Homeಮುಖಪುಟಅತ್ಯಾಚಾರಿಗಳನ್ನು ಸಾರ್ವಜನಿಕವಾಗಿ ಥಳಿಸಬೇಕು; ಜಯಾ ಬಚ್ಚನ್‌

ಅತ್ಯಾಚಾರಿಗಳನ್ನು ಸಾರ್ವಜನಿಕವಾಗಿ ಥಳಿಸಬೇಕು; ಜಯಾ ಬಚ್ಚನ್‌

ಡಿಸೆಂಬರ್ 31 ರ ಒಳಗಾಗಿ 4 ಜನ ಆರೋಪಿಗಳನ್ನು ಗಲ್ಲಿಗೇರಿಸಬೇಕು ಎಂದು ಎಐಎಡಿಎಂಕೆ ಸಂಸದೆ ವಿಜಿಲಾ ಸತ್ಯನಾಂತ್ ಹೇಳಿದ್ದಾರೆ.

- Advertisement -
- Advertisement -

ಸಂಸತ್ತಿನ ಉಭಯ ಸದನಗಳಲ್ಲಿ ಕಳೆದ ವಾರ ಸಂಭವಿಸಿದ ಹೈದರಾಬಾದ್ ಪಶುವೈದ್ಯೆಯ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆಯ ವಿಷಯವು ದೊಡ್ಡ ಚರ್ಚೆಯಾಗಿದೆ. ಇದೇ ಸಂದರ್ಭದಲ್ಲಿ ಸಮಾಜವಾದಿ ಪಕ್ಷದಿಂದ ಆಯ್ಕೆಯಾಗಿರುವ ರಾಜ್ಯಸಭಾ ಸದಸ್ಯೆ ಜಯಾ ಬಚ್ಚನ್, ಅತ್ಯಾಚಾರದ ಆರೋಪಿಗಳನ್ನು ಸಾರ್ವಜನಿಕವಾಗಿ ಥಳಿಸಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಥುವಾ, ನಿರ್ಭಯ ಅಥವಾ ತೆಲಂಗಾನದ ಘಟನೆಯಲ್ಲಿ ಏನಾಯ್ತು? ಸರ್ಕಾರ ಅದನ್ನು ಹೇಗೆ ನಿಭಾಯಿಸಿದೆ ಮತ್ತು ಈ ಜನರಿಗೆ ಎಷ್ಟು ನ್ಯಾಯ ದೊರಕಿದೆ? ಎಂಬುದರ ಕುರಿತು ಸರ್ಕಾರವು ಸರಿಯಾದ ಮತ್ತು ಖಚಿತವಾದ ಉತ್ತರವನ್ನು ನೀಡಬೇಕೆಂದು ಜನರು ಈಗ ಬಯಸುತ್ತಾರೆ ಎಂದು ಜಯಾ ಬಚ್ಚನ್ ಹೇಳಿದ್ದಾರೆ.

ಈ ಕುರಿತು ಎಷ್ಟು ದಿನ ನಾವು ಮಾತನಾಡಬೇಕು ತಿಳಿಯುತ್ತಿಲ್ಲ. ತೆಲಂಗಾಣದ ಪಶುವೈದ್ಯೆಯ ಅತ್ಯಾಚಾರಕ್ಕೆ ಒಂದು ದಿನ ಮೊದಲು ಹೈದರಾಬಾದ್‌ನಲ್ಲಿ ಇದೇ ರೀತಿಯ ಘಟನೆ ನಡೆದಿದೆ. ಆದರೂ ಆ ಪ್ರದೇಶದಲ್ಲಿ ಏಕೆ ರಕ್ಷಣೆಯನ್ನು ಹೆಚ್ಚು ಮಾಡಿ ಅನಾಹುತವನ್ನು ತಪ್ಪಿಸಲಿಲ್ಲ? ಆ ಪ್ರದೇಶದ ಸೆಕ್ಯುರಿಟಿಗಳೆ ಇದಕ್ಕೆ ಹೊಣೆಯಲ್ಲವೇ ಎಂದು ಪ್ರಶ್ನಿಸಿದ್ದಾರೆ.

ತಮ್ಮ ಕೆಲಸಗಳನ್ನು ಸರಿಯಾಗಿ ಮಾಡದ ಈ ಜನರು ಇಡೀ ದೇಶದ ಮುಂದೆ ನಾಚಿಕೆಪಡುವ ಅಗತ್ಯವಿದೆ ಎಂದು ನಾನು ಭಾವಿಸುತ್ತೇನೆ. ಜೊತೆಗೆ ಆರೋಪಿಗಳನ್ನು ಸಾರ್ವಜನಿಕವಾಗಿ ಥಳಿಸಿ ಶಿಕ್ಷೆ ನೀಡಬೇಕು ಎಂದು ಜಯಾ ಬಚ್ಚನ್ ಹೇಳಿದ್ದಾರೆ.

ಇದೇ ಸಂದರ್ಭದಲ್ಲಿ ಡಿಸೆಂಬರ್ 31 ರ ಒಳಗಾಗಿ 4 ಜನ ಆರೋಪಿಗಳನ್ನು ಗಲ್ಲಿಗೇರಿಸಬೇಕು ಎಂದು ಎಐಎಡಿಎಂಕೆ ಸಂಸದೆ ವಿಜಿಲಾ ಸತ್ಯನಾಂತ್ ಹೇಳಿದ್ದಾರೆ.

“ಮಕ್ಕಳು ಮತ್ತು ಮಹಿಳೆಯರಿಗೆ ಈ ದೇಶ ಸುರಕ್ಷಿತವಲ್ಲ. ಫಾಸ್ಟ್ ಟ್ರ್ಯಾಕ್ ಕೋರ್ಟ್ ಸ್ಥಾಪಿಸಬೇಕು. ನ್ಯಾಯ ವಿಳಂಬವಾದರೆ ನ್ಯಾಯ ನಿರಾಕರಸಿದಂತೆ ”ಎಂದು ಅವರು ಹೇಳಿದ್ದಾರೆ.

ಅತ್ಯಾಚಾರದ ಆರೋಪಿಗಳನ್ನು ನ್ಯಾಯಾಲಯಕ್ಕೆ ತರುವಾಗ ಆಕ್ರೋಶಿತರಾದ ಭಾರೀ ಜನ ರಸ್ತೆಗಳಲ್ಲಿ ಸೇರಿ ಧಿಕ್ಕಾರದ ಘೋಷಣೆಗಳನ್ನು ಕೂಗಿದ್ದಾರೆ. ಪೊಲೀಸರು ಜನರನ್ನು ನಿಯಂತ್ರಿಸಲು ಹರಸಾಹಸಪಡಬೇಕಾಗಿ ಬಂದಿತ್ತು ಮತ್ತು ಲಘು ಲಾಠಿ ಪ್ರಹಾರ ಸಹ ನಡೆಸಲಾಗಿದೆ.

ವಿಡಿಯೋ ನೋಡಿ

ಈ ಪ್ರಕರಣದಲ್ಲಿ ನಾಲ್ವರನ್ನು ಬಂಧಿಸಲಾಗಿದೆ ಮತ್ತು ಮೂವರು ಪೊಲೀಸರನ್ನು “ಕರ್ತವ್ಯ ನಿರ್ವಹಣೆಯ ಲೋಪ”ದ ಅಡಿಯಲ್ಲಿ ಅಮಾನತುಗೊಳಿಸಲಾಗಿದೆ. ಆರೋಪಿಗಳಿಗೆ ಶನಿವಾರದಿಂದ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಇದನ್ನೂ ಓದಿ: ಅತ್ಯಾಚಾರವನ್ನು ತಡೆಗಟ್ಟಲು ಸಾಧ್ಯ! ತಡೆಗಟ್ಟಲೇಬೇಕು! ಅದರ ಮೂಲಬೇರುಗಳನ್ನು ಅರಿತಾಗ ಮಾತ್ರ…

ಹೈದರಾಬಾದ್ ಅತ್ಯಾಚಾರ ಮತ್ತು ಕೊಲೆಯ ನಂತರ ತೆಲಂಗಾಣದಲ್ಲಿ ಭಾರಿ ಪ್ರತಿಭಟನೆ ಮತ್ತು ದೇಶಾದ್ಯಂತ ಕೋಪವನ್ನು ಉಂಟುಮಾಡಿದ ನಂತರ ಆರೋಪಿಗಳನ್ನು ಫಾಸ್ಟ್ ಟ್ರ್ಯಾಕ್ ನ್ಯಾಯಾಲಯದಲ್ಲಿ ವಿಚಾರಣೆಗೆ ಒಳಪಡಿಸುವಂತೆ ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಭಾನುವಾರ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...