Homeಮುಖಪುಟಅತ್ಯಾಚಾರಿಗಳನ್ನು ಸಾರ್ವಜನಿಕವಾಗಿ ಥಳಿಸಬೇಕು; ಜಯಾ ಬಚ್ಚನ್‌

ಅತ್ಯಾಚಾರಿಗಳನ್ನು ಸಾರ್ವಜನಿಕವಾಗಿ ಥಳಿಸಬೇಕು; ಜಯಾ ಬಚ್ಚನ್‌

ಡಿಸೆಂಬರ್ 31 ರ ಒಳಗಾಗಿ 4 ಜನ ಆರೋಪಿಗಳನ್ನು ಗಲ್ಲಿಗೇರಿಸಬೇಕು ಎಂದು ಎಐಎಡಿಎಂಕೆ ಸಂಸದೆ ವಿಜಿಲಾ ಸತ್ಯನಾಂತ್ ಹೇಳಿದ್ದಾರೆ.

- Advertisement -
- Advertisement -

ಸಂಸತ್ತಿನ ಉಭಯ ಸದನಗಳಲ್ಲಿ ಕಳೆದ ವಾರ ಸಂಭವಿಸಿದ ಹೈದರಾಬಾದ್ ಪಶುವೈದ್ಯೆಯ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆಯ ವಿಷಯವು ದೊಡ್ಡ ಚರ್ಚೆಯಾಗಿದೆ. ಇದೇ ಸಂದರ್ಭದಲ್ಲಿ ಸಮಾಜವಾದಿ ಪಕ್ಷದಿಂದ ಆಯ್ಕೆಯಾಗಿರುವ ರಾಜ್ಯಸಭಾ ಸದಸ್ಯೆ ಜಯಾ ಬಚ್ಚನ್, ಅತ್ಯಾಚಾರದ ಆರೋಪಿಗಳನ್ನು ಸಾರ್ವಜನಿಕವಾಗಿ ಥಳಿಸಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಥುವಾ, ನಿರ್ಭಯ ಅಥವಾ ತೆಲಂಗಾನದ ಘಟನೆಯಲ್ಲಿ ಏನಾಯ್ತು? ಸರ್ಕಾರ ಅದನ್ನು ಹೇಗೆ ನಿಭಾಯಿಸಿದೆ ಮತ್ತು ಈ ಜನರಿಗೆ ಎಷ್ಟು ನ್ಯಾಯ ದೊರಕಿದೆ? ಎಂಬುದರ ಕುರಿತು ಸರ್ಕಾರವು ಸರಿಯಾದ ಮತ್ತು ಖಚಿತವಾದ ಉತ್ತರವನ್ನು ನೀಡಬೇಕೆಂದು ಜನರು ಈಗ ಬಯಸುತ್ತಾರೆ ಎಂದು ಜಯಾ ಬಚ್ಚನ್ ಹೇಳಿದ್ದಾರೆ.

ಈ ಕುರಿತು ಎಷ್ಟು ದಿನ ನಾವು ಮಾತನಾಡಬೇಕು ತಿಳಿಯುತ್ತಿಲ್ಲ. ತೆಲಂಗಾಣದ ಪಶುವೈದ್ಯೆಯ ಅತ್ಯಾಚಾರಕ್ಕೆ ಒಂದು ದಿನ ಮೊದಲು ಹೈದರಾಬಾದ್‌ನಲ್ಲಿ ಇದೇ ರೀತಿಯ ಘಟನೆ ನಡೆದಿದೆ. ಆದರೂ ಆ ಪ್ರದೇಶದಲ್ಲಿ ಏಕೆ ರಕ್ಷಣೆಯನ್ನು ಹೆಚ್ಚು ಮಾಡಿ ಅನಾಹುತವನ್ನು ತಪ್ಪಿಸಲಿಲ್ಲ? ಆ ಪ್ರದೇಶದ ಸೆಕ್ಯುರಿಟಿಗಳೆ ಇದಕ್ಕೆ ಹೊಣೆಯಲ್ಲವೇ ಎಂದು ಪ್ರಶ್ನಿಸಿದ್ದಾರೆ.

ತಮ್ಮ ಕೆಲಸಗಳನ್ನು ಸರಿಯಾಗಿ ಮಾಡದ ಈ ಜನರು ಇಡೀ ದೇಶದ ಮುಂದೆ ನಾಚಿಕೆಪಡುವ ಅಗತ್ಯವಿದೆ ಎಂದು ನಾನು ಭಾವಿಸುತ್ತೇನೆ. ಜೊತೆಗೆ ಆರೋಪಿಗಳನ್ನು ಸಾರ್ವಜನಿಕವಾಗಿ ಥಳಿಸಿ ಶಿಕ್ಷೆ ನೀಡಬೇಕು ಎಂದು ಜಯಾ ಬಚ್ಚನ್ ಹೇಳಿದ್ದಾರೆ.

ಇದೇ ಸಂದರ್ಭದಲ್ಲಿ ಡಿಸೆಂಬರ್ 31 ರ ಒಳಗಾಗಿ 4 ಜನ ಆರೋಪಿಗಳನ್ನು ಗಲ್ಲಿಗೇರಿಸಬೇಕು ಎಂದು ಎಐಎಡಿಎಂಕೆ ಸಂಸದೆ ವಿಜಿಲಾ ಸತ್ಯನಾಂತ್ ಹೇಳಿದ್ದಾರೆ.

“ಮಕ್ಕಳು ಮತ್ತು ಮಹಿಳೆಯರಿಗೆ ಈ ದೇಶ ಸುರಕ್ಷಿತವಲ್ಲ. ಫಾಸ್ಟ್ ಟ್ರ್ಯಾಕ್ ಕೋರ್ಟ್ ಸ್ಥಾಪಿಸಬೇಕು. ನ್ಯಾಯ ವಿಳಂಬವಾದರೆ ನ್ಯಾಯ ನಿರಾಕರಸಿದಂತೆ ”ಎಂದು ಅವರು ಹೇಳಿದ್ದಾರೆ.

ಅತ್ಯಾಚಾರದ ಆರೋಪಿಗಳನ್ನು ನ್ಯಾಯಾಲಯಕ್ಕೆ ತರುವಾಗ ಆಕ್ರೋಶಿತರಾದ ಭಾರೀ ಜನ ರಸ್ತೆಗಳಲ್ಲಿ ಸೇರಿ ಧಿಕ್ಕಾರದ ಘೋಷಣೆಗಳನ್ನು ಕೂಗಿದ್ದಾರೆ. ಪೊಲೀಸರು ಜನರನ್ನು ನಿಯಂತ್ರಿಸಲು ಹರಸಾಹಸಪಡಬೇಕಾಗಿ ಬಂದಿತ್ತು ಮತ್ತು ಲಘು ಲಾಠಿ ಪ್ರಹಾರ ಸಹ ನಡೆಸಲಾಗಿದೆ.

ವಿಡಿಯೋ ನೋಡಿ

ಈ ಪ್ರಕರಣದಲ್ಲಿ ನಾಲ್ವರನ್ನು ಬಂಧಿಸಲಾಗಿದೆ ಮತ್ತು ಮೂವರು ಪೊಲೀಸರನ್ನು “ಕರ್ತವ್ಯ ನಿರ್ವಹಣೆಯ ಲೋಪ”ದ ಅಡಿಯಲ್ಲಿ ಅಮಾನತುಗೊಳಿಸಲಾಗಿದೆ. ಆರೋಪಿಗಳಿಗೆ ಶನಿವಾರದಿಂದ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಇದನ್ನೂ ಓದಿ: ಅತ್ಯಾಚಾರವನ್ನು ತಡೆಗಟ್ಟಲು ಸಾಧ್ಯ! ತಡೆಗಟ್ಟಲೇಬೇಕು! ಅದರ ಮೂಲಬೇರುಗಳನ್ನು ಅರಿತಾಗ ಮಾತ್ರ…

ಹೈದರಾಬಾದ್ ಅತ್ಯಾಚಾರ ಮತ್ತು ಕೊಲೆಯ ನಂತರ ತೆಲಂಗಾಣದಲ್ಲಿ ಭಾರಿ ಪ್ರತಿಭಟನೆ ಮತ್ತು ದೇಶಾದ್ಯಂತ ಕೋಪವನ್ನು ಉಂಟುಮಾಡಿದ ನಂತರ ಆರೋಪಿಗಳನ್ನು ಫಾಸ್ಟ್ ಟ್ರ್ಯಾಕ್ ನ್ಯಾಯಾಲಯದಲ್ಲಿ ವಿಚಾರಣೆಗೆ ಒಳಪಡಿಸುವಂತೆ ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಭಾನುವಾರ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...