ಮತ್ತು ಖಾಸಗಿ ವೈದ್ಯರು ಎಂಎಎಫ್‌ಎಸ್‌ಯು ಚಿಕಿತ್ಸಾ ಕಾರ್ಯಸೂಚಿಯಂತೆ ಕ್ರಮ ಕೈಗೊಳ್ಳಬೇಕು. ಜಾನುವಾರುಗಳಲ್ಲಿನ ಯಾವುದೇ ರೋಗಲಕ್ಷಣಗಳ ಬಗ್ಗೆ ಹತ್ತಿರದ ಸರ್ಕಾರಿ ಜಾನುವಾರು ಅಭಿವೃದ್ಧಿ ಅಧಿಕಾರಿಗಳಿಗೆ ತಿಳಿಸಬೇಕು” ಎಂದು ಸೂಚಿಸಲಾಗಿದೆ.

ಇದನ್ನೂ ಓದಿರಿ: ನೆರೆರಾಜ್ಯಗಳಲ್ಲಿಯೂ ಹೈನುಗಾರಿಕೆ ಬಿಕ್ಕಟ್ಟಿನಲ್ಲಿ…

ಪಶುಸಂಗೋಪನಾ ಇಲಾಖೆಯ ಆಯುಕ್ತರು ಪ್ರತಿಕ್ರಿಯೆ ನೀಡಿದ್ದು, “ಪ್ರಾಣಿಗಳಲ್ಲಿ ಈ ರೋಗದ ಲಕ್ಷಣಗಳು ಕಂಡುಬಂದಲ್ಲಿ ಹತ್ತಿರದ ಪಶುವೈದ್ಯಕೀಯ ಸಂಸ್ಥೆಗೆ ಮಾಹಿತಿ ನೀಡಬೇಕೆಂದು ‘ಪ್ರಾಣಿಗಳ ಅಧಿನಿಯಮ, 2009’ರ ಪ್ರಕಾರ ನಿರ್ದೇಶಿಸಲಾಗಿದೆ” ಎಂದಿದ್ದಾರೆ.

ನೊಣಗಳು, ಸೊಳ್ಳೆಗಳು, ಉಣ್ಣಿಗಳ ಮೂಲಕ ರೋಗ ಹರಡುವುದರಿಂದ ಕೀಟನಾಶಕಗಳ ಸಿಂಪಡಣೆ ಮಾಡುವಂತೆ ಮಹಾರಾಷ್ಟ್ರದ ಪಶುಸಂಗೋಪನಾ ಇಲಾಖೆಯು ಗ್ರಾಮ-ಪಂಚಾಯತ್‌ಗಳಿಗೆ ಆದೇಶಿಸಿದೆ.

ತಿಂಗಳ ಹಿಂದೆಯೇ ಕಾಣಿಸಿಕೊಂಡಿತ್ತು ಲಂಪಿ ಹಾವಳಿ

ಆಗಸ್ಟ್ ತಿಂಗಳಲ್ಲಿಯೇ ಲಂಪಿ ವೈರಸ್‌ ಹಾವಳಿ ಕಾಣಿಸಿಕೊಂಡಿತ್ತು. ದೇಶದ ವಿವಿಧ ರಾಜ್ಯಗಳಲ್ಲಿ ಸೋಂಕು ತಗುಲಿರುವ ಕುರಿತು ವರದಿಯಾಗಿದ್ದವು.

“ಒಂದು ಕೇಂದ್ರಾಡಳಿತ ಪ್ರದೇಶ ಸೇರಿದಂತೆ ಎಂಟು ರಾಜ್ಯಗಳಲ್ಲಿ 7,300 ಕ್ಕೂ ಹೆಚ್ಚು ಜಾನುವಾರುಗಳು ಸಾವನ್ನಪ್ಪಿವೆ. ಸೋಂಕನ್ನು ತಡೆಗಟ್ಟಲು ಲಸಿಕೆ ಅಭಿಯಾನವನ್ನು ಹೆಚ್ಚಿಸಲಾಗಿದೆ” ಎಂದು ಹಿರಿಯ ಸರ್ಕಾರಿ ಅಧಿಕಾರಿಯೊಬ್ಬರು ತಿಳಿಸಿರುವುದಾಗಿ ಆಗಸ್ಟ್‌ 21ರಂದು ‘ದಿ ಹಿಂದೂ’ ವರದಿ ಮಾಡಿತ್ತು.

ಲಂಪಿ ಸ್ಕಿನ್ ಡಿಸೀಸ್ (ಎಲ್‌ಎಸ್‌ಡಿ) ಜಾನುವಾರುಗಳನ್ನು ಬಾಧಿಸುವ ಸಾಂಕ್ರಾಮಿಕ ವೈರಲ್ ಕಾಯಿಲೆಯಾಗಿದೆ. ಈ ವೈರಸ್‌ನಿಂದಾಗಿ ಜಾನುವಾರುಗಳು ಜ್ವರಕ್ಕೆ ತುತ್ತಾಗುತ್ತವೆ. ಚರ್ಮದ ಮೇಲೆ ಗಂಟುಗಳು ಮೂಡುತ್ತವೆ.

ಎಲ್‌ಎಸ್‌ಡಿ ಇತ್ತೀಚಿನ ವರ್ಷಗಳಲ್ಲಿ ಮಧ್ಯಪ್ರಾಚ್ಯ ಮತ್ತು ಯುರೋಪ್‌ ದೇಶಗಳಲ್ಲಿ ಏಕಾಏಕಿ ಹರಡಿತು. ನಂತರ ಏಷ್ಯಕ್ಕೆ ಕಾಲಿಟ್ಟಿತು. ಜುಲೈ 2019ರಲ್ಲಿ ಬಾಂಗ್ಲಾದೇಶದಲ್ಲಿ ಈ ರೋಗವು ಪತ್ತೆಯಾಗಿತ್ತು.

2019ರಲ್ಲಿ ಭಾರತದಲ್ಲಿಯೂ ಎಲ್‌ಎಸ್‌ಡಿ ವರದಿಯಾಗಿತ್ತು. ಪೂರ್ವ ರಾಜ್ಯಗಳಲ್ಲಿ, ವಿಶೇಷವಾಗಿ ಪಶ್ಚಿಮ ಬಂಗಾಳ ಮತ್ತು ಒಡಿಶಾದಲ್ಲಿ ಎಲ್ಎಸ್‌ಡಿ ಮೊದಲ ಪ್ರಕರಣ ವರದಿಯಾಯಿತು. ಆದರೆ ಈ ವರ್ಷ ಪಶ್ಚಿಮ ಮತ್ತು ಉತ್ತರ ರಾಜ್ಯಗಳಲ್ಲಿ, ಅಂಡಮಾನ್ ನಿಕೋಬಾರ್‌ನಲ್ಲಿ ಈ ರೋಗ ವರದಿಯಾಗಿದೆ ಎಂದು ‘ದಿ ಹಿಂದೂ’ ವರದಿ ತಿಳಿಸಿತ್ತು.

“ಮೊದಲಿಗೆ ಗುಜರಾತ್‌ನಲ್ಲಿ ಎಲ್‌ಎಸ್‌ಡಿ ವರದಿಯಾಗಿದೆ. ಇದು ಈಗ ಎಂಟು ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳಿಗೆ ಹರಡಿದೆ. ಇದುವರೆಗೆ 1.85 ಲಕ್ಷಕ್ಕೂ ಹೆಚ್ಚು ಜಾನುವಾರುಗಳು ಬಾಧಿತವಾಗಿವೆ. ಜುಲೈನಲ್ಲಿ ರೋಗ ಹರಡಿದ ನಂತರ 7,300ಕ್ಕೂ ಹೆಚ್ಚು ಜಾನುವಾರುಗಳು ಸಾವನ್ನಪ್ಪಿವೆ” ಎಂದು ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದ್ದರು.

ಪಂಜಾಬ್‌ನಲ್ಲಿ ಇದುವರೆಗೆ ಸುಮಾರು 74,325 ಜಾನುವಾರುಗಳು ಬಾಧಿತವಾಗಿದ್ದರೆ, ಗುಜರಾತ್‌ನಲ್ಲಿ 58,546, ರಾಜಸ್ಥಾನದಲ್ಲಿ 43,962, ಜಮ್ಮು ಮತ್ತು ಕಾಶ್ಮೀರದಲ್ಲಿ 6,385, ಉತ್ತರಾಖಂಡದಲ್ಲಿ 1,300, ಹಿಮಾಚಲ ಪ್ರದೇಶದಲ್ಲಿ 532, ಅಂಡಮಾನ್ ಮತ್ತು ನಿಕೋಬಾರ್‌ನಲ್ಲಿ 260 ಜಾನುವಾರುಗಳು ಹಾನಿಗೊಳಗಾಗಿವೆ ಎಂದು ಅವರು ಹೇಳಿದ್ದರು.

ಸಚಿವಾಲಯದ ಅಂಕಿಅಂಶಗಳ ಪ್ರಕಾರ, ಇದುವರೆಗೆ (ಆಗಸ್ಟ್‌ವರೆಗೆ) 7,300 ಜಾನುವಾರುಗಳು ಸಾವನ್ನಪ್ಪಿವೆ. ಪಂಜಾಬ್‌ನಲ್ಲಿ 3,359, ರಾಜಸ್ಥಾನದಲ್ಲಿ 2,111, ಗುಜರಾತ್‌ನಲ್ಲಿ 1,679, ಜಮ್ಮು ಮತ್ತು ಕಾಶ್ಮೀರದಲ್ಲಿ 62, ಹಿಮಾಚಲ ಪ್ರದೇಶದಲ್ಲಿ 38, ಉತ್ತರಾಖಂಡದಲ್ಲಿ 36 ಮತ್ತು ಅಂಡಮಾನ್ ನಿಕೋಬಾರ್‌ನಲ್ಲಿ 29 ಪ್ರಾಣಿಗಳು ಸಾವನ್ನಪ್ಪಿವೆ. ಹರಿಯಾಣದಲ್ಲೂ ಎಲ್‌ಎಸ್‌ಡಿ ಸೋಂಕಿನ ವರದಿಗಳಿವೆ.

ಕರ್ನಾಟಕದಲ್ಲಿ ಮುಂಜಾಗ್ರತೆ ವಹಿಸಲಾಗಿದೆಯೇ?

“ಕರ್ನಾಟಕದಲ್ಲಿ ಎಲ್‌ಎಸ್‌ಡಿ ಸೋಂಕಿಗೆ ಸಂಬಂಧಿಸಿದಂತೆ ಯಾವುದಾದರೂ ಕ್ರಮ ಜರುಗಿಸಲಾಗಿದೆಯೇ?” ಎಂಬ ಪ್ರಶ್ನೆ ಮೂಡಿದೆ. ರಾಜ್ಯದ ಪರಿಸ್ಥಿತಿಯ ಕುರಿತು ‘ನಾನುಗೌರಿ.ಕಾಂ’ಗೆ ಪ್ರತಿಕ್ರಿಯೆ ನೀಡಿದ ಮೈಸೂರು ಜಿಲ್ಲೆಯ ವೈದ್ಯಾಧಿಕಾರಿ ಡಾ.ಮಹೇಶ್‌ಕುಮಾರ್‌, “ಸಾಮಾನ್ಯವಾಗಿ ಈ ರೀತಿಯ ಪ್ರಕರಣಗಳು ವರದಿಯಾದಾಗ, ಗಡಿ ಜಿಲ್ಲೆಗಳಲ್ಲಿ, ಚೆಕ್‌ ಪೋಸ್ಟ್‌ಗಳಲ್ಲಿ ಎಚ್ಚರ ವಹಿಸಲಾಗುತ್ತದೆ. ಯಾವುದೇ ಜಾನುವಾರು ಗಡಿ ದಾಟದಂತೆ ನೋಡಿಕೊಳ್ಳಲಾಗುತ್ತದೆ. ಕೋವಿಡ್‌ ಹರಡಿದ ಸಂದರ್ಭದಲ್ಲಿ ಈ ಸೋಂಕು ಕಾಣಿಸಿಕೊಂಡಿತು. ಮುಂಜಾಗ್ರತೆ ಅಗತ್ಯವಿದೆ. ಸೋಂಕಿನ ಲಕ್ಷಣಗಳು ಕಂಡ ತಕ್ಷಣ ವೈದ್ಯರಿಗೆ ತಿಳಿಸಬೇಕು” ಎಂದು ರೈತರಿಗೆ ಮನವಿ ಮಾಡಿದರು.

“ಜಾನುವಾರುಗಳಿಗೆ ಕಾಯಿಲೆಗಳು ಬಂದಾಗ ರೈತರು ಕೆಲವೊಮ್ಮೆ ನಾಟಿ ಔಷಧಿ ಕೊಡಿಸಿ, ಮೂರ್ನಾಲ್ಕು ದಿನಗಳ ನಂತರ ನಮ್ಮ ಬಳಿ ಬರುತ್ತಾರೆ. ಎಲ್‌ಎಸ್‌ಡಿ ಸೋಂಕಿಗೆ ನಿರ್ದಿಷ್ಟ ವಾಕ್ಸಿನ್‌ ನಮ್ಮಲ್ಲಿ ಲಭ್ಯವಾಗಿಲ್ಲ. ಆದರೆ ಈಗ ನೀಡಲಾಗುತ್ತಿರುವ ವಾಕ್ಸಿನ್‌, ಈ ಕಾಯಿಲೆಗೆ ಕೊಂಚ ಹತ್ತಿರದ ಸಂಬಂಧ ಹೊಂದಿರುವ ಲಸಿಕೆಯಾಗಿದೆ. ಈ ಲಸಿಕೆಯನ್ನು ನೀಡುವ ಮೂಲಕವೂ ಒಂದಿಷ್ಟು ಸೋಂಕು ತಡೆಗಟ್ಟಲಾಗುತ್ತಿದೆ. ಆರಂಭಿಕ ಹಂತದಲ್ಲೇ ಮುಂಜಾಗ್ರತೆ ವಹಿಸಿದರೆ ಜಾನುವಾರುಗಳು ಗುಣಮುಖವಾಗಬಹುದು” ಎಂದರು.

ಇದನ್ನೂ ಓದಿರಿ: ಗೋವು ಸಾಕಣೆಯ ಗೋಳು ಕೇಳುವವರ್‍ಯಾರು? ಇದು ಹೈನುಗಾರಿಕೆಯ ಕಥೆ-ವ್ಯಥೆ!

ಪಶುವೈದ್ಯಾಧಿಕಾರಿ ಟಿ.ಎಸ್.ರಮಾನಂದ್ ಅವರು ‘ನಾನುಗೌರಿ.ಕಾಂ’ ಜೊತೆ ಮಾತನಾಡಿ, “ಬೇರೆ ದೇಶಗಳಲ್ಲಿ ವಾಕ್ಸಿನ್ ಅಭಿವೃದ್ಧಿಪಡಿಸಿದ್ದಾರೆ. ಮೇಕೆಗೆ ತಗುಲುವ ಪೋಕ್ಸ್‌ ವೈರಾಣುವಿಗೆ ಸಂಬಂಧಿಸಿದಂತೆ ನೀಡುವ ಲಸಿಕೆಯನ್ನು ನಮ್ಮಲ್ಲಿ ಕೆಲವು ಕಡೆ ಬಳಸುತ್ತಿದ್ದಾರೆ. ಎಲ್‌ಎಸ್‌ಡಿ ಹದಿನೈದು ದಿನ ಹರಡಿ ನಂತರ ಕಡಿಮೆಯಾಗುತ್ತದೆ. ಆದರೆ ಜಾನುವಾರುಗಳು ಸಾಯುತ್ತಿರುವುದು ನಮ್ಮ ದುರ್ದೈವ” ಎಂದು ವಿಷಾದಿಸಿದರು.

“ರೈತರು ಎಚ್ಚರಿಕೆ ವಹಿಸಬೇಕು. ಯಾವುದಾದರೂ ಒಂದು ಜಾನುವಾರಿಗೆ ಈ ಕಾಯಿಲೆ ಕಾಣಿಸಿಕೊಂಡ ತಕ್ಷಣ ಐಸೊಲೇಷನ್‌ ಮಾಡಬೇಕು. ಆರೋಗ್ಯವಂತ ಜಾನುವಾರುಗಳನ್ನು ಬೇರೆಡೆ ಇರಿಸಿಬೇಕು. ಕೊಟ್ಟಿಗೆಯನ್ನು ಶುಚಿಗೊಳಿಸಬೇಕು” ಎಂದು ಸಲಹೆ ನೀಡಿದರು.

“ನಮ್ಮ ವೈದ್ಯರು ನೀಡುವ ಮಾಹಿತಿ ಪ್ರಕಾರ ಜಾಗೃತಿ ಮೂಡಿಸುವ ಕೆಲಸಗಳಾಗುತ್ತಿವೆ. ಸೋಂಕು ಕಾಣಿಸಿಕೊಂಡ ಜಾನುವಾರುಗಳನ್ನು ಬೇರೆಡೆ ಇರಿಸಲು ಸೂಚನೆಗಳನ್ನು ನೀಡುತ್ತಿದ್ದಾರೆ” ಎಂದು ತಿಳಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...