Homeಮುಖಪುಟಜೆಡಿಎಸ್ ಅಭ್ಯರ್ಥಿಗೆ ಆಮಿಷ: ವಿ.ಸೋಮಣ್ಣನವರ ಮೇಲೆ ಎಫ್‌ಐಆರ್

ಜೆಡಿಎಸ್ ಅಭ್ಯರ್ಥಿಗೆ ಆಮಿಷ: ವಿ.ಸೋಮಣ್ಣನವರ ಮೇಲೆ ಎಫ್‌ಐಆರ್

- Advertisement -
- Advertisement -

ಚಾಮರಾಜನಗರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಮಲ್ಲಿಕಾರ್ಜುನ ಸ್ವಾಮಿಯವರ ನಾಮಪತ್ರ ಹಿಂಪಡೆಯುವಂತೆ ಆಮಿಷ ಒಡ್ಡಿದ್ದ ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣನವರ ಮೇಲೆ ಎಫ್‌ಐಆರ್ ದಾಖಲಾಗಿದೆ.

ಚುನಾವಣಾ ಫ್ಲೈಯಿಂಗ್‌ ಸ್ಕ್ಯಾಡ್‌ನ ಮ್ಯಾಜಿಸ್ಟ್ರೇಟ್‌ ಡಾ.ಬಿ.ಆರ್‌.ಜಯಣ್ಣ ನೀಡಿರುವ ದೂರಿನ ಆಧಾರದ ಮೇಲೆ ಚಾಮರಾಜನಗರ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ಅದರಲ್ಲಿ ಸೋಮಣ್ಣ ಅವರಿಗೆ ಸಂಬಂಧಿಸಿದ ವಿವರಗಳನ್ನು ಉಲ್ಲೇಖಿಸಲಾಗಿಲ್ಲ. ಅವರನ್ನು ಅಪರಿಚಿತನೆಂದು ಉಲ್ಲೇಖಿಸಲಾಗಿದೆ. ಸೋಮಣ್ಣ ಅವರದ್ದು ಎನ್ನಲಾದ ಆಡಿಯೋದಲ್ಲಿ ಸುದೀಪ್‌ ಮತ್ತು ನಟರಾಜು ಎಂಬ ಹೆಸರುಗಳೂ ಕೇಳಿಬಂದಿದ್ದು, ‌ಆ ಎರಡು ಹೆಸರುಗಳನ್ನೂ ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ ಎನ್ನಲಾಗಿದೆ.

ಇದೇ ವಿಷಯಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ ಮತ್ತು ಕಾಂಗ್ರೆಸ್ ರಾಷ್ಟ್ರೀಯ ವಕ್ತಾರರಾದ ಗೌರವ್ ವಲ್ಲಭ್‌ರವರು ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

ದೂರವಾಣಿ ಕರೆ ಮಾಡಿದ್ದ ವಿ. ಸೋಮಣ್ಣ, ನಾಮಪತ್ರ ಹಿಂಪಡೆದರೆ 50 ಲಕ್ಷ ರೂ. ಹಣ ಹಾಗೂ ಗೂಟದ ಕಾರನ್ನು ನೀಡುವ ಆಮೀಷ ಒಡ್ಡಿದ್ದಾರೆ. ಸೋಮಣ್ಣ ಅವರಿಂದ ತಮಗೆ ಕರೆ ಬಂದಿದ್ದನ್ನು ಸ್ವತಃ ಮಲ್ಲಿಕಾರ್ಜುನ ಸ್ವಾಮಿ ಅವರೇ ಒಪ್ಪಿಕೊಂಡಿದ್ದಾರೆ. ಇದು ಐಪಿಸಿ ಸೆಕ್ಷನ್ ( 171ಸಿ, 171 F) ಪ್ರಕಾರ ಅಪರಾಧವಾಗಿದೆ. ಈ ನಿಟ್ಟಿನಲ್ಲಿ ಸಚಿವ ಸೋಮಣ್ಣ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಕಾಂಗ್ರೆಸ್ ನಾಯಕರು ಆಗ್ರಹಿಸಿದ್ದಾರೆ.

ಬಿಜೆಪಿ ಹೈಕಮಾಂಡ್ ಆದೇಶದ ಮೇರೆಗೆ ಸ್ವಕ್ಷೇತ್ರ ಗೋವಿಂದರಾಜನಗರ ಬದಲು ಚಾಮರಾಜನಗರ ಮತ್ತು ವರುಣಾ ಕ್ಷೇತ್ರಗಳಲ್ಲಿ ಕಣಕ್ಕಿಳಿದಿರುವ ಸಚಿವ ವಿ.ಸೋಮಣ್ಣನವರು ಒಂದು ಕ್ಷೇತ್ರದಲ್ಲಾದರೂ ಗೆಲುವು ಸಾಧಿಸಲು ಹರಸಾಹಸ ಪಡುತ್ತಿದ್ದಾರೆ. ಅದರ ಭಾಗವಾಗಿ ಚಾಮರಾಜನಗರ ವಿಧಾನಸಭಾ ಕ್ಷೇತ್ರದ ಉಪ್ಪಾರ ಸಮುದಾಯದ ಜೆಡಿಎಸ್ ಅಭ್ಯರ್ಥಿ ಮಲ್ಲಿಕಾರ್ಜುನಸ್ವಾಮಿಯವರ ನಾಮಪತ್ರ ಹಿಂತೆಗೆಸಲು ಪ್ರಯತ್ನಿಸಿರುವುದು ಬೆಳಕಿಗೆ ಬಂದಿದೆ.

ಸೋಮವಾರ ಮಧ್ಯಾಹ್ನ ಕರೆ ಮಾಡಿದ ಸೋಮಣ್ಣನವರು ಏಯ್ ನಾಮಪತ್ರ ವಾಪಸ್ ತಗೋ. ಆಮೇಲೆ ಬಾಕಿದ್ದು ನಿನಗೆ ಏನು ಬೇಕೊ ಮಾಡಿಕೊಡ್ತೀನಿ. ಏನಯ್ಯ ನೀನು ಯಾವನೋ ಮಾತು ಕೇಳಿಕೊಂಡು ನಾಮಪತ್ರ ಹಾಕಿದ್ದೀಯ ಎಂದು ಸೋಮಣ್ಣನವರು ಜೋರು ಮಾಡುವುದು ಆಡಿಯೋದಲ್ಲಿದೆ.

ನೀನು ನನಗೆ ಒಬ್ಬ ಹಳೆಯ ಸ್ನೇಹಿತ. ಅವನ್ಯಾವನೋ ತೊಟ್ಟಿ ನನ್ನ ಮಗನ ಮಾತು ಕೇಳೋಕೆ ಹೋಗಬೇಡ. ನಿನಗೆ ಬದುಕುವುದಕ್ಕೆ ಏನು ಬೇಕು ಎಲ್ಲವೂ ಮಾಡ್ತೀನಿ. ಮೊದ್ಲು ನಾಮಪತ್ರ ವಾಪಸ್ ತಗೋ ಆಮೇಲೆ ಬಾಕಿದ್ದು ನಾನು ಮಾತನಾಡುತ್ತೇನೆ. ನಿನ್ನ ಹಿತ ಕಾಪಾಡುವುದು ನನ್ನ, ಸುದೀಪಣ್ಣ ಮತ್ತು ಮರಮಕಲ್ ರವರ ಜವಾಬ್ದಾರಿ. ನಾನೀಗ ಉಪ್ಪಾರರ ದೇವಾಸ್ಥಾನದಲ್ಲಿ ಇದ್ದೀನಿ. ನಿನ್ನನ್ನು ಎಲ್ಲಿಗೆ ತಗೊಂಡು ಹೋಗಿ ಬಿಡಬೇಕು ಅಲ್ಲಿಗೆ ಬಿಡುತ್ತೇನೆ. ಮೊದಲು ವಾಪಸ್ ತಗೊ ನಿನಗೆ ಕೈ ಮುಗಿಯುತ್ತೇನೆ ಎಂದು ಸೋಮಣ್ಣನವರು ಹೇಳಿದ್ದಾರೆ.

ಮುಂದುವರೆದು, “ಇನ್ನೊಂದು ಗಂಟೆ ಮಾತ್ರ ಸಮಯವಿದೆ. ಅವನ್ಯಾವನೋ ಪೋಲಿ ನನ್ ಮಗನ ಮಾತು ಕೇಳ್ಕೊಂಡು ನಿಂತಿದ್ದೀಯ. ನೀನು ಮೊದಲು ವಾಪಸ್ ತಗೋ. ನಮ್ ಸರ್ಕಾರ ಬರುತ್ತದೆ. ನಿನಗೆ ಒಂದು ಗೂಟದ ಕಾರು ಬೇಕು, ನಾನು ಕೊಡಿಸ್ತೀನಿ ಎಂದು ಸೋಮಣ್ಣ ಹೇಳಿರುವುದು ದಾಖಲಾಗಿದೆ. ಇದೇ ಸಂದರ್ಭದಲ್ಲಿ ಸೋಮಣ್ಣನವರ ಫೋನ್‌ನಿಂದ ಮಾತನಾಡುವ ಮತ್ತೊಬ್ಬರು ಮಲ್ಲ, ಜಿ.ಟಿ ದೇವೇಗೌಡರ ಕೈಲಿ ಹೇಳಿಸ್ತೀನಿ. ನಾಮಪತ್ರ ವಾಪಸ್ ತಗೋ ಎನ್ನುತ್ತಾರೆ.

ಉಪ್ಪಾರರು ನೀವು. ನಾನು ಉಪ್ಪಾರರ ದೇವರ ಮುಂದೆ ನಿಂತಿದ್ದೀನಿ. ನೀನು ಯಾವನ ಮಾತು ಕೇಳಬೇಡ. ಮೊದ್ಲು ನಾಮಪತ್ರ ವಾಪಸ್ ತಗೊ. ಜಿ.ಟಿ ದೇವೇಗೌಡ ನಾವೆಲ್ಲ ಸ್ನೇಹಿತರು, ನಾನು ಮಾತನಾಡುತ್ತೇನೆ. ಪ್ಲೀಸ್ ತಗೋ ಎನ್ನುತ್ತಾರೆ.

ಇದನ್ನೂ ಓದಿ: ಕಾಂಗ್ರೆಸ್ ದಿಗ್ಗಜರ ವಿರುದ್ಧ ಸೋಮಣ್ಣ, ಅಶೋಕ್: ಹೊಂದಾಣಿಕೆ ರಾಜಕಾರಣದ ವಿರುದ್ಧ ಬಿಜೆಪಿಯ ಸ್ಪಷ್ಟ ಸಂದೇಶ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...