Homeಕರ್ನಾಟಕಮಹಾರಾಷ್ಟ್ರಕ್ಕೂ ಕಾಲಿಟ್ಟ ಲಂಪಿ ವೈರಸ್‌; ಜಾನುವಾರುಗಳ ಸರಣಿ ಸಾವು; ಎಚ್ಚೆತ್ತುಕೊಂಡಿದೆಯೇ ಕರ್ನಾಟಕ ಸರ್ಕಾರ?

ಮಹಾರಾಷ್ಟ್ರಕ್ಕೂ ಕಾಲಿಟ್ಟ ಲಂಪಿ ವೈರಸ್‌; ಜಾನುವಾರುಗಳ ಸರಣಿ ಸಾವು; ಎಚ್ಚೆತ್ತುಕೊಂಡಿದೆಯೇ ಕರ್ನಾಟಕ ಸರ್ಕಾರ?

- Advertisement -
- Advertisement -

ಮಹಾರಾಷ್ಟ್ರದಲ್ಲಿ ಲಂಪಿ ವೈರಸ್‌ನಿಂದ 126 ಜಾನುವಾರುಗಳು ಸಾವನ್ನಪ್ಪಿವೆ. ಇಲ್ಲಿನ 25 ಜಿಲ್ಲೆಗಳು ಸೋಂಕಿಗೆ ಒಳಗಾಗಿವೆ ಎಂದು ರಾಜ್ಯದ ಪಶುಸಂಗೋಪನಾ ಇಲಾಖೆ ಶನಿವಾರ ಮಾಹಿತಿ ನೀಡಿದೆ.

“ಜಲಗಾಂವ್ ಜಿಲ್ಲೆಯಲ್ಲಿ 47, ಅಹ್ಮದ್‌ನಗರ ಜಿಲ್ಲೆಯಲ್ಲಿ 21, ಧುಲೆಯಲ್ಲಿ 2, ಅಕೋಲಾದಲ್ಲಿ 18, ಪುಣೆಯಲ್ಲಿ 14, ಲಾತೂರ್‌ನಲ್ಲಿ 2, ಸತಾರಾದಲ್ಲಿ 6, ಬುಲ್ಧಾನದಲ್ಲಿ 5, ಅಮರಾವತಿಯಲ್ಲಿ 7, ಸಾಂಗ್ಲಿ, ವಾಶಿಮ್‌, ಜಲ್ನಾ ಮತ್ತು ನಾಗ್ಪುರ ಜಿಲ್ಲೆಯಲ್ಲಿ ಒಂದೊಂದು ಪ್ರಕರಣ ಸೇರಿದಂತೆ ಒಟ್ಟು 126 ಸೋಂಕಿತ ಪ್ರಾಣಿಗಳು ಸಾವನ್ನಪ್ಪಿವೆ” ಎಂದು ಪ್ರಕಟಣೆ ತಿಳಿಸಿದೆ.

ಲಂಪಿ ಸ್ಕಿನ್ ಡಿಸೀಸ್ (ಎಲ್‌ಎಸ್‌ಡಿ) ವೇಗವಾಗಿ ಹರಡುತ್ತಿದ್ದರೂ, ಇದು ಪ್ರಾಣಿಗಳಿಂದ ಅಥವಾ ಹಸುವಿನ ಹಾಲಿನ ಮೂಲಕ ಮನುಷ್ಯರಿಗೆ ಹರಡುವುದಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಮಹಾರಾಷ್ಟ್ರ ರಾಜ್ಯದಾದ್ಯಂತ ಲಂಪಿ ಸ್ಕಿನ್ ಡಿಸೀಸ್ (ಎಲ್‌ಎಸ್‌ಡಿ) ವೇಗವಾಗಿ ಹರಡುತ್ತಿದೆ. ಇದು ಹಸುವಿನ ಚರ್ಮದ ವೈರಲ್ ಕಾಯಿಲೆಯಾಗಿದೆ. ಈ ರೋಗವು ಪ್ರಾಣಿಗಳಿಂದ ಅಥವಾ ಹಸುವಿನ ಹಾಲಿನಿಂದ ಮನುಷ್ಯರಿಗೆ ಹರಡುವುದಿಲ್ಲ” ಎಂದು ಮಹಾರಾಷ್ಟ್ರ ಪಶುಸಂಗೋಪನಾ ಇಲಾಖೆಯ ಪ್ರಕಟಣೆ ತಿಳಿಸಿದೆ.

ಸರಕಾರದ ಪರವಾಗಿ ಐಎಎಸ್‌ ಅಧಿಕಾರಿ ಸಚೀಂದ್ರ ಪ್ರತಾಪ್‌ ಸಿಂಗ್‌ ಮನವಿ ಮಾಡಿದ್ದು, “ರೋಗವು ಹಸು, ರಾಸುಗಳಿಗೆ ಮಾತ್ರ ಹರಡಿದ್ದು, ಝೂನೋಟಿಕ್ ಆಗಿರುವುದಿಲ್ಲ. ಸಾಮಾಜಿಕ ಜಾಲತಾಣಗಳಲ್ಲಿ ವದಂತಿ ಹಬ್ಬಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು” ಎಂದು ಎಚ್ಚರಿಸಿದ್ದಾರೆ.

ಪರಿಸ್ಥಿತಿಯನ್ನು ಎದುರಿಸಲು ಮಾಡಲಾಗುತ್ತಿರುವ ವ್ಯವಸ್ಥೆಗಳ ಬಗ್ಗೆ ಅವರು ಮತ್ತಷ್ಟು ಮಾಹಿತಿ ನೀಡಿದ್ದಾರೆ. ಪಶುಸಂಗೋಪನಾ ಇಲಾಖೆ ಪ್ರಕಾರ, ರೋಗದ ಚಿಕಿತ್ಸೆಗೆ ಅಗತ್ಯವಿರುವ ಔಷಧಗಳನ್ನು ಖರೀದಿಸಲು ಪ್ರತಿ ಜಿಲ್ಲೆಗೆ ₹ 1 ಕೋಟಿ ರೂ ನೀಡಲಾಗುತ್ತಿದೆ. ಮಹಾರಾಷ್ಟ್ರ ಪ್ರಾಣಿ ಮತ್ತು ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾನಿಲಯದ (MAFSU) ವ್ಯಾಕ್ಸಿನೇಟರ್‌ಗಳು ಮತ್ತು ಇಂಟರ್ನ್‌ಗಳಿಗೆ ಪ್ರತಿ ಲಸಿಕೆಗೆ ₹ 3 ಗೌರವಧನವನ್ನೂ ನೀಡಲಾಗುತ್ತಿದೆ.

“ಸರ್ಕಾರಿ ಪಶುವೈದ್ಯಾಧಿಕಾರಿಗಳು ಮತ್ತು ಖಾಸಗಿ ವೈದ್ಯರು ಎಂಎಎಫ್‌ಎಸ್‌ಯು ಚಿಕಿತ್ಸಾ ಕಾರ್ಯಸೂಚಿಯಂತೆ ಕ್ರಮ ಕೈಗೊಳ್ಳಬೇಕು. ಜಾನುವಾರುಗಳಲ್ಲಿನ ಯಾವುದೇ ರೋಗಲಕ್ಷಣಗಳ ಬಗ್ಗೆ ಹತ್ತಿರದ ಸರ್ಕಾರಿ ಜಾನುವಾರು ಅಭಿವೃದ್ಧಿ ಅಧಿಕಾರಿಗಳಿಗೆ ತಿಳಿಸಬೇಕು” ಎಂದು ಸೂಚಿಸಲಾಗಿದೆ.

ಇದನ್ನೂ ಓದಿರಿ: ನೆರೆರಾಜ್ಯಗಳಲ್ಲಿಯೂ ಹೈನುಗಾರಿಕೆ ಬಿಕ್ಕಟ್ಟಿನಲ್ಲಿ…

ಪಶುಸಂಗೋಪನಾ ಇಲಾಖೆಯ ಆಯುಕ್ತರು ಪ್ರತಿಕ್ರಿಯೆ ನೀಡಿದ್ದು, “ಪ್ರಾಣಿಗಳಲ್ಲಿ ಈ ರೋಗದ ಲಕ್ಷಣಗಳು ಕಂಡುಬಂದಲ್ಲಿ ಹತ್ತಿರದ ಪಶುವೈದ್ಯಕೀಯ ಸಂಸ್ಥೆಗೆ ಮಾಹಿತಿ ನೀಡಬೇಕೆಂದು ‘ಪ್ರಾಣಿಗಳ ಅಧಿನಿಯಮ, 2009’ರ ಪ್ರಕಾರ ನಿರ್ದೇಶಿಸಲಾಗಿದೆ” ಎಂದಿದ್ದಾರೆ.

ನೊಣಗಳು, ಸೊಳ್ಳೆಗಳು, ಉಣ್ಣಿಗಳ ಮೂಲಕ ರೋಗ ಹರಡುವುದರಿಂದ ಕೀಟನಾಶಕಗಳ ಸಿಂಪಡಣೆ ಮಾಡುವಂತೆ ಮಹಾರಾಷ್ಟ್ರದ ಪಶುಸಂಗೋಪನಾ ಇಲಾಖೆಯು ಗ್ರಾಮ-ಪಂಚಾಯತ್‌ಗಳಿಗೆ ಆದೇಶಿಸಿದೆ.

ತಿಂಗಳ ಹಿಂದೆಯೇ ಕಾಣಿಸಿಕೊಂಡಿತ್ತು ಲಂಪಿ ಹಾವಳಿ

ಆಗಸ್ಟ್ ತಿಂಗಳಲ್ಲಿಯೇ ಲಂಪಿ ವೈರಸ್‌ ಹಾವಳಿ ಕಾಣಿಸಿಕೊಂಡಿತ್ತು. ದೇಶದ ವಿವಿಧ ರಾಜ್ಯಗಳಲ್ಲಿ ಸೋಂಕು ತಗುಲಿರುವ ಕುರಿತು ವರದಿಯಾಗಿದ್ದವು.

“ಒಂದು ಕೇಂದ್ರಾಡಳಿತ ಪ್ರದೇಶ ಸೇರಿದಂತೆ ಎಂಟು ರಾಜ್ಯಗಳಲ್ಲಿ 7,300 ಕ್ಕೂ ಹೆಚ್ಚು ಜಾನುವಾರುಗಳು ಸಾವನ್ನಪ್ಪಿವೆ. ಸೋಂಕನ್ನು ತಡೆಗಟ್ಟಲು ಲಸಿಕೆ ಅಭಿಯಾನವನ್ನು ಹೆಚ್ಚಿಸಲಾಗಿದೆ” ಎಂದು ಹಿರಿಯ ಸರ್ಕಾರಿ ಅಧಿಕಾರಿಯೊಬ್ಬರು ತಿಳಿಸಿರುವುದಾಗಿ ಆಗಸ್ಟ್‌ 21ರಂದು ‘ದಿ ಹಿಂದೂ’ ವರದಿ ಮಾಡಿತ್ತು.

ಲಂಪಿ ಸ್ಕಿನ್ ಡಿಸೀಸ್ (ಎಲ್‌ಎಸ್‌ಡಿ) ಜಾನುವಾರುಗಳನ್ನು ಬಾಧಿಸುವ ಸಾಂಕ್ರಾಮಿಕ ವೈರಲ್ ಕಾಯಿಲೆಯಾಗಿದೆ. ಈ ವೈರಸ್‌ನಿಂದಾಗಿ ಜಾನುವಾರುಗಳು ಜ್ವರಕ್ಕೆ ತುತ್ತಾಗುತ್ತವೆ. ಚರ್ಮದ ಮೇಲೆ ಗಂಟುಗಳು ಮೂಡುತ್ತವೆ.

ಎಲ್‌ಎಸ್‌ಡಿ ಇತ್ತೀಚಿನ ವರ್ಷಗಳಲ್ಲಿ ಮಧ್ಯಪ್ರಾಚ್ಯ ಮತ್ತು ಯುರೋಪ್‌ ದೇಶಗಳಲ್ಲಿ ಏಕಾಏಕಿ ಹರಡಿತು. ನಂತರ ಏಷ್ಯಕ್ಕೆ ಕಾಲಿಟ್ಟಿತು. ಜುಲೈ 2019ರಲ್ಲಿ ಬಾಂಗ್ಲಾದೇಶದಲ್ಲಿ ಈ ರೋಗವು ಪತ್ತೆಯಾಗಿತ್ತು.

2019ರಲ್ಲಿ ಭಾರತದಲ್ಲಿಯೂ ಎಲ್‌ಎಸ್‌ಡಿ ವರದಿಯಾಗಿತ್ತು. ಪೂರ್ವ ರಾಜ್ಯಗಳಲ್ಲಿ, ವಿಶೇಷವಾಗಿ ಪಶ್ಚಿಮ ಬಂಗಾಳ ಮತ್ತು ಒಡಿಶಾದಲ್ಲಿ ಎಲ್ಎಸ್‌ಡಿ ಮೊದಲ ಪ್ರಕರಣ ವರದಿಯಾಯಿತು. ಆದರೆ ಈ ವರ್ಷ ಪಶ್ಚಿಮ ಮತ್ತು ಉತ್ತರ ರಾಜ್ಯಗಳಲ್ಲಿ, ಅಂಡಮಾನ್ ನಿಕೋಬಾರ್‌ನಲ್ಲಿ ಈ ರೋಗ ವರದಿಯಾಗಿದೆ ಎಂದು ‘ದಿ ಹಿಂದೂ’ ವರದಿ ತಿಳಿಸಿತ್ತು.

“ಮೊದಲಿಗೆ ಗುಜರಾತ್‌ನಲ್ಲಿ ಎಲ್‌ಎಸ್‌ಡಿ ವರದಿಯಾಗಿದೆ. ಇದು ಈಗ ಎಂಟು ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳಿಗೆ ಹರಡಿದೆ. ಇದುವರೆಗೆ 1.85 ಲಕ್ಷಕ್ಕೂ ಹೆಚ್ಚು ಜಾನುವಾರುಗಳು ಬಾಧಿತವಾಗಿವೆ. ಜುಲೈನಲ್ಲಿ ರೋಗ ಹರಡಿದ ನಂತರ 7,300ಕ್ಕೂ ಹೆಚ್ಚು ಜಾನುವಾರುಗಳು ಸಾವನ್ನಪ್ಪಿವೆ” ಎಂದು ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದ್ದರು.

ಪಂಜಾಬ್‌ನಲ್ಲಿ ಇದುವರೆಗೆ ಸುಮಾರು 74,325 ಜಾನುವಾರುಗಳು ಬಾಧಿತವಾಗಿದ್ದರೆ, ಗುಜರಾತ್‌ನಲ್ಲಿ 58,546, ರಾಜಸ್ಥಾನದಲ್ಲಿ 43,962, ಜಮ್ಮು ಮತ್ತು ಕಾಶ್ಮೀರದಲ್ಲಿ 6,385, ಉತ್ತರಾಖಂಡದಲ್ಲಿ 1,300, ಹಿಮಾಚಲ ಪ್ರದೇಶದಲ್ಲಿ 532, ಅಂಡಮಾನ್ ಮತ್ತು ನಿಕೋಬಾರ್‌ನಲ್ಲಿ 260 ಜಾನುವಾರುಗಳು ಹಾನಿಗೊಳಗಾಗಿವೆ ಎಂದು ಅವರು ಹೇಳಿದ್ದರು.

ಸಚಿವಾಲಯದ ಅಂಕಿಅಂಶಗಳ ಪ್ರಕಾರ, ಇದುವರೆಗೆ (ಆಗಸ್ಟ್‌ವರೆಗೆ) 7,300 ಜಾನುವಾರುಗಳು ಸಾವನ್ನಪ್ಪಿವೆ. ಪಂಜಾಬ್‌ನಲ್ಲಿ 3,359, ರಾಜಸ್ಥಾನದಲ್ಲಿ 2,111, ಗುಜರಾತ್‌ನಲ್ಲಿ 1,679, ಜಮ್ಮು ಮತ್ತು ಕಾಶ್ಮೀರದಲ್ಲಿ 62, ಹಿಮಾಚಲ ಪ್ರದೇಶದಲ್ಲಿ 38, ಉತ್ತರಾಖಂಡದಲ್ಲಿ 36 ಮತ್ತು ಅಂಡಮಾನ್ ನಿಕೋಬಾರ್‌ನಲ್ಲಿ 29 ಪ್ರಾಣಿಗಳು ಸಾವನ್ನಪ್ಪಿವೆ. ಹರಿಯಾಣದಲ್ಲೂ ಎಲ್‌ಎಸ್‌ಡಿ ಸೋಂಕಿನ ವರದಿಗಳಿವೆ.

ಕರ್ನಾಟಕದಲ್ಲಿ ಮುಂಜಾಗ್ರತೆ ವಹಿಸಲಾಗಿದೆಯೇ?

“ಕರ್ನಾಟಕದಲ್ಲಿ ಎಲ್‌ಎಸ್‌ಡಿ ಸೋಂಕಿಗೆ ಸಂಬಂಧಿಸಿದಂತೆ ಯಾವುದಾದರೂ ಕ್ರಮ ಜರುಗಿಸಲಾಗಿದೆಯೇ?” ಎಂಬ ಪ್ರಶ್ನೆ ಮೂಡಿದೆ. ರಾಜ್ಯದ ಪರಿಸ್ಥಿತಿಯ ಕುರಿತು ‘ನಾನುಗೌರಿ.ಕಾಂ’ಗೆ ಪ್ರತಿಕ್ರಿಯೆ ನೀಡಿದ ಮೈಸೂರು ಜಿಲ್ಲೆಯ ವೈದ್ಯಾಧಿಕಾರಿ ಡಾ.ಮಹೇಶ್‌ಕುಮಾರ್‌, “ಸಾಮಾನ್ಯವಾಗಿ ಈ ರೀತಿಯ ಪ್ರಕರಣಗಳು ವರದಿಯಾದಾಗ, ಗಡಿ ಜಿಲ್ಲೆಗಳಲ್ಲಿ, ಚೆಕ್‌ ಪೋಸ್ಟ್‌ಗಳಲ್ಲಿ ಎಚ್ಚರ ವಹಿಸಲಾಗುತ್ತದೆ. ಯಾವುದೇ ಜಾನುವಾರು ಗಡಿ ದಾಟದಂತೆ ನೋಡಿಕೊಳ್ಳಲಾಗುತ್ತದೆ. ಕೋವಿಡ್‌ ಹರಡಿದ ಸಂದರ್ಭದಲ್ಲಿ ಈ ಸೋಂಕು ಕಾಣಿಸಿಕೊಂಡಿತು. ಮುಂಜಾಗ್ರತೆ ಅಗತ್ಯವಿದೆ. ಸೋಂಕಿನ ಲಕ್ಷಣಗಳು ಕಂಡ ತಕ್ಷಣ ವೈದ್ಯರಿಗೆ ತಿಳಿಸಬೇಕು” ಎಂದು ರೈತರಿಗೆ ಮನವಿ ಮಾಡಿದರು.

“ಜಾನುವಾರುಗಳಿಗೆ ಕಾಯಿಲೆಗಳು ಬಂದಾಗ ರೈತರು ಕೆಲವೊಮ್ಮೆ ನಾಟಿ ಔಷಧಿ ಕೊಡಿಸಿ, ಮೂರ್ನಾಲ್ಕು ದಿನಗಳ ನಂತರ ನಮ್ಮ ಬಳಿ ಬರುತ್ತಾರೆ. ಎಲ್‌ಎಸ್‌ಡಿ ಸೋಂಕಿಗೆ ನಿರ್ದಿಷ್ಟ ವಾಕ್ಸಿನ್‌ ನಮ್ಮಲ್ಲಿ ಲಭ್ಯವಾಗಿಲ್ಲ. ಆದರೆ ಈಗ ನೀಡಲಾಗುತ್ತಿರುವ ವಾಕ್ಸಿನ್‌, ಈ ಕಾಯಿಲೆಗೆ ಕೊಂಚ ಹತ್ತಿರದ ಸಂಬಂಧ ಹೊಂದಿರುವ ಲಸಿಕೆಯಾಗಿದೆ. ಈ ಲಸಿಕೆಯನ್ನು ನೀಡುವ ಮೂಲಕವೂ ಒಂದಿಷ್ಟು ಸೋಂಕು ತಡೆಗಟ್ಟಲಾಗುತ್ತಿದೆ. ಆರಂಭಿಕ ಹಂತದಲ್ಲೇ ಮುಂಜಾಗ್ರತೆ ವಹಿಸಿದರೆ ಜಾನುವಾರುಗಳು ಗುಣಮುಖವಾಗಬಹುದು” ಎಂದರು.

ಇದನ್ನೂ ಓದಿರಿ: ಗೋವು ಸಾಕಣೆಯ ಗೋಳು ಕೇಳುವವರ್‍ಯಾರು? ಇದು ಹೈನುಗಾರಿಕೆಯ ಕಥೆ-ವ್ಯಥೆ!

ಪಶುವೈದ್ಯಾಧಿಕಾರಿ ಟಿ.ಎಸ್.ರಮಾನಂದ್ ಅವರು ‘ನಾನುಗೌರಿ.ಕಾಂ’ ಜೊತೆ ಮಾತನಾಡಿ, “ಬೇರೆ ದೇಶಗಳಲ್ಲಿ ವಾಕ್ಸಿನ್ ಅಭಿವೃದ್ಧಿಪಡಿಸಿದ್ದಾರೆ. ಮೇಕೆಗೆ ತಗುಲುವ ಪೋಕ್ಸ್‌ ವೈರಾಣುವಿಗೆ ಸಂಬಂಧಿಸಿದಂತೆ ನೀಡುವ ಲಸಿಕೆಯನ್ನು ನಮ್ಮಲ್ಲಿ ಕೆಲವು ಕಡೆ ಬಳಸುತ್ತಿದ್ದಾರೆ. ಎಲ್‌ಎಸ್‌ಡಿ ಹದಿನೈದು ದಿನ ಹರಡಿ ನಂತರ ಕಡಿಮೆಯಾಗುತ್ತದೆ. ಆದರೆ ಜಾನುವಾರುಗಳು ಸಾಯುತ್ತಿರುವುದು ನಮ್ಮ ದುರ್ದೈವ” ಎಂದು ವಿಷಾದಿಸಿದರು.

“ರೈತರು ಎಚ್ಚರಿಕೆ ವಹಿಸಬೇಕು. ಯಾವುದಾದರೂ ಒಂದು ಜಾನುವಾರಿಗೆ ಈ ಕಾಯಿಲೆ ಕಾಣಿಸಿಕೊಂಡ ತಕ್ಷಣ ಐಸೊಲೇಷನ್‌ ಮಾಡಬೇಕು. ಆರೋಗ್ಯವಂತ ಜಾನುವಾರುಗಳನ್ನು ಬೇರೆಡೆ ಇರಿಸಿಬೇಕು. ಕೊಟ್ಟಿಗೆಯನ್ನು ಶುಚಿಗೊಳಿಸಬೇಕು” ಎಂದು ಸಲಹೆ ನೀಡಿದರು.

“ನಮ್ಮ ವೈದ್ಯರು ನೀಡುವ ಮಾಹಿತಿ ಪ್ರಕಾರ ಜಾಗೃತಿ ಮೂಡಿಸುವ ಕೆಲಸಗಳಾಗುತ್ತಿವೆ. ಸೋಂಕು ಕಾಣಿಸಿಕೊಂಡ ಜಾನುವಾರುಗಳನ್ನು ಬೇರೆಡೆ ಇರಿಸಲು ಸೂಚನೆಗಳನ್ನು ನೀಡುತ್ತಿದ್ದಾರೆ” ಎಂದು ತಿಳಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...