Homeಮುಖಪುಟಜೆಡಿಎಸ್ ಅಭ್ಯರ್ಥಿಗೆ ಆಮಿಷ: ವಿ.ಸೋಮಣ್ಣನವರ ಮೇಲೆ ಎಫ್‌ಐಆರ್

ಜೆಡಿಎಸ್ ಅಭ್ಯರ್ಥಿಗೆ ಆಮಿಷ: ವಿ.ಸೋಮಣ್ಣನವರ ಮೇಲೆ ಎಫ್‌ಐಆರ್

- Advertisement -
- Advertisement -

ಚಾಮರಾಜನಗರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಮಲ್ಲಿಕಾರ್ಜುನ ಸ್ವಾಮಿಯವರ ನಾಮಪತ್ರ ಹಿಂಪಡೆಯುವಂತೆ ಆಮಿಷ ಒಡ್ಡಿದ್ದ ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣನವರ ಮೇಲೆ ಎಫ್‌ಐಆರ್ ದಾಖಲಾಗಿದೆ.

ಚುನಾವಣಾ ಫ್ಲೈಯಿಂಗ್‌ ಸ್ಕ್ಯಾಡ್‌ನ ಮ್ಯಾಜಿಸ್ಟ್ರೇಟ್‌ ಡಾ.ಬಿ.ಆರ್‌.ಜಯಣ್ಣ ನೀಡಿರುವ ದೂರಿನ ಆಧಾರದ ಮೇಲೆ ಚಾಮರಾಜನಗರ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ಅದರಲ್ಲಿ ಸೋಮಣ್ಣ ಅವರಿಗೆ ಸಂಬಂಧಿಸಿದ ವಿವರಗಳನ್ನು ಉಲ್ಲೇಖಿಸಲಾಗಿಲ್ಲ. ಅವರನ್ನು ಅಪರಿಚಿತನೆಂದು ಉಲ್ಲೇಖಿಸಲಾಗಿದೆ. ಸೋಮಣ್ಣ ಅವರದ್ದು ಎನ್ನಲಾದ ಆಡಿಯೋದಲ್ಲಿ ಸುದೀಪ್‌ ಮತ್ತು ನಟರಾಜು ಎಂಬ ಹೆಸರುಗಳೂ ಕೇಳಿಬಂದಿದ್ದು, ‌ಆ ಎರಡು ಹೆಸರುಗಳನ್ನೂ ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ ಎನ್ನಲಾಗಿದೆ.

ಇದೇ ವಿಷಯಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ ಮತ್ತು ಕಾಂಗ್ರೆಸ್ ರಾಷ್ಟ್ರೀಯ ವಕ್ತಾರರಾದ ಗೌರವ್ ವಲ್ಲಭ್‌ರವರು ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

ದೂರವಾಣಿ ಕರೆ ಮಾಡಿದ್ದ ವಿ. ಸೋಮಣ್ಣ, ನಾಮಪತ್ರ ಹಿಂಪಡೆದರೆ 50 ಲಕ್ಷ ರೂ. ಹಣ ಹಾಗೂ ಗೂಟದ ಕಾರನ್ನು ನೀಡುವ ಆಮೀಷ ಒಡ್ಡಿದ್ದಾರೆ. ಸೋಮಣ್ಣ ಅವರಿಂದ ತಮಗೆ ಕರೆ ಬಂದಿದ್ದನ್ನು ಸ್ವತಃ ಮಲ್ಲಿಕಾರ್ಜುನ ಸ್ವಾಮಿ ಅವರೇ ಒಪ್ಪಿಕೊಂಡಿದ್ದಾರೆ. ಇದು ಐಪಿಸಿ ಸೆಕ್ಷನ್ ( 171ಸಿ, 171 F) ಪ್ರಕಾರ ಅಪರಾಧವಾಗಿದೆ. ಈ ನಿಟ್ಟಿನಲ್ಲಿ ಸಚಿವ ಸೋಮಣ್ಣ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಕಾಂಗ್ರೆಸ್ ನಾಯಕರು ಆಗ್ರಹಿಸಿದ್ದಾರೆ.

ಬಿಜೆಪಿ ಹೈಕಮಾಂಡ್ ಆದೇಶದ ಮೇರೆಗೆ ಸ್ವಕ್ಷೇತ್ರ ಗೋವಿಂದರಾಜನಗರ ಬದಲು ಚಾಮರಾಜನಗರ ಮತ್ತು ವರುಣಾ ಕ್ಷೇತ್ರಗಳಲ್ಲಿ ಕಣಕ್ಕಿಳಿದಿರುವ ಸಚಿವ ವಿ.ಸೋಮಣ್ಣನವರು ಒಂದು ಕ್ಷೇತ್ರದಲ್ಲಾದರೂ ಗೆಲುವು ಸಾಧಿಸಲು ಹರಸಾಹಸ ಪಡುತ್ತಿದ್ದಾರೆ. ಅದರ ಭಾಗವಾಗಿ ಚಾಮರಾಜನಗರ ವಿಧಾನಸಭಾ ಕ್ಷೇತ್ರದ ಉಪ್ಪಾರ ಸಮುದಾಯದ ಜೆಡಿಎಸ್ ಅಭ್ಯರ್ಥಿ ಮಲ್ಲಿಕಾರ್ಜುನಸ್ವಾಮಿಯವರ ನಾಮಪತ್ರ ಹಿಂತೆಗೆಸಲು ಪ್ರಯತ್ನಿಸಿರುವುದು ಬೆಳಕಿಗೆ ಬಂದಿದೆ.

ಸೋಮವಾರ ಮಧ್ಯಾಹ್ನ ಕರೆ ಮಾಡಿದ ಸೋಮಣ್ಣನವರು ಏಯ್ ನಾಮಪತ್ರ ವಾಪಸ್ ತಗೋ. ಆಮೇಲೆ ಬಾಕಿದ್ದು ನಿನಗೆ ಏನು ಬೇಕೊ ಮಾಡಿಕೊಡ್ತೀನಿ. ಏನಯ್ಯ ನೀನು ಯಾವನೋ ಮಾತು ಕೇಳಿಕೊಂಡು ನಾಮಪತ್ರ ಹಾಕಿದ್ದೀಯ ಎಂದು ಸೋಮಣ್ಣನವರು ಜೋರು ಮಾಡುವುದು ಆಡಿಯೋದಲ್ಲಿದೆ.

ನೀನು ನನಗೆ ಒಬ್ಬ ಹಳೆಯ ಸ್ನೇಹಿತ. ಅವನ್ಯಾವನೋ ತೊಟ್ಟಿ ನನ್ನ ಮಗನ ಮಾತು ಕೇಳೋಕೆ ಹೋಗಬೇಡ. ನಿನಗೆ ಬದುಕುವುದಕ್ಕೆ ಏನು ಬೇಕು ಎಲ್ಲವೂ ಮಾಡ್ತೀನಿ. ಮೊದ್ಲು ನಾಮಪತ್ರ ವಾಪಸ್ ತಗೋ ಆಮೇಲೆ ಬಾಕಿದ್ದು ನಾನು ಮಾತನಾಡುತ್ತೇನೆ. ನಿನ್ನ ಹಿತ ಕಾಪಾಡುವುದು ನನ್ನ, ಸುದೀಪಣ್ಣ ಮತ್ತು ಮರಮಕಲ್ ರವರ ಜವಾಬ್ದಾರಿ. ನಾನೀಗ ಉಪ್ಪಾರರ ದೇವಾಸ್ಥಾನದಲ್ಲಿ ಇದ್ದೀನಿ. ನಿನ್ನನ್ನು ಎಲ್ಲಿಗೆ ತಗೊಂಡು ಹೋಗಿ ಬಿಡಬೇಕು ಅಲ್ಲಿಗೆ ಬಿಡುತ್ತೇನೆ. ಮೊದಲು ವಾಪಸ್ ತಗೊ ನಿನಗೆ ಕೈ ಮುಗಿಯುತ್ತೇನೆ ಎಂದು ಸೋಮಣ್ಣನವರು ಹೇಳಿದ್ದಾರೆ.

ಮುಂದುವರೆದು, “ಇನ್ನೊಂದು ಗಂಟೆ ಮಾತ್ರ ಸಮಯವಿದೆ. ಅವನ್ಯಾವನೋ ಪೋಲಿ ನನ್ ಮಗನ ಮಾತು ಕೇಳ್ಕೊಂಡು ನಿಂತಿದ್ದೀಯ. ನೀನು ಮೊದಲು ವಾಪಸ್ ತಗೋ. ನಮ್ ಸರ್ಕಾರ ಬರುತ್ತದೆ. ನಿನಗೆ ಒಂದು ಗೂಟದ ಕಾರು ಬೇಕು, ನಾನು ಕೊಡಿಸ್ತೀನಿ ಎಂದು ಸೋಮಣ್ಣ ಹೇಳಿರುವುದು ದಾಖಲಾಗಿದೆ. ಇದೇ ಸಂದರ್ಭದಲ್ಲಿ ಸೋಮಣ್ಣನವರ ಫೋನ್‌ನಿಂದ ಮಾತನಾಡುವ ಮತ್ತೊಬ್ಬರು ಮಲ್ಲ, ಜಿ.ಟಿ ದೇವೇಗೌಡರ ಕೈಲಿ ಹೇಳಿಸ್ತೀನಿ. ನಾಮಪತ್ರ ವಾಪಸ್ ತಗೋ ಎನ್ನುತ್ತಾರೆ.

ಉಪ್ಪಾರರು ನೀವು. ನಾನು ಉಪ್ಪಾರರ ದೇವರ ಮುಂದೆ ನಿಂತಿದ್ದೀನಿ. ನೀನು ಯಾವನ ಮಾತು ಕೇಳಬೇಡ. ಮೊದ್ಲು ನಾಮಪತ್ರ ವಾಪಸ್ ತಗೊ. ಜಿ.ಟಿ ದೇವೇಗೌಡ ನಾವೆಲ್ಲ ಸ್ನೇಹಿತರು, ನಾನು ಮಾತನಾಡುತ್ತೇನೆ. ಪ್ಲೀಸ್ ತಗೋ ಎನ್ನುತ್ತಾರೆ.

ಇದನ್ನೂ ಓದಿ: ಕಾಂಗ್ರೆಸ್ ದಿಗ್ಗಜರ ವಿರುದ್ಧ ಸೋಮಣ್ಣ, ಅಶೋಕ್: ಹೊಂದಾಣಿಕೆ ರಾಜಕಾರಣದ ವಿರುದ್ಧ ಬಿಜೆಪಿಯ ಸ್ಪಷ್ಟ ಸಂದೇಶ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...