Homeಕರ್ನಾಟಕಮಹಾರಾಷ್ಟ್ರಕ್ಕೂ ಕಾಲಿಟ್ಟ ಲಂಪಿ ವೈರಸ್‌; ಜಾನುವಾರುಗಳ ಸರಣಿ ಸಾವು; ಎಚ್ಚೆತ್ತುಕೊಂಡಿದೆಯೇ ಕರ್ನಾಟಕ ಸರ್ಕಾರ?

ಮಹಾರಾಷ್ಟ್ರಕ್ಕೂ ಕಾಲಿಟ್ಟ ಲಂಪಿ ವೈರಸ್‌; ಜಾನುವಾರುಗಳ ಸರಣಿ ಸಾವು; ಎಚ್ಚೆತ್ತುಕೊಂಡಿದೆಯೇ ಕರ್ನಾಟಕ ಸರ್ಕಾರ?

- Advertisement -
- Advertisement -

ಮಹಾರಾಷ್ಟ್ರದಲ್ಲಿ ಲಂಪಿ ವೈರಸ್‌ನಿಂದ 126 ಜಾನುವಾರುಗಳು ಸಾವನ್ನಪ್ಪಿವೆ. ಇಲ್ಲಿನ 25 ಜಿಲ್ಲೆಗಳು ಸೋಂಕಿಗೆ ಒಳಗಾಗಿವೆ ಎಂದು ರಾಜ್ಯದ ಪಶುಸಂಗೋಪನಾ ಇಲಾಖೆ ಶನಿವಾರ ಮಾಹಿತಿ ನೀಡಿದೆ.

“ಜಲಗಾಂವ್ ಜಿಲ್ಲೆಯಲ್ಲಿ 47, ಅಹ್ಮದ್‌ನಗರ ಜಿಲ್ಲೆಯಲ್ಲಿ 21, ಧುಲೆಯಲ್ಲಿ 2, ಅಕೋಲಾದಲ್ಲಿ 18, ಪುಣೆಯಲ್ಲಿ 14, ಲಾತೂರ್‌ನಲ್ಲಿ 2, ಸತಾರಾದಲ್ಲಿ 6, ಬುಲ್ಧಾನದಲ್ಲಿ 5, ಅಮರಾವತಿಯಲ್ಲಿ 7, ಸಾಂಗ್ಲಿ, ವಾಶಿಮ್‌, ಜಲ್ನಾ ಮತ್ತು ನಾಗ್ಪುರ ಜಿಲ್ಲೆಯಲ್ಲಿ ಒಂದೊಂದು ಪ್ರಕರಣ ಸೇರಿದಂತೆ ಒಟ್ಟು 126 ಸೋಂಕಿತ ಪ್ರಾಣಿಗಳು ಸಾವನ್ನಪ್ಪಿವೆ” ಎಂದು ಪ್ರಕಟಣೆ ತಿಳಿಸಿದೆ.

ಲಂಪಿ ಸ್ಕಿನ್ ಡಿಸೀಸ್ (ಎಲ್‌ಎಸ್‌ಡಿ) ವೇಗವಾಗಿ ಹರಡುತ್ತಿದ್ದರೂ, ಇದು ಪ್ರಾಣಿಗಳಿಂದ ಅಥವಾ ಹಸುವಿನ ಹಾಲಿನ ಮೂಲಕ ಮನುಷ್ಯರಿಗೆ ಹರಡುವುದಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಮಹಾರಾಷ್ಟ್ರ ರಾಜ್ಯದಾದ್ಯಂತ ಲಂಪಿ ಸ್ಕಿನ್ ಡಿಸೀಸ್ (ಎಲ್‌ಎಸ್‌ಡಿ) ವೇಗವಾಗಿ ಹರಡುತ್ತಿದೆ. ಇದು ಹಸುವಿನ ಚರ್ಮದ ವೈರಲ್ ಕಾಯಿಲೆಯಾಗಿದೆ. ಈ ರೋಗವು ಪ್ರಾಣಿಗಳಿಂದ ಅಥವಾ ಹಸುವಿನ ಹಾಲಿನಿಂದ ಮನುಷ್ಯರಿಗೆ ಹರಡುವುದಿಲ್ಲ” ಎಂದು ಮಹಾರಾಷ್ಟ್ರ ಪಶುಸಂಗೋಪನಾ ಇಲಾಖೆಯ ಪ್ರಕಟಣೆ ತಿಳಿಸಿದೆ.

ಸರಕಾರದ ಪರವಾಗಿ ಐಎಎಸ್‌ ಅಧಿಕಾರಿ ಸಚೀಂದ್ರ ಪ್ರತಾಪ್‌ ಸಿಂಗ್‌ ಮನವಿ ಮಾಡಿದ್ದು, “ರೋಗವು ಹಸು, ರಾಸುಗಳಿಗೆ ಮಾತ್ರ ಹರಡಿದ್ದು, ಝೂನೋಟಿಕ್ ಆಗಿರುವುದಿಲ್ಲ. ಸಾಮಾಜಿಕ ಜಾಲತಾಣಗಳಲ್ಲಿ ವದಂತಿ ಹಬ್ಬಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು” ಎಂದು ಎಚ್ಚರಿಸಿದ್ದಾರೆ.

ಪರಿಸ್ಥಿತಿಯನ್ನು ಎದುರಿಸಲು ಮಾಡಲಾಗುತ್ತಿರುವ ವ್ಯವಸ್ಥೆಗಳ ಬಗ್ಗೆ ಅವರು ಮತ್ತಷ್ಟು ಮಾಹಿತಿ ನೀಡಿದ್ದಾರೆ. ಪಶುಸಂಗೋಪನಾ ಇಲಾಖೆ ಪ್ರಕಾರ, ರೋಗದ ಚಿಕಿತ್ಸೆಗೆ ಅಗತ್ಯವಿರುವ ಔಷಧಗಳನ್ನು ಖರೀದಿಸಲು ಪ್ರತಿ ಜಿಲ್ಲೆಗೆ ₹ 1 ಕೋಟಿ ರೂ ನೀಡಲಾಗುತ್ತಿದೆ. ಮಹಾರಾಷ್ಟ್ರ ಪ್ರಾಣಿ ಮತ್ತು ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾನಿಲಯದ (MAFSU) ವ್ಯಾಕ್ಸಿನೇಟರ್‌ಗಳು ಮತ್ತು ಇಂಟರ್ನ್‌ಗಳಿಗೆ ಪ್ರತಿ ಲಸಿಕೆಗೆ ₹ 3 ಗೌರವಧನವನ್ನೂ ನೀಡಲಾಗುತ್ತಿದೆ.

“ಸರ್ಕಾರಿ ಪಶುವೈದ್ಯಾಧಿಕಾರಿಗಳು ಮತ್ತು ಖಾಸಗಿ ವೈದ್ಯರು ಎಂಎಎಫ್‌ಎಸ್‌ಯು ಚಿಕಿತ್ಸಾ ಕಾರ್ಯಸೂಚಿಯಂತೆ ಕ್ರಮ ಕೈಗೊಳ್ಳಬೇಕು. ಜಾನುವಾರುಗಳಲ್ಲಿನ ಯಾವುದೇ ರೋಗಲಕ್ಷಣಗಳ ಬಗ್ಗೆ ಹತ್ತಿರದ ಸರ್ಕಾರಿ ಜಾನುವಾರು ಅಭಿವೃದ್ಧಿ ಅಧಿಕಾರಿಗಳಿಗೆ ತಿಳಿಸಬೇಕು” ಎಂದು ಸೂಚಿಸಲಾಗಿದೆ.

ಇದನ್ನೂ ಓದಿರಿ: ನೆರೆರಾಜ್ಯಗಳಲ್ಲಿಯೂ ಹೈನುಗಾರಿಕೆ ಬಿಕ್ಕಟ್ಟಿನಲ್ಲಿ…

ಪಶುಸಂಗೋಪನಾ ಇಲಾಖೆಯ ಆಯುಕ್ತರು ಪ್ರತಿಕ್ರಿಯೆ ನೀಡಿದ್ದು, “ಪ್ರಾಣಿಗಳಲ್ಲಿ ಈ ರೋಗದ ಲಕ್ಷಣಗಳು ಕಂಡುಬಂದಲ್ಲಿ ಹತ್ತಿರದ ಪಶುವೈದ್ಯಕೀಯ ಸಂಸ್ಥೆಗೆ ಮಾಹಿತಿ ನೀಡಬೇಕೆಂದು ‘ಪ್ರಾಣಿಗಳ ಅಧಿನಿಯಮ, 2009’ರ ಪ್ರಕಾರ ನಿರ್ದೇಶಿಸಲಾಗಿದೆ” ಎಂದಿದ್ದಾರೆ.

ನೊಣಗಳು, ಸೊಳ್ಳೆಗಳು, ಉಣ್ಣಿಗಳ ಮೂಲಕ ರೋಗ ಹರಡುವುದರಿಂದ ಕೀಟನಾಶಕಗಳ ಸಿಂಪಡಣೆ ಮಾಡುವಂತೆ ಮಹಾರಾಷ್ಟ್ರದ ಪಶುಸಂಗೋಪನಾ ಇಲಾಖೆಯು ಗ್ರಾಮ-ಪಂಚಾಯತ್‌ಗಳಿಗೆ ಆದೇಶಿಸಿದೆ.

ತಿಂಗಳ ಹಿಂದೆಯೇ ಕಾಣಿಸಿಕೊಂಡಿತ್ತು ಲಂಪಿ ಹಾವಳಿ

ಆಗಸ್ಟ್ ತಿಂಗಳಲ್ಲಿಯೇ ಲಂಪಿ ವೈರಸ್‌ ಹಾವಳಿ ಕಾಣಿಸಿಕೊಂಡಿತ್ತು. ದೇಶದ ವಿವಿಧ ರಾಜ್ಯಗಳಲ್ಲಿ ಸೋಂಕು ತಗುಲಿರುವ ಕುರಿತು ವರದಿಯಾಗಿದ್ದವು.

“ಒಂದು ಕೇಂದ್ರಾಡಳಿತ ಪ್ರದೇಶ ಸೇರಿದಂತೆ ಎಂಟು ರಾಜ್ಯಗಳಲ್ಲಿ 7,300 ಕ್ಕೂ ಹೆಚ್ಚು ಜಾನುವಾರುಗಳು ಸಾವನ್ನಪ್ಪಿವೆ. ಸೋಂಕನ್ನು ತಡೆಗಟ್ಟಲು ಲಸಿಕೆ ಅಭಿಯಾನವನ್ನು ಹೆಚ್ಚಿಸಲಾಗಿದೆ” ಎಂದು ಹಿರಿಯ ಸರ್ಕಾರಿ ಅಧಿಕಾರಿಯೊಬ್ಬರು ತಿಳಿಸಿರುವುದಾಗಿ ಆಗಸ್ಟ್‌ 21ರಂದು ‘ದಿ ಹಿಂದೂ’ ವರದಿ ಮಾಡಿತ್ತು.

ಲಂಪಿ ಸ್ಕಿನ್ ಡಿಸೀಸ್ (ಎಲ್‌ಎಸ್‌ಡಿ) ಜಾನುವಾರುಗಳನ್ನು ಬಾಧಿಸುವ ಸಾಂಕ್ರಾಮಿಕ ವೈರಲ್ ಕಾಯಿಲೆಯಾಗಿದೆ. ಈ ವೈರಸ್‌ನಿಂದಾಗಿ ಜಾನುವಾರುಗಳು ಜ್ವರಕ್ಕೆ ತುತ್ತಾಗುತ್ತವೆ. ಚರ್ಮದ ಮೇಲೆ ಗಂಟುಗಳು ಮೂಡುತ್ತವೆ.

ಎಲ್‌ಎಸ್‌ಡಿ ಇತ್ತೀಚಿನ ವರ್ಷಗಳಲ್ಲಿ ಮಧ್ಯಪ್ರಾಚ್ಯ ಮತ್ತು ಯುರೋಪ್‌ ದೇಶಗಳಲ್ಲಿ ಏಕಾಏಕಿ ಹರಡಿತು. ನಂತರ ಏಷ್ಯಕ್ಕೆ ಕಾಲಿಟ್ಟಿತು. ಜುಲೈ 2019ರಲ್ಲಿ ಬಾಂಗ್ಲಾದೇಶದಲ್ಲಿ ಈ ರೋಗವು ಪತ್ತೆಯಾಗಿತ್ತು.

2019ರಲ್ಲಿ ಭಾರತದಲ್ಲಿಯೂ ಎಲ್‌ಎಸ್‌ಡಿ ವರದಿಯಾಗಿತ್ತು. ಪೂರ್ವ ರಾಜ್ಯಗಳಲ್ಲಿ, ವಿಶೇಷವಾಗಿ ಪಶ್ಚಿಮ ಬಂಗಾಳ ಮತ್ತು ಒಡಿಶಾದಲ್ಲಿ ಎಲ್ಎಸ್‌ಡಿ ಮೊದಲ ಪ್ರಕರಣ ವರದಿಯಾಯಿತು. ಆದರೆ ಈ ವರ್ಷ ಪಶ್ಚಿಮ ಮತ್ತು ಉತ್ತರ ರಾಜ್ಯಗಳಲ್ಲಿ, ಅಂಡಮಾನ್ ನಿಕೋಬಾರ್‌ನಲ್ಲಿ ಈ ರೋಗ ವರದಿಯಾಗಿದೆ ಎಂದು ‘ದಿ ಹಿಂದೂ’ ವರದಿ ತಿಳಿಸಿತ್ತು.

“ಮೊದಲಿಗೆ ಗುಜರಾತ್‌ನಲ್ಲಿ ಎಲ್‌ಎಸ್‌ಡಿ ವರದಿಯಾಗಿದೆ. ಇದು ಈಗ ಎಂಟು ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳಿಗೆ ಹರಡಿದೆ. ಇದುವರೆಗೆ 1.85 ಲಕ್ಷಕ್ಕೂ ಹೆಚ್ಚು ಜಾನುವಾರುಗಳು ಬಾಧಿತವಾಗಿವೆ. ಜುಲೈನಲ್ಲಿ ರೋಗ ಹರಡಿದ ನಂತರ 7,300ಕ್ಕೂ ಹೆಚ್ಚು ಜಾನುವಾರುಗಳು ಸಾವನ್ನಪ್ಪಿವೆ” ಎಂದು ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದ್ದರು.

ಪಂಜಾಬ್‌ನಲ್ಲಿ ಇದುವರೆಗೆ ಸುಮಾರು 74,325 ಜಾನುವಾರುಗಳು ಬಾಧಿತವಾಗಿದ್ದರೆ, ಗುಜರಾತ್‌ನಲ್ಲಿ 58,546, ರಾಜಸ್ಥಾನದಲ್ಲಿ 43,962, ಜಮ್ಮು ಮತ್ತು ಕಾಶ್ಮೀರದಲ್ಲಿ 6,385, ಉತ್ತರಾಖಂಡದಲ್ಲಿ 1,300, ಹಿಮಾಚಲ ಪ್ರದೇಶದಲ್ಲಿ 532, ಅಂಡಮಾನ್ ಮತ್ತು ನಿಕೋಬಾರ್‌ನಲ್ಲಿ 260 ಜಾನುವಾರುಗಳು ಹಾನಿಗೊಳಗಾಗಿವೆ ಎಂದು ಅವರು ಹೇಳಿದ್ದರು.

ಸಚಿವಾಲಯದ ಅಂಕಿಅಂಶಗಳ ಪ್ರಕಾರ, ಇದುವರೆಗೆ (ಆಗಸ್ಟ್‌ವರೆಗೆ) 7,300 ಜಾನುವಾರುಗಳು ಸಾವನ್ನಪ್ಪಿವೆ. ಪಂಜಾಬ್‌ನಲ್ಲಿ 3,359, ರಾಜಸ್ಥಾನದಲ್ಲಿ 2,111, ಗುಜರಾತ್‌ನಲ್ಲಿ 1,679, ಜಮ್ಮು ಮತ್ತು ಕಾಶ್ಮೀರದಲ್ಲಿ 62, ಹಿಮಾಚಲ ಪ್ರದೇಶದಲ್ಲಿ 38, ಉತ್ತರಾಖಂಡದಲ್ಲಿ 36 ಮತ್ತು ಅಂಡಮಾನ್ ನಿಕೋಬಾರ್‌ನಲ್ಲಿ 29 ಪ್ರಾಣಿಗಳು ಸಾವನ್ನಪ್ಪಿವೆ. ಹರಿಯಾಣದಲ್ಲೂ ಎಲ್‌ಎಸ್‌ಡಿ ಸೋಂಕಿನ ವರದಿಗಳಿವೆ.

ಕರ್ನಾಟಕದಲ್ಲಿ ಮುಂಜಾಗ್ರತೆ ವಹಿಸಲಾಗಿದೆಯೇ?

“ಕರ್ನಾಟಕದಲ್ಲಿ ಎಲ್‌ಎಸ್‌ಡಿ ಸೋಂಕಿಗೆ ಸಂಬಂಧಿಸಿದಂತೆ ಯಾವುದಾದರೂ ಕ್ರಮ ಜರುಗಿಸಲಾಗಿದೆಯೇ?” ಎಂಬ ಪ್ರಶ್ನೆ ಮೂಡಿದೆ. ರಾಜ್ಯದ ಪರಿಸ್ಥಿತಿಯ ಕುರಿತು ‘ನಾನುಗೌರಿ.ಕಾಂ’ಗೆ ಪ್ರತಿಕ್ರಿಯೆ ನೀಡಿದ ಮೈಸೂರು ಜಿಲ್ಲೆಯ ವೈದ್ಯಾಧಿಕಾರಿ ಡಾ.ಮಹೇಶ್‌ಕುಮಾರ್‌, “ಸಾಮಾನ್ಯವಾಗಿ ಈ ರೀತಿಯ ಪ್ರಕರಣಗಳು ವರದಿಯಾದಾಗ, ಗಡಿ ಜಿಲ್ಲೆಗಳಲ್ಲಿ, ಚೆಕ್‌ ಪೋಸ್ಟ್‌ಗಳಲ್ಲಿ ಎಚ್ಚರ ವಹಿಸಲಾಗುತ್ತದೆ. ಯಾವುದೇ ಜಾನುವಾರು ಗಡಿ ದಾಟದಂತೆ ನೋಡಿಕೊಳ್ಳಲಾಗುತ್ತದೆ. ಕೋವಿಡ್‌ ಹರಡಿದ ಸಂದರ್ಭದಲ್ಲಿ ಈ ಸೋಂಕು ಕಾಣಿಸಿಕೊಂಡಿತು. ಮುಂಜಾಗ್ರತೆ ಅಗತ್ಯವಿದೆ. ಸೋಂಕಿನ ಲಕ್ಷಣಗಳು ಕಂಡ ತಕ್ಷಣ ವೈದ್ಯರಿಗೆ ತಿಳಿಸಬೇಕು” ಎಂದು ರೈತರಿಗೆ ಮನವಿ ಮಾಡಿದರು.

“ಜಾನುವಾರುಗಳಿಗೆ ಕಾಯಿಲೆಗಳು ಬಂದಾಗ ರೈತರು ಕೆಲವೊಮ್ಮೆ ನಾಟಿ ಔಷಧಿ ಕೊಡಿಸಿ, ಮೂರ್ನಾಲ್ಕು ದಿನಗಳ ನಂತರ ನಮ್ಮ ಬಳಿ ಬರುತ್ತಾರೆ. ಎಲ್‌ಎಸ್‌ಡಿ ಸೋಂಕಿಗೆ ನಿರ್ದಿಷ್ಟ ವಾಕ್ಸಿನ್‌ ನಮ್ಮಲ್ಲಿ ಲಭ್ಯವಾಗಿಲ್ಲ. ಆದರೆ ಈಗ ನೀಡಲಾಗುತ್ತಿರುವ ವಾಕ್ಸಿನ್‌, ಈ ಕಾಯಿಲೆಗೆ ಕೊಂಚ ಹತ್ತಿರದ ಸಂಬಂಧ ಹೊಂದಿರುವ ಲಸಿಕೆಯಾಗಿದೆ. ಈ ಲಸಿಕೆಯನ್ನು ನೀಡುವ ಮೂಲಕವೂ ಒಂದಿಷ್ಟು ಸೋಂಕು ತಡೆಗಟ್ಟಲಾಗುತ್ತಿದೆ. ಆರಂಭಿಕ ಹಂತದಲ್ಲೇ ಮುಂಜಾಗ್ರತೆ ವಹಿಸಿದರೆ ಜಾನುವಾರುಗಳು ಗುಣಮುಖವಾಗಬಹುದು” ಎಂದರು.

ಇದನ್ನೂ ಓದಿರಿ: ಗೋವು ಸಾಕಣೆಯ ಗೋಳು ಕೇಳುವವರ್‍ಯಾರು? ಇದು ಹೈನುಗಾರಿಕೆಯ ಕಥೆ-ವ್ಯಥೆ!

ಪಶುವೈದ್ಯಾಧಿಕಾರಿ ಟಿ.ಎಸ್.ರಮಾನಂದ್ ಅವರು ‘ನಾನುಗೌರಿ.ಕಾಂ’ ಜೊತೆ ಮಾತನಾಡಿ, “ಬೇರೆ ದೇಶಗಳಲ್ಲಿ ವಾಕ್ಸಿನ್ ಅಭಿವೃದ್ಧಿಪಡಿಸಿದ್ದಾರೆ. ಮೇಕೆಗೆ ತಗುಲುವ ಪೋಕ್ಸ್‌ ವೈರಾಣುವಿಗೆ ಸಂಬಂಧಿಸಿದಂತೆ ನೀಡುವ ಲಸಿಕೆಯನ್ನು ನಮ್ಮಲ್ಲಿ ಕೆಲವು ಕಡೆ ಬಳಸುತ್ತಿದ್ದಾರೆ. ಎಲ್‌ಎಸ್‌ಡಿ ಹದಿನೈದು ದಿನ ಹರಡಿ ನಂತರ ಕಡಿಮೆಯಾಗುತ್ತದೆ. ಆದರೆ ಜಾನುವಾರುಗಳು ಸಾಯುತ್ತಿರುವುದು ನಮ್ಮ ದುರ್ದೈವ” ಎಂದು ವಿಷಾದಿಸಿದರು.

“ರೈತರು ಎಚ್ಚರಿಕೆ ವಹಿಸಬೇಕು. ಯಾವುದಾದರೂ ಒಂದು ಜಾನುವಾರಿಗೆ ಈ ಕಾಯಿಲೆ ಕಾಣಿಸಿಕೊಂಡ ತಕ್ಷಣ ಐಸೊಲೇಷನ್‌ ಮಾಡಬೇಕು. ಆರೋಗ್ಯವಂತ ಜಾನುವಾರುಗಳನ್ನು ಬೇರೆಡೆ ಇರಿಸಿಬೇಕು. ಕೊಟ್ಟಿಗೆಯನ್ನು ಶುಚಿಗೊಳಿಸಬೇಕು” ಎಂದು ಸಲಹೆ ನೀಡಿದರು.

“ನಮ್ಮ ವೈದ್ಯರು ನೀಡುವ ಮಾಹಿತಿ ಪ್ರಕಾರ ಜಾಗೃತಿ ಮೂಡಿಸುವ ಕೆಲಸಗಳಾಗುತ್ತಿವೆ. ಸೋಂಕು ಕಾಣಿಸಿಕೊಂಡ ಜಾನುವಾರುಗಳನ್ನು ಬೇರೆಡೆ ಇರಿಸಲು ಸೂಚನೆಗಳನ್ನು ನೀಡುತ್ತಿದ್ದಾರೆ” ಎಂದು ತಿಳಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...