Homeಕರ್ನಾಟಕಮಹಾರಾಷ್ಟ್ರಕ್ಕೂ ಕಾಲಿಟ್ಟ ಲಂಪಿ ವೈರಸ್‌; ಜಾನುವಾರುಗಳ ಸರಣಿ ಸಾವು; ಎಚ್ಚೆತ್ತುಕೊಂಡಿದೆಯೇ ಕರ್ನಾಟಕ ಸರ್ಕಾರ?

ಮಹಾರಾಷ್ಟ್ರಕ್ಕೂ ಕಾಲಿಟ್ಟ ಲಂಪಿ ವೈರಸ್‌; ಜಾನುವಾರುಗಳ ಸರಣಿ ಸಾವು; ಎಚ್ಚೆತ್ತುಕೊಂಡಿದೆಯೇ ಕರ್ನಾಟಕ ಸರ್ಕಾರ?

- Advertisement -
- Advertisement -

ಮಹಾರಾಷ್ಟ್ರದಲ್ಲಿ ಲಂಪಿ ವೈರಸ್‌ನಿಂದ 126 ಜಾನುವಾರುಗಳು ಸಾವನ್ನಪ್ಪಿವೆ. ಇಲ್ಲಿನ 25 ಜಿಲ್ಲೆಗಳು ಸೋಂಕಿಗೆ ಒಳಗಾಗಿವೆ ಎಂದು ರಾಜ್ಯದ ಪಶುಸಂಗೋಪನಾ ಇಲಾಖೆ ಶನಿವಾರ ಮಾಹಿತಿ ನೀಡಿದೆ.

“ಜಲಗಾಂವ್ ಜಿಲ್ಲೆಯಲ್ಲಿ 47, ಅಹ್ಮದ್‌ನಗರ ಜಿಲ್ಲೆಯಲ್ಲಿ 21, ಧುಲೆಯಲ್ಲಿ 2, ಅಕೋಲಾದಲ್ಲಿ 18, ಪುಣೆಯಲ್ಲಿ 14, ಲಾತೂರ್‌ನಲ್ಲಿ 2, ಸತಾರಾದಲ್ಲಿ 6, ಬುಲ್ಧಾನದಲ್ಲಿ 5, ಅಮರಾವತಿಯಲ್ಲಿ 7, ಸಾಂಗ್ಲಿ, ವಾಶಿಮ್‌, ಜಲ್ನಾ ಮತ್ತು ನಾಗ್ಪುರ ಜಿಲ್ಲೆಯಲ್ಲಿ ಒಂದೊಂದು ಪ್ರಕರಣ ಸೇರಿದಂತೆ ಒಟ್ಟು 126 ಸೋಂಕಿತ ಪ್ರಾಣಿಗಳು ಸಾವನ್ನಪ್ಪಿವೆ” ಎಂದು ಪ್ರಕಟಣೆ ತಿಳಿಸಿದೆ.

ಲಂಪಿ ಸ್ಕಿನ್ ಡಿಸೀಸ್ (ಎಲ್‌ಎಸ್‌ಡಿ) ವೇಗವಾಗಿ ಹರಡುತ್ತಿದ್ದರೂ, ಇದು ಪ್ರಾಣಿಗಳಿಂದ ಅಥವಾ ಹಸುವಿನ ಹಾಲಿನ ಮೂಲಕ ಮನುಷ್ಯರಿಗೆ ಹರಡುವುದಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಮಹಾರಾಷ್ಟ್ರ ರಾಜ್ಯದಾದ್ಯಂತ ಲಂಪಿ ಸ್ಕಿನ್ ಡಿಸೀಸ್ (ಎಲ್‌ಎಸ್‌ಡಿ) ವೇಗವಾಗಿ ಹರಡುತ್ತಿದೆ. ಇದು ಹಸುವಿನ ಚರ್ಮದ ವೈರಲ್ ಕಾಯಿಲೆಯಾಗಿದೆ. ಈ ರೋಗವು ಪ್ರಾಣಿಗಳಿಂದ ಅಥವಾ ಹಸುವಿನ ಹಾಲಿನಿಂದ ಮನುಷ್ಯರಿಗೆ ಹರಡುವುದಿಲ್ಲ” ಎಂದು ಮಹಾರಾಷ್ಟ್ರ ಪಶುಸಂಗೋಪನಾ ಇಲಾಖೆಯ ಪ್ರಕಟಣೆ ತಿಳಿಸಿದೆ.

ಸರಕಾರದ ಪರವಾಗಿ ಐಎಎಸ್‌ ಅಧಿಕಾರಿ ಸಚೀಂದ್ರ ಪ್ರತಾಪ್‌ ಸಿಂಗ್‌ ಮನವಿ ಮಾಡಿದ್ದು, “ರೋಗವು ಹಸು, ರಾಸುಗಳಿಗೆ ಮಾತ್ರ ಹರಡಿದ್ದು, ಝೂನೋಟಿಕ್ ಆಗಿರುವುದಿಲ್ಲ. ಸಾಮಾಜಿಕ ಜಾಲತಾಣಗಳಲ್ಲಿ ವದಂತಿ ಹಬ್ಬಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು” ಎಂದು ಎಚ್ಚರಿಸಿದ್ದಾರೆ.

ಪರಿಸ್ಥಿತಿಯನ್ನು ಎದುರಿಸಲು ಮಾಡಲಾಗುತ್ತಿರುವ ವ್ಯವಸ್ಥೆಗಳ ಬಗ್ಗೆ ಅವರು ಮತ್ತಷ್ಟು ಮಾಹಿತಿ ನೀಡಿದ್ದಾರೆ. ಪಶುಸಂಗೋಪನಾ ಇಲಾಖೆ ಪ್ರಕಾರ, ರೋಗದ ಚಿಕಿತ್ಸೆಗೆ ಅಗತ್ಯವಿರುವ ಔಷಧಗಳನ್ನು ಖರೀದಿಸಲು ಪ್ರತಿ ಜಿಲ್ಲೆಗೆ ₹ 1 ಕೋಟಿ ರೂ ನೀಡಲಾಗುತ್ತಿದೆ. ಮಹಾರಾಷ್ಟ್ರ ಪ್ರಾಣಿ ಮತ್ತು ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾನಿಲಯದ (MAFSU) ವ್ಯಾಕ್ಸಿನೇಟರ್‌ಗಳು ಮತ್ತು ಇಂಟರ್ನ್‌ಗಳಿಗೆ ಪ್ರತಿ ಲಸಿಕೆಗೆ ₹ 3 ಗೌರವಧನವನ್ನೂ ನೀಡಲಾಗುತ್ತಿದೆ.

“ಸರ್ಕಾರಿ ಪಶುವೈದ್ಯಾಧಿಕಾರಿಗಳು ಮತ್ತು ಖಾಸಗಿ ವೈದ್ಯರು ಎಂಎಎಫ್‌ಎಸ್‌ಯು ಚಿಕಿತ್ಸಾ ಕಾರ್ಯಸೂಚಿಯಂತೆ ಕ್ರಮ ಕೈಗೊಳ್ಳಬೇಕು. ಜಾನುವಾರುಗಳಲ್ಲಿನ ಯಾವುದೇ ರೋಗಲಕ್ಷಣಗಳ ಬಗ್ಗೆ ಹತ್ತಿರದ ಸರ್ಕಾರಿ ಜಾನುವಾರು ಅಭಿವೃದ್ಧಿ ಅಧಿಕಾರಿಗಳಿಗೆ ತಿಳಿಸಬೇಕು” ಎಂದು ಸೂಚಿಸಲಾಗಿದೆ.

ಇದನ್ನೂ ಓದಿರಿ: ನೆರೆರಾಜ್ಯಗಳಲ್ಲಿಯೂ ಹೈನುಗಾರಿಕೆ ಬಿಕ್ಕಟ್ಟಿನಲ್ಲಿ…

ಪಶುಸಂಗೋಪನಾ ಇಲಾಖೆಯ ಆಯುಕ್ತರು ಪ್ರತಿಕ್ರಿಯೆ ನೀಡಿದ್ದು, “ಪ್ರಾಣಿಗಳಲ್ಲಿ ಈ ರೋಗದ ಲಕ್ಷಣಗಳು ಕಂಡುಬಂದಲ್ಲಿ ಹತ್ತಿರದ ಪಶುವೈದ್ಯಕೀಯ ಸಂಸ್ಥೆಗೆ ಮಾಹಿತಿ ನೀಡಬೇಕೆಂದು ‘ಪ್ರಾಣಿಗಳ ಅಧಿನಿಯಮ, 2009’ರ ಪ್ರಕಾರ ನಿರ್ದೇಶಿಸಲಾಗಿದೆ” ಎಂದಿದ್ದಾರೆ.

ನೊಣಗಳು, ಸೊಳ್ಳೆಗಳು, ಉಣ್ಣಿಗಳ ಮೂಲಕ ರೋಗ ಹರಡುವುದರಿಂದ ಕೀಟನಾಶಕಗಳ ಸಿಂಪಡಣೆ ಮಾಡುವಂತೆ ಮಹಾರಾಷ್ಟ್ರದ ಪಶುಸಂಗೋಪನಾ ಇಲಾಖೆಯು ಗ್ರಾಮ-ಪಂಚಾಯತ್‌ಗಳಿಗೆ ಆದೇಶಿಸಿದೆ.

ತಿಂಗಳ ಹಿಂದೆಯೇ ಕಾಣಿಸಿಕೊಂಡಿತ್ತು ಲಂಪಿ ಹಾವಳಿ

ಆಗಸ್ಟ್ ತಿಂಗಳಲ್ಲಿಯೇ ಲಂಪಿ ವೈರಸ್‌ ಹಾವಳಿ ಕಾಣಿಸಿಕೊಂಡಿತ್ತು. ದೇಶದ ವಿವಿಧ ರಾಜ್ಯಗಳಲ್ಲಿ ಸೋಂಕು ತಗುಲಿರುವ ಕುರಿತು ವರದಿಯಾಗಿದ್ದವು.

“ಒಂದು ಕೇಂದ್ರಾಡಳಿತ ಪ್ರದೇಶ ಸೇರಿದಂತೆ ಎಂಟು ರಾಜ್ಯಗಳಲ್ಲಿ 7,300 ಕ್ಕೂ ಹೆಚ್ಚು ಜಾನುವಾರುಗಳು ಸಾವನ್ನಪ್ಪಿವೆ. ಸೋಂಕನ್ನು ತಡೆಗಟ್ಟಲು ಲಸಿಕೆ ಅಭಿಯಾನವನ್ನು ಹೆಚ್ಚಿಸಲಾಗಿದೆ” ಎಂದು ಹಿರಿಯ ಸರ್ಕಾರಿ ಅಧಿಕಾರಿಯೊಬ್ಬರು ತಿಳಿಸಿರುವುದಾಗಿ ಆಗಸ್ಟ್‌ 21ರಂದು ‘ದಿ ಹಿಂದೂ’ ವರದಿ ಮಾಡಿತ್ತು.

ಲಂಪಿ ಸ್ಕಿನ್ ಡಿಸೀಸ್ (ಎಲ್‌ಎಸ್‌ಡಿ) ಜಾನುವಾರುಗಳನ್ನು ಬಾಧಿಸುವ ಸಾಂಕ್ರಾಮಿಕ ವೈರಲ್ ಕಾಯಿಲೆಯಾಗಿದೆ. ಈ ವೈರಸ್‌ನಿಂದಾಗಿ ಜಾನುವಾರುಗಳು ಜ್ವರಕ್ಕೆ ತುತ್ತಾಗುತ್ತವೆ. ಚರ್ಮದ ಮೇಲೆ ಗಂಟುಗಳು ಮೂಡುತ್ತವೆ.

ಎಲ್‌ಎಸ್‌ಡಿ ಇತ್ತೀಚಿನ ವರ್ಷಗಳಲ್ಲಿ ಮಧ್ಯಪ್ರಾಚ್ಯ ಮತ್ತು ಯುರೋಪ್‌ ದೇಶಗಳಲ್ಲಿ ಏಕಾಏಕಿ ಹರಡಿತು. ನಂತರ ಏಷ್ಯಕ್ಕೆ ಕಾಲಿಟ್ಟಿತು. ಜುಲೈ 2019ರಲ್ಲಿ ಬಾಂಗ್ಲಾದೇಶದಲ್ಲಿ ಈ ರೋಗವು ಪತ್ತೆಯಾಗಿತ್ತು.

2019ರಲ್ಲಿ ಭಾರತದಲ್ಲಿಯೂ ಎಲ್‌ಎಸ್‌ಡಿ ವರದಿಯಾಗಿತ್ತು. ಪೂರ್ವ ರಾಜ್ಯಗಳಲ್ಲಿ, ವಿಶೇಷವಾಗಿ ಪಶ್ಚಿಮ ಬಂಗಾಳ ಮತ್ತು ಒಡಿಶಾದಲ್ಲಿ ಎಲ್ಎಸ್‌ಡಿ ಮೊದಲ ಪ್ರಕರಣ ವರದಿಯಾಯಿತು. ಆದರೆ ಈ ವರ್ಷ ಪಶ್ಚಿಮ ಮತ್ತು ಉತ್ತರ ರಾಜ್ಯಗಳಲ್ಲಿ, ಅಂಡಮಾನ್ ನಿಕೋಬಾರ್‌ನಲ್ಲಿ ಈ ರೋಗ ವರದಿಯಾಗಿದೆ ಎಂದು ‘ದಿ ಹಿಂದೂ’ ವರದಿ ತಿಳಿಸಿತ್ತು.

“ಮೊದಲಿಗೆ ಗುಜರಾತ್‌ನಲ್ಲಿ ಎಲ್‌ಎಸ್‌ಡಿ ವರದಿಯಾಗಿದೆ. ಇದು ಈಗ ಎಂಟು ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳಿಗೆ ಹರಡಿದೆ. ಇದುವರೆಗೆ 1.85 ಲಕ್ಷಕ್ಕೂ ಹೆಚ್ಚು ಜಾನುವಾರುಗಳು ಬಾಧಿತವಾಗಿವೆ. ಜುಲೈನಲ್ಲಿ ರೋಗ ಹರಡಿದ ನಂತರ 7,300ಕ್ಕೂ ಹೆಚ್ಚು ಜಾನುವಾರುಗಳು ಸಾವನ್ನಪ್ಪಿವೆ” ಎಂದು ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದ್ದರು.

ಪಂಜಾಬ್‌ನಲ್ಲಿ ಇದುವರೆಗೆ ಸುಮಾರು 74,325 ಜಾನುವಾರುಗಳು ಬಾಧಿತವಾಗಿದ್ದರೆ, ಗುಜರಾತ್‌ನಲ್ಲಿ 58,546, ರಾಜಸ್ಥಾನದಲ್ಲಿ 43,962, ಜಮ್ಮು ಮತ್ತು ಕಾಶ್ಮೀರದಲ್ಲಿ 6,385, ಉತ್ತರಾಖಂಡದಲ್ಲಿ 1,300, ಹಿಮಾಚಲ ಪ್ರದೇಶದಲ್ಲಿ 532, ಅಂಡಮಾನ್ ಮತ್ತು ನಿಕೋಬಾರ್‌ನಲ್ಲಿ 260 ಜಾನುವಾರುಗಳು ಹಾನಿಗೊಳಗಾಗಿವೆ ಎಂದು ಅವರು ಹೇಳಿದ್ದರು.

ಸಚಿವಾಲಯದ ಅಂಕಿಅಂಶಗಳ ಪ್ರಕಾರ, ಇದುವರೆಗೆ (ಆಗಸ್ಟ್‌ವರೆಗೆ) 7,300 ಜಾನುವಾರುಗಳು ಸಾವನ್ನಪ್ಪಿವೆ. ಪಂಜಾಬ್‌ನಲ್ಲಿ 3,359, ರಾಜಸ್ಥಾನದಲ್ಲಿ 2,111, ಗುಜರಾತ್‌ನಲ್ಲಿ 1,679, ಜಮ್ಮು ಮತ್ತು ಕಾಶ್ಮೀರದಲ್ಲಿ 62, ಹಿಮಾಚಲ ಪ್ರದೇಶದಲ್ಲಿ 38, ಉತ್ತರಾಖಂಡದಲ್ಲಿ 36 ಮತ್ತು ಅಂಡಮಾನ್ ನಿಕೋಬಾರ್‌ನಲ್ಲಿ 29 ಪ್ರಾಣಿಗಳು ಸಾವನ್ನಪ್ಪಿವೆ. ಹರಿಯಾಣದಲ್ಲೂ ಎಲ್‌ಎಸ್‌ಡಿ ಸೋಂಕಿನ ವರದಿಗಳಿವೆ.

ಕರ್ನಾಟಕದಲ್ಲಿ ಮುಂಜಾಗ್ರತೆ ವಹಿಸಲಾಗಿದೆಯೇ?

“ಕರ್ನಾಟಕದಲ್ಲಿ ಎಲ್‌ಎಸ್‌ಡಿ ಸೋಂಕಿಗೆ ಸಂಬಂಧಿಸಿದಂತೆ ಯಾವುದಾದರೂ ಕ್ರಮ ಜರುಗಿಸಲಾಗಿದೆಯೇ?” ಎಂಬ ಪ್ರಶ್ನೆ ಮೂಡಿದೆ. ರಾಜ್ಯದ ಪರಿಸ್ಥಿತಿಯ ಕುರಿತು ‘ನಾನುಗೌರಿ.ಕಾಂ’ಗೆ ಪ್ರತಿಕ್ರಿಯೆ ನೀಡಿದ ಮೈಸೂರು ಜಿಲ್ಲೆಯ ವೈದ್ಯಾಧಿಕಾರಿ ಡಾ.ಮಹೇಶ್‌ಕುಮಾರ್‌, “ಸಾಮಾನ್ಯವಾಗಿ ಈ ರೀತಿಯ ಪ್ರಕರಣಗಳು ವರದಿಯಾದಾಗ, ಗಡಿ ಜಿಲ್ಲೆಗಳಲ್ಲಿ, ಚೆಕ್‌ ಪೋಸ್ಟ್‌ಗಳಲ್ಲಿ ಎಚ್ಚರ ವಹಿಸಲಾಗುತ್ತದೆ. ಯಾವುದೇ ಜಾನುವಾರು ಗಡಿ ದಾಟದಂತೆ ನೋಡಿಕೊಳ್ಳಲಾಗುತ್ತದೆ. ಕೋವಿಡ್‌ ಹರಡಿದ ಸಂದರ್ಭದಲ್ಲಿ ಈ ಸೋಂಕು ಕಾಣಿಸಿಕೊಂಡಿತು. ಮುಂಜಾಗ್ರತೆ ಅಗತ್ಯವಿದೆ. ಸೋಂಕಿನ ಲಕ್ಷಣಗಳು ಕಂಡ ತಕ್ಷಣ ವೈದ್ಯರಿಗೆ ತಿಳಿಸಬೇಕು” ಎಂದು ರೈತರಿಗೆ ಮನವಿ ಮಾಡಿದರು.

“ಜಾನುವಾರುಗಳಿಗೆ ಕಾಯಿಲೆಗಳು ಬಂದಾಗ ರೈತರು ಕೆಲವೊಮ್ಮೆ ನಾಟಿ ಔಷಧಿ ಕೊಡಿಸಿ, ಮೂರ್ನಾಲ್ಕು ದಿನಗಳ ನಂತರ ನಮ್ಮ ಬಳಿ ಬರುತ್ತಾರೆ. ಎಲ್‌ಎಸ್‌ಡಿ ಸೋಂಕಿಗೆ ನಿರ್ದಿಷ್ಟ ವಾಕ್ಸಿನ್‌ ನಮ್ಮಲ್ಲಿ ಲಭ್ಯವಾಗಿಲ್ಲ. ಆದರೆ ಈಗ ನೀಡಲಾಗುತ್ತಿರುವ ವಾಕ್ಸಿನ್‌, ಈ ಕಾಯಿಲೆಗೆ ಕೊಂಚ ಹತ್ತಿರದ ಸಂಬಂಧ ಹೊಂದಿರುವ ಲಸಿಕೆಯಾಗಿದೆ. ಈ ಲಸಿಕೆಯನ್ನು ನೀಡುವ ಮೂಲಕವೂ ಒಂದಿಷ್ಟು ಸೋಂಕು ತಡೆಗಟ್ಟಲಾಗುತ್ತಿದೆ. ಆರಂಭಿಕ ಹಂತದಲ್ಲೇ ಮುಂಜಾಗ್ರತೆ ವಹಿಸಿದರೆ ಜಾನುವಾರುಗಳು ಗುಣಮುಖವಾಗಬಹುದು” ಎಂದರು.

ಇದನ್ನೂ ಓದಿರಿ: ಗೋವು ಸಾಕಣೆಯ ಗೋಳು ಕೇಳುವವರ್‍ಯಾರು? ಇದು ಹೈನುಗಾರಿಕೆಯ ಕಥೆ-ವ್ಯಥೆ!

ಪಶುವೈದ್ಯಾಧಿಕಾರಿ ಟಿ.ಎಸ್.ರಮಾನಂದ್ ಅವರು ‘ನಾನುಗೌರಿ.ಕಾಂ’ ಜೊತೆ ಮಾತನಾಡಿ, “ಬೇರೆ ದೇಶಗಳಲ್ಲಿ ವಾಕ್ಸಿನ್ ಅಭಿವೃದ್ಧಿಪಡಿಸಿದ್ದಾರೆ. ಮೇಕೆಗೆ ತಗುಲುವ ಪೋಕ್ಸ್‌ ವೈರಾಣುವಿಗೆ ಸಂಬಂಧಿಸಿದಂತೆ ನೀಡುವ ಲಸಿಕೆಯನ್ನು ನಮ್ಮಲ್ಲಿ ಕೆಲವು ಕಡೆ ಬಳಸುತ್ತಿದ್ದಾರೆ. ಎಲ್‌ಎಸ್‌ಡಿ ಹದಿನೈದು ದಿನ ಹರಡಿ ನಂತರ ಕಡಿಮೆಯಾಗುತ್ತದೆ. ಆದರೆ ಜಾನುವಾರುಗಳು ಸಾಯುತ್ತಿರುವುದು ನಮ್ಮ ದುರ್ದೈವ” ಎಂದು ವಿಷಾದಿಸಿದರು.

“ರೈತರು ಎಚ್ಚರಿಕೆ ವಹಿಸಬೇಕು. ಯಾವುದಾದರೂ ಒಂದು ಜಾನುವಾರಿಗೆ ಈ ಕಾಯಿಲೆ ಕಾಣಿಸಿಕೊಂಡ ತಕ್ಷಣ ಐಸೊಲೇಷನ್‌ ಮಾಡಬೇಕು. ಆರೋಗ್ಯವಂತ ಜಾನುವಾರುಗಳನ್ನು ಬೇರೆಡೆ ಇರಿಸಿಬೇಕು. ಕೊಟ್ಟಿಗೆಯನ್ನು ಶುಚಿಗೊಳಿಸಬೇಕು” ಎಂದು ಸಲಹೆ ನೀಡಿದರು.

“ನಮ್ಮ ವೈದ್ಯರು ನೀಡುವ ಮಾಹಿತಿ ಪ್ರಕಾರ ಜಾಗೃತಿ ಮೂಡಿಸುವ ಕೆಲಸಗಳಾಗುತ್ತಿವೆ. ಸೋಂಕು ಕಾಣಿಸಿಕೊಂಡ ಜಾನುವಾರುಗಳನ್ನು ಬೇರೆಡೆ ಇರಿಸಲು ಸೂಚನೆಗಳನ್ನು ನೀಡುತ್ತಿದ್ದಾರೆ” ಎಂದು ತಿಳಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...