Homeಕರ್ನಾಟಕಮತದಾರರಿಗೆ ಲಂಚ ಆಮಿಷ: ರಮೇಶ್ ಜಾರಕಿಹೊಳಿ ವಿರುದ್ಧ ದೂರು ದಾಖಲಿಸಿದ ಕಾಂಗ್ರೆಸ್

ಮತದಾರರಿಗೆ ಲಂಚ ಆಮಿಷ: ರಮೇಶ್ ಜಾರಕಿಹೊಳಿ ವಿರುದ್ಧ ದೂರು ದಾಖಲಿಸಿದ ಕಾಂಗ್ರೆಸ್

- Advertisement -
- Advertisement -

ಬಿಜೆಪಿ 6 ಸಾವಿರ ನೀಡಿದರೆ ನಮ್ಮ ಅಭ್ಯರ್ಥಿಗೆ ಮತ ನೀಡಿ ಎಂದು ಇತ್ತೀಚೆಗೆ ಹೇಳಿಕೆ ನೀಡಿದ್ದ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಹಾಗೂ ಮುಖ್ಯಮಂತ್ರಿ ಬೊಮ್ಮಾಯಿ ಮತ್ತು ಬಿಜೆಪಿಯ ಇತರ ಹಿರಿಯ ನಾಯಕರ ವಿರುದ್ಧ ರಾಜ್ಯ ಕಾಂಗ್ರೆಸ್‌ ಬುಧವಾರ ಪೊಲೀಸ್ ದೂರು ದಾಖಲಿಸಿದೆ. ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಗೆ ಸಲ್ಲಿಸಿರುವ ದೂರಿನಲ್ಲಿ “ಇದು ಪ್ರಜಾಪ್ರಭುತ್ವವನ್ನು ಹೈಜಾಕ್ ಮಾಡುವ ಖಂಡನೀಯ ಮತ್ತು ನಿರ್ಲಜ್ಜ ಪ್ರಯತ್ನ” ಎಂದು ಕಾಂಗ್ರೆಸ್ ಆರೋಪಿಸಿದೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸೇರಿದಂತೆ ಇತರರನ್ನು ಲಂಚ, ಕ್ರಿಮಿನಲ್ ಪಿತೂರಿ ಮತ್ತು ಜನರ ಪ್ರಾತಿನಿಧ್ಯ ಕಾಯಿದೆ, 1951 ರ ವಿಭಾಗಗಳಿಗೆ ಸಂಬಂಧಿಸಿದ ಭಾರತೀಯ ದಂಡ ಸಂಹಿತೆಯ ಸೆಕ್ಷನ್‌ಗಳ ಅಡಿಯಲ್ಲಿ ಹೊಣೆಗಾರರನ್ನಾಗಿ ಮಾಡಬೇಕೆಂದು ಕಾಂಗ್ರೆಸ್ ತನ್ನ ದೂರಿನಲ್ಲಿ ಕೋರಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಈ ಪಿತೂರಿಯಲ್ಲಿ ಇಡೀ ಗುಂಪಿನ ವ್ಯಕ್ತಿಗಳು ಭಾಗಿಯಾಗಿದ್ದಾರೆ. ಮೇಲಿನ ನಾಲ್ಕು ವ್ಯಕ್ತಿಗಳ ಬಂಧಿಸಿ, ಅವರ ವಿಚಾರಣೆ ನಡೆಸಬೇಕು. ಈ ವೇಳೆ ಅವರ ಸೆಲ್ ಫೋನ್ಗಳು, ಕಂಪ್ಯೂಟರ್‌ಗಳು ಮತ್ತು ಇತರ ಡಿಜಿಟಲ್ ಸಾಧನಗಳನ್ನು ವಶಪಡಿಸಿಕೊಂಡಾಗ ಈ ವಿಚಾರ ಸ್ಪಷ್ಟವಾಗುತ್ತದೆ” ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನೀಡಿದ ದೂರಿನಲ್ಲಿ ಹೇಳಲಾಗಿದೆ.

ಜನವರಿ 22 ರಂದು ಬೆಳಗಾವಿಯ ಸುಳೇಭಾವಿ ಗ್ರಾಮದಲ್ಲಿ ಬಿಜೆಪಿ ಅಭ್ಯರ್ಥಿಗೆ ಮತ ಹಾಕುವ ಮತದಾರರಿಗೆ 6 ಸಾವಿರ ರೂಪಾಯಿ ನೀಡುವುದಾಗಿ ರಮೇಶ್ ಜಾರಕಿಹೊಳಿ ಹೇಳಿದ್ದರು. ಬೆಳಗಾವಿ ಗ್ರಾಮಾಂತರ ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವ ಕಾಂಗ್ರೆಸ್ ನಾಯಕಿ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಟೀಕೆಗಳನ್ನು ಮಾಡುತ್ತಾ ಮಾತನಾಡಿದ್ದ ಜಾರಕಿಹೊಳಿ ಈ ಹೇಳಿಕೆ ನೀಡಿದ್ದರು.

“ಲಕ್ಷ್ಮಿ ಹೆಬ್ಬಾಳ್ಕರ್ ಅವರು ತಮ್ಮ ಕ್ಷೇತ್ರದ ಮತದಾರರಿಗೆ ಉಡುಗೊರೆ ಹಂಚುತ್ತಿದ್ದಾರೆ. ಇದುವರೆಗೆ ಸುಮಾರು 1000 ರೂಪಾಯಿ ಮೌಲ್ಯದ ಅಡುಗೆ ಸಾಮಗ್ರಿಗಳಾದ ಕುಕ್ಕರ್, ಮಿಕ್ಸರ್ ನೀಡಿರಬೇಕು. ಇದರ ನಂತರ ಅವರು ಇನ್ನೊಂದು ಸೆಟ್ ಗಿಪ್ಟ್‌‌ ನೀಡಬಹುದು. ಇವೆಲ್ಲವೂ ಸೇರಿ ಸುಮಾರು 3,000 ರೂ. ಆಗಬಹುದು ಅಷ್ಟೆ. ಆದರೆ ನಾವು 6000 ರೂಪಾಯಿ ಕೊಟ್ಟರೆ ಮಾತ್ರ ನಮಗೆ ಮತ ನೀಡಿ” ಎಂದು ಜಾರಕಿಹೊಳಿ ಹೇಳಿದ್ದರು.

ಸೋಮವಾರ, ಮತ್ತೊಂದು ಕಾರ್ಯಕ್ರಮದಲ್ಲಿ ಮತ್ತೊಮ್ಮೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಜಾರಕಿಹೊಳಿ, ಕರ್ನಾಟಕದಲ್ಲಿ ತಮಗೆ ಬೇಕಾದ ಸಂಖ್ಯೆ ಸಿಗದಿದ್ದರೂ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಹೇಳಿದ್ದಾರೆ. ಗೋಕಾಕದಲ್ಲಿ ಪಕ್ಷದ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಜಾರಕಿಹೊಳಿ, ಕೆಲವು ಸ್ಥಾನಗಳು ಕಡಿಮೆಯಾದರೆ ಬಿಜೆಪಿಗೆ ಹೊಂದಾಣಿಕೆ ಮಾಡಿಕೊಳ್ಳುವ ಶಕ್ತಿ ಇದೆ ಎಂದು ಹೇಳಿದ್ದಾರೆ.

ಜಾರಕಿಹೊಳಿ ಅವರ ವೀಡಿಯೋಗೆ ಪ್ರತಿಕ್ರಿಯಿಸಿದ ಕರ್ನಾಟಕ ಜಲಸಂಪನ್ಮೂಲ ಸಚಿವ ಗೋವಿಂದ್ ಕಾರಜೋಳ್, ಪಕ್ಷವೂ ಮತಕ್ಕಾಗಿ ಹಣ ನೀಡುವುದನ್ನು ನಿರಾಕರಿಸಿದ್ದಾರೆ. ಬಿಜೆಪಿಯಲ್ಲಿ ಇಂತಹವುಗಳಿಗೆ ಸ್ಥಾನವಿಲ್ಲ ಎಂದ ಅವರುಮ, “ಒಬ್ಬ ವ್ಯಕ್ತಿ ಹೇಳಿಕೆ ನೀಡಿದರೆ ಅದು ಪಕ್ಷದ ಹೇಳಿಕೆಯಲ್ಲ. ಇದು ಅವರ ಅಭಿಪ್ರಾಯ ಮಾತ್ರ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ನಾವು ₹6 ಸಾವಿರ ಕೊಟ್ಟರೆ ಓಟ್‌ ಹಾಕಿ: ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...