Homeಮುಖಪುಟಗೋಶಾಲೆ ಸ್ವಚ್ಛಗೊಳಿಸಿ, ಅಲ್ಲೇ ಮಲಗಿದರೆ ಕ್ಯಾನ್ಸರ್‌ ಗುಣಪಡಿಸಬಹುದು : ಯುಪಿ ಸಚಿವರ ಹೊಸ ಸಂಶೋಧನೆ

ಗೋಶಾಲೆ ಸ್ವಚ್ಛಗೊಳಿಸಿ, ಅಲ್ಲೇ ಮಲಗಿದರೆ ಕ್ಯಾನ್ಸರ್‌ ಗುಣಪಡಿಸಬಹುದು : ಯುಪಿ ಸಚಿವರ ಹೊಸ ಸಂಶೋಧನೆ

- Advertisement -
- Advertisement -

“ಗೋಶಾಲೆಯನ್ನು ಸ್ವಚ್ಛಗೊಳಿಸಿ, ಅಲ್ಲೇ ಮಲಗಿದರೆ ಕ್ಯಾನ್ಸರ್‌ ಗುಣಪಡಿಸಬಹುದು. ಹಸುವಿನ ಬೆನ್ನು ಸವರುವುದರಿಂದ ರಕ್ತದೊತ್ತಡ ಕಡಿಮೆ ಮಾಡಬಹುದು” ಎಂದು ಉತ್ತರ ಪ್ರದೇಶದ ಬಿಜೆಪಿ ಸರ್ಕಾರದ ಸಚಿವ ಸಂಜಯ್‌ ಸಿಂಗ್‌ ಗಂಗ್ವಾರ್‌ ಭಾನುವಾರ ಹೇಳಿದ್ದಾರೆ.

ನೌಗಾವಾನ್ ಪಕರಿಯಾದಲ್ಲಿ 55 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾದ ಕನ್ಹಾ ಗೋಶಾಲೆಯ ಉದ್ಘಾಟನಾ ಸಮಾರಂಭದಲ್ಲಿ ಗಂಗ್ವಾರ್ ಈ ಹೇಳಿಕೆಗಳನ್ನು ನೀಡಿದ್ದಾರೆ.

“ರಕ್ತದೊತ್ತಡದ ರೋಗಿಗಳಿದ್ದರೆ ಇಲ್ಲಿ ಹಸುಗಳಿವೆ” ಎಂದಿರುವ ಗಂಗ್ವಾರ್ “ಒಬ್ಬರು ವ್ಯಕ್ತಿ ಪ್ರತಿದಿನ ಬೆಳಿಗ್ಗೆ ಮತ್ತು ಸಂಜೆ ಹಸುವಿನ ಬೆನ್ನು ಸವರಬೇಕು. ಈ ಮೂಲಕ 20ಎಂಜಿ ಡೋಸ್ ರಕ್ತದೊತ್ತಡದ ಔಷಧಿಯನ್ನು ತೆಗೆದುಕೊಳ್ಳುತ್ತಿದ್ದರೆ, ಅದು 10 ದಿನಗಳಲ್ಲಿ 10ಎಂಜಿಗೆ ಇಳಿಸಬಹುದು” ಎಂದಿದ್ದಾರೆ.

“ಕ್ಯಾನ್ಸರ್ ರೋಗಿಯು ದನದ ಕೊಟ್ಟಿಗೆಯನ್ನು ಸ್ವಚ್ಛಗೊಳಿಸಲು ಪ್ರಾರಂಭಿಸಿದರೆ, ಕ್ಯಾನ್ಸರ್ ಕೂಡ ವಾಸಿಯಾಗುತ್ತದೆ. ನೀವು ಹಸುವಿನ ಬೆರಣಿಯನ್ನು ಸುಟ್ಟರೆ ಸೊಳ್ಳೆಗಳಿಂದ ಪರಿಹಾರ ಸಿಗುತ್ತದೆ. ಹಸು ಉತ್ಪಾದಿಸುವ ಎಲ್ಲವೂ ಒಂದು ರೀತಿಯಲ್ಲಿ ಉಪಯುಕ್ತವಾಗಿದೆ” ಎಂದು ಗಂಗ್ವಾರ್‌ ಹೇಳಿದ್ದಾರೆ.

ಬಿಡಾಡಿ ದನಗಳ ಸಮಸ್ಯೆ ಬಗ್ಗೆಯೂ ಪ್ರತಿಕ್ರಿಯಿಸಿದ ಸಚಿವರು, “ನಾವು ನಮ್ಮ ತಾಯಿಯ ಸೇವೆ ಮಾಡುತ್ತಿಲ್ಲ, ಹೀಗಾಗಿ ತಾಯಿ ಎಲ್ಲೋ ನಮಗೆ ತೊಂದರೆ ಕೊಡುತ್ತಿದ್ದಾರೆ ಎಂದಿದ್ದಾರೆ. ಗೋಶಾಲೆಯಲ್ಲಿ ಈದ್ ಆಚರಿಸುವಂತೆ ಮುಸ್ಲಿಮರಿಗೆ ಕರೆ ನೀಡಿದ ಅವರು, ಈದ್ ಖಾದ್ಯವನ್ನು ಹಸುವಿನ ಹಾಲಿನಿಂದ ತಯಾರಿಸಿ ಎಂದು ಸೂಚಿಸಿದ್ದಾರೆ.

ನೌಗಾವಾನ್‌ನಲ್ಲಿ ಸಚಿವರು ಹೊಸದಾಗಿ ಉದ್ಘಾಟಿಸಿದ ಗೋಶಾಲೆಯು ಮೇವು, ಔಷಧಿ ಮತ್ತು ನಿರ್ಗತಿಕ ಹಸುಗಳಿಗೆ ಆಶ್ರಯವನ್ನು ಒದಗಿಸಲಿದೆ. ಗೋಶಾಲೆಗಳೊಂದಿಗೆ ಸಂಪರ್ಕ ಸಾಧಿಸಲು, ಮೇವು ದಾನ ಮಾಡುವ ಮೂಲಕ ವಿವಾಹ ವಾರ್ಷಿಕೋತ್ಸವಗಳು ಮತ್ತು ಮಕ್ಕಳ ಜನ್ಮದಿನಗಳಂತಹ ವೈಯಕ್ತಿಕ ಕಾರ್ಯಕ್ರಮಗಳನ್ನು ನಡೆಸುವಂತೆ ಗಂಗ್ವಾರ್ ಜನರಿಗೆ ಕರೆ ನೀಡಿದ್ದಾರೆ.

ಗಂಗ್ವಾರ್ ಅವರು 2012ರ ವಿಧಾನಸಭೆ ಚುನಾವಣೆಯಲ್ಲಿ ಬಹುಜನ ಸಮಾಜ ಪಕ್ಷ (ಬಿಎಸ್‌ಪಿ)ಯಿಂದ ಸ್ಪರ್ಧಿಸಿ, ನಂತರ ಭಾರತೀಯ ಜನತಾ ಪಕ್ಷ (ಬಿಜೆಪಿ) ಗೆ ಸೇರಿದ್ದರು. 2017 ಮತ್ತು 2022ರಲ್ಲಿ ಪಿಲಿಭಿತ್‌ನಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆದ್ದಿರುವ ಅವರು, ವಿಭಿನ್ನ ರಾಜಕೀಯ ಇತಿಹಾಸವನ್ನು ಹೊಂದಿದ್ದಾರೆ. ಬಿಜೆಪಿಯ ಮಾಜಿ ಸಂಸದ ವರುಣ್ ಗಾಂಧಿ ಅವರ ಕುರಿತು ವಿವಾದಾತ್ಮಕ ಹೇಳಿಕೆಗಳ ನೀಡುವುದು ಮತ್ತು ಟೀಕೆ ಮಾಡುವುದರಿಂದಲೇ ಇವರು ಹೆಚ್ಚು ಪ್ರಸಿದ್ದಿಯಾಗಿದ್ದಾರೆ.

ಇದನ್ನೂ ಓದಿ : ವೈದ್ಯೆ ಹತ್ಯೆ-ಅತ್ಯಾಚಾರ ಪ್ರಕರಣ: ಉಪವಾಸನಿರತ ವೈದ್ಯರು ಐಸಿಯುಗೆ ದಾಖಲು; ಇಂದು ರಾಜಭವನಕ್ಕೆ ಮೆರವಣಿಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...