Homeಮುಖಪುಟಜೆಡಿಎಸ್ ಅಭ್ಯರ್ಥಿಗೆ ಆಮಿಷ: ವಿ.ಸೋಮಣ್ಣನವರ ಮೇಲೆ ಎಫ್‌ಐಆರ್

ಜೆಡಿಎಸ್ ಅಭ್ಯರ್ಥಿಗೆ ಆಮಿಷ: ವಿ.ಸೋಮಣ್ಣನವರ ಮೇಲೆ ಎಫ್‌ಐಆರ್

- Advertisement -
- Advertisement -

ಚಾಮರಾಜನಗರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಮಲ್ಲಿಕಾರ್ಜುನ ಸ್ವಾಮಿಯವರ ನಾಮಪತ್ರ ಹಿಂಪಡೆಯುವಂತೆ ಆಮಿಷ ಒಡ್ಡಿದ್ದ ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣನವರ ಮೇಲೆ ಎಫ್‌ಐಆರ್ ದಾಖಲಾಗಿದೆ.

ಚುನಾವಣಾ ಫ್ಲೈಯಿಂಗ್‌ ಸ್ಕ್ಯಾಡ್‌ನ ಮ್ಯಾಜಿಸ್ಟ್ರೇಟ್‌ ಡಾ.ಬಿ.ಆರ್‌.ಜಯಣ್ಣ ನೀಡಿರುವ ದೂರಿನ ಆಧಾರದ ಮೇಲೆ ಚಾಮರಾಜನಗರ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ಅದರಲ್ಲಿ ಸೋಮಣ್ಣ ಅವರಿಗೆ ಸಂಬಂಧಿಸಿದ ವಿವರಗಳನ್ನು ಉಲ್ಲೇಖಿಸಲಾಗಿಲ್ಲ. ಅವರನ್ನು ಅಪರಿಚಿತನೆಂದು ಉಲ್ಲೇಖಿಸಲಾಗಿದೆ. ಸೋಮಣ್ಣ ಅವರದ್ದು ಎನ್ನಲಾದ ಆಡಿಯೋದಲ್ಲಿ ಸುದೀಪ್‌ ಮತ್ತು ನಟರಾಜು ಎಂಬ ಹೆಸರುಗಳೂ ಕೇಳಿಬಂದಿದ್ದು, ‌ಆ ಎರಡು ಹೆಸರುಗಳನ್ನೂ ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ ಎನ್ನಲಾಗಿದೆ.

ಇದೇ ವಿಷಯಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ ಮತ್ತು ಕಾಂಗ್ರೆಸ್ ರಾಷ್ಟ್ರೀಯ ವಕ್ತಾರರಾದ ಗೌರವ್ ವಲ್ಲಭ್‌ರವರು ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

ದೂರವಾಣಿ ಕರೆ ಮಾಡಿದ್ದ ವಿ. ಸೋಮಣ್ಣ, ನಾಮಪತ್ರ ಹಿಂಪಡೆದರೆ 50 ಲಕ್ಷ ರೂ. ಹಣ ಹಾಗೂ ಗೂಟದ ಕಾರನ್ನು ನೀಡುವ ಆಮೀಷ ಒಡ್ಡಿದ್ದಾರೆ. ಸೋಮಣ್ಣ ಅವರಿಂದ ತಮಗೆ ಕರೆ ಬಂದಿದ್ದನ್ನು ಸ್ವತಃ ಮಲ್ಲಿಕಾರ್ಜುನ ಸ್ವಾಮಿ ಅವರೇ ಒಪ್ಪಿಕೊಂಡಿದ್ದಾರೆ. ಇದು ಐಪಿಸಿ ಸೆಕ್ಷನ್ ( 171ಸಿ, 171 F) ಪ್ರಕಾರ ಅಪರಾಧವಾಗಿದೆ. ಈ ನಿಟ್ಟಿನಲ್ಲಿ ಸಚಿವ ಸೋಮಣ್ಣ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಕಾಂಗ್ರೆಸ್ ನಾಯಕರು ಆಗ್ರಹಿಸಿದ್ದಾರೆ.

ಬಿಜೆಪಿ ಹೈಕಮಾಂಡ್ ಆದೇಶದ ಮೇರೆಗೆ ಸ್ವಕ್ಷೇತ್ರ ಗೋವಿಂದರಾಜನಗರ ಬದಲು ಚಾಮರಾಜನಗರ ಮತ್ತು ವರುಣಾ ಕ್ಷೇತ್ರಗಳಲ್ಲಿ ಕಣಕ್ಕಿಳಿದಿರುವ ಸಚಿವ ವಿ.ಸೋಮಣ್ಣನವರು ಒಂದು ಕ್ಷೇತ್ರದಲ್ಲಾದರೂ ಗೆಲುವು ಸಾಧಿಸಲು ಹರಸಾಹಸ ಪಡುತ್ತಿದ್ದಾರೆ. ಅದರ ಭಾಗವಾಗಿ ಚಾಮರಾಜನಗರ ವಿಧಾನಸಭಾ ಕ್ಷೇತ್ರದ ಉಪ್ಪಾರ ಸಮುದಾಯದ ಜೆಡಿಎಸ್ ಅಭ್ಯರ್ಥಿ ಮಲ್ಲಿಕಾರ್ಜುನಸ್ವಾಮಿಯವರ ನಾಮಪತ್ರ ಹಿಂತೆಗೆಸಲು ಪ್ರಯತ್ನಿಸಿರುವುದು ಬೆಳಕಿಗೆ ಬಂದಿದೆ.

ಸೋಮವಾರ ಮಧ್ಯಾಹ್ನ ಕರೆ ಮಾಡಿದ ಸೋಮಣ್ಣನವರು ಏಯ್ ನಾಮಪತ್ರ ವಾಪಸ್ ತಗೋ. ಆಮೇಲೆ ಬಾಕಿದ್ದು ನಿನಗೆ ಏನು ಬೇಕೊ ಮಾಡಿಕೊಡ್ತೀನಿ. ಏನಯ್ಯ ನೀನು ಯಾವನೋ ಮಾತು ಕೇಳಿಕೊಂಡು ನಾಮಪತ್ರ ಹಾಕಿದ್ದೀಯ ಎಂದು ಸೋಮಣ್ಣನವರು ಜೋರು ಮಾಡುವುದು ಆಡಿಯೋದಲ್ಲಿದೆ.

ನೀನು ನನಗೆ ಒಬ್ಬ ಹಳೆಯ ಸ್ನೇಹಿತ. ಅವನ್ಯಾವನೋ ತೊಟ್ಟಿ ನನ್ನ ಮಗನ ಮಾತು ಕೇಳೋಕೆ ಹೋಗಬೇಡ. ನಿನಗೆ ಬದುಕುವುದಕ್ಕೆ ಏನು ಬೇಕು ಎಲ್ಲವೂ ಮಾಡ್ತೀನಿ. ಮೊದ್ಲು ನಾಮಪತ್ರ ವಾಪಸ್ ತಗೋ ಆಮೇಲೆ ಬಾಕಿದ್ದು ನಾನು ಮಾತನಾಡುತ್ತೇನೆ. ನಿನ್ನ ಹಿತ ಕಾಪಾಡುವುದು ನನ್ನ, ಸುದೀಪಣ್ಣ ಮತ್ತು ಮರಮಕಲ್ ರವರ ಜವಾಬ್ದಾರಿ. ನಾನೀಗ ಉಪ್ಪಾರರ ದೇವಾಸ್ಥಾನದಲ್ಲಿ ಇದ್ದೀನಿ. ನಿನ್ನನ್ನು ಎಲ್ಲಿಗೆ ತಗೊಂಡು ಹೋಗಿ ಬಿಡಬೇಕು ಅಲ್ಲಿಗೆ ಬಿಡುತ್ತೇನೆ. ಮೊದಲು ವಾಪಸ್ ತಗೊ ನಿನಗೆ ಕೈ ಮುಗಿಯುತ್ತೇನೆ ಎಂದು ಸೋಮಣ್ಣನವರು ಹೇಳಿದ್ದಾರೆ.

ಮುಂದುವರೆದು, “ಇನ್ನೊಂದು ಗಂಟೆ ಮಾತ್ರ ಸಮಯವಿದೆ. ಅವನ್ಯಾವನೋ ಪೋಲಿ ನನ್ ಮಗನ ಮಾತು ಕೇಳ್ಕೊಂಡು ನಿಂತಿದ್ದೀಯ. ನೀನು ಮೊದಲು ವಾಪಸ್ ತಗೋ. ನಮ್ ಸರ್ಕಾರ ಬರುತ್ತದೆ. ನಿನಗೆ ಒಂದು ಗೂಟದ ಕಾರು ಬೇಕು, ನಾನು ಕೊಡಿಸ್ತೀನಿ ಎಂದು ಸೋಮಣ್ಣ ಹೇಳಿರುವುದು ದಾಖಲಾಗಿದೆ. ಇದೇ ಸಂದರ್ಭದಲ್ಲಿ ಸೋಮಣ್ಣನವರ ಫೋನ್‌ನಿಂದ ಮಾತನಾಡುವ ಮತ್ತೊಬ್ಬರು ಮಲ್ಲ, ಜಿ.ಟಿ ದೇವೇಗೌಡರ ಕೈಲಿ ಹೇಳಿಸ್ತೀನಿ. ನಾಮಪತ್ರ ವಾಪಸ್ ತಗೋ ಎನ್ನುತ್ತಾರೆ.

ಉಪ್ಪಾರರು ನೀವು. ನಾನು ಉಪ್ಪಾರರ ದೇವರ ಮುಂದೆ ನಿಂತಿದ್ದೀನಿ. ನೀನು ಯಾವನ ಮಾತು ಕೇಳಬೇಡ. ಮೊದ್ಲು ನಾಮಪತ್ರ ವಾಪಸ್ ತಗೊ. ಜಿ.ಟಿ ದೇವೇಗೌಡ ನಾವೆಲ್ಲ ಸ್ನೇಹಿತರು, ನಾನು ಮಾತನಾಡುತ್ತೇನೆ. ಪ್ಲೀಸ್ ತಗೋ ಎನ್ನುತ್ತಾರೆ.

ಇದನ್ನೂ ಓದಿ: ಕಾಂಗ್ರೆಸ್ ದಿಗ್ಗಜರ ವಿರುದ್ಧ ಸೋಮಣ್ಣ, ಅಶೋಕ್: ಹೊಂದಾಣಿಕೆ ರಾಜಕಾರಣದ ವಿರುದ್ಧ ಬಿಜೆಪಿಯ ಸ್ಪಷ್ಟ ಸಂದೇಶ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...